Homeಮುಖಪುಟಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವ ವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಏಕೈಕ ಅಪರಾಧಿ 37 ವರ್ಷದ ಜ್ಞಾನಶೇಖರನ್‌ಗೆ ಚೆನ್ನೈನ ಮಹಿಳಾ ನ್ಯಾಯಾಲಯ ಸೋಮವಾರ (ಜೂ.2) 30 ವರ್ಷಗಳ ವಿನಾಯಿತಿ ಇಲ್ಲ ಜೀವಾವಧಿ ಶಿಕ್ಷೆ ವಿಧಿಸಿದೆ.

ಕಳೆದ ವಾರ, ನ್ಯಾಯಾಲಯವು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64(1) (ಅತ್ಯಾಚಾರ) ಸೇರಿದಂತೆ 11 ನಿಬಂಧನೆಗಳ ಅಡಿಯಲ್ಲಿ ಜ್ಞಾನಶೇಖರನ್‌ ದೋಷಿ ಎಂದು ಘೋಷಿಸಿತ್ತು. ಇಂದು (ಸೋಮವಾರ) ಶಿಕ್ಷೆ ಪ್ರಮಾಣ ಘೋಷಿಸುವುದಾಗಿ ತಿಳಿಸಿತ್ತು.

ಸೋಮವಾರ ಪುಳಲ್‌ನ ಕೇಂದ್ರ ಕಾರಾಗೃಹದಿಂದ ಪೊಲೀಸ್ ವ್ಯಾನ್‌ನಲ್ಲಿ ಜ್ಞಾನಶೇಖರನ್‌ ಅವರನ್ನು ನ್ಯಾಯಾಲಯದ ಆವರಣಕ್ಕೆ ಬಿಗಿ ಭದ್ರತೆಯ ನಡುವೆ ಕರೆತರಲಾಗಿತ್ತು. ವಿಚಾರಣಾ ನ್ಯಾಯಾಲಯದ (ಮಹಿಳಾ ನ್ಯಾಯಾಲಯ) ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ಅವರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು.

ಶಿಕ್ಷೆಯನ್ನು ಓದಿದ ನ್ಯಾಯಾಧೀಶರು, “ಬಿಎನ್‌ಎಸ್‌ನ ಸೆಕ್ಷನ್ 64(1) ರ ಅಡಿಯಲ್ಲಿನ ಅಪರಾಧಕ್ಕಾಗಿ ನಿಮಗೆ ಕನಿಷ್ಠ 30 ವರ್ಷಗಳ ಅವಧಿಗೆ ವಿನಾಯಿತಿ ಇಲ್ಲದ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತಿದೆ. ಅಲ್ಲದೆ, ಈ ಸೆಕ್ಷನ್ ಅಡಿಯಲ್ಲಿ 25,000 ರೂಪಾಯಿ ದಂಡವನ್ನು ವಿಧಿಸಲಾಗುತ್ತಿದೆ. ನೀವು ದಂಡವನ್ನು ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಸರಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಅಪರಾಧ ಸಾಬೀತಾದ ಕಾರಣ ನ್ಯಾಯಾಲಯವು ಒಂದು ತಿಂಗಳಿನಿಂದ 10 ವರ್ಷಗಳವರೆಗೆ ಪ್ರತ್ಯೇಕ ಶಿಕ್ಷೆಯನ್ನು ನೀಡಿದೆ ಮತ್ತು ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ 10 ಸೆಕ್ಷನ್‌ಗಳ ಅಡಿಯಲ್ಲಿ ಹೆಚ್ಚಿನ ದಂಡವನ್ನು ವಿಧಿಸಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ ಮತ್ತು ಜ್ಞಾನಶೇಖರ್‌ಗೆ ಒಟ್ಟು 90,000 ರೂಪಾಯಿ ದಂಡ ವಿಧಿಸಲಾಗಿದೆ.

ಪ್ರಕರಣದ ಸಂತ್ರಸ್ತೆಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣ ಡಿಸೆಂಬರ್ 23, 2024ರಂದು ನಡೆದ ಘಟನೆಗೆ ಸಂಬಂಧಿಸಿದೆ. ಪ್ರಕರಣದ ಸಂತ್ರಸ್ತೆ 19 ವರ್ಷದ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಜ್ಞಾನಶೇಖರನ್ ಸಂಜೆ ಕ್ಯಾಂಪಸ್‌ಗೆ ಪ್ರವೇಶಿಸಿ, ಇಬ್ಬರನ್ನು ಬ್ಲ್ಯಾಕ್‌ಮೇಲ್ ಮಾಡಿ, ನಿರ್ಜನ ಸ್ಥಳದಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಆರೋಪಪಟ್ಟಿಯ ಪ್ರಕಾರ, ಆತ ತನ್ನ ಫೋನ್‌ನಲ್ಲಿ ಕೃತ್ಯದ ವಿಡಿಯೋವನ್ನು ಕೂಡ ಸೆರೆಹಿಡಿದಿದ್ದಾನೆ.

ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಈ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಮದ್ರಾಸ್ ಹೈಕೋರ್ಟ್ ನೇಮಿಸಿದ್ದ ಮಹಿಳಾ ಅಧಿಕಾರಿಗಳನ್ನು ಒಳಗೊಂಡಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಿತ್ತು. ಏಕೈಕ ಅಪರಾಧಿ ಜ್ಞಾನಶೇಖರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಜ್ಞಾನಶೇಖರನ್ ವಿರುದ್ಧ ಕಾನೂನಿನ 11 ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಅವುಗಳಲ್ಲಿ ಬಿಎನ್‌ಎಸ್ ಸೆಕ್ಷನ್ 331(6) (ರಾತ್ರಿಯಲ್ಲಿ ಅತಿಕ್ರಮಣ ಮಾಡುವುದು), 126(2) (ಯಾವುದೇ ವ್ಯಕ್ತಿಯನ್ನು ತಪ್ಪಾಗಿ ತಡೆಹಿಡಿಯುವುದು), 140(4) (ವ್ಯಕ್ತಿಯನ್ನು ತೀವ್ರ ನೋಯಿಸುವ ಸಲುವಾಗಿ ಅಪಹರಿಸುವುದು), 75(2) (ಲೈಂಗಿಕ ಕಿರುಕುಳ) 64(1) (ಅತ್ಯಾಚಾರ) ಜೊತೆಗೆ ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ ಇತರ ನಿಬಂಧನೆಗಳ ಸೇರಿವೆ.

ಉತ್ತರ ಪ್ರದೇಶ| ಬಿಜೆಪಿ ನಾಯಕಿ ಮಗನ 130 ಅಶ್ಲೀಲ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...