Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ ಪ್ರೆಸ್ ಕ್ಲಬ್ ಖಂಡನೆ

- Advertisement -
- Advertisement -

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್‌) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡಿದ್ದ ಕನಿಷ್ಠ ನಾಲ್ವರು ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಇತರ ಏಳು ಪತ್ರಕರ್ತರನ್ನು ವಿಚಾರಣೆಗೆ ಕರೆಯಲಾಗಿದೆ.

ಸಂತ್ರಸ್ತೆಯ ಗುರುತು ಬಹಿರಂಗಗೊಳ್ಳಲು ಕಾರಣವಾದ ಎಫ್‌ಐಆರ್‌ ಮಾಹಿತಿ ಸೋರಿಕೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪತ್ರಕರ್ತ ಮೊಬೈಲ್‌ ವಶಪಡಿಸಿಕೊಡಿರುವ ಕ್ರಮವನ್ನು ಖಂಡಿಸಿರುವ ಚೆನ್ನೈ ಪ್ರೆಸ್ ಕ್ಲಬ್, “ಪತ್ರಕರ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ” ಎಂದು ಹೇಳಿದೆ.

ಡಿಸೆಂಬರ್ 23, 2024ರಂದು, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಜ್ಞಾನಶೇಖರನ್ ಎಂಬ ಬಿರಿಯಾನಿ ಅಂಗಡಿ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಅತ್ಯಾಚಾರದ ವಿಡಿಯೋ ಮಾಡಿಟ್ಟುಕೊಂಡು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ.

ಈ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಮದ್ರಾಸ್ ಹೈಕೋರ್ಟ್, ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಮಾಹಿತಿ ಸೋರಿಕೆ ಎರಡನ್ನೂ ತನಿಖೆ ಮಾಡಲು ಎಸ್‌ಐಟಿ ರಚಿಸಿದೆ. ಸೋರಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಚೆನ್ನೈ ಪೊಲೀಸ್ ಆಯುಕ್ತ ಎ ಅರುಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ರಚಿಸಿರುವ ಎಸ್‌ಐಟಿಯಲ್ಲಿ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಭುಕ್ಯಾ ಸ್ನೇಹ ಪ್ರಿಯಾ, ಡಿಸಿಪಿ ಅಯ್ಮನ್ ಜಮಾಲ್ (ಕಾನೂನು ಮತ್ತು ಸುವ್ಯವಸ್ಥೆ) ಅವಡಿ ಮತ್ತು ಸೇಲಂ ನಗರ (ಉತ್ತರ) ಡಿಸಿಪಿ ಎಸ್ ಬೃಂದಾ ಅವರು ಇದ್ದಾರೆ.

ಎಸ್‌ಐಟಿ ತಂತಿ ಟಿವಿ, ಡಿಟಿ ನೆಕ್ಸ್ಟ್, ಒನ್ ಇಂಡಿಯಾ ನ್ಯೂಸ್ ಮತ್ತು ಕುಮುದಂನಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿತ ವಿವರಗಳನ್ನು ಸಲ್ಲಿಸಲು ಸೂಚಿಸಿದೆ.

ಎಸ್‌ಐಟಿ ವಿರುದ್ಧ ಚೆನ್ನೈ ಪ್ರೆಸ್ ಕ್ಲಬ್ ಆಕ್ರೋಶ

ಎಸ್‌ಐಟಿಯ ಕ್ರಮಗಳನ್ನು, ವಿಶೇಷವಾಗಿ ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪವನ್ನು ಚೆನ್ನೈ ಪ್ರೆಸ್ ಕ್ಲಬ್‌ ತೀವ್ರವಾಗಿ ಟೀಕಿಸಿದೆ. ವಾಟ್ಸಾಪ್‌ನಲ್ಲಿ ಸಮನ್ಸ್ ಜಾರಿ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶಗಳನ್ನು ಎಸ್‌ಐಟಿ ಉಲ್ಲಂಘಿಸಿದೆ ಎಂದು ಪ್ರೆಸ್ ಕ್ಲಬ್ ಹೇಳಿಕೆಯಲ್ಲಿ ಆರೋಪಿಸಿದೆ.

ಕಾನೂನಿನ ಮೇಲಿನ ಗೌರವದಿಂದಾಗಿ, ಪತ್ರಕರ್ತರು ವೈಯಕ್ತಿಕವಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅವರನ್ನು ತುಂಬಾ ಹೊತ್ತು ಕಾಯುವಂತೆ ಮಾಡಲಾಗಿದೆ. ಆರೋಪಿಗಳಂತೆ ನಡೆಸಿಕೊಳ್ಳಲಾಗಿದೆ ಮತ್ತು ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪ್ರೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ವರದಿಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಇದು ಅವರು ವರ್ಷಗಳ ಕಾಲ ಕೆಲಸ ಮಾಡಿ ಬೆಳೆಸಿಕೊಂಡಿರುವ ಗೌಪ್ಯ ಮೂಲಗಳನ್ನು ರಕ್ಷಿಸುವ ಅವರ ಸಾಮರ್ಥ್ಯಕ್ಕೂ ಅಡ್ಡಿಪಡಿಸುತ್ತದೆ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ತನಿಖೆಗೆ ಸಹಕರಿಸುತ್ತಿರುವ, ಕಾನೂನು ಪಾಲಿಸುವ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ಮತ್ತು ಬೆದರಿಸುವುದನ್ನು ನಿಲ್ಲಿಸುವಂತೆ ಪ್ರೆಸ್ ಕ್ಲಬ್ ಪೊಲೀಸರನ್ನು ಒತ್ತಾಯಿಸಿದೆ. ವಶಪಡಿಸಿಕೊಂಡ ಎಲ್ಲಾ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣ ಹಿಂದಿರುಗಿಸುವಂತೆ ಆಗ್ರಹಿಸಿದೆ.

ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕಿರುಕುಳಕ್ಕೊಳಗಾದ ಪತ್ರಕರ್ತರ ಪರವಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ. “ನಾವು ಏನು ಹೇಳಬೇಕೋ ಅದನ್ನು ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವ ಸಂದರ್ಭ ನೀಡಿರುವ ನಮ್ಮ ಆದೇಶದಲ್ಲಿ ಹೇಳಿದ್ದೇವೆ. ಈಗ, ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ನಾವು ಈಗ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಅವಧಿಯ ಅರ್ಜಿ (SLP)ಸಲ್ಲಿಸಿ, ಚೆನ್ನೈ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಮಾಡಿದ ಕೆಲವು ಕಟುವಾದ ಅವಲೋಕನಗಳನ್ನು ತೆಗೆದು ಹಾಕಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿತ್ತು.

ಜನವರಿ 27 ರಂದು ಸುಪ್ರೀಂ ಕೋರ್ಟ್, ಎಫ್‌ಐಆರ್ ಸೋರಿಕೆ ಕುರಿತು ಇಲಾಖಾ ತನಿಖೆ ನಡೆಸು ನಿರ್ದೇಶನ ಮತ್ತು ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರ ಸೇರಿದಂತೆ ಹೈಕೋರ್ಟ್ ಮಾಡಿದ್ದ ಅವಲೋಕನಗಳಿಗೆ ತಡೆ ನೀಡಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಮುಖಭಂಗ; ಚಂಡೀಗಢ ಹೊಸ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...