Homeಕರ್ನಾಟಕಅನ್ನಭಾಗ್ಯ: ಕೇಂದ್ರಿಯ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ, ವಾರದೊಳಗೆ ತೀರ್ಮಾನ ಸಾಧ್ಯತೆ; ಸಚಿವ ಮುನಿಯಪ್ಪ

ಅನ್ನಭಾಗ್ಯ: ಕೇಂದ್ರಿಯ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ, ವಾರದೊಳಗೆ ತೀರ್ಮಾನ ಸಾಧ್ಯತೆ; ಸಚಿವ ಮುನಿಯಪ್ಪ

- Advertisement -
- Advertisement -

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಅಕ್ಕಿ ಹಂಚುವುದು ಹೇಗೆ ಎನ್ನುವ ಟೆನ್ಷನ್ ಶುರುವಾಗಿದೆ.

ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದ್ದರಿಂದ ಕಾಂಗ್ರೆಸ್​ ಸರ್ಕಾರ ಬೇರೆ ಬೇರೆ ರಾಜ್ಯಗಳ ಮೊರೆ ಹೋಗಿದ್ದು, ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಹೀಗೆ ಆಮದು ಮಾಡಿಕೊಂಡ ಅಕ್ಕಿಯನ್ನು ಜುಲೈ 1 ರಿಂದ ಹಂಚಲು ಸರ್ಕಾರ ನಿರ್ಧರಿಸಿದೆ. ಆದರೆ ಇದು ಇನ್ನಷ್ಟು ವಿಳಂಭವಾಗುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ಒಂದು ವಾರದಲ್ಲಿ ನಿರ್ಧಾರವಾಗಲಿದೆ ಎಂದು ಸರ್ಕಾರ ಹೇಳಿದೆ.

ಕೇಂದ್ರೀಯ ಸ್ವಾಮ್ಯದ ಮೂರು ಸಂಸ್ಥೆಗಳಾದ ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್ ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್) ಮತ್ತು ಭಾರತೀಯ ಆಹಾರ ನಿಗಮ (ಎಫ್ ಸಿಐ)ದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಮೂರು ಏಜೆನ್ಸಿಗಳ ಅಕ್ಕಿಯ ದರ ದುಬಾರಿಯಾಗಿದೆ. ಸಾಗಾಣಿಕೆ ವೆಚ್ಚ ಸೇರಿ ಪ್ರತಿ ಕೆ.ಜಿ ಗೆ 40 ರೂ. ಅಧಿಕ ದಾಟುವ ಸಾಧ್ಯತೆ. ಇದು FCI ಪೂರೈಕೆ ಮಾಡುತ್ತಿದ್ದ ದರಕ್ಕಿಂತ ಹೆಚ್ಚಾಗಲಿದೆ.

ಈಗಾಗಲೇ ಆಹಾರ ಇಲಾಖೆ ಅಧಿಕಾರಿಗಳು ದರ ಮತ್ತು ಸಾಗಾಣಿಕೆ ವೆಚ್ಚದ ಕುರಿತು ಪ್ರಾಥಮಿಕ ಮಾಹಿತಿ ಪಡೆದಿದೆ. ಹಾಗೇ ಸರ್ಕಾರ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಗೆ ದರ ನಿಗದಿ ಮಾಡುವಂತೆ ಮೂರು ಏಜೆನ್ಸಿಗಳಿಗೆ ಒಂದು ವಾರಗಳ ಸಮಯಾವಕಾಶ ನೀಡಿದೆ. ನಂತರ ರಾಜ್ಯ ಸರ್ಕಾರ ತನ್ನ ತೀರ್ಮಾನ ಕೈಗೊಳ್ಳಲಿದೆ. ಸದ್ಯಕ್ಕೆ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅಸಾಧ್ಯ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ಬಳಿಕ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಕೇಂದ್ರಿಯ ಸ್ವಾಮ್ಯದ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ

ಈ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್‌ ಮುನಿಯಪ್ಪ ಅವರು, ”ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರದ ಏಜೆನ್ಸಿಗಳಿಗೆ ಅಕ್ಕಿ ಪೂರೈಸುವಂತೆ ಕೇಳಿಕೊಳ್ಳಲಾಗಿದೆ” ಎಂದರು.

”ಅನ್ನಭಾಗ್ಯ ಯೋಜನೆ ಜಾರಿ ಅಕ್ಕಿ ಪೂರೈಕೆ ಸಂಬಂಧ ಮೂರು ಏಜೆನ್ಸಿಗಳ ಜೊತೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಇಲ್ಲಿ ಅಕ್ಕಿ ಪೂರೈಕೆಗೆ ತಕ್ಷಣ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಕೇಳಿಕೊಳ್ಳಲಾಯಿತು. ಇವರು ಟೆಂಡರ್ ಪ್ರಕ್ರಿಯೆಗೆ ಒಂದು ವಾರ ಕಾಲಾವಕಾಶ ಕೇಳಿದ್ದಾರೆ. ಟ್ರೇಡರ್ಸ್, ಮಿಲ್ ಮಾಲೀಕರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡಲಿದ್ದಾರೆ” ಎಂದು ತಿಳಿಸಿದರು.

”ಈ ಹಿಂದೆಯೂ ರಾಜ್ಯದಲ್ಲಿ ಇದೇ ಸಂಸ್ಥೆಗಳಿಂದ ಅಕ್ಕಿ ತರಿಸಲಾಗಿತ್ತು. ಸಂಸ್ಥೆಗಳಿಂದ ಪೂರೈಕೆ ಬಳಿಕ ಸರ್ಕಾರ ಅಕ್ಕಿ ಸರಬರಾಜು ಮಾಡುತ್ತದೆ” ಎಂದು ಸಚಿವ ಮುನಿಯಪ್ಪ ತಿಳಿಸಿದರು.

ರಾಜ್ಯ ಸರ್ಕಾರ ಈ ಮೊದಲು ಜುಲೈ ಮೊದಲ ವಾರ ಅನ್ನಭಾಗ್ಯ ಜಾರಿ ಮಾಡುವುದಾಗಿ ಹೇಳಿತ್ತು. ಈ ಮಾತುಕತೆ ಬಳಿಕ ಮರಳಿ ನಿಗದಿಯಂತೆ ಯೋಜನೆ ಜುಲೈನಲ್ಲಿ ಜಾರಿಯಾಗುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...