Homeಮುಖಪುಟಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವ ವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಏಕೈಕ ಅಪರಾಧಿ 37 ವರ್ಷದ ಜ್ಞಾನಶೇಖರನ್‌ಗೆ ಚೆನ್ನೈನ ಮಹಿಳಾ ನ್ಯಾಯಾಲಯ ಸೋಮವಾರ (ಜೂ.2) 30 ವರ್ಷಗಳ ವಿನಾಯಿತಿ ಇಲ್ಲ ಜೀವಾವಧಿ ಶಿಕ್ಷೆ ವಿಧಿಸಿದೆ.

ಕಳೆದ ವಾರ, ನ್ಯಾಯಾಲಯವು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64(1) (ಅತ್ಯಾಚಾರ) ಸೇರಿದಂತೆ 11 ನಿಬಂಧನೆಗಳ ಅಡಿಯಲ್ಲಿ ಜ್ಞಾನಶೇಖರನ್‌ ದೋಷಿ ಎಂದು ಘೋಷಿಸಿತ್ತು. ಇಂದು (ಸೋಮವಾರ) ಶಿಕ್ಷೆ ಪ್ರಮಾಣ ಘೋಷಿಸುವುದಾಗಿ ತಿಳಿಸಿತ್ತು.

ಸೋಮವಾರ ಪುಳಲ್‌ನ ಕೇಂದ್ರ ಕಾರಾಗೃಹದಿಂದ ಪೊಲೀಸ್ ವ್ಯಾನ್‌ನಲ್ಲಿ ಜ್ಞಾನಶೇಖರನ್‌ ಅವರನ್ನು ನ್ಯಾಯಾಲಯದ ಆವರಣಕ್ಕೆ ಬಿಗಿ ಭದ್ರತೆಯ ನಡುವೆ ಕರೆತರಲಾಗಿತ್ತು. ವಿಚಾರಣಾ ನ್ಯಾಯಾಲಯದ (ಮಹಿಳಾ ನ್ಯಾಯಾಲಯ) ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ಅವರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು.

ಶಿಕ್ಷೆಯನ್ನು ಓದಿದ ನ್ಯಾಯಾಧೀಶರು, “ಬಿಎನ್‌ಎಸ್‌ನ ಸೆಕ್ಷನ್ 64(1) ರ ಅಡಿಯಲ್ಲಿನ ಅಪರಾಧಕ್ಕಾಗಿ ನಿಮಗೆ ಕನಿಷ್ಠ 30 ವರ್ಷಗಳ ಅವಧಿಗೆ ವಿನಾಯಿತಿ ಇಲ್ಲದ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತಿದೆ. ಅಲ್ಲದೆ, ಈ ಸೆಕ್ಷನ್ ಅಡಿಯಲ್ಲಿ 25,000 ರೂಪಾಯಿ ದಂಡವನ್ನು ವಿಧಿಸಲಾಗುತ್ತಿದೆ. ನೀವು ದಂಡವನ್ನು ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಸರಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಅಪರಾಧ ಸಾಬೀತಾದ ಕಾರಣ ನ್ಯಾಯಾಲಯವು ಒಂದು ತಿಂಗಳಿನಿಂದ 10 ವರ್ಷಗಳವರೆಗೆ ಪ್ರತ್ಯೇಕ ಶಿಕ್ಷೆಯನ್ನು ನೀಡಿದೆ ಮತ್ತು ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ 10 ಸೆಕ್ಷನ್‌ಗಳ ಅಡಿಯಲ್ಲಿ ಹೆಚ್ಚಿನ ದಂಡವನ್ನು ವಿಧಿಸಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ ಮತ್ತು ಜ್ಞಾನಶೇಖರ್‌ಗೆ ಒಟ್ಟು 90,000 ರೂಪಾಯಿ ದಂಡ ವಿಧಿಸಲಾಗಿದೆ.

ಪ್ರಕರಣದ ಸಂತ್ರಸ್ತೆಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣ ಡಿಸೆಂಬರ್ 23, 2024ರಂದು ನಡೆದ ಘಟನೆಗೆ ಸಂಬಂಧಿಸಿದೆ. ಪ್ರಕರಣದ ಸಂತ್ರಸ್ತೆ 19 ವರ್ಷದ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಜ್ಞಾನಶೇಖರನ್ ಸಂಜೆ ಕ್ಯಾಂಪಸ್‌ಗೆ ಪ್ರವೇಶಿಸಿ, ಇಬ್ಬರನ್ನು ಬ್ಲ್ಯಾಕ್‌ಮೇಲ್ ಮಾಡಿ, ನಿರ್ಜನ ಸ್ಥಳದಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಆರೋಪಪಟ್ಟಿಯ ಪ್ರಕಾರ, ಆತ ತನ್ನ ಫೋನ್‌ನಲ್ಲಿ ಕೃತ್ಯದ ವಿಡಿಯೋವನ್ನು ಕೂಡ ಸೆರೆಹಿಡಿದಿದ್ದಾನೆ.

ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಈ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಮದ್ರಾಸ್ ಹೈಕೋರ್ಟ್ ನೇಮಿಸಿದ್ದ ಮಹಿಳಾ ಅಧಿಕಾರಿಗಳನ್ನು ಒಳಗೊಂಡಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಿತ್ತು. ಏಕೈಕ ಅಪರಾಧಿ ಜ್ಞಾನಶೇಖರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಜ್ಞಾನಶೇಖರನ್ ವಿರುದ್ಧ ಕಾನೂನಿನ 11 ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಅವುಗಳಲ್ಲಿ ಬಿಎನ್‌ಎಸ್ ಸೆಕ್ಷನ್ 331(6) (ರಾತ್ರಿಯಲ್ಲಿ ಅತಿಕ್ರಮಣ ಮಾಡುವುದು), 126(2) (ಯಾವುದೇ ವ್ಯಕ್ತಿಯನ್ನು ತಪ್ಪಾಗಿ ತಡೆಹಿಡಿಯುವುದು), 140(4) (ವ್ಯಕ್ತಿಯನ್ನು ತೀವ್ರ ನೋಯಿಸುವ ಸಲುವಾಗಿ ಅಪಹರಿಸುವುದು), 75(2) (ಲೈಂಗಿಕ ಕಿರುಕುಳ) 64(1) (ಅತ್ಯಾಚಾರ) ಜೊತೆಗೆ ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ ಇತರ ನಿಬಂಧನೆಗಳ ಸೇರಿವೆ.

ಉತ್ತರ ಪ್ರದೇಶ| ಬಿಜೆಪಿ ನಾಯಕಿ ಮಗನ 130 ಅಶ್ಲೀಲ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...