Homeಕರ್ನಾಟಕಹಾದರವೋ, ಹನಿಟ್ರ್ಯಾಪೋ, ಅಸಹ್ಯವೋ?..

ಹಾದರವೋ, ಹನಿಟ್ರ್ಯಾಪೋ, ಅಸಹ್ಯವೋ?..

- Advertisement -
- Advertisement -

ಈ ಹನಿಟ್ರ್ಯಾಪ್ ಪ್ರಕರಣದಿಂದ ಹಲವು ಪ್ರಶ್ನೆಗಳು ಎದ್ದಿವೆ. ಹನಿಟ್ರ್ಯಾಪ್‍ಗೆ ಒಳಗಾದ ಶಾಸಕರಲ್ಲಿ ಐದು ಜನ ಡಿಸೆಂಬರ್ 5ರಂದು ನಡೆಯಲಿರುವ ಚುನಾವಣೆಯನ್ನು ಎದುರಿಸುತ್ತಿರುವ ಆಡಳಿತ ಪಕ್ಷದವರಾಗಿದ್ದಾರೆ ಎನ್ನಲಾಗಿದೆ. ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳಿಗೆ ಇದರಿಂದ ಯಾವುದಾದರೂ ನಷ್ಟ ಉಂಟಾಗಲಿದೆಯೇ?

ಕೋರ್ಟಿನಿಂದ ನಿರ್ಬಂಧ ಬರುವ ಮುಂಚೆ ಎಲ್ಲೆಡೆ ಓಡಾಡಿದ್ದು ಮಧ್ಯ ಕರ್ನಾಟಕದ ಹಾಲಿ ಶಾಸಕರೊಬ್ಬರ ರಾಸಲೀಲೆಯ ವಿಡಿಯೋ. ಆ ನಂತರ ಎಲ್ಲರಿಗೂ ಲಭ್ಯವಾಗಿದ್ದು ಸಾಹುಕಾರರೊಬ್ಬರ ಆಡಿಯೋ. ಅವರ ದನಿ ಪರಿಚಯ ಇರುವ ಯಾರಿಗೂ ಸಂದೇಹ ಉಳಿದಿಲ್ಲ. ಗುಟ್ಟಾಗಿ ಕೆಲವರಿಗೆ ಮಾತ್ರ ಲಭ್ಯವಾಗಿರುವುದು ಮಹಿಳೆಯೊಬ್ಬರು ಯಲ್ಲಮ್ಮನ ಜಾತ್ರೆ ನಂತರ ಸಿಗುತ್ತೇನೆ ಎಂದು ಹೇಳಿದ ‘ಅವರು’ ತನ್ನನ್ನು ಪಟಾಯಿಸಲು ಮಾಡಿದ ಯತ್ನದ ಕುರಿತಾದ ಆಡಿಯೋ. ಆದರೆ, ಎಲ್ಲಿಯೂ ಯಾವ ಆಡಿಯೋ ಅಥವಾ ವಿಡಿಯೋ ಸಿಗದೇ ಇದ್ದರೂ ಕೋರ್ಟಿಗೆ ಹೋಗಿ ಇನ್ನೊಬ್ಬ ಶಾಸಕರೂ ನಿರ್ಬಂಧಕಾಜ್ಞೆ ತಂದುಬಿಟ್ಟರು. ಅಲ್ಲಿಗೆ ಪತ್ರಕರ್ತರ ವಲಯದಲ್ಲಿ ವಿಪರೀತ ವದಂತಿಗಳು ಓಡಾಡಲು ಶುರು ಮಾಡಿದವು.

ಯಾರ ವಿಡಿಯೋ ಓಡಾಡಿತೋ, ಉತ್ತರ ಕರ್ನಾಟಕದ ಆ ಶಾಸಕರು ಹನಿಟ್ರ್ಯಾಪ್‍ಗೆ ಬಲಿಯಾಗಿದ್ದೇನೆಂದು ದೂರು ಕೊಟ್ಟು ಹೀಗೆ ಹೇಳಿದರಂತೆ. ಅವರಿಗೆ ಹಲವಾರು ಕೋಟಿ ದುಡ್ಡಿನ ಬೇಡಿಕೆಯಿಟ್ಟು, ಆ ದುಡ್ಡನ್ನು ಕೊಡದಿದ್ದರೆ ತಮ್ಮಲ್ಲಿರುವ ವಿಡಿಯೋ ಅನ್ನು ಬಹಿರಂಗ ಪಡಿಸುವುದಾಗಿ ಬ್ಲ್ಯಾಕ್ ಮಾಡಲಾಯಿತು. ಆಗ ಶಾಸಕರು ಪೊಲೀಸ್ ಮೊರೆ ಹೊಕ್ಕು, ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ ಹಾಗೂ ಆ ವಿಡಿಯೊ ಮತ್ತು ಆಡಿಯೊ ತುಣುಕಗಳು ಬಹಿರಂಗಪಡಿಸದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆ ತಂದಿದ್ದಾರೆ.

ಈ ದೂರಿನ ಮೇಲೆ ಕ್ರಮ ಕೈಗೊಳ್ಳುತ್ತ ಪೊಲೀಸರು ರಾಘವೇಂದ್ರ ಎಂಬ ವ್ಯಕ್ತಿಯನ್ನು ಮತ್ತು ಆತನ ಇಬ್ಬರು ಮಹಿಳಾ ಸಹಚರರನ್ನು ಬಂಧಿಸಿದ್ದಾರೆ. ಬಂಧನದ ಜೊತೆಗೆ ಒಂದು ಹಾರ್ಡ್ ಡಿಸ್ಕ್, ಕೆಲವು ಪೆನ್ ಡ್ರೈವ್, ಕೆಲವು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇವರು ವಶಪಡಿಸಿಕೊಂಡದ್ದರಲ್ಲಿ ದೂರು ನೀಡಿದ ಶಾಸಕರಷ್ಟೇ ಅಲ್ಲದೇ ಇನ್ನೂ ಹತ್ತು ಶಾಸಕರ ವಿಡಿಯೋಗಳು ಇವೆ ಎನ್ನಲಾಗಿದೆ. ಬಂಧಿತನಾದ ರಾಘವೇಂದ್ರ ಶಿವಮೊಗ್ಗೆ ಜಿಲ್ಲೆಯವನಾಗಿದ್ದು, ಈಗಾಗಲೇ ಸೈಬರ್ ಅಪರಾಧ ಪ್ರಕರಣಗಳಲ್ಲಿ ಇವನ ವಿರುದ್ಧ ಅನೇಕ ಪ್ರಕರಣಗಳಿವೆ.

ಇಷ್ಟರಲ್ಲಿ ಆಡಿಯೋ ತುಣುಕು ವೈರಲ್ ಆಗಿದೆ. ಅದಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ತಾವೂ ಆ ಆಡಿಯೊ ಅನ್ನು ಕೇಳಿಸಿಕೊಂಡಿದ್ದಾಗಿ ಹೇಳಿ, ಆ ಆಡಿಯೊದಲ್ಲಿನ ಧ್ವನಿ ಸಾಹುಕಾರರ ಧ್ವನಿ ಇದ್ದಂತಿದೆ ಎಂದರು. ಆ ಸಾಹುಕಾರ ಯಾರು ಎಂದು ಅವರು ಬಹಿರಂಗಪಡಿಸದಿದ್ದರೂ, ವಲಯದ ಎಲ್ಲರಿಗೂ ಆ ಸಾಹುಕಾರ ಯಾರು ಎಂಬುದು ಸ್ಪಷ್ಟವಾಗಿ ತಿಳಿದಿದೆ. ಈ ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ, ನಿಷ್ಪಕ್ಷಪಾತವಾದ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ. ಈ ಮಧ್ಯೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ‘ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಅಥವಾ ಉದ್ದೇಶಪೂರ್ವಕ ಬಲಿ ಹಾಕುವ ಪ್ರಯತ್ನ ತಮ್ಮದಲ್ಲ’ ಎಂದು ಹೇಳಿಕೆ ನೀಡಬೇಕಾಗಿ ಬಂದಿತು.

ಈ ಹನಿಟ್ರ್ಯಾಪ್ ಪ್ರಕರಣದಿಂದ ಹಲವು ಪ್ರಶ್ನೆಗಳು ಎದ್ದಿವೆ. ಹನಿಟ್ರ್ಯಾಪ್‍ಗೆ ಒಳಗಾದ ಶಾಸಕರಲ್ಲಿ ಐದು ಜನ ಡಿಸೆಂಬರ್ 5ರಂದು ನಡೆಯಲಿರುವ ಚುನಾವಣೆಯನ್ನು ಎದುರಿಸುತ್ತಿರುವ ಆಡಳಿತ ಪಕ್ಷದವರಾಗಿದ್ದಾರೆ ಎನ್ನಲಾಗಿದೆ. ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳಿಗೆ ಇದರಿಂದ ಯಾವುದಾದರೂ ನಷ್ಟ ಉಂಟಾಗಲಿದೆಯೇ? ಬರೀ ಹನಿ ಟ್ರ್ಯಾಪ್ ಅಷ್ಟೇ ಅಲ್ಲ. ನಮ್ಮ ಪ್ರತಿನಿಧಿಗಳು ಒಳಗೊಂಡಿದ್ದಾರೆ ಎನ್ನಲಾದ ಲೈಂಗಿಕ ಹಗರಣಗಳು ಈ ಮುಂಚೆಯೂ ಹೊರಬಂದಿವೆ. ವಿಧಾನಸಭೆಯಲ್ಲಿ ನೀಲಿ ಚಿತ್ರವನ್ನು ನೋಡುತ್ತ ಕೆಲವರು ಸಿಕ್ಕಿಹಾಕಿಕೊಂಡಿದ್ದರು. ಅವರೇ ಇಂದು ರಾಜ್ಯದ ಉಪಮುಖ್ಯಮಂತ್ರಿಯಾಗಿ ಬಡ್ತಿ ಪಡೆದಿದ್ದಾರೆ. ಇಂದಿನ ಡಿಜಿಟಲ್ ಯುಗದಲ್ಲಿ ಸಾರ್ವಜನಿಕರು ಇದೆಲ್ಲದರಿಂದ ತಮಗೆ ಪುಗಸಟ್ಟೆ ಮನರಂಜನೆ ಸಿಕ್ಕಿತು ಎಂದು ಕೃತಜ್ಞರಾಗುವ ಸಂಭವವೇ ಹೆಚ್ಚು ಎಂಬುದಕ್ಕೆ ಮೈಸೂರಿನ ಹಾಲಿ ಸಂಸದರೇ ಸಾಕ್ಷಿ. ಅವರ ಕುರಿತಾದ ಆಡಿಯೋ ಮತದಾನಕ್ಕೆ ಮುಂಚೆ ಯಾವ ಪರಿ ಓಡಿತೆಂದರೆ, ಬಹುಶಃ ಅತ್ಯಂತ ಹೆಚ್ಚು ವೈರಲ್ ಆದ ಧ್ವನಿಮುದ್ರಿಕೆ ಅದು. ಅಂದರೆ, ಜನರು ಈ ಹಗರಣಗಳನ್ನು ಸುಲಭವಾಗಿ ಕ್ಷಮಿಸಿಬಿಡುತ್ತಾರೆಯೇ? ಅಥವಾ ಪುರುಷನ ಲೈಂಗಿಕ ಸ್ವೇಚ್ಛಾಚಾರವು ಎಂದಿಗೂ ಕ್ಷಮಾರ್ಹ ವಿಷಯವೇ ಆಗಿದೆಯೇ? ‘ಶೀಲ’ ಎನ್ನುವುದು ಮಹಿಳೆಯರಿಗೆ ಮೀಸಲಾಗಿಸಲ್ಪಟ್ಟ ವಿಷಯ ಎನ್ನುವುದು ಮುಂಚೆಯಿಂದಲೂ ತಿಳಿದ ವಿಷಯ.

ಹಾಗಾಗಿ ಸಾರ್ವಜನಿಕವಾಗಿ ಸದರಿ ಪ್ರಕರಣದಲ್ಲಿ ಉಳಿದುಕೊಂಡಿರುವುದು ಇನ್ನೂ ಯಾರ್ಯಾರ ವೀಡಿಯೋಗಳು ಅಥವಾ ಆಡಿಯೋಗಳು ಸಿಕ್ಕಿವೆಯಂತೆ ಎಂಬ ಕುತೂಹಲ ಬಿಟ್ಟರೆ ಬೇರೇನೂ ಇಲ್ಲ. ಹನಿಟ್ರ್ಯಾಪ್ ಮಾಡಿದವರ ದುರುದ್ದೇಶವೂ ಈಡೇರದೇ ಹೋಗುವ ದುಸ್ಥಿತಿ ಇದೆ. ಏಕೆಂದರೆ ಯಾರಿಗೂ ಮರ್ಯಾದೆ ಹೋಗುತ್ತದೆಂಬ ಭಯ ಕಾಡುತ್ತಿರುವ ಸಾಧ್ಯತೆ ಕಾಣುತ್ತಿಲ್ಲ. ಬೆತ್ತಲೆ ವಿಡಿಯೋಗಳು ಎಲ್ಲೆಡೆ ಕಂಡುಬಂದ ಶಾಸಕರೊಬ್ಬರ ಪತ್ನಿಯ ನಿಗೂಢ ಸಾವೂ ಸಹ ಅವರನ್ನು ಒಂದು ಅವಧಿಗೆ ಮಾತ್ರ ಶಾಸಕಸ್ಥಾನದಿಂದ ವಂಚಿತನನ್ನಾಗಿಸಿತು. ಅದೂ ಸಹಾ ರಾಜ್ಯಾದ್ಯಂತ ಅವರ ಪಕ್ಷದ ಪರವಾದ ಅಲೆ ಇರದಿದ್ದಾಗ. ಈ ಮಧ್ಯೆ ದೇಶಕ್ಕೆಲ್ಲಾ ರಾಮರಾಜ್ಯದ ಕುರಿತು ಪಾಠ ಮಾಡುವ ಸ್ವಾಮೀಜಿಗಳ ಜೊತೆಗೇ ಓಡಾಡುತ್ತಾ ಅವರು ಉಳಿದುಕೊಂಡಿದ್ದರು.

ಇನ್ನು ಸ್ವಾಮೀಜಿಗಳ ವಿಚಾರಕ್ಕೆ ಬರುವುದಾದರೆ, ಅದನ್ನು ಹೇಳದಿರುವುದೇ ಲೇಸು. ಒಪ್ಪಿತ ಲೈಂಗಿಕ ಸಂಬಂಧ ಅಷ್ಟೇ ಅಲ್ಲದೇ ವಿಕೃತ ಲೈಂಗಿಕತೆಗೂ ಮುಂದಾಗಿರುವ ಸ್ವಾಮೀಜಿಗಳು ಸರ್ವಮಾನ್ಯರಾಗಿ ವ್ಯವಹಾರಗಳನ್ನು ನಡೆಸಿಕೊಂಡು ಮುಂದಾಗಿದ್ದಾರೆ. ಶಿಶುಕಾಮಿಯೂ ಇರಬಹುದು ಎನ್ನುವ ಸ್ವಾಮೀಜಿಯ ತೊಡೆಯ ಮೇಲೆ ಹೆಣ್ನುಮಕ್ಕಳನ್ನು ಕುಳ್ಳಿರಿಸಿ ದೀಕ್ಷೆ ಕೊಡಿಸುವ ಸುಶಿಕ್ಷಿತ ತಂದೆ ತಾಯಂದಿರು ಈಗಲೂ ಇದ್ದಾರೆ.

ಈ ಸದ್ಯ ಇದರಲ್ಲೇನಾದರೂ ರಾಜಕೀಯ ಹುನ್ನಾರದ ವಾಸನೆ ಇದೆಯೇ ಎಂಬುದನ್ನು ಪತ್ರಿಕೆ ಕೆದಕಲು ನೋಡಿತು. ಹಾಲಿ (ನಮ್ಮ ಕೈಗೇ ಆಡಿಯೋ, ವಿಡಿಯೋ ಸಿಕ್ಕಿಲ್ಲವಾದರೂ) ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿರುವ ಹೆಚ್ಚಿನವರು ಬಿಜೆಪಿಯಲ್ಲಿ ಇದ್ದಾರಾದರೂ ಒಂದಿಬ್ಬರು ಕಾಂಗ್ರೆಸ್ ಶಾಸಕರೂ ಇದ್ದಾರೆ. ಹೀಗಾಗಿ ಇದನ್ನು ಒಂದು ಪಕ್ಷದವರು ಇನ್ನಾರನ್ನೋ ಸಿಕ್ಕಿ ಹಾಕಿಸಲು ಮಾಡಿದ ತಂತ್ರ ಎನ್ನುವ ಹಾಗಿಲ್ಲ. ಅನರ್ಹ ಶಾಸಕರನ್ನು ಬೆದರಿಸಲು ಬಿಜೆಪಿ ಮೊದಲೇ ಮಾಡಿಸಿತ್ತು ಎಂಬ ವದಂತಿಯೂ ಒಂದಷ್ಟು ಓಡಾಡಿತಾದರೂ, ಬಿಜೆಪಿಯೊಳಗೇ ಇರುವ ಶಾಸಕರು ಮತ್ತು ಸಂಘಪರಿವಾರದ ಮೂಲದ ಶಾಸಕರೂ ಇರುವುದು ಅದನ್ನೂ ಸುಳ್ಳಾಗಿಸಿದೆ. ಯಡಿಯೂರಪ್ಪನವರ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಅರವಿಂದ ಲಿಂಬಾವಳಿಯ ಸಲಿಂಗರತಿಯ ವಿಡಿಯೋ ಬಹಿರಂಗವಾಗಿದ್ದು ಬಿಜೆಪಿಯವರಿಂದಲೇ ಎಂಬುದರಲ್ಲಿ ಯಾರಿಗೂ ಸಂಶಯವಿಲ್ಲ. ಏಕೆಂದರೆ, ಆಗ ಓಡಾಡಿದ ಆಡಿಯೋಗಳಲ್ಲಿ ಒಂದು ಸದರಿ ‘ಹುಡುಗರು’ ಈಶ್ವರಪ್ಪನವರ ಜೊತೆ ಇದರ ಕುರಿತೇ ಮಾತನಾಡುತ್ತಿದ್ದುದೂ ಇತ್ತು. ಅದಕ್ಕೆ ತಕ್ಕುನಾಗಿ ‘ಪ್ರಭಾವಿ’ಗಳಲ್ಲೊಬ್ಬರಾದ ಲಿಂಬಾವಳಿಯು ನಂತರ ಸಚಿವರೂ ಆಗಲಿಲ್ಲ; ರಾಜ್ಯಾಧ್ಯಕ್ಷರೂ ಆಗಲಿಲ್ಲ.

ತೇಜಸ್ವಿ ಸೂರ್ಯರ ‘ಹಗರಣ’ಗಳ ವಿಚಾರದಲ್ಲಿ ‘ಸಂತ್ರಸ್ತೆ’ ಪ್ರತಾಪ್‍ಸಿಂಹರಿಗೆ ದೂರು ಕೊಡುವುದು; ಪ್ರತಾಪ್‍ಸಿಂಹರ ಆಡಿಯೋದಲ್ಲಿ ರಾಮದಾಸ್ ಹೆಸರು ಕೇಳಿಬರುವುದು ಇವೆಲ್ಲವೂ ಬಿಜೆಪಿಯೊಳಗೆ ಇಂಥಾ ಹಲವು ಒಳಸುಳಿಗಳಿರುವ ಸೂಚನೆಯನ್ನಂತೂ ನೀಡುತ್ತಿವೆ. ಕಾಂಗ್ರೆಸ್ ಸರ್ಕಾರವಿದ್ದಾಗ ಸಚಿವ ಎಚ್.ವೈ.ಮೇಟಿ ಇಂಥದ್ದೇ ಒಂದರಲ್ಲಿ ಸಿಕ್ಕಿಕೊಂಡು ರಾಜೀನಾಮೆ ಕೊಟ್ಟರು. ಒಂದೆರಡು ಚಾನೆಲ್ ಬಿಟ್ಟರೆ ಮಿಕ್ಕೆಲ್ಲವೂ ಎಗ್ಗು ಸಿಗ್ಗಿಲ್ಲದೇ ವಿಡಿಯೋವನ್ನೇ ಪ್ರಸಾರ ಮಾಡಿದ್ದವು. ಕಾಂಗ್ರೆಸ್ ನಾಯಕರುಗಳ ಲೈಂಗಿಕ ಸಂಬಂಧಗಳ ಕುರಿತಂತೆ ಗಾಸಿಪ್‍ಗಳಿಗೆ ಕಡಿಮೆಯಿಲ್ಲವಾದರೂ ಮೇಟಿಯವರ ವಿಡಿಯೋ ಬಿಟ್ಟರೆ ಹೊರಬಂದಿದ್ದು ಕಡಿಮೆ. ಆದರೆ, ಬಿಜೆಪಿಯೊಳಗೆ ಸದಾಕಾಲ ಒಂದಲ್ಲಾ ಒಂದು ಕಡೆ ಯಾರದ್ದೋ ರೆಕಾರ್ಡಿಂಗ್ ನಡೆಯುತ್ತಿರಬಹುದು ಇಲ್ಲವೇ ಸಂಚು ರೂಪಿತವಾಗುತ್ತಿರಬಹುದು ಎನ್ನುವ ಮಟ್ಟಿಗೆ ‘ಲೀಲೆಗಳು’ ಇದ್ದಂತಿವೆ. ಇಂತಹ ಲೀಲೆಗಳಲ್ಲಿ ಈಗ ಸಿಕ್ಕಿ ಹಾಕಿಕೊಂಡಿರುವ ಅನರ್ಹರೂ ಕಾಂಗ್ರೆಸ್‍ನಲ್ಲಿದ್ದವರೇ ಆಗಿರುವುದನ್ನೂ ಮರೆಯುವಂತಿಲ್ಲ. ಒಟ್ಟಿನಲ್ಲಿ ಸಾರ್ವಜನಿಕ ಜೀವನದಲ್ಲಿರುವವರಿಗೆ ಇರಬೇಕಾದ ಶಿಸ್ತು, ನೀತಿ ಸಂಹಿತೆಗಳಿಂದ ದೂರ ನಿಂತಿರುವುದಷ್ಟೇ ಅಲ್ಲದೇ, ಸಾರ್ವಜನಿಕರೂ ಇವೆಲ್ಲವನ್ನೂ ಗಂಭೀರವಾಗಿ ತೆಗೆದುಕೊಳ್ಳದಿರುವುದು ಒಳ್ಳೆಯ ಬೆಳವಣಿಗೆಯೋ ದುರಂತವೋ ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೂರೂ ಬಿಟ್ಟವರು ಊರಿಗೆ ದೊಡ್ಡವರು ಎಂಬ ಮಾತಿಗೆ ಅನುಗುಣವಾಗಿ ನಮ್ಮ ರಾಜಕಾರಣಿಗಳು ನಡೆದುಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...