Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ ಪ್ರೆಸ್ ಕ್ಲಬ್ ಖಂಡನೆ

- Advertisement -
- Advertisement -

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್‌) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡಿದ್ದ ಕನಿಷ್ಠ ನಾಲ್ವರು ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಇತರ ಏಳು ಪತ್ರಕರ್ತರನ್ನು ವಿಚಾರಣೆಗೆ ಕರೆಯಲಾಗಿದೆ.

ಸಂತ್ರಸ್ತೆಯ ಗುರುತು ಬಹಿರಂಗಗೊಳ್ಳಲು ಕಾರಣವಾದ ಎಫ್‌ಐಆರ್‌ ಮಾಹಿತಿ ಸೋರಿಕೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪತ್ರಕರ್ತ ಮೊಬೈಲ್‌ ವಶಪಡಿಸಿಕೊಡಿರುವ ಕ್ರಮವನ್ನು ಖಂಡಿಸಿರುವ ಚೆನ್ನೈ ಪ್ರೆಸ್ ಕ್ಲಬ್, “ಪತ್ರಕರ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ” ಎಂದು ಹೇಳಿದೆ.

ಡಿಸೆಂಬರ್ 23, 2024ರಂದು, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಜ್ಞಾನಶೇಖರನ್ ಎಂಬ ಬಿರಿಯಾನಿ ಅಂಗಡಿ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಅತ್ಯಾಚಾರದ ವಿಡಿಯೋ ಮಾಡಿಟ್ಟುಕೊಂಡು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ.

ಈ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಮದ್ರಾಸ್ ಹೈಕೋರ್ಟ್, ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಮಾಹಿತಿ ಸೋರಿಕೆ ಎರಡನ್ನೂ ತನಿಖೆ ಮಾಡಲು ಎಸ್‌ಐಟಿ ರಚಿಸಿದೆ. ಸೋರಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಚೆನ್ನೈ ಪೊಲೀಸ್ ಆಯುಕ್ತ ಎ ಅರುಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ರಚಿಸಿರುವ ಎಸ್‌ಐಟಿಯಲ್ಲಿ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಭುಕ್ಯಾ ಸ್ನೇಹ ಪ್ರಿಯಾ, ಡಿಸಿಪಿ ಅಯ್ಮನ್ ಜಮಾಲ್ (ಕಾನೂನು ಮತ್ತು ಸುವ್ಯವಸ್ಥೆ) ಅವಡಿ ಮತ್ತು ಸೇಲಂ ನಗರ (ಉತ್ತರ) ಡಿಸಿಪಿ ಎಸ್ ಬೃಂದಾ ಅವರು ಇದ್ದಾರೆ.

ಎಸ್‌ಐಟಿ ತಂತಿ ಟಿವಿ, ಡಿಟಿ ನೆಕ್ಸ್ಟ್, ಒನ್ ಇಂಡಿಯಾ ನ್ಯೂಸ್ ಮತ್ತು ಕುಮುದಂನಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿತ ವಿವರಗಳನ್ನು ಸಲ್ಲಿಸಲು ಸೂಚಿಸಿದೆ.

ಎಸ್‌ಐಟಿ ವಿರುದ್ಧ ಚೆನ್ನೈ ಪ್ರೆಸ್ ಕ್ಲಬ್ ಆಕ್ರೋಶ

ಎಸ್‌ಐಟಿಯ ಕ್ರಮಗಳನ್ನು, ವಿಶೇಷವಾಗಿ ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪವನ್ನು ಚೆನ್ನೈ ಪ್ರೆಸ್ ಕ್ಲಬ್‌ ತೀವ್ರವಾಗಿ ಟೀಕಿಸಿದೆ. ವಾಟ್ಸಾಪ್‌ನಲ್ಲಿ ಸಮನ್ಸ್ ಜಾರಿ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶಗಳನ್ನು ಎಸ್‌ಐಟಿ ಉಲ್ಲಂಘಿಸಿದೆ ಎಂದು ಪ್ರೆಸ್ ಕ್ಲಬ್ ಹೇಳಿಕೆಯಲ್ಲಿ ಆರೋಪಿಸಿದೆ.

ಕಾನೂನಿನ ಮೇಲಿನ ಗೌರವದಿಂದಾಗಿ, ಪತ್ರಕರ್ತರು ವೈಯಕ್ತಿಕವಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅವರನ್ನು ತುಂಬಾ ಹೊತ್ತು ಕಾಯುವಂತೆ ಮಾಡಲಾಗಿದೆ. ಆರೋಪಿಗಳಂತೆ ನಡೆಸಿಕೊಳ್ಳಲಾಗಿದೆ ಮತ್ತು ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪ್ರೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ವರದಿಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಇದು ಅವರು ವರ್ಷಗಳ ಕಾಲ ಕೆಲಸ ಮಾಡಿ ಬೆಳೆಸಿಕೊಂಡಿರುವ ಗೌಪ್ಯ ಮೂಲಗಳನ್ನು ರಕ್ಷಿಸುವ ಅವರ ಸಾಮರ್ಥ್ಯಕ್ಕೂ ಅಡ್ಡಿಪಡಿಸುತ್ತದೆ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ತನಿಖೆಗೆ ಸಹಕರಿಸುತ್ತಿರುವ, ಕಾನೂನು ಪಾಲಿಸುವ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ಮತ್ತು ಬೆದರಿಸುವುದನ್ನು ನಿಲ್ಲಿಸುವಂತೆ ಪ್ರೆಸ್ ಕ್ಲಬ್ ಪೊಲೀಸರನ್ನು ಒತ್ತಾಯಿಸಿದೆ. ವಶಪಡಿಸಿಕೊಂಡ ಎಲ್ಲಾ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣ ಹಿಂದಿರುಗಿಸುವಂತೆ ಆಗ್ರಹಿಸಿದೆ.

ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕಿರುಕುಳಕ್ಕೊಳಗಾದ ಪತ್ರಕರ್ತರ ಪರವಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ. “ನಾವು ಏನು ಹೇಳಬೇಕೋ ಅದನ್ನು ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವ ಸಂದರ್ಭ ನೀಡಿರುವ ನಮ್ಮ ಆದೇಶದಲ್ಲಿ ಹೇಳಿದ್ದೇವೆ. ಈಗ, ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ನಾವು ಈಗ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಅವಧಿಯ ಅರ್ಜಿ (SLP)ಸಲ್ಲಿಸಿ, ಚೆನ್ನೈ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಮಾಡಿದ ಕೆಲವು ಕಟುವಾದ ಅವಲೋಕನಗಳನ್ನು ತೆಗೆದು ಹಾಕಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿತ್ತು.

ಜನವರಿ 27 ರಂದು ಸುಪ್ರೀಂ ಕೋರ್ಟ್, ಎಫ್‌ಐಆರ್ ಸೋರಿಕೆ ಕುರಿತು ಇಲಾಖಾ ತನಿಖೆ ನಡೆಸು ನಿರ್ದೇಶನ ಮತ್ತು ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರ ಸೇರಿದಂತೆ ಹೈಕೋರ್ಟ್ ಮಾಡಿದ್ದ ಅವಲೋಕನಗಳಿಗೆ ತಡೆ ನೀಡಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಮುಖಭಂಗ; ಚಂಡೀಗಢ ಹೊಸ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...