Homeಮುಖಪುಟನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು

ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರು

- Advertisement -
- Advertisement -

ತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ ನೀಡಿ ಪರಿಶೀಲಿಸಿದ್ದರು. ಈ ನಡುವೆ ಪರಿಹಾರ ಕಾರ್ಯಕೂಡಾ ಭರದಿಂದ ಸಾಗಿತ್ತು. ಜೊತೆಗೆ ಹವಾಮಾನ ಇಲಾಖೆಯು ಬುಧವಾರ ಮತ್ತು ಗುರುವಾರ ಕೂಡಾ ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಸರ್ಕಾರದ ಜೊತೆಗೆ ಕೈಜೋಡಿಸಿರುವ ಹಲವಾರು ಸಂಘ ಸಂಸ್ಥೆಗಳು ಪರಿಹಾರ ಕಾರ್ಯದಲ್ಲಿ ನೆರವಾಗುತ್ತಿದೆ. ಈ ಮಧ್ಯೆ ಪರಿಹಾರ ಕಾರ್ಯದಲ್ಲಿ ನಾಟಕೀಯ ದೃಶ್ಯ ಸೃಷ್ಟಿಸಲು ಹೋಗಿ ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ನಗೆಪಾಟಲಿಗೀಡಾಗಿದ್ದಾರೆ.

ಇದನ್ನೂ ಓದಿ: ಮುಂದಿನ 6 ತಿಂಗಳಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ: ಅಣ್ಣಾಮಲೈ ವಿವಾದಿತ ಹೇಳಿಕೆ

ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣಾ ದೋಣಿಯನ್ನು ನಿಲ್ಲಿಸಿ ಫೋಟೊಗೆ ಪೋಸ್‌ ನೀಡಿದ್ದಾರೆ. ಆದರೆ ಈ ವಿಡಿಯೊ ವೈರಲ್‌ ಆಗಿದ್ದು, ತಮಿಳುನಾಡಿನ ಜನತೆ ಈ ವಿಡಿಯೊವನ್ನು ಇಟ್ಟು, ಕೋಡಂಗಿ ಅಣ್ಣಾಮಲೈ(ಕೋಮಾಲಿ ಅಣ್ಣಾಮಲೈ) ಎಂದು ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಹಲವು ರೀತಿಯ ವಿಡಿಯೊ ವೈರಲ್ ಆಗಿದ್ದು, ಅಣ್ಣಾಮಲೈ ಅವರು ಮೊಣಕಾಲುದ್ದ ನೀರಿರುವ ಸ್ಥಳದಲ್ಲಿ ರಕ್ಷಣೆಗೆ ಬಳಸುವ ದೋಣಿಯಲ್ಲಿ ಕೂತು ಫೋಟೋಗೆ ಪೋಸ್‌ ಕೊಟ್ಟಿದ್ದಾರೆ.

ವೈರಲ್ ಆಗಿರುವ ಒಂದು ವಿಡಿಯೊದಲ್ಲಿ ಮೊಣಕಾಲಿನಷ್ಟು ಕೂಡಾ ನೀರಿಲ್ಲದ ಜಾಗದಲ್ಲಿ ದೋಣಿಯೊಳಗಡೆ ಕೂತಿರುವ ಅಣ್ಣಾಮಲೈ ಫೋಟೋ ಶೂಟ್‌ಗೆ ತಯಾರಾಗುತ್ತಿರುವುದು ಕಾಣುತ್ತದೆ. ನಂತರ ಯಾರೋ ಹಿನ್ನಲೆಯಲ್ಲಿ ಶುರುಮಾಡಿ ಎಂದು ಹೇಳುತ್ತಾರೆ. ಆಗ, ಅಣ್ಣಾಮಲೈ ಅವರು ಮುಂದಕ್ಕೆ ಕೈ ಮುಗಿದು ಯಾರೊಂದಿಗೋ ಮಾತನಾಡುವ ಶೈಲಿಯಲ್ಲಿ ‘ಇಲ್ಲೆ ಇರುವವರಾ ಬ್ರದರ್‌ ನೀವು’ ಎಂದು ಕೇಳುತ್ತಾರೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮತ್ತೊಂದು ವಿಡಿಯೊದಲ್ಲಿ, ಅಣ್ಣಾಮಲೈ ಸೇರಿದಂತೆ ಕೆಲವರನ್ನು ದೋಣಿಯಲ್ಲಿ ಕೂರಿಸಿ ಎಳೆದುಕೊಂಡು ಹೋಗುತ್ತಿದ್ದಾರೆ. ಅವರ ಹಿಂದೆ ಬಿಜೆಪಿಯ ಧ್ವಜ ಹಿಡಿದು ಹಲವು ಕಾರ್ಯಕರ್ತರು ಕೂಡಾ ಇರುತ್ತಾರೆ. ಈ ವೇಳೆ ಕೂಡಾ ಅಣ್ಣಾಮಲೈ ಸುಖಾಸುಮ್ಮನೆ ಮುಂದೆ ಯಾರೋ ಇದ್ದಾರೆ ಎಂಬ ರೀತಿಯಲ್ಲಿ ನಮಸ್ಕರಿಸಿದ್ದಾರೆ. ಇದೇ ರೀತಿಯ ದೃಶ್ಯವನ್ನು ಉತ್ತರ ಕರ್ನಾಟಕದಲ್ಲಿ ಮಳೆ ಬಂದಾಗ ಬಿಜೆಪಿಯ ಶಾಸಕ ರೇಣುಕಾಚಾರ್ಯ ಅವರು ಕೂಡಾ ಮಾಡಿದ್ದರು. ಈ ಸಂದಂರ್ಭದಲ್ಲೂ ಜನ ಅವರನ್ನು ಟ್ರೋಲ್ ಮಾಡಿದ್ದರು.

ಇನ್ನೊಂದು ವಿಡಿಯೊದಲ್ಲಿ ಮೊಣಕಾಲುದ್ದ ನೀರಿರುವ ಜಾಗದಲ್ಲಿ ಇರುವ ದೋಣಿಯಲ್ಲಿ ಅಣ್ಣಾಮಲೈ ಕೂತಿದ್ದಾರೆ. ಈ ವೇಳೆ ಕ್ಯಾಮೆರಾ ಮ್ಯಾನ್, ‘ಎಲ್ಲರೂ ಈ ಕಡೆ ಬನ್ನಿ, ಒಂದು ಖಾಲಿಯಾಗಿರುವ ಫೋಟೋ ಕ್ಲಿಕ್ ಮಾಡುತ್ತೇನೆ’ ಎಂದು ಹೇಳುತ್ತಾರೆ. ಆಗ ಅಣ್ಣಾ ಮಲೈ ಕೂಡಾ ಅವರನ್ನು ಕಳುಹಿಸುತ್ತಾರೆ. ಜೊತೆಗೆ ಅಲ್ಲೇ ಇದ್ದ ಮಹಿಳೆಯೊಂದಿಗೆ ಕೂಡಾ ಅಣ್ಣಾ ಮಲೈ ಮಾತನಾಡುತ್ತಾರೆ. ಆಗ, ಆ ಅಕ್ಕ ಜೊತೆ ಮಾತಾಡ್ತಾ ಇರೋ ಥರ ಒಂದು ಶಾಟ್ ತಗೋ ಎಂಬ ಧ್ವನಿಯು ಕೇಳುತ್ತದೆ. ಈ ನಡುವೆ ಅಣ್ಣಾಮಲೈ ಮತ್ತೆ ಯಾರಿಗೋ ನಮಸ್ಕಾರ ಮಾಡುವ ರೀತಿಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ: ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಮಗದೊಂದು ವಿಡಿಯೊದಲ್ಲಿ, ನೀರಿನಿಂದ ರಕ್ಷಣೆಗಾಗಿ ಬದಿಯಲ್ಲಿ ನಿಂತಿದ್ದ ವೃದ್ದೆಯನ್ನು ಮಾತನಾಡಿಸಲು ಅಣ್ಣಾ ಮಲೈ ತೆರಳುತ್ತಾರೆ. ಅವರನ್ನು ಮಾತನಾಡಿಸಿದ ಅವರು, “ಪ್ರತಿಬಾರಿಯ ಮಳೆಗೂ ಹೀಗಾದರೆ ಹೇಗಮ್ಮ? 2015 ರಲ್ಲೂ ಹೀಗೆ, 2021 ರಲ್ಲೂ ಹೀಗೆ” ಎಂದು ಕೇಳುತ್ತಾರೆ. ಈ ವೇಳೆ ಮಹಿಳೆ, “ನೀವು ಬಂದು ಏನು ಮಾಡುತ್ತೀರಿ” ಎಂದು ಪ್ರಶ್ನಿಸುತ್ತಾರೆ.

ಮಾನವೀಯ ನೆರವು ನೀಡಬೇಕಾದ ಸಮಯದಲ್ಲೂ ನಾಟಕ ಮಾಡಲು ಪ್ರಯತ್ನಿಸಿದ ಅಣ್ಣಾ ಮಲೈ ಅವರನ್ನು ತಮಿಳುನಾಡಿನ ಜನರು ಟ್ವಿಟರ್‌ನಲ್ಲಿ ಮೀಮ್ಸ್‌ ಮಾಡಿ ವ್ಯಂಗ್ಯವಾಡುತ್ತಿದ್ದಾರೆ. ‘ಗೋಟ್‌‌ ಆನ್‌ ದಿ ಬೋಟ್’,(ದೋಣಿಯಲ್ಲಿ ಆಡು) ಕೋಮಾಲಿ ಅಣ್ಣಾಮಲೈ (ಕೋಡಂಗಿ ಅಣ್ಣಾಮಲೈ) ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ಡಿಎಂಕೆ ರಾಜ್ಯ ಐಟಿ ವಿಂಗ್ ನಾಯಕರಾದ ಇಸೈ ಅವರು, ಲೈಫ್ ಆಫ್ ಪೈ ಎಂಬ ಕಾದಂಬರಿಯ ಕವರ್‌ ಫೋಟೋದಲ್ಲಿ ಇರುವ ಮನುಷ್ಯನ ತಲೆಗೆ ಅಣ್ಣಾಮಲೈ ಅವರ ಚಿತ್ರ ಎಡಿಟ್ ಮಾಡಿ ‘ಲೈಫ್‌ ಆಫ್ ಪೊಯಿ’(ಸುಳ್ಳಿನ ಜೀವನ) ಎಂದು ವ್ಯಂಗ್ಯವಾಗಿದ್ದಾರೆ.

ಇಷ್ಟೇ ಅಲ್ಲದೆ ಹಲವಾರು ಮೀಮ್ಸ್‌ಗಳನ್ನು ಜನ ಶೇರ್‌ ಮಾಡುತ್ತಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಣ್ಣಾ ಮಲೈ ಅವರ ಕೆಲಸದ ಬಗ್ಗೆ ಸರಿಯಾಗಿ ಅರಿಯದೆ ,ಮಾತಾಡೋ ಸೋಕಾಲ್ಡ್ ಎಡಬಿಡಂಗಿ ಕೆಲ ಪತ್ರಿಕೆಗಳ ಬಗ್ಗೆ ಜನ ತಲೆ ಕೆಡಿಸಿ ಕೊಳ್ಳಲ್ಲಾ ಬಿಡಿ , ಅದೂ ಚೈನಿ ಪಾಲನೆಯಲ್ಲಿ ನಡೆಯುವ ಕೆಲ ಮಾಧ್ಯಮಗಳು ಯಾವಾಗಲು ಹೀಗೆ ಮಾತಾಡೋದು ಅಂತ ಜನರಿಗೆ ತಿಳಿದಿದೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...