Homeಕರ್ನಾಟಕಅನ್ನಭಾಗ್ಯ: ಕೇಂದ್ರಿಯ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ, ವಾರದೊಳಗೆ ತೀರ್ಮಾನ ಸಾಧ್ಯತೆ; ಸಚಿವ ಮುನಿಯಪ್ಪ

ಅನ್ನಭಾಗ್ಯ: ಕೇಂದ್ರಿಯ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ, ವಾರದೊಳಗೆ ತೀರ್ಮಾನ ಸಾಧ್ಯತೆ; ಸಚಿವ ಮುನಿಯಪ್ಪ

- Advertisement -
- Advertisement -

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಅಕ್ಕಿ ಹಂಚುವುದು ಹೇಗೆ ಎನ್ನುವ ಟೆನ್ಷನ್ ಶುರುವಾಗಿದೆ.

ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದ್ದರಿಂದ ಕಾಂಗ್ರೆಸ್​ ಸರ್ಕಾರ ಬೇರೆ ಬೇರೆ ರಾಜ್ಯಗಳ ಮೊರೆ ಹೋಗಿದ್ದು, ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಹೀಗೆ ಆಮದು ಮಾಡಿಕೊಂಡ ಅಕ್ಕಿಯನ್ನು ಜುಲೈ 1 ರಿಂದ ಹಂಚಲು ಸರ್ಕಾರ ನಿರ್ಧರಿಸಿದೆ. ಆದರೆ ಇದು ಇನ್ನಷ್ಟು ವಿಳಂಭವಾಗುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ಒಂದು ವಾರದಲ್ಲಿ ನಿರ್ಧಾರವಾಗಲಿದೆ ಎಂದು ಸರ್ಕಾರ ಹೇಳಿದೆ.

ಕೇಂದ್ರೀಯ ಸ್ವಾಮ್ಯದ ಮೂರು ಸಂಸ್ಥೆಗಳಾದ ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್ ಸಿಸಿಎಫ್), ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್) ಮತ್ತು ಭಾರತೀಯ ಆಹಾರ ನಿಗಮ (ಎಫ್ ಸಿಐ)ದಿಂದ ಅಕ್ಕಿ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಮೂರು ಏಜೆನ್ಸಿಗಳ ಅಕ್ಕಿಯ ದರ ದುಬಾರಿಯಾಗಿದೆ. ಸಾಗಾಣಿಕೆ ವೆಚ್ಚ ಸೇರಿ ಪ್ರತಿ ಕೆ.ಜಿ ಗೆ 40 ರೂ. ಅಧಿಕ ದಾಟುವ ಸಾಧ್ಯತೆ. ಇದು FCI ಪೂರೈಕೆ ಮಾಡುತ್ತಿದ್ದ ದರಕ್ಕಿಂತ ಹೆಚ್ಚಾಗಲಿದೆ.

ಈಗಾಗಲೇ ಆಹಾರ ಇಲಾಖೆ ಅಧಿಕಾರಿಗಳು ದರ ಮತ್ತು ಸಾಗಾಣಿಕೆ ವೆಚ್ಚದ ಕುರಿತು ಪ್ರಾಥಮಿಕ ಮಾಹಿತಿ ಪಡೆದಿದೆ. ಹಾಗೇ ಸರ್ಕಾರ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಗೆ ದರ ನಿಗದಿ ಮಾಡುವಂತೆ ಮೂರು ಏಜೆನ್ಸಿಗಳಿಗೆ ಒಂದು ವಾರಗಳ ಸಮಯಾವಕಾಶ ನೀಡಿದೆ. ನಂತರ ರಾಜ್ಯ ಸರ್ಕಾರ ತನ್ನ ತೀರ್ಮಾನ ಕೈಗೊಳ್ಳಲಿದೆ. ಸದ್ಯಕ್ಕೆ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅಸಾಧ್ಯ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ಬಳಿಕ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ಕೇಂದ್ರಿಯ ಸ್ವಾಮ್ಯದ ಸಂಸ್ಥೆಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ

ಈ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್‌ ಮುನಿಯಪ್ಪ ಅವರು, ”ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್ಸಿಸಿಎಫ್, ನಾಫೆಡ್, ಕೇಂದ್ರೀಯ ಭಂಡಾರದ ಏಜೆನ್ಸಿಗಳಿಗೆ ಅಕ್ಕಿ ಪೂರೈಸುವಂತೆ ಕೇಳಿಕೊಳ್ಳಲಾಗಿದೆ” ಎಂದರು.

”ಅನ್ನಭಾಗ್ಯ ಯೋಜನೆ ಜಾರಿ ಅಕ್ಕಿ ಪೂರೈಕೆ ಸಂಬಂಧ ಮೂರು ಏಜೆನ್ಸಿಗಳ ಜೊತೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಇಲ್ಲಿ ಅಕ್ಕಿ ಪೂರೈಕೆಗೆ ತಕ್ಷಣ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಕೇಳಿಕೊಳ್ಳಲಾಯಿತು. ಇವರು ಟೆಂಡರ್ ಪ್ರಕ್ರಿಯೆಗೆ ಒಂದು ವಾರ ಕಾಲಾವಕಾಶ ಕೇಳಿದ್ದಾರೆ. ಟ್ರೇಡರ್ಸ್, ಮಿಲ್ ಮಾಲೀಕರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡಲಿದ್ದಾರೆ” ಎಂದು ತಿಳಿಸಿದರು.

”ಈ ಹಿಂದೆಯೂ ರಾಜ್ಯದಲ್ಲಿ ಇದೇ ಸಂಸ್ಥೆಗಳಿಂದ ಅಕ್ಕಿ ತರಿಸಲಾಗಿತ್ತು. ಸಂಸ್ಥೆಗಳಿಂದ ಪೂರೈಕೆ ಬಳಿಕ ಸರ್ಕಾರ ಅಕ್ಕಿ ಸರಬರಾಜು ಮಾಡುತ್ತದೆ” ಎಂದು ಸಚಿವ ಮುನಿಯಪ್ಪ ತಿಳಿಸಿದರು.

ರಾಜ್ಯ ಸರ್ಕಾರ ಈ ಮೊದಲು ಜುಲೈ ಮೊದಲ ವಾರ ಅನ್ನಭಾಗ್ಯ ಜಾರಿ ಮಾಡುವುದಾಗಿ ಹೇಳಿತ್ತು. ಈ ಮಾತುಕತೆ ಬಳಿಕ ಮರಳಿ ನಿಗದಿಯಂತೆ ಯೋಜನೆ ಜುಲೈನಲ್ಲಿ ಜಾರಿಯಾಗುವ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...