Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25...

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ : ಮಹಿಳಾ ಅಧಿಕಾರಿಗಳ ಎಸ್‌ಐಟಿ ರಚಿಸಿದ ಮದ್ರಾಸ್ ಹೈಕೋರ್ಟ್, ₹25 ಲಕ್ಷ ಪರಿಹಾರ ನೀಡಲು ಸೂಚನೆ

- Advertisement -
- Advertisement -

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಗೆ ಮಹಿಳಾ ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮದ್ರಾಸ್ ಹೈಕೋರ್ಟ್‌ ಶನಿವಾರ (ಡಿ.28) ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ನ್ಯಾಯಮೂರ್ತಿ ವಿ.ಲಕ್ಷ್ಮಿನಾರಾಯಣನ್ ಅವರ ರಜಾಕಾಲದ ಪೀಠವು, ಪ್ರಕರಣದ ಎಫ್‌ಐಆರ್ ಪ್ರತಿ ಸೋರಿಕೆಗೆ ಸಂಬಂಧಪಟ್ಟಂತೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದೆ.

ಸಂತ್ರಸ್ತೆಗೆ ಉಚಿತ ಶಿಕ್ಷಣ ಮತ್ತು ವಸತಿ ಒದಗಿಸುವಂತೆ ಹಾಗೂ ಆಕೆ ಶಿಕ್ಷಣ ಮುಂದುವರಿಸುವಂತೆ ನೋಡಿಕೊಳ್ಳಲು ಅಣ್ಣಾ ವಿಶ್ವವಿದ್ಯಾಲಯಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

“ಅಗತ್ಯವಿದ್ದಲ್ಲಿ, ತಮಿಳುನಾಡು ಸರ್ಕಾರ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣದ ವಿವರಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸಿದ ಚೆನ್ನೈ ಪೊಲೀಸ್ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎಂದು ಪೀಠ ಹೇಳಿದೆ.

ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರ ತನಿಖೆ ಪಕ್ಷಪಾತದಿಂದ ಕೂಡಿದೆ. ಹಾಗಾಗಿ, ಆ ತನಿಖೆಯ ಮೇಲೆ ನಮಗೆ ನಂಬಿಕೆಯಿಲ್ಲ. ನ್ಯಾಯಾಲಯ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ವಕೀಲೆ ವರಲಕ್ಷೀ ಎಂಬವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆ ಮನವಿ ಪರಿಗಣಿಸಿ ಶುಕ್ರವಾರ (ಡಿ.27) ನ್ಯಾಯಾಲಯ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಅದರ ಭಾಗವಾಗಿ, ಇಂದು ಕೆಲ ಆದೇಶಗಳನ್ನು ಹೊರಡಿಸಿದೆ.

ನ್ಯಾಯಾಲಯ ರಚಿಸಿದ ಎಸ್‌ಐಟಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಸ್ನೇಹಾ ಪ್ರಿಯಾ, ಅಯ್ಮನ್ ಜಮಾಲ್ ಮತ್ತು ಬೃಂದಾ ಅವರು ಇದ್ದಾರೆ.

ಎನ್‌ಐಸಿ ನಿರ್ವಹಿಸುತ್ತಿರುವ ಪೋರ್ಟಾಲ್‌ಗೆ ಅಪ್ಲೋಡ್ ಮಾಡುವಾಗ ಉಂಟಾದ ದೋಷದಿಂದ ಎಫ್‌ಐರ್ ಪ್ರತಿ ಸೋರಿಕೆಯಾಗಿದೆ. ಈ ವಿಚಾರ ಗಮನಕ್ಕೆ ಬಂದ ತಕ್ಷಣ ಅದನ್ನು ತಡೆ ಹಿಡಿಯಲಾಗಿದೆ. ಈ ನಡುವೆ 14 ಮಂದಿ ಅದನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅವರನ್ನು ಐಪಿ ಅಡ್ರೆಸ್ ಮೂಲಕ ಪತ್ತೆ ಮಾಡಲಾಗುವುದು ಎಂದು ಸರ್ಕಾರ ಪರ ಅಡ್ವೋಕೇಟ್ ಜನರಲ್ ಪಿ.ಎಸ್‌ ರಾಮನ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನೀವು ನಿಜವಾಗ್ಲೂ ಎಫ್‌ಐಆರ್‌ನಲ್ಲಿರುವ ಅಂಶಗಳನ್ನು ಓದಿದ್ದೀರಾ? ಅದರಲ್ಲಿ ಸಂತ್ರಸ್ತೆಯನ್ನೇ ತಪ್ಪಿತಸ್ಥಳು ಎಂದು ಬಿಂಬಿಸಲಾಗಿದೆ. ಅತ್ಯಾಚಾರಕ್ಕೆ ಆಕೆಯ ಉಡುಗೆ ಕಾರಣ ಎನ್ನುವಂತಿದೆ. ಅದಲ್ಲದೆ, ಚೆನ್ನೈ ಪೊಲೀಸ್ ಆಯುಕ್ತರು ತರಾತುರಿಯಲ್ಲಿ ಪತ್ರಿಕಾಗೋಷ್ಠಿ ಕರೆದು ಪ್ರಕರಣದಲ್ಲಿ ಒಬ್ಬ ಆರೋಪಿ ಮಾತ್ರ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆ ಇನ್ನೂ ಪ್ರಾರಂಭ ಹಂತದಲ್ಲಿರುವಾಗ ಪೊಲೀಸ್ ಆಯುಕ್ತರು ಅಷ್ಟು ಬೇಗ ತೀರ್ಮಾನಕ್ಕೆ ಏಕೆ ಬಂದರು? ಎಲ್ಲಾ ವಿಷಯಗಳನ್ನು ಸಾರ್ವಜನಿಕರಿಗೆ ಬಹಿರಂಗಪಡಿಸುವ ಅಗತ್ಯವೇನಿತ್ತು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಉತ್ತರ ಕೊಟ್ಟ ಅಡ್ವೋಕೇಟ್ ಜನರಲ್ ” ಮಾಧ್ಯಮಗಳು ಪ್ರಕರಣ ಸಂಬಂಧ ಹಲವು ರೀತಿಯ ವರದಿಗಳನ್ನು ಬಿತ್ತರಿಸುತ್ತಿತ್ತು. ಈ ಕಾರಣಕ್ಕೆ ಅವರಿಗೆ ಸ್ಪಷ್ಟನೆ ಕೊಡುವ ಉದ್ದೇಶದಿಂದ ಮಾತ್ರ ಪೊಲೀಸ್ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದಕ್ಕೆ ಮರುತ್ತರ ಕೊಟ್ಟ ನ್ಯಾಯಾಧೀಶರು, ಹಾಗಾದರೆ, ಎಲ್ಲಾ ಪ್ರಕರಣಗಳಲ್ಲೂ ಪೊಲೀಸ್ ಆಯುಕ್ತರು ಹೀಗೆಯೇ ಮಾಹಿತಿ ನೀಡುತ್ತಾರಾ? ನೀವು ಮಾಧ್ಯಗಳನ್ನು ದೂರ ಇಟ್ಟಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಆಗ, ಎನ್‌ಸಿಆರ್‌ಬಿ ವರದಿಯ ಪ್ರಕಾರ, ಚೆನ್ನೈ ಮತ್ತು ಕೊಯಮತ್ತೂರು ಸುರಕ್ಷಿತ ನಗರ ಎಂದು ಅಡ್ವೋಕೇಟ್ ಜನರಲ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ನಗರಗಳು ಸುರಕ್ಷಿತವಾಗಿರುವುದು ಅಲ್ಲಿನ ಒಳ್ಳೆಯ ಜನರಿಂದ, ಸರ್ಕಾರ ಅದರ ಶ್ರೇಯಸ್ಸು ಪಡೆಯುವುದು ಬೇಡ” ಎಂದು ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮಗಳು ಪ್ರಕರಣದ ಕುರಿತು ತಪ್ಪು ಮಾಹಿತಿಗಳನ್ನು ಹರಡುತ್ತಿವೆ, ಗೊಂದಲಗಳನ್ನು ಸೃಷ್ಟಿಸುತ್ತಿವೆ ಎಂಬ ಅಡ್ವೋಕೇಟ್ ಜನರಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು “ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅವರು ಕಾನೂನು ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....