Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ ಪ್ರೆಸ್ ಕ್ಲಬ್ ಖಂಡನೆ

- Advertisement -
- Advertisement -

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್‌) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡಿದ್ದ ಕನಿಷ್ಠ ನಾಲ್ವರು ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಇತರ ಏಳು ಪತ್ರಕರ್ತರನ್ನು ವಿಚಾರಣೆಗೆ ಕರೆಯಲಾಗಿದೆ.

ಸಂತ್ರಸ್ತೆಯ ಗುರುತು ಬಹಿರಂಗಗೊಳ್ಳಲು ಕಾರಣವಾದ ಎಫ್‌ಐಆರ್‌ ಮಾಹಿತಿ ಸೋರಿಕೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪತ್ರಕರ್ತ ಮೊಬೈಲ್‌ ವಶಪಡಿಸಿಕೊಡಿರುವ ಕ್ರಮವನ್ನು ಖಂಡಿಸಿರುವ ಚೆನ್ನೈ ಪ್ರೆಸ್ ಕ್ಲಬ್, “ಪತ್ರಕರ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ” ಎಂದು ಹೇಳಿದೆ.

ಡಿಸೆಂಬರ್ 23, 2024ರಂದು, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಜ್ಞಾನಶೇಖರನ್ ಎಂಬ ಬಿರಿಯಾನಿ ಅಂಗಡಿ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಅತ್ಯಾಚಾರದ ವಿಡಿಯೋ ಮಾಡಿಟ್ಟುಕೊಂಡು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ.

ಈ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಮದ್ರಾಸ್ ಹೈಕೋರ್ಟ್, ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಮಾಹಿತಿ ಸೋರಿಕೆ ಎರಡನ್ನೂ ತನಿಖೆ ಮಾಡಲು ಎಸ್‌ಐಟಿ ರಚಿಸಿದೆ. ಸೋರಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಚೆನ್ನೈ ಪೊಲೀಸ್ ಆಯುಕ್ತ ಎ ಅರುಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ರಚಿಸಿರುವ ಎಸ್‌ಐಟಿಯಲ್ಲಿ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಭುಕ್ಯಾ ಸ್ನೇಹ ಪ್ರಿಯಾ, ಡಿಸಿಪಿ ಅಯ್ಮನ್ ಜಮಾಲ್ (ಕಾನೂನು ಮತ್ತು ಸುವ್ಯವಸ್ಥೆ) ಅವಡಿ ಮತ್ತು ಸೇಲಂ ನಗರ (ಉತ್ತರ) ಡಿಸಿಪಿ ಎಸ್ ಬೃಂದಾ ಅವರು ಇದ್ದಾರೆ.

ಎಸ್‌ಐಟಿ ತಂತಿ ಟಿವಿ, ಡಿಟಿ ನೆಕ್ಸ್ಟ್, ಒನ್ ಇಂಡಿಯಾ ನ್ಯೂಸ್ ಮತ್ತು ಕುಮುದಂನಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿತ ವಿವರಗಳನ್ನು ಸಲ್ಲಿಸಲು ಸೂಚಿಸಿದೆ.

ಎಸ್‌ಐಟಿ ವಿರುದ್ಧ ಚೆನ್ನೈ ಪ್ರೆಸ್ ಕ್ಲಬ್ ಆಕ್ರೋಶ

ಎಸ್‌ಐಟಿಯ ಕ್ರಮಗಳನ್ನು, ವಿಶೇಷವಾಗಿ ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪವನ್ನು ಚೆನ್ನೈ ಪ್ರೆಸ್ ಕ್ಲಬ್‌ ತೀವ್ರವಾಗಿ ಟೀಕಿಸಿದೆ. ವಾಟ್ಸಾಪ್‌ನಲ್ಲಿ ಸಮನ್ಸ್ ಜಾರಿ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶಗಳನ್ನು ಎಸ್‌ಐಟಿ ಉಲ್ಲಂಘಿಸಿದೆ ಎಂದು ಪ್ರೆಸ್ ಕ್ಲಬ್ ಹೇಳಿಕೆಯಲ್ಲಿ ಆರೋಪಿಸಿದೆ.

ಕಾನೂನಿನ ಮೇಲಿನ ಗೌರವದಿಂದಾಗಿ, ಪತ್ರಕರ್ತರು ವೈಯಕ್ತಿಕವಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅವರನ್ನು ತುಂಬಾ ಹೊತ್ತು ಕಾಯುವಂತೆ ಮಾಡಲಾಗಿದೆ. ಆರೋಪಿಗಳಂತೆ ನಡೆಸಿಕೊಳ್ಳಲಾಗಿದೆ ಮತ್ತು ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪ್ರೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ವರದಿಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಇದು ಅವರು ವರ್ಷಗಳ ಕಾಲ ಕೆಲಸ ಮಾಡಿ ಬೆಳೆಸಿಕೊಂಡಿರುವ ಗೌಪ್ಯ ಮೂಲಗಳನ್ನು ರಕ್ಷಿಸುವ ಅವರ ಸಾಮರ್ಥ್ಯಕ್ಕೂ ಅಡ್ಡಿಪಡಿಸುತ್ತದೆ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ತನಿಖೆಗೆ ಸಹಕರಿಸುತ್ತಿರುವ, ಕಾನೂನು ಪಾಲಿಸುವ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ಮತ್ತು ಬೆದರಿಸುವುದನ್ನು ನಿಲ್ಲಿಸುವಂತೆ ಪ್ರೆಸ್ ಕ್ಲಬ್ ಪೊಲೀಸರನ್ನು ಒತ್ತಾಯಿಸಿದೆ. ವಶಪಡಿಸಿಕೊಂಡ ಎಲ್ಲಾ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣ ಹಿಂದಿರುಗಿಸುವಂತೆ ಆಗ್ರಹಿಸಿದೆ.

ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕಿರುಕುಳಕ್ಕೊಳಗಾದ ಪತ್ರಕರ್ತರ ಪರವಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ. “ನಾವು ಏನು ಹೇಳಬೇಕೋ ಅದನ್ನು ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವ ಸಂದರ್ಭ ನೀಡಿರುವ ನಮ್ಮ ಆದೇಶದಲ್ಲಿ ಹೇಳಿದ್ದೇವೆ. ಈಗ, ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ನಾವು ಈಗ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಅವಧಿಯ ಅರ್ಜಿ (SLP)ಸಲ್ಲಿಸಿ, ಚೆನ್ನೈ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಮಾಡಿದ ಕೆಲವು ಕಟುವಾದ ಅವಲೋಕನಗಳನ್ನು ತೆಗೆದು ಹಾಕಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿತ್ತು.

ಜನವರಿ 27 ರಂದು ಸುಪ್ರೀಂ ಕೋರ್ಟ್, ಎಫ್‌ಐಆರ್ ಸೋರಿಕೆ ಕುರಿತು ಇಲಾಖಾ ತನಿಖೆ ನಡೆಸು ನಿರ್ದೇಶನ ಮತ್ತು ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರ ಸೇರಿದಂತೆ ಹೈಕೋರ್ಟ್ ಮಾಡಿದ್ದ ಅವಲೋಕನಗಳಿಗೆ ತಡೆ ನೀಡಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಮುಖಭಂಗ; ಚಂಡೀಗಢ ಹೊಸ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...