Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ | ಪತ್ರಕರ್ತರ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡ ಎಸ್‌ಐಟಿ : ಚೆನ್ನೈ ಪ್ರೆಸ್ ಕ್ಲಬ್ ಖಂಡನೆ

- Advertisement -
- Advertisement -

ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ಪ್ರಥಮ ಮಾಹಿತಿ ವರದಿಯ (ಎಫ್‌ಐಆರ್‌) ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡಿದ್ದ ಕನಿಷ್ಠ ನಾಲ್ವರು ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ವರದಿಗಳ ಪ್ರಕಾರ, ಇತರ ಏಳು ಪತ್ರಕರ್ತರನ್ನು ವಿಚಾರಣೆಗೆ ಕರೆಯಲಾಗಿದೆ.

ಸಂತ್ರಸ್ತೆಯ ಗುರುತು ಬಹಿರಂಗಗೊಳ್ಳಲು ಕಾರಣವಾದ ಎಫ್‌ಐಆರ್‌ ಮಾಹಿತಿ ಸೋರಿಕೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಪತ್ರಕರ್ತ ಮೊಬೈಲ್‌ ವಶಪಡಿಸಿಕೊಡಿರುವ ಕ್ರಮವನ್ನು ಖಂಡಿಸಿರುವ ಚೆನ್ನೈ ಪ್ರೆಸ್ ಕ್ಲಬ್, “ಪತ್ರಕರ್ತರನ್ನು ಆರೋಪಿಗಳಂತೆ ಪರಿಗಣಿಸಲಾಗುತ್ತಿದೆ” ಎಂದು ಹೇಳಿದೆ.

ಡಿಸೆಂಬರ್ 23, 2024ರಂದು, ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್‌ನಲ್ಲಿ ಅತ್ಯಾಚಾರ ನಡೆದಿತ್ತು. ಪ್ರಕರಣ ಸಂಬಂಧ ಜ್ಞಾನಶೇಖರನ್ ಎಂಬ ಬಿರಿಯಾನಿ ಅಂಗಡಿ ಮಾಲೀಕರೊಬ್ಬರನ್ನು ಬಂಧಿಸಲಾಗಿದೆ. ಈ ವ್ಯಕ್ತಿ ಅತ್ಯಾಚಾರದ ವಿಡಿಯೋ ಮಾಡಿಟ್ಟುಕೊಂಡು ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ ಆರೋಪವೂ ಇದೆ.

ಈ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಮದ್ರಾಸ್ ಹೈಕೋರ್ಟ್, ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಮಾಹಿತಿ ಸೋರಿಕೆ ಎರಡನ್ನೂ ತನಿಖೆ ಮಾಡಲು ಎಸ್‌ಐಟಿ ರಚಿಸಿದೆ. ಸೋರಿಕೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯ ನಿರ್ದೇಶಿಸಿದೆ. ಚೆನ್ನೈ ಪೊಲೀಸ್ ಆಯುಕ್ತ ಎ ಅರುಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.

ಹೈಕೋರ್ಟ್ ರಚಿಸಿರುವ ಎಸ್‌ಐಟಿಯಲ್ಲಿ ಚೆನ್ನೈನ ಅಣ್ಣಾ ನಗರದ ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಭುಕ್ಯಾ ಸ್ನೇಹ ಪ್ರಿಯಾ, ಡಿಸಿಪಿ ಅಯ್ಮನ್ ಜಮಾಲ್ (ಕಾನೂನು ಮತ್ತು ಸುವ್ಯವಸ್ಥೆ) ಅವಡಿ ಮತ್ತು ಸೇಲಂ ನಗರ (ಉತ್ತರ) ಡಿಸಿಪಿ ಎಸ್ ಬೃಂದಾ ಅವರು ಇದ್ದಾರೆ.

ಎಸ್‌ಐಟಿ ತಂತಿ ಟಿವಿ, ಡಿಟಿ ನೆಕ್ಸ್ಟ್, ಒನ್ ಇಂಡಿಯಾ ನ್ಯೂಸ್ ಮತ್ತು ಕುಮುದಂನಲ್ಲಿ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಸಮನ್ಸ್ ಜಾರಿ ಮಾಡಿದ್ದು, ಅವರ ಹೇಳಿಕೆಗಳನ್ನು ದಾಖಲಿಸಲು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿತ ವಿವರಗಳನ್ನು ಸಲ್ಲಿಸಲು ಸೂಚಿಸಿದೆ.

ಎಸ್‌ಐಟಿ ವಿರುದ್ಧ ಚೆನ್ನೈ ಪ್ರೆಸ್ ಕ್ಲಬ್ ಆಕ್ರೋಶ

ಎಸ್‌ಐಟಿಯ ಕ್ರಮಗಳನ್ನು, ವಿಶೇಷವಾಗಿ ಪತ್ರಕರ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪವನ್ನು ಚೆನ್ನೈ ಪ್ರೆಸ್ ಕ್ಲಬ್‌ ತೀವ್ರವಾಗಿ ಟೀಕಿಸಿದೆ. ವಾಟ್ಸಾಪ್‌ನಲ್ಲಿ ಸಮನ್ಸ್ ಜಾರಿ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಆದೇಶಗಳನ್ನು ಎಸ್‌ಐಟಿ ಉಲ್ಲಂಘಿಸಿದೆ ಎಂದು ಪ್ರೆಸ್ ಕ್ಲಬ್ ಹೇಳಿಕೆಯಲ್ಲಿ ಆರೋಪಿಸಿದೆ.

ಕಾನೂನಿನ ಮೇಲಿನ ಗೌರವದಿಂದಾಗಿ, ಪತ್ರಕರ್ತರು ವೈಯಕ್ತಿಕವಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಅವರನ್ನು ತುಂಬಾ ಹೊತ್ತು ಕಾಯುವಂತೆ ಮಾಡಲಾಗಿದೆ. ಆರೋಪಿಗಳಂತೆ ನಡೆಸಿಕೊಳ್ಳಲಾಗಿದೆ ಮತ್ತು ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪ್ರೆಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಪತ್ರಕರ್ತರ ಫೋನ್‌ಗಳನ್ನು ವಶಪಡಿಸಿಕೊಳ್ಳುವುದು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ವರದಿಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಇದು ಅವರು ವರ್ಷಗಳ ಕಾಲ ಕೆಲಸ ಮಾಡಿ ಬೆಳೆಸಿಕೊಂಡಿರುವ ಗೌಪ್ಯ ಮೂಲಗಳನ್ನು ರಕ್ಷಿಸುವ ಅವರ ಸಾಮರ್ಥ್ಯಕ್ಕೂ ಅಡ್ಡಿಪಡಿಸುತ್ತದೆ ಎಂದು ಪ್ರೆಸ್‌ ಕ್ಲಬ್‌ ಹೇಳಿದೆ.

ತನಿಖೆಗೆ ಸಹಕರಿಸುತ್ತಿರುವ, ಕಾನೂನು ಪಾಲಿಸುವ ಪತ್ರಕರ್ತರಿಗೆ ಕಿರುಕುಳ ನೀಡುವುದನ್ನು ಮತ್ತು ಬೆದರಿಸುವುದನ್ನು ನಿಲ್ಲಿಸುವಂತೆ ಪ್ರೆಸ್ ಕ್ಲಬ್ ಪೊಲೀಸರನ್ನು ಒತ್ತಾಯಿಸಿದೆ. ವಶಪಡಿಸಿಕೊಂಡ ಎಲ್ಲಾ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತಕ್ಷಣ ಹಿಂದಿರುಗಿಸುವಂತೆ ಆಗ್ರಹಿಸಿದೆ.

ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

ಕಿರುಕುಳಕ್ಕೊಳಗಾದ ಪತ್ರಕರ್ತರ ಪರವಾಗಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ದೇಶಿಸಿದೆ. “ನಾವು ಏನು ಹೇಳಬೇಕೋ ಅದನ್ನು ಅತ್ಯಾಚಾರ ಪ್ರಕರಣ ಮತ್ತು ಎಫ್‌ಐಆರ್ ಸೋರಿಕೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವ ಸಂದರ್ಭ ನೀಡಿರುವ ನಮ್ಮ ಆದೇಶದಲ್ಲಿ ಹೇಳಿದ್ದೇವೆ. ಈಗ, ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ನಾವು ಈಗ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜಾ ಅವಧಿಯ ಅರ್ಜಿ (SLP)ಸಲ್ಲಿಸಿ, ಚೆನ್ನೈ ಪೊಲೀಸರ ವಿರುದ್ಧ ಮದ್ರಾಸ್ ಹೈಕೋರ್ಟ್ ಮಾಡಿದ ಕೆಲವು ಕಟುವಾದ ಅವಲೋಕನಗಳನ್ನು ತೆಗೆದು ಹಾಕಲು ನ್ಯಾಯಾಲಯದ ನಿರ್ದೇಶನಗಳನ್ನು ಕೋರಿತ್ತು.

ಜನವರಿ 27 ರಂದು ಸುಪ್ರೀಂ ಕೋರ್ಟ್, ಎಫ್‌ಐಆರ್ ಸೋರಿಕೆ ಕುರಿತು ಇಲಾಖಾ ತನಿಖೆ ನಡೆಸು ನಿರ್ದೇಶನ ಮತ್ತು ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಧಾರ ಸೇರಿದಂತೆ ಹೈಕೋರ್ಟ್ ಮಾಡಿದ್ದ ಅವಲೋಕನಗಳಿಗೆ ತಡೆ ನೀಡಿತ್ತು.

ಇಂಡಿಯಾ ಮೈತ್ರಿಕೂಟಕ್ಕೆ ಮುಖಭಂಗ; ಚಂಡೀಗಢ ಹೊಸ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...