Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ ಪ್ರೆಸ್ ಕ್ಲಬ್ ಖಂಡನೆ

- Advertisement -
- Advertisement -

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್‌) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡಿದ್ದ ಕನಿಷ್ಠ ನಾಲ್ವರು ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಇತರ ಏಳು ಪತ್ರಕರ್ತರನ್ನು ವಿಚಾರಣೆಗೆ ಕರೆಯಲಾಗಿದೆ.

ಸಂತ್ರಸ್ತೆಯ ಗುರುತು ಬಹಿರಂಗಗೊಳ್ಳಲು ಕಾರಣವಾದ ಎಫ್‌ಐಆರ್‌ ಮಾಹಿತಿ ಸೋರಿಕೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪತ್ರಕರ್ತ ಮೊಬೈಲ್‌ ವಶಪಡಿಸಿಕೊಡಿರುವ ಕ್ರಮವನ್ನು ಖಂಡಿಸಿರುವ ಚೆನ್ನೈ ಪ್ರೆಸ್ ಕ್ಲಬ್, “ಪತ್ರಕರ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ” ಎಂದು ಹೇಳಿದೆ.

ಡಿಸೆಂಬರ್ 23, 2024ರಂದು, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಜ್ಞಾನಶೇಖರನ್ ಎಂಬ ಬಿರಿಯಾನಿ ಅಂಗಡಿ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಅತ್ಯಾಚಾರದ ವಿಡಿಯೋ ಮಾಡಿಟ್ಟುಕೊಂಡು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ.

ಈ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಮದ್ರಾಸ್ ಹೈಕೋರ್ಟ್, ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಮಾಹಿತಿ ಸೋರಿಕೆ ಎರಡನ್ನೂ ತನಿಖೆ ಮಾಡಲು ಎಸ್‌ಐಟಿ ರಚಿಸಿದೆ. ಸೋರಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಚೆನ್ನೈ ಪೊಲೀಸ್ ಆಯುಕ್ತ ಎ ಅರುಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ರಚಿಸಿರುವ ಎಸ್‌ಐಟಿಯಲ್ಲಿ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಭುಕ್ಯಾ ಸ್ನೇಹ ಪ್ರಿಯಾ, ಡಿಸಿಪಿ ಅಯ್ಮನ್ ಜಮಾಲ್ (ಕಾನೂನು ಮತ್ತು ಸುವ್ಯವಸ್ಥೆ) ಅವಡಿ ಮತ್ತು ಸೇಲಂ ನಗರ (ಉತ್ತರ) ಡಿಸಿಪಿ ಎಸ್ ಬೃಂದಾ ಅವರು ಇದ್ದಾರೆ.

ಎಸ್‌ಐಟಿ ತಂತಿ ಟಿವಿ, ಡಿಟಿ ನೆಕ್ಸ್ಟ್, ಒನ್ ಇಂಡಿಯಾ ನ್ಯೂಸ್ ಮತ್ತು ಕುಮುದಂನಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿತ ವಿವರಗಳನ್ನು ಸಲ್ಲಿಸಲು ಸೂಚಿಸಿದೆ.

ಎಸ್‌ಐಟಿ ವಿರುದ್ಧ ಚೆನ್ನೈ ಪ್ರೆಸ್ ಕ್ಲಬ್ ಆಕ್ರೋಶ

ಎಸ್‌ಐಟಿಯ ಕ್ರಮಗಳನ್ನು, ವಿಶೇಷವಾಗಿ ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪವನ್ನು ಚೆನ್ನೈ ಪ್ರೆಸ್ ಕ್ಲಬ್‌ ತೀವ್ರವಾಗಿ ಟೀಕಿಸಿದೆ. ವಾಟ್ಸಾಪ್‌ನಲ್ಲಿ ಸಮನ್ಸ್ ಜಾರಿ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶಗಳನ್ನು ಎಸ್‌ಐಟಿ ಉಲ್ಲಂಘಿಸಿದೆ ಎಂದು ಪ್ರೆಸ್ ಕ್ಲಬ್ ಹೇಳಿಕೆಯಲ್ಲಿ ಆರೋಪಿಸಿದೆ.

ಕಾನೂನಿನ ಮೇಲಿನ ಗೌರವದಿಂದಾಗಿ, ಪತ್ರಕರ್ತರು ವೈಯಕ್ತಿಕವಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅವರನ್ನು ತುಂಬಾ ಹೊತ್ತು ಕಾಯುವಂತೆ ಮಾಡಲಾಗಿದೆ. ಆರೋಪಿಗಳಂತೆ ನಡೆಸಿಕೊಳ್ಳಲಾಗಿದೆ ಮತ್ತು ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪ್ರೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ವರದಿಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಇದು ಅವರು ವರ್ಷಗಳ ಕಾಲ ಕೆಲಸ ಮಾಡಿ ಬೆಳೆಸಿಕೊಂಡಿರುವ ಗೌಪ್ಯ ಮೂಲಗಳನ್ನು ರಕ್ಷಿಸುವ ಅವರ ಸಾಮರ್ಥ್ಯಕ್ಕೂ ಅಡ್ಡಿಪಡಿಸುತ್ತದೆ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ತನಿಖೆಗೆ ಸಹಕರಿಸುತ್ತಿರುವ, ಕಾನೂನು ಪಾಲಿಸುವ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ಮತ್ತು ಬೆದರಿಸುವುದನ್ನು ನಿಲ್ಲಿಸುವಂತೆ ಪ್ರೆಸ್ ಕ್ಲಬ್ ಪೊಲೀಸರನ್ನು ಒತ್ತಾಯಿಸಿದೆ. ವಶಪಡಿಸಿಕೊಂಡ ಎಲ್ಲಾ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣ ಹಿಂದಿರುಗಿಸುವಂತೆ ಆಗ್ರಹಿಸಿದೆ.

ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕಿರುಕುಳಕ್ಕೊಳಗಾದ ಪತ್ರಕರ್ತರ ಪರವಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ. “ನಾವು ಏನು ಹೇಳಬೇಕೋ ಅದನ್ನು ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವ ಸಂದರ್ಭ ನೀಡಿರುವ ನಮ್ಮ ಆದೇಶದಲ್ಲಿ ಹೇಳಿದ್ದೇವೆ. ಈಗ, ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ನಾವು ಈಗ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಅವಧಿಯ ಅರ್ಜಿ (SLP)ಸಲ್ಲಿಸಿ, ಚೆನ್ನೈ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಮಾಡಿದ ಕೆಲವು ಕಟುವಾದ ಅವಲೋಕನಗಳನ್ನು ತೆಗೆದು ಹಾಕಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿತ್ತು.

ಜನವರಿ 27 ರಂದು ಸುಪ್ರೀಂ ಕೋರ್ಟ್, ಎಫ್‌ಐಆರ್ ಸೋರಿಕೆ ಕುರಿತು ಇಲಾಖಾ ತನಿಖೆ ನಡೆಸು ನಿರ್ದೇಶನ ಮತ್ತು ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರ ಸೇರಿದಂತೆ ಹೈಕೋರ್ಟ್ ಮಾಡಿದ್ದ ಅವಲೋಕನಗಳಿಗೆ ತಡೆ ನೀಡಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಮುಖಭಂಗ; ಚಂಡೀಗಢ ಹೊಸ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...