Homeಮುಖಪುಟಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವ ವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣದ ಏಕೈಕ ಅಪರಾಧಿ 37 ವರ್ಷದ ಜ್ಞಾನಶೇಖರನ್‌ಗೆ ಚೆನ್ನೈನ ಮಹಿಳಾ ನ್ಯಾಯಾಲಯ ಸೋಮವಾರ (ಜೂ.2) 30 ವರ್ಷಗಳ ವಿನಾಯಿತಿ ಇಲ್ಲ ಜೀವಾವಧಿ ಶಿಕ್ಷೆ ವಿಧಿಸಿದೆ.

ಕಳೆದ ವಾರ, ನ್ಯಾಯಾಲಯವು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64(1) (ಅತ್ಯಾಚಾರ) ಸೇರಿದಂತೆ 11 ನಿಬಂಧನೆಗಳ ಅಡಿಯಲ್ಲಿ ಜ್ಞಾನಶೇಖರನ್‌ ದೋಷಿ ಎಂದು ಘೋಷಿಸಿತ್ತು. ಇಂದು (ಸೋಮವಾರ) ಶಿಕ್ಷೆ ಪ್ರಮಾಣ ಘೋಷಿಸುವುದಾಗಿ ತಿಳಿಸಿತ್ತು.

ಸೋಮವಾರ ಪುಳಲ್‌ನ ಕೇಂದ್ರ ಕಾರಾಗೃಹದಿಂದ ಪೊಲೀಸ್ ವ್ಯಾನ್‌ನಲ್ಲಿ ಜ್ಞಾನಶೇಖರನ್‌ ಅವರನ್ನು ನ್ಯಾಯಾಲಯದ ಆವರಣಕ್ಕೆ ಬಿಗಿ ಭದ್ರತೆಯ ನಡುವೆ ಕರೆತರಲಾಗಿತ್ತು. ವಿಚಾರಣಾ ನ್ಯಾಯಾಲಯದ (ಮಹಿಳಾ ನ್ಯಾಯಾಲಯ) ನ್ಯಾಯಾಧೀಶೆ ಎಂ. ರಾಜಲಕ್ಷ್ಮಿ ಅವರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು.

ಶಿಕ್ಷೆಯನ್ನು ಓದಿದ ನ್ಯಾಯಾಧೀಶರು, “ಬಿಎನ್‌ಎಸ್‌ನ ಸೆಕ್ಷನ್ 64(1) ರ ಅಡಿಯಲ್ಲಿನ ಅಪರಾಧಕ್ಕಾಗಿ ನಿಮಗೆ ಕನಿಷ್ಠ 30 ವರ್ಷಗಳ ಅವಧಿಗೆ ವಿನಾಯಿತಿ ಇಲ್ಲದ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತಿದೆ. ಅಲ್ಲದೆ, ಈ ಸೆಕ್ಷನ್ ಅಡಿಯಲ್ಲಿ 25,000 ರೂಪಾಯಿ ದಂಡವನ್ನು ವಿಧಿಸಲಾಗುತ್ತಿದೆ. ನೀವು ದಂಡವನ್ನು ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಸರಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

ಅಪರಾಧ ಸಾಬೀತಾದ ಕಾರಣ ನ್ಯಾಯಾಲಯವು ಒಂದು ತಿಂಗಳಿನಿಂದ 10 ವರ್ಷಗಳವರೆಗೆ ಪ್ರತ್ಯೇಕ ಶಿಕ್ಷೆಯನ್ನು ನೀಡಿದೆ ಮತ್ತು ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ 10 ಸೆಕ್ಷನ್‌ಗಳ ಅಡಿಯಲ್ಲಿ ಹೆಚ್ಚಿನ ದಂಡವನ್ನು ವಿಧಿಸಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ ಮತ್ತು ಜ್ಞಾನಶೇಖರ್‌ಗೆ ಒಟ್ಟು 90,000 ರೂಪಾಯಿ ದಂಡ ವಿಧಿಸಲಾಗಿದೆ.

ಪ್ರಕರಣದ ಸಂತ್ರಸ್ತೆಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣ ಡಿಸೆಂಬರ್ 23, 2024ರಂದು ನಡೆದ ಘಟನೆಗೆ ಸಂಬಂಧಿಸಿದೆ. ಪ್ರಕರಣದ ಸಂತ್ರಸ್ತೆ 19 ವರ್ಷದ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಬಿರಿಯಾನಿ ಅಂಗಡಿ ನಡೆಸುತ್ತಿದ್ದ ಜ್ಞಾನಶೇಖರನ್ ಸಂಜೆ ಕ್ಯಾಂಪಸ್‌ಗೆ ಪ್ರವೇಶಿಸಿ, ಇಬ್ಬರನ್ನು ಬ್ಲ್ಯಾಕ್‌ಮೇಲ್ ಮಾಡಿ, ನಿರ್ಜನ ಸ್ಥಳದಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಆರೋಪಪಟ್ಟಿಯ ಪ್ರಕಾರ, ಆತ ತನ್ನ ಫೋನ್‌ನಲ್ಲಿ ಕೃತ್ಯದ ವಿಡಿಯೋವನ್ನು ಕೂಡ ಸೆರೆಹಿಡಿದಿದ್ದಾನೆ.

ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಈ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಮದ್ರಾಸ್ ಹೈಕೋರ್ಟ್ ನೇಮಿಸಿದ್ದ ಮಹಿಳಾ ಅಧಿಕಾರಿಗಳನ್ನು ಒಳಗೊಂಡಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಿತ್ತು. ಏಕೈಕ ಅಪರಾಧಿ ಜ್ಞಾನಶೇಖರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಜ್ಞಾನಶೇಖರನ್ ವಿರುದ್ಧ ಕಾನೂನಿನ 11 ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಅವುಗಳಲ್ಲಿ ಬಿಎನ್‌ಎಸ್ ಸೆಕ್ಷನ್ 331(6) (ರಾತ್ರಿಯಲ್ಲಿ ಅತಿಕ್ರಮಣ ಮಾಡುವುದು), 126(2) (ಯಾವುದೇ ವ್ಯಕ್ತಿಯನ್ನು ತಪ್ಪಾಗಿ ತಡೆಹಿಡಿಯುವುದು), 140(4) (ವ್ಯಕ್ತಿಯನ್ನು ತೀವ್ರ ನೋಯಿಸುವ ಸಲುವಾಗಿ ಅಪಹರಿಸುವುದು), 75(2) (ಲೈಂಗಿಕ ಕಿರುಕುಳ) 64(1) (ಅತ್ಯಾಚಾರ) ಜೊತೆಗೆ ಬಿಎನ್‌ಎಸ್, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯ್ದೆಯ ಇತರ ನಿಬಂಧನೆಗಳ ಸೇರಿವೆ.

ಉತ್ತರ ಪ್ರದೇಶ| ಬಿಜೆಪಿ ನಾಯಕಿ ಮಗನ 130 ಅಶ್ಲೀಲ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...