Homeಮುಖಪುಟಅಣ್ಣಾ ವಿವಿ ಅತ್ಯಾಚಾರ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್‌

ಅಣ್ಣಾ ವಿವಿ ಅತ್ಯಾಚಾರ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ತಮಿಳುನಾಡಿನಲ್ಲಿ ರಾಜಕೀಯ ಬಣ್ಣ ಪಡೆದುಕೊಂಡಿರುವ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಘಟನೆ ಸಂಬಂಧ ಮದ್ರಾಸ್ ಹೈಕೋರ್ಟ್ ಶುಕ್ರವಾರ (ಡಿ.27) ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ ಎಂದು ವರದಿಯಾಗಿದೆ.

ವಕೀಲೆ ಆರ್.ವರಲಕ್ಷ್ಮಿ ಅವರು ಮಾಡಿದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಎಸ್.ಎಂ ಸುಬ್ರಮಣ್ಯಂ ಮತ್ತು ವಿ.ಲಕ್ಷ್ಮೀನಾರಾಯಣನ್ ಅವರ ವಿಭಾಗೀಯ ಪೀಠವು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ. ಆದರೆ, ಮುಖ್ಯ ನ್ಯಾಯಮೂರ್ತಿಗಳು ಇನ್ನೂ ಒಪ್ಪಿಗೆ ನೀಡದ ಕಾರಣ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಸ್ವಯಂಪ್ರೇರಿತ ವಿಚಾರಣೆ ಆರಂಭಿಸಬೇಕು ಎಂದು ವಕೀಲೆ ವರಲಕ್ಷ್ಮಿ ಕೋರಿದ್ದರು. ವಕೀಲೆಯ ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡು ಇಂದು (ಶುಕ್ರವಾರ) ಮಧ್ಯಾಹ್ನ 2.15ಕ್ಕೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ಅಣ್ಣಾ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು.

ಮಧ್ಯಾಹ್ನದ ವಿರಾಮದ ಬಳಿಕ ಪ್ರಕರಣ ವಿಚಾರಣೆ ಪುನರಾರಂಭಿಸಿದ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಈಗ ನ್ಯಾಯಾಲಯದಲ್ಲಿ ಹಾಜರಿಲ್ಲ. ಅವರಿಂದ ಒಪ್ಪಿಗೆ ಪಡೆದ ಬಳಿಕ ವಿಚಾರಣೆ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಕರಣದ ವಿಚಾರಣೆ ಆರಂಭಿಸಿದ ವೇಳೆ ನ್ಯಾಯ ಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್ (ಎಜಿ) ಪಿ.ಎಸ್.ರಾಮನ್ ಅವರು, ಈ ಪ್ರಕರಣದಲ್ಲಿ ನಮ್ಮ ವಾದ ಆಲಿಸದೆ ಯಾವುದೇ ಮಧ್ಯಂತರ ಆದೇಶ ನೀಡದಂತೆ ಹಾಗೂ ವಿಚಾರಣೆಯನ್ನು ನಾಳೆಗೆ (ಶನಿವಾರ) ಮುಂದೂಡುವಂತೆ ಕೋರಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ಸ್ಥಿತಿಯ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಹಾಜರಿದ್ದ ಎಐಎಡಿಎಂಕೆ ಪಕ್ಷದ ಪರ ವಕೀಲ ಜಯಪ್ರಕಾಶ್ ಸೇರಿದಂತೆ ಕೆಲ ವಕೀಲರು, ಸ್ವಯಂ ಪ್ರೇರಿತ ವಿಚಾರಣೆ ಮುಂದುವರಿಸಲು ಸಾಧ್ಯವಾಗದಿದ್ದರೆ ಅದನ್ನು ವಾಪಸ್ ಪಡೆಯಿರಿ. ನಾವು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಕೀಲೆ ವರಲಕ್ಷ್ಮಿ ಅವರು ನ್ಯಾಯಾಲಯಕ್ಕೆ ಬರೆದ ಪತ್ರದಲ್ಲಿ, ಆರೋಪಿ ಜ್ಞಾನಶೇಖರನ್‌ ಅವರನ್ನು ಬಂಧಿಸಿದ್ದರೂ, ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬನನ್ನು ಇನ್ನೂ ಬಂಧಿಸಿಲ್ಲ ಎಂದು ಹೇಳಿದ್ದಾರೆ.

ಆದರೆ, ಇದುವರೆಗಿನ ತನಿಖೆಯಲ್ಲಿ ಬೇರೆ ಯಾವುದೇ ವ್ಯಕ್ತಿಯ ಪಾತ್ರದ ಬಗ್ಗೆ ತಿಳಿದು ಬಂದಿಲ್ಲ ಎಂದು ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತರು ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಂಧಿತ ಆರೋಪಿಯು ಆಡಳಿತ ಪಕ್ಷದೊಂದಿಗೆ ಸಂಪರ್ಕ ಹೊಂದಿರುವುದರಿಂದ ಮತ್ತು ಪಕ್ಷದ ಹಲವು ಹುದ್ದೆಗಳನ್ನು ಹೊಂದಿರುವುದರಿಂದ, ಈಗ ನಡೆಯುತ್ತಿರುವ ತನಿಖೆಯ ನಿಷ್ಪಕ್ಷಪಾತ ಮತ್ತು ದಕ್ಷತೆಯ ಬಗ್ಗೆ ವಕೀಲೆ ವರಲಕ್ಷ್ಮಿ ತಮ್ಮ ಪತ್ರದಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಎಫ್‌ಐಆರ್ ಪ್ರತಿ ಸೋರಿಕೆ ಮಾಡಿ ಸಂತ್ರಸ್ತೆಯ ಗುರುತು ಬಹಿರಂಗ ಮಾಡಲಾಗಿದೆ ಎಂದು ಆರೋಪಿಸಿರುವ ಅವರು, ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೃಷ್ಣಗಿರಿ ಜಿಲ್ಲೆಯ ನಕಲಿ ಎನ್‌ಸಿಸಿ ಶಿಬಿರಗಳಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಚೆನ್ನೈನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಹಲ್ಲೆ ಘಟನೆಗಳನ್ನೂ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಗಳು ಹೇಳಿವೆ.

ವಕೀಲೆ ವರಲಕ್ಷ್ಮಿ ಅವರು ತನಿಖೆಯ ಮೇಲ್ವಿಚಾರಣೆಗೆ ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ಸಮಿತಿಯನ್ನು ರಚಿಸುವಂತೆ ಅಥವಾ ಪರ್ಯಾಯವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಹೆಚ್ಚುತ್ತಿರುವ ಆದಿವಾಸಿಗಳ ಆತ್ಮಹತ್ಯೆ: ಕೇರಳ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...