Homeಮುಖಪುಟನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು

ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು

- Advertisement -
- Advertisement -

ತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದ್ದರು. ಈ ನಡುವೆ ಪರಿಹಾರ ಕಾರ್ಯಕೂಡಾ ಭರದಿಂದ ಸಾಗಿತ್ತು. ಜೊತೆಗೆ ಹವಾಮಾನ ಇಲಾಖೆಯು ಬುಧವಾರ ಮತ್ತು ಗುರುವಾರ ಕೂಡಾ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಸರ್ಕಾರದ ಜೊತೆಗೆ ಕೈಜೋಡಿಸಿರುವ ಹಲವಾರು ಸಂಘ ಸಂಸ್ಥೆಗಳು ಪರಿಹಾರ ಕಾರ್ಯದಲ್ಲಿ ನೆರವಾಗುತ್ತಿದೆ. ಈ ಮಧ್ಯೆ ಪರಿಹಾರ ಕಾರ್ಯದಲ್ಲಿ ನಾಟಕೀಯ ದೃಶ್ಯ ಸೃಷ್ಟಿಸಲು ಹೋಗಿ ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ನಗೆಪಾಟಲಿಗೀಡಾಗಿದ್ದಾರೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣಾ ದೋಣಿಯನ್ನು ನಿಲ್ಲಿಸಿ ಫೋಟೊಗೆ ಪೋಸ್‌ ನೀಡಿದ್ದಾರೆ. ಆದರೆ ಈ ವಿಡಿಯೊ ವೈರಲ್‌ ಆಗಿದ್ದು, ತಮಿಳುನಾಡಿನ ಜನತೆ ಈ ವಿಡಿಯೊವನ್ನು ಇಟ್ಟು, ಕೋಡಂಗಿ ಅಣ್ಣಾಮಲೈ(ಕೋಮಾಲಿ ಅಣ್ಣಾಮಲೈ) ಎಂದು ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಹಲವು ರೀತಿಯ ವಿಡಿಯೊ ವೈರಲ್ ಆಗಿದ್ದು, ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣೆಗೆ ಬಳಸುವ ದೋಣಿಯಲ್ಲಿ ಕೂತು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಮೊಣಕಾಲಿನಷ್ಟು ಕೂಡಾ ನೀರಿಲ್ಲದ ಜಾಗದಲ್ಲಿ ದೋಣಿಯೊಳಗಡೆ ಕೂತಿರುವ ಅಣ್ಣಾಮಲೈ ಫೋಟೋ ಶೂಟ್‌ಗೆ ತಯಾರಾಗುತ್ತಿರುವುದು ಕಾಣುತ್ತದೆ. ನಂತರ ಯಾರೋ ಹಿನ್ನಲೆಯಲ್ಲಿ ಶುರುಮಾಡಿ ಎಂದು ಹೇಳುತ್ತಾರೆ. ಆಗ, ಅಣ್ಣಾಮಲೈ ಅವರು ಮುಂದಕ್ಕೆ ಕೈ ಮುಗಿದು ಯಾರೊಂದಿಗೋ ಮಾತನಾಡುವ ಶೈಲಿಯಲ್ಲಿ ‘ಇಲ್ಲೆ ಇರುವವರಾ ಬ್ರದರ್‌ ನೀವು’ ಎಂದು ಕೇಳುತ್ತಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮತ್ತೊಂದು ವಿಡಿಯೊದಲ್ಲಿ, ಅಣ್ಣಾಮಲೈ ಸೇರಿದಂತೆ ಕೆಲವರನ್ನು ದೋಣಿಯಲ್ಲಿ ಕೂರಿಸಿ ಎಳೆದುಕೊಂಡು ಹೋಗುತ್ತಿದ್ದಾರೆ. ಅವರ ಹಿಂದೆ ಬಿಜೆಪಿಯ ಧ್ವಜ ಹಿಡಿದು ಹಲವು ಕಾರ್ಯಕರ್ತರು ಕೂಡಾ ಇರುತ್ತಾರೆ. ಈ ವೇಳೆ ಕೂಡಾ ಅಣ್ಣಾಮಲೈ ಸುಖಾಸುಮ್ಮನೆ ಮುಂದೆ ಯಾರೋ ಇದ್ದಾರೆ ಎಂಬ ರೀತಿಯಲ್ಲಿ ನಮಸ್ಕರಿಸಿದ್ದಾರೆ. ಇದೇ ರೀತಿಯ ದೃಶ್ಯವನ್ನು ಉತ್ತರ ಕರ್ನಾಟಕದಲ್ಲಿ ಮಳೆ ಬಂದಾಗ ಬಿಜೆಪಿಯ ಶಾಸಕ ರೇಣುಕಾಚಾರ್ಯ ಅವರು ಕೂಡಾ ಮಾಡಿದ್ದರು. ಈ ಸಂದಂರ್ಭದಲ್ಲೂ ಜನ ಅವರನ್ನು ಟ್ರೋಲ್ ಮಾಡಿದ್ದರು.

ಇನ್ನೊಂದು ವಿಡಿಯೊದಲ್ಲಿ ಮೊಣಕಾಲುದ್ದ ನೀರಿರುವ ಜಾಗದಲ್ಲಿ ಇರುವ ದೋಣಿಯಲ್ಲಿ ಅಣ್ಣಾಮಲೈ ಕೂತಿದ್ದಾರೆ. ಈ ವೇಳೆ ಕ್ಯಾಮೆರಾ ಮ್ಯಾನ್, ‘ಎಲ್ಲರೂ ಈ ಕಡೆ ಬನ್ನಿ, ಒಂದು ಖಾಲಿಯಾಗಿರುವ ಫೋಟೋ ಕ್ಲಿಕ್ ಮಾಡುತ್ತೇನೆ’ ಎಂದು ಹೇಳುತ್ತಾರೆ. ಆಗ ಅಣ್ಣಾ ಮಲೈ ಕೂಡಾ ಅವರನ್ನು ಕಳುಹಿಸುತ್ತಾರೆ. ಜೊತೆಗೆ ಅಲ್ಲೇ ಇದ್ದ ಮಹಿಳೆಯೊಂದಿಗೆ ಕೂಡಾ ಅಣ್ಣಾ ಮಲೈ ಮಾತನಾಡುತ್ತಾರೆ. ಆಗ, ಆ ಅಕ್ಕ ಜೊತೆ ಮಾತಾಡ್ತಾ ಇರೋ ಥರ ಒಂದು ಶಾಟ್ ತಗೋ ಎಂಬ ಧ್ವನಿಯು ಕೇಳುತ್ತದೆ. ಈ ನಡುವೆ ಅಣ್ಣಾಮಲೈ ಮತ್ತೆ ಯಾರಿಗೋ ನಮಸ್ಕಾರ ಮಾಡುವ ರೀತಿಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ: ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಮಗದೊಂದು ವಿಡಿಯೊದಲ್ಲಿ, ನೀರಿನಿಂದ ರಕ್ಷಣೆಗಾಗಿ ಬದಿಯಲ್ಲಿ ನಿಂತಿದ್ದ ವೃದ್ದೆಯನ್ನು ಮಾತನಾಡಿಸಲು ಅಣ್ಣಾ ಮಲೈ ತೆರಳುತ್ತಾರೆ. ಅವರನ್ನು ಮಾತನಾಡಿಸಿದ ಅವರು, “ಪ್ರತಿಬಾರಿಯ ಮಳೆಗೂ ಹೀಗಾದರೆ ಹೇಗಮ್ಮ? 2015 ರಲ್ಲೂ ಹೀಗೆ, 2021 ರಲ್ಲೂ ಹೀಗೆ” ಎಂದು ಕೇಳುತ್ತಾರೆ. ಈ ವೇಳೆ ಮಹಿಳೆ, “ನೀವು ಬಂದು ಏನು ಮಾಡುತ್ತೀರಿ” ಎಂದು ಪ್ರಶ್ನಿಸುತ್ತಾರೆ.

ಮಾನವೀಯ ನೆರವು ನೀಡಬೇಕಾದ ಸಮಯದಲ್ಲೂ ನಾಟಕ ಮಾಡಲು ಪ್ರಯತ್ನಿಸಿದ ಅಣ್ಣಾ ಮಲೈ ಅವರನ್ನು ತಮಿಳುನಾಡಿನ ಜನರು ಟ್ವಿಟರ್‌ನಲ್ಲಿ ಮೀಮ್ಸ್‌ ಮಾಡಿ ವ್ಯಂಗ್ಯವಾಡುತ್ತಿದ್ದಾರೆ. ‘ಗೋಟ್‌‌ ಆನ್‌ ದಿ ಬೋಟ್’,(ದೋಣಿಯಲ್ಲಿ ಆಡು) ಕೋಮಾಲಿ ಅಣ್ಣಾಮಲೈ (ಕೋಡಂಗಿ ಅಣ್ಣಾಮಲೈ) ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ಡಿಎಂಕೆ ರಾಜ್ಯ ಐಟಿ ವಿಂಗ್ ನಾಯಕರಾದ ಇಸೈ ಅವರು, ಲೈಫ್ ಆಫ್ ಪೈ ಎಂಬ ಕಾದಂಬರಿಯ ಕವರ್‌ ಫೋಟೋದಲ್ಲಿ ಇರುವ ಮನುಷ್ಯನ ತಲೆಗೆ ಅಣ್ಣಾಮಲೈ ಅವರ ಚಿತ್ರ ಎಡಿಟ್ ಮಾಡಿ ‘ಲೈಫ್‌ ಆಫ್ ಪೊಯಿ’(ಸುಳ್ಳಿನ ಜೀವನ) ಎಂದು ವ್ಯಂಗ್ಯವಾಗಿದ್ದಾರೆ.

ಇಷ್ಟೇ ಅಲ್ಲದೆ ಹಲವಾರು ಮೀಮ್ಸ್‌ಗಳನ್ನು ಜನ ಶೇರ್‌ ಮಾಡುತ್ತಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಣ್ಣಾ ಮಲೈ ಅವರ ಕೆಲಸದ ಬಗ್ಗೆ ಸರಿಯಾಗಿ ಅರಿಯದೆ ,ಮಾತಾಡೋ ಸೋಕಾಲ್ಡ್ ಎಡಬಿಡಂಗಿ ಕೆಲ ಪತ್ರಿಕೆಗಳ ಬಗ್ಗೆ ಜನ ತಲೆ ಕೆಡಿಸಿ ಕೊಳ್ಳಲ್ಲಾ ಬಿಡಿ , ಅದೂ ಚೈನಿ ಪಾಲನೆಯಲ್ಲಿ ನಡೆಯುವ ಕೆಲ ಮಾಧ್ಯಮಗಳು ಯಾವಾಗಲು ಹೀಗೆ ಮಾತಾಡೋದು ಅಂತ ಜನರಿಗೆ ತಿಳಿದಿದೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...