Homeಮುಖಪುಟನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು

ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು

- Advertisement -
- Advertisement -

ತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದ್ದರು. ಈ ನಡುವೆ ಪರಿಹಾರ ಕಾರ್ಯಕೂಡಾ ಭರದಿಂದ ಸಾಗಿತ್ತು. ಜೊತೆಗೆ ಹವಾಮಾನ ಇಲಾಖೆಯು ಬುಧವಾರ ಮತ್ತು ಗುರುವಾರ ಕೂಡಾ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಸರ್ಕಾರದ ಜೊತೆಗೆ ಕೈಜೋಡಿಸಿರುವ ಹಲವಾರು ಸಂಘ ಸಂಸ್ಥೆಗಳು ಪರಿಹಾರ ಕಾರ್ಯದಲ್ಲಿ ನೆರವಾಗುತ್ತಿದೆ. ಈ ಮಧ್ಯೆ ಪರಿಹಾರ ಕಾರ್ಯದಲ್ಲಿ ನಾಟಕೀಯ ದೃಶ್ಯ ಸೃಷ್ಟಿಸಲು ಹೋಗಿ ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ನಗೆಪಾಟಲಿಗೀಡಾಗಿದ್ದಾರೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣಾ ದೋಣಿಯನ್ನು ನಿಲ್ಲಿಸಿ ಫೋಟೊಗೆ ಪೋಸ್‌ ನೀಡಿದ್ದಾರೆ. ಆದರೆ ಈ ವಿಡಿಯೊ ವೈರಲ್‌ ಆಗಿದ್ದು, ತಮಿಳುನಾಡಿನ ಜನತೆ ಈ ವಿಡಿಯೊವನ್ನು ಇಟ್ಟು, ಕೋಡಂಗಿ ಅಣ್ಣಾಮಲೈ(ಕೋಮಾಲಿ ಅಣ್ಣಾಮಲೈ) ಎಂದು ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಹಲವು ರೀತಿಯ ವಿಡಿಯೊ ವೈರಲ್ ಆಗಿದ್ದು, ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣೆಗೆ ಬಳಸುವ ದೋಣಿಯಲ್ಲಿ ಕೂತು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಮೊಣಕಾಲಿನಷ್ಟು ಕೂಡಾ ನೀರಿಲ್ಲದ ಜಾಗದಲ್ಲಿ ದೋಣಿಯೊಳಗಡೆ ಕೂತಿರುವ ಅಣ್ಣಾಮಲೈ ಫೋಟೋ ಶೂಟ್‌ಗೆ ತಯಾರಾಗುತ್ತಿರುವುದು ಕಾಣುತ್ತದೆ. ನಂತರ ಯಾರೋ ಹಿನ್ನಲೆಯಲ್ಲಿ ಶುರುಮಾಡಿ ಎಂದು ಹೇಳುತ್ತಾರೆ. ಆಗ, ಅಣ್ಣಾಮಲೈ ಅವರು ಮುಂದಕ್ಕೆ ಕೈ ಮುಗಿದು ಯಾರೊಂದಿಗೋ ಮಾತನಾಡುವ ಶೈಲಿಯಲ್ಲಿ ‘ಇಲ್ಲೆ ಇರುವವರಾ ಬ್ರದರ್‌ ನೀವು’ ಎಂದು ಕೇಳುತ್ತಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮತ್ತೊಂದು ವಿಡಿಯೊದಲ್ಲಿ, ಅಣ್ಣಾಮಲೈ ಸೇರಿದಂತೆ ಕೆಲವರನ್ನು ದೋಣಿಯಲ್ಲಿ ಕೂರಿಸಿ ಎಳೆದುಕೊಂಡು ಹೋಗುತ್ತಿದ್ದಾರೆ. ಅವರ ಹಿಂದೆ ಬಿಜೆಪಿಯ ಧ್ವಜ ಹಿಡಿದು ಹಲವು ಕಾರ್ಯಕರ್ತರು ಕೂಡಾ ಇರುತ್ತಾರೆ. ಈ ವೇಳೆ ಕೂಡಾ ಅಣ್ಣಾಮಲೈ ಸುಖಾಸುಮ್ಮನೆ ಮುಂದೆ ಯಾರೋ ಇದ್ದಾರೆ ಎಂಬ ರೀತಿಯಲ್ಲಿ ನಮಸ್ಕರಿಸಿದ್ದಾರೆ. ಇದೇ ರೀತಿಯ ದೃಶ್ಯವನ್ನು ಉತ್ತರ ಕರ್ನಾಟಕದಲ್ಲಿ ಮಳೆ ಬಂದಾಗ ಬಿಜೆಪಿಯ ಶಾಸಕ ರೇಣುಕಾಚಾರ್ಯ ಅವರು ಕೂಡಾ ಮಾಡಿದ್ದರು. ಈ ಸಂದಂರ್ಭದಲ್ಲೂ ಜನ ಅವರನ್ನು ಟ್ರೋಲ್ ಮಾಡಿದ್ದರು.

ಇನ್ನೊಂದು ವಿಡಿಯೊದಲ್ಲಿ ಮೊಣಕಾಲುದ್ದ ನೀರಿರುವ ಜಾಗದಲ್ಲಿ ಇರುವ ದೋಣಿಯಲ್ಲಿ ಅಣ್ಣಾಮಲೈ ಕೂತಿದ್ದಾರೆ. ಈ ವೇಳೆ ಕ್ಯಾಮೆರಾ ಮ್ಯಾನ್, ‘ಎಲ್ಲರೂ ಈ ಕಡೆ ಬನ್ನಿ, ಒಂದು ಖಾಲಿಯಾಗಿರುವ ಫೋಟೋ ಕ್ಲಿಕ್ ಮಾಡುತ್ತೇನೆ’ ಎಂದು ಹೇಳುತ್ತಾರೆ. ಆಗ ಅಣ್ಣಾ ಮಲೈ ಕೂಡಾ ಅವರನ್ನು ಕಳುಹಿಸುತ್ತಾರೆ. ಜೊತೆಗೆ ಅಲ್ಲೇ ಇದ್ದ ಮಹಿಳೆಯೊಂದಿಗೆ ಕೂಡಾ ಅಣ್ಣಾ ಮಲೈ ಮಾತನಾಡುತ್ತಾರೆ. ಆಗ, ಆ ಅಕ್ಕ ಜೊತೆ ಮಾತಾಡ್ತಾ ಇರೋ ಥರ ಒಂದು ಶಾಟ್ ತಗೋ ಎಂಬ ಧ್ವನಿಯು ಕೇಳುತ್ತದೆ. ಈ ನಡುವೆ ಅಣ್ಣಾಮಲೈ ಮತ್ತೆ ಯಾರಿಗೋ ನಮಸ್ಕಾರ ಮಾಡುವ ರೀತಿಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ: ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಮಗದೊಂದು ವಿಡಿಯೊದಲ್ಲಿ, ನೀರಿನಿಂದ ರಕ್ಷಣೆಗಾಗಿ ಬದಿಯಲ್ಲಿ ನಿಂತಿದ್ದ ವೃದ್ದೆಯನ್ನು ಮಾತನಾಡಿಸಲು ಅಣ್ಣಾ ಮಲೈ ತೆರಳುತ್ತಾರೆ. ಅವರನ್ನು ಮಾತನಾಡಿಸಿದ ಅವರು, “ಪ್ರತಿಬಾರಿಯ ಮಳೆಗೂ ಹೀಗಾದರೆ ಹೇಗಮ್ಮ? 2015 ರಲ್ಲೂ ಹೀಗೆ, 2021 ರಲ್ಲೂ ಹೀಗೆ” ಎಂದು ಕೇಳುತ್ತಾರೆ. ಈ ವೇಳೆ ಮಹಿಳೆ, “ನೀವು ಬಂದು ಏನು ಮಾಡುತ್ತೀರಿ” ಎಂದು ಪ್ರಶ್ನಿಸುತ್ತಾರೆ.

ಮಾನವೀಯ ನೆರವು ನೀಡಬೇಕಾದ ಸಮಯದಲ್ಲೂ ನಾಟಕ ಮಾಡಲು ಪ್ರಯತ್ನಿಸಿದ ಅಣ್ಣಾ ಮಲೈ ಅವರನ್ನು ತಮಿಳುನಾಡಿನ ಜನರು ಟ್ವಿಟರ್‌ನಲ್ಲಿ ಮೀಮ್ಸ್‌ ಮಾಡಿ ವ್ಯಂಗ್ಯವಾಡುತ್ತಿದ್ದಾರೆ. ‘ಗೋಟ್‌‌ ಆನ್‌ ದಿ ಬೋಟ್’,(ದೋಣಿಯಲ್ಲಿ ಆಡು) ಕೋಮಾಲಿ ಅಣ್ಣಾಮಲೈ (ಕೋಡಂಗಿ ಅಣ್ಣಾಮಲೈ) ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ಡಿಎಂಕೆ ರಾಜ್ಯ ಐಟಿ ವಿಂಗ್ ನಾಯಕರಾದ ಇಸೈ ಅವರು, ಲೈಫ್ ಆಫ್ ಪೈ ಎಂಬ ಕಾದಂಬರಿಯ ಕವರ್‌ ಫೋಟೋದಲ್ಲಿ ಇರುವ ಮನುಷ್ಯನ ತಲೆಗೆ ಅಣ್ಣಾಮಲೈ ಅವರ ಚಿತ್ರ ಎಡಿಟ್ ಮಾಡಿ ‘ಲೈಫ್‌ ಆಫ್ ಪೊಯಿ’(ಸುಳ್ಳಿನ ಜೀವನ) ಎಂದು ವ್ಯಂಗ್ಯವಾಗಿದ್ದಾರೆ.

ಇಷ್ಟೇ ಅಲ್ಲದೆ ಹಲವಾರು ಮೀಮ್ಸ್‌ಗಳನ್ನು ಜನ ಶೇರ್‌ ಮಾಡುತ್ತಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಣ್ಣಾ ಮಲೈ ಅವರ ಕೆಲಸದ ಬಗ್ಗೆ ಸರಿಯಾಗಿ ಅರಿಯದೆ ,ಮಾತಾಡೋ ಸೋಕಾಲ್ಡ್ ಎಡಬಿಡಂಗಿ ಕೆಲ ಪತ್ರಿಕೆಗಳ ಬಗ್ಗೆ ಜನ ತಲೆ ಕೆಡಿಸಿ ಕೊಳ್ಳಲ್ಲಾ ಬಿಡಿ , ಅದೂ ಚೈನಿ ಪಾಲನೆಯಲ್ಲಿ ನಡೆಯುವ ಕೆಲ ಮಾಧ್ಯಮಗಳು ಯಾವಾಗಲು ಹೀಗೆ ಮಾತಾಡೋದು ಅಂತ ಜನರಿಗೆ ತಿಳಿದಿದೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....