Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

- Advertisement -
- Advertisement -

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಗೆ ಮಹಿಳಾ ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮದ್ರಾಸ್ ಹೈಕೋರ್ಟ್‌ ಶನಿವಾರ (ಡಿ.28) ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ನ್ಯಾಯಮೂರ್ತಿ ವಿ.ಲಕ್ಷ್ಮಿನಾರಾಯಣನ್ ಅವರ ರಜಾಕಾಲದ ಪೀಠವು, ಪ್ರಕರಣದ ಎಫ್‌ಐಆರ್ ಪ್ರತಿ ಸೋರಿಕೆಗೆ ಸಂಬಂಧಪಟ್ಟಂತೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ.

ಸಂತ್ರಸ್ತೆಗೆ ಉಚಿತ ಶಿಕ್ಷಣ ಮತ್ತು ವಸತಿ ಒದಗಿಸುವಂತೆ ಹಾಗೂ ಆಕೆ ಶಿಕ್ಷಣ ಮುಂದುವರಿಸುವಂತೆ ನೋಡಿಕೊಳ್ಳಲು ಅಣ್ಣಾ ವಿಶ್ವವಿದ್ಯಾಲಯಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

“ಅಗತ್ಯವಿದ್ದಲ್ಲಿ, ತಮಿಳುನಾಡು ಸರ್ಕಾರ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸಿದ ಚೆನ್ನೈ ಪೊಲೀಸ್ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎಂದು ಪೀಠ ಹೇಳಿದೆ.

ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ತನಿಖೆ ಪಕ್ಷಪಾತದಿಂದ ಕೂಡಿದೆ. ಹಾಗಾಗಿ, ಆ ತನಿಖೆಯ ಮೇಲೆ ನಮಗೆ ನಂಬಿಕೆಯಿಲ್ಲ. ನ್ಯಾಯಾಲಯ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ವಕೀಲೆ ವರಲಕ್ಷೀ ಎಂಬವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆ ಮನವಿ ಪರಿಗಣಿಸಿ ಶುಕ್ರವಾರ (ಡಿ.27) ನ್ಯಾಯಾಲಯ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅದರ ಭಾಗವಾಗಿ, ಇಂದು ಕೆಲ ಆದೇಶಗಳನ್ನು ಹೊರಡಿಸಿದೆ.

ನ್ಯಾಯಾಲಯ ರಚಿಸಿದ ಎಸ್‌ಐಟಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಸ್ನೇಹಾ ಪ್ರಿಯಾ, ಅಯ್ಮನ್ ಜಮಾಲ್ ಮತ್ತು ಬೃಂದಾ ಅವರು ಇದ್ದಾರೆ.

ಎನ್‌ಐಸಿ ನಿರ್ವಹಿಸುತ್ತಿರುವ ಪೋರ್ಟಾಲ್‌ಗೆ ಅಪ್ಲೋಡ್ ಮಾಡುವಾಗ ಉಂಟಾದ ದೋಷದಿಂದ ಎಫ್‌ಐರ್ ಪ್ರತಿ ಸೋರಿಕೆಯಾಗಿದೆ. ಈ ವಿಚಾರ ಗಮನಕ್ಕೆ ಬಂದ ತಕ್ಷಣ ಅದನ್ನು ತಡೆ ಹಿಡಿಯಲಾಗಿದೆ. ಈ ನಡುವೆ 14 ಮಂದಿ ಅದನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅವರನ್ನು ಐಪಿ ಅಡ್ರೆಸ್ ಮೂಲಕ ಪತ್ತೆ ಮಾಡಲಾಗುವುದು ಎಂದು ಸರ್ಕಾರ ಪರ ಅಡ್ವೋಕೇಟ್ ಜನರಲ್ ಪಿ.ಎಸ್‌ ರಾಮನ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನೀವು ನಿಜವಾಗ್ಲೂ ಎಫ್‌ಐಆರ್‌ನಲ್ಲಿರುವ ಅಂಶಗಳನ್ನು ಓದಿದ್ದೀರಾ? ಅದರಲ್ಲಿ ಸಂತ್ರಸ್ತೆಯನ್ನೇ ತಪ್ಪಿತಸ್ಥಳು ಎಂದು ಬಿಂಬಿಸಲಾಗಿದೆ. ಅತ್ಯಾಚಾರಕ್ಕೆ ಆಕೆಯ ಉಡುಗೆ ಕಾರಣ ಎನ್ನುವಂತಿದೆ. ಅದಲ್ಲದೆ, ಚೆನ್ನೈ ಪೊಲೀಸ್ ಆಯುಕ್ತರು ತರಾತುರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಪ್ರಕರಣದಲ್ಲಿ ಒಬ್ಬ ಆರೋಪಿ ಮಾತ್ರ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ಇನ್ನೂ ಪ್ರಾರಂಭ ಹಂತದಲ್ಲಿರುವಾಗ ಪೊಲೀಸ್ ಆಯುಕ್ತರು ಅಷ್ಟು ಬೇಗ ತೀರ್ಮಾನಕ್ಕೆ ಏಕೆ ಬಂದರು? ಎಲ್ಲಾ ವಿಷಯಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯವೇನಿತ್ತು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಉತ್ತರ ಕೊಟ್ಟ ಅಡ್ವೋಕೇಟ್ ಜನರಲ್ ” ಮಾಧ್ಯಮಗಳು ಪ್ರಕರಣ ಸಂಬಂಧ ಹಲವು ರೀತಿಯ ವರದಿಗಳನ್ನು ಬಿತ್ತರಿಸುತ್ತಿತ್ತು. ಈ ಕಾರಣಕ್ಕೆ ಅವರಿಗೆ ಸ್ಪಷ್ಟನೆ ಕೊಡುವ ಉದ್ದೇಶದಿಂದ ಮಾತ್ರ ಪೊಲೀಸ್ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಮರುತ್ತರ ಕೊಟ್ಟ ನ್ಯಾಯಾಧೀಶರು, ಹಾಗಾದರೆ, ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಆಯುಕ್ತರು ಹೀಗೆಯೇ ಮಾಹಿತಿ ನೀಡುತ್ತಾರಾ? ನೀವು ಮಾಧ್ಯಗಳನ್ನು ದೂರ ಇಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಆಗ, ಎನ್‌ಸಿಆರ್‌ಬಿ ವರದಿಯ ಪ್ರಕಾರ, ಚೆನ್ನೈ ಮತ್ತು ಕೊಯಮತ್ತೂರು ಸುರಕ್ಷಿತ ನಗರ ಎಂದು ಅಡ್ವೋಕೇಟ್ ಜನರಲ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನಗರಗಳು ಸುರಕ್ಷಿತವಾಗಿರುವುದು ಅಲ್ಲಿನ ಒಳ್ಳೆಯ ಜನರಿಂದ, ಸರ್ಕಾರ ಅದರ ಶ್ರೇಯಸ್ಸು ಪಡೆಯುವುದು ಬೇಡ” ಎಂದು ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮಗಳು ಪ್ರಕರಣದ ಕುರಿತು ತಪ್ಪು ಮಾಹಿತಿಗಳನ್ನು ಹರಡುತ್ತಿವೆ, ಗೊಂದಲಗಳನ್ನು ಸೃಷ್ಟಿಸುತ್ತಿವೆ ಎಂಬ ಅಡ್ವೋಕೇಟ್ ಜನರಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅವರು ಕಾನೂನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...