Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

- Advertisement -
- Advertisement -

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಗೆ ಮಹಿಳಾ ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮದ್ರಾಸ್ ಹೈಕೋರ್ಟ್‌ ಶನಿವಾರ (ಡಿ.28) ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ನ್ಯಾಯಮೂರ್ತಿ ವಿ.ಲಕ್ಷ್ಮಿನಾರಾಯಣನ್ ಅವರ ರಜಾಕಾಲದ ಪೀಠವು, ಪ್ರಕರಣದ ಎಫ್‌ಐಆರ್ ಪ್ರತಿ ಸೋರಿಕೆಗೆ ಸಂಬಂಧಪಟ್ಟಂತೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ.

ಸಂತ್ರಸ್ತೆಗೆ ಉಚಿತ ಶಿಕ್ಷಣ ಮತ್ತು ವಸತಿ ಒದಗಿಸುವಂತೆ ಹಾಗೂ ಆಕೆ ಶಿಕ್ಷಣ ಮುಂದುವರಿಸುವಂತೆ ನೋಡಿಕೊಳ್ಳಲು ಅಣ್ಣಾ ವಿಶ್ವವಿದ್ಯಾಲಯಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

“ಅಗತ್ಯವಿದ್ದಲ್ಲಿ, ತಮಿಳುನಾಡು ಸರ್ಕಾರ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸಿದ ಚೆನ್ನೈ ಪೊಲೀಸ್ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎಂದು ಪೀಠ ಹೇಳಿದೆ.

ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ತನಿಖೆ ಪಕ್ಷಪಾತದಿಂದ ಕೂಡಿದೆ. ಹಾಗಾಗಿ, ಆ ತನಿಖೆಯ ಮೇಲೆ ನಮಗೆ ನಂಬಿಕೆಯಿಲ್ಲ. ನ್ಯಾಯಾಲಯ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ವಕೀಲೆ ವರಲಕ್ಷೀ ಎಂಬವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆ ಮನವಿ ಪರಿಗಣಿಸಿ ಶುಕ್ರವಾರ (ಡಿ.27) ನ್ಯಾಯಾಲಯ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅದರ ಭಾಗವಾಗಿ, ಇಂದು ಕೆಲ ಆದೇಶಗಳನ್ನು ಹೊರಡಿಸಿದೆ.

ನ್ಯಾಯಾಲಯ ರಚಿಸಿದ ಎಸ್‌ಐಟಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಸ್ನೇಹಾ ಪ್ರಿಯಾ, ಅಯ್ಮನ್ ಜಮಾಲ್ ಮತ್ತು ಬೃಂದಾ ಅವರು ಇದ್ದಾರೆ.

ಎನ್‌ಐಸಿ ನಿರ್ವಹಿಸುತ್ತಿರುವ ಪೋರ್ಟಾಲ್‌ಗೆ ಅಪ್ಲೋಡ್ ಮಾಡುವಾಗ ಉಂಟಾದ ದೋಷದಿಂದ ಎಫ್‌ಐರ್ ಪ್ರತಿ ಸೋರಿಕೆಯಾಗಿದೆ. ಈ ವಿಚಾರ ಗಮನಕ್ಕೆ ಬಂದ ತಕ್ಷಣ ಅದನ್ನು ತಡೆ ಹಿಡಿಯಲಾಗಿದೆ. ಈ ನಡುವೆ 14 ಮಂದಿ ಅದನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅವರನ್ನು ಐಪಿ ಅಡ್ರೆಸ್ ಮೂಲಕ ಪತ್ತೆ ಮಾಡಲಾಗುವುದು ಎಂದು ಸರ್ಕಾರ ಪರ ಅಡ್ವೋಕೇಟ್ ಜನರಲ್ ಪಿ.ಎಸ್‌ ರಾಮನ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನೀವು ನಿಜವಾಗ್ಲೂ ಎಫ್‌ಐಆರ್‌ನಲ್ಲಿರುವ ಅಂಶಗಳನ್ನು ಓದಿದ್ದೀರಾ? ಅದರಲ್ಲಿ ಸಂತ್ರಸ್ತೆಯನ್ನೇ ತಪ್ಪಿತಸ್ಥಳು ಎಂದು ಬಿಂಬಿಸಲಾಗಿದೆ. ಅತ್ಯಾಚಾರಕ್ಕೆ ಆಕೆಯ ಉಡುಗೆ ಕಾರಣ ಎನ್ನುವಂತಿದೆ. ಅದಲ್ಲದೆ, ಚೆನ್ನೈ ಪೊಲೀಸ್ ಆಯುಕ್ತರು ತರಾತುರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಪ್ರಕರಣದಲ್ಲಿ ಒಬ್ಬ ಆರೋಪಿ ಮಾತ್ರ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ಇನ್ನೂ ಪ್ರಾರಂಭ ಹಂತದಲ್ಲಿರುವಾಗ ಪೊಲೀಸ್ ಆಯುಕ್ತರು ಅಷ್ಟು ಬೇಗ ತೀರ್ಮಾನಕ್ಕೆ ಏಕೆ ಬಂದರು? ಎಲ್ಲಾ ವಿಷಯಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯವೇನಿತ್ತು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಉತ್ತರ ಕೊಟ್ಟ ಅಡ್ವೋಕೇಟ್ ಜನರಲ್ ” ಮಾಧ್ಯಮಗಳು ಪ್ರಕರಣ ಸಂಬಂಧ ಹಲವು ರೀತಿಯ ವರದಿಗಳನ್ನು ಬಿತ್ತರಿಸುತ್ತಿತ್ತು. ಈ ಕಾರಣಕ್ಕೆ ಅವರಿಗೆ ಸ್ಪಷ್ಟನೆ ಕೊಡುವ ಉದ್ದೇಶದಿಂದ ಮಾತ್ರ ಪೊಲೀಸ್ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಮರುತ್ತರ ಕೊಟ್ಟ ನ್ಯಾಯಾಧೀಶರು, ಹಾಗಾದರೆ, ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಆಯುಕ್ತರು ಹೀಗೆಯೇ ಮಾಹಿತಿ ನೀಡುತ್ತಾರಾ? ನೀವು ಮಾಧ್ಯಗಳನ್ನು ದೂರ ಇಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಆಗ, ಎನ್‌ಸಿಆರ್‌ಬಿ ವರದಿಯ ಪ್ರಕಾರ, ಚೆನ್ನೈ ಮತ್ತು ಕೊಯಮತ್ತೂರು ಸುರಕ್ಷಿತ ನಗರ ಎಂದು ಅಡ್ವೋಕೇಟ್ ಜನರಲ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನಗರಗಳು ಸುರಕ್ಷಿತವಾಗಿರುವುದು ಅಲ್ಲಿನ ಒಳ್ಳೆಯ ಜನರಿಂದ, ಸರ್ಕಾರ ಅದರ ಶ್ರೇಯಸ್ಸು ಪಡೆಯುವುದು ಬೇಡ” ಎಂದು ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮಗಳು ಪ್ರಕರಣದ ಕುರಿತು ತಪ್ಪು ಮಾಹಿತಿಗಳನ್ನು ಹರಡುತ್ತಿವೆ, ಗೊಂದಲಗಳನ್ನು ಸೃಷ್ಟಿಸುತ್ತಿವೆ ಎಂಬ ಅಡ್ವೋಕೇಟ್ ಜನರಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅವರು ಕಾನೂನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...