Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ ಪ್ರೆಸ್ ಕ್ಲಬ್ ಖಂಡನೆ

- Advertisement -
- Advertisement -

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್‌) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡಿದ್ದ ಕನಿಷ್ಠ ನಾಲ್ವರು ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಇತರ ಏಳು ಪತ್ರಕರ್ತರನ್ನು ವಿಚಾರಣೆಗೆ ಕರೆಯಲಾಗಿದೆ.

ಸಂತ್ರಸ್ತೆಯ ಗುರುತು ಬಹಿರಂಗಗೊಳ್ಳಲು ಕಾರಣವಾದ ಎಫ್‌ಐಆರ್‌ ಮಾಹಿತಿ ಸೋರಿಕೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪತ್ರಕರ್ತ ಮೊಬೈಲ್‌ ವಶಪಡಿಸಿಕೊಡಿರುವ ಕ್ರಮವನ್ನು ಖಂಡಿಸಿರುವ ಚೆನ್ನೈ ಪ್ರೆಸ್ ಕ್ಲಬ್, “ಪತ್ರಕರ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ” ಎಂದು ಹೇಳಿದೆ.

ಡಿಸೆಂಬರ್ 23, 2024ರಂದು, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಜ್ಞಾನಶೇಖರನ್ ಎಂಬ ಬಿರಿಯಾನಿ ಅಂಗಡಿ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಅತ್ಯಾಚಾರದ ವಿಡಿಯೋ ಮಾಡಿಟ್ಟುಕೊಂಡು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ.

ಈ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಮದ್ರಾಸ್ ಹೈಕೋರ್ಟ್, ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಮಾಹಿತಿ ಸೋರಿಕೆ ಎರಡನ್ನೂ ತನಿಖೆ ಮಾಡಲು ಎಸ್‌ಐಟಿ ರಚಿಸಿದೆ. ಸೋರಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಚೆನ್ನೈ ಪೊಲೀಸ್ ಆಯುಕ್ತ ಎ ಅರುಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ರಚಿಸಿರುವ ಎಸ್‌ಐಟಿಯಲ್ಲಿ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಭುಕ್ಯಾ ಸ್ನೇಹ ಪ್ರಿಯಾ, ಡಿಸಿಪಿ ಅಯ್ಮನ್ ಜಮಾಲ್ (ಕಾನೂನು ಮತ್ತು ಸುವ್ಯವಸ್ಥೆ) ಅವಡಿ ಮತ್ತು ಸೇಲಂ ನಗರ (ಉತ್ತರ) ಡಿಸಿಪಿ ಎಸ್ ಬೃಂದಾ ಅವರು ಇದ್ದಾರೆ.

ಎಸ್‌ಐಟಿ ತಂತಿ ಟಿವಿ, ಡಿಟಿ ನೆಕ್ಸ್ಟ್, ಒನ್ ಇಂಡಿಯಾ ನ್ಯೂಸ್ ಮತ್ತು ಕುಮುದಂನಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿತ ವಿವರಗಳನ್ನು ಸಲ್ಲಿಸಲು ಸೂಚಿಸಿದೆ.

ಎಸ್‌ಐಟಿ ವಿರುದ್ಧ ಚೆನ್ನೈ ಪ್ರೆಸ್ ಕ್ಲಬ್ ಆಕ್ರೋಶ

ಎಸ್‌ಐಟಿಯ ಕ್ರಮಗಳನ್ನು, ವಿಶೇಷವಾಗಿ ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪವನ್ನು ಚೆನ್ನೈ ಪ್ರೆಸ್ ಕ್ಲಬ್‌ ತೀವ್ರವಾಗಿ ಟೀಕಿಸಿದೆ. ವಾಟ್ಸಾಪ್‌ನಲ್ಲಿ ಸಮನ್ಸ್ ಜಾರಿ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶಗಳನ್ನು ಎಸ್‌ಐಟಿ ಉಲ್ಲಂಘಿಸಿದೆ ಎಂದು ಪ್ರೆಸ್ ಕ್ಲಬ್ ಹೇಳಿಕೆಯಲ್ಲಿ ಆರೋಪಿಸಿದೆ.

ಕಾನೂನಿನ ಮೇಲಿನ ಗೌರವದಿಂದಾಗಿ, ಪತ್ರಕರ್ತರು ವೈಯಕ್ತಿಕವಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅವರನ್ನು ತುಂಬಾ ಹೊತ್ತು ಕಾಯುವಂತೆ ಮಾಡಲಾಗಿದೆ. ಆರೋಪಿಗಳಂತೆ ನಡೆಸಿಕೊಳ್ಳಲಾಗಿದೆ ಮತ್ತು ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪ್ರೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ವರದಿಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಇದು ಅವರು ವರ್ಷಗಳ ಕಾಲ ಕೆಲಸ ಮಾಡಿ ಬೆಳೆಸಿಕೊಂಡಿರುವ ಗೌಪ್ಯ ಮೂಲಗಳನ್ನು ರಕ್ಷಿಸುವ ಅವರ ಸಾಮರ್ಥ್ಯಕ್ಕೂ ಅಡ್ಡಿಪಡಿಸುತ್ತದೆ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ತನಿಖೆಗೆ ಸಹಕರಿಸುತ್ತಿರುವ, ಕಾನೂನು ಪಾಲಿಸುವ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ಮತ್ತು ಬೆದರಿಸುವುದನ್ನು ನಿಲ್ಲಿಸುವಂತೆ ಪ್ರೆಸ್ ಕ್ಲಬ್ ಪೊಲೀಸರನ್ನು ಒತ್ತಾಯಿಸಿದೆ. ವಶಪಡಿಸಿಕೊಂಡ ಎಲ್ಲಾ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣ ಹಿಂದಿರುಗಿಸುವಂತೆ ಆಗ್ರಹಿಸಿದೆ.

ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕಿರುಕುಳಕ್ಕೊಳಗಾದ ಪತ್ರಕರ್ತರ ಪರವಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ. “ನಾವು ಏನು ಹೇಳಬೇಕೋ ಅದನ್ನು ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವ ಸಂದರ್ಭ ನೀಡಿರುವ ನಮ್ಮ ಆದೇಶದಲ್ಲಿ ಹೇಳಿದ್ದೇವೆ. ಈಗ, ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ನಾವು ಈಗ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಅವಧಿಯ ಅರ್ಜಿ (SLP)ಸಲ್ಲಿಸಿ, ಚೆನ್ನೈ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಮಾಡಿದ ಕೆಲವು ಕಟುವಾದ ಅವಲೋಕನಗಳನ್ನು ತೆಗೆದು ಹಾಕಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿತ್ತು.

ಜನವರಿ 27 ರಂದು ಸುಪ್ರೀಂ ಕೋರ್ಟ್, ಎಫ್‌ಐಆರ್ ಸೋರಿಕೆ ಕುರಿತು ಇಲಾಖಾ ತನಿಖೆ ನಡೆಸು ನಿರ್ದೇಶನ ಮತ್ತು ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರ ಸೇರಿದಂತೆ ಹೈಕೋರ್ಟ್ ಮಾಡಿದ್ದ ಅವಲೋಕನಗಳಿಗೆ ತಡೆ ನೀಡಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಮುಖಭಂಗ; ಚಂಡೀಗಢ ಹೊಸ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...