Homeಮುಖಪುಟಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

- Advertisement -
- Advertisement -

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು, ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಯನ್ನು ಕರೆದು ಅವಮಾನಿಸಲು ಮುಂದಾಗಿ, ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

”ಅಣ್ಣಾಮಲೈ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿಲ್ಲದಿದ್ದರೆ ಬಿಜೆಪಿಯಲ್ಲೇ ಇರುತ್ತೀರಾ?” ಎಂದು ಮಹಿಳಾ ವರದಿಗಾರ್ತಿ ಅಣ್ಣಾಮಲೈ ಅವರನ್ನು ಕೇಳಿದಾಗ, ಇಂತಹ ಪ್ರಶ್ನೆಯನ್ನು ಯಾರು ಕೇಳಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿಯಬೇಕು ಹಾಗಾಗಿ ಅವರು ತಮ್ಮ ಬಳಿ ಬಂದು ನಿಲ್ಲುವಂತೆ ಹೇಳಿದ್ದಾರೆ.

”ನನಗೆ ಇಂತಹ ಪ್ರಶ್ನೆಯನ್ನು ಕೇಳಿದವರು ಯಾರು? ಅವರು ನನ್ನ ಪಕ್ಕದಲ್ಲಿ ಬಂದು ನಿಲ್ಲಿ.. ಟಿವಿ ಮೂಲಕ ಜನ ನೋಡಲಿ. ಪ್ರಶ್ನೆ ಕೇಳಲು ಒಂದು ಮಾರ್ಗವಿದೆ. ಇಂತಹ ಪ್ರಶ್ನೆ ಕೇಳಿದ ವ್ಯಕ್ತಿ ಯಾರೆಂದು 8 ಕೋಟಿ ಜನರಿಗೆ ತಿಳಿಯಬೇಕು” ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವರು ಮಹಿಳಾ ವರದಿಗಾರ್ತಿಗೆ ಕ್ಯಾಮೆರಾಗಳ ಮುಂದೆ ನಿಲ್ಲುವಂತೆ ಕೇಳುತ್ತಲೇ ಇದ್ದರು ಆದರೆ ಸಹ ವರದಿಗಾರರು ಅವರನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.

”ನಾನು ಪೂರ್ಣ ಸಮಯದ ರಾಜಕಾರಣಿ ಅಲ್ಲ. ರೈತನಾಗಿರಲು ನಾನು ಬಯಸುತ್ತೇನೆ.. ಆನಂತರ ರಾಜಕಾರಣಿ ಮತ್ತು ನಂತರ ಬಿಜೆಪಿಯೊಂದಿಗೆ” ಎಂದು ಅವರು ಹೇಳಿದರು.

ಅಣ್ಣಾಮಲೈ ಅವರು ವರದಿಗಾರ್ತಿಗೆ ಆ ರೀತಿ ಹೇಳಿದ್ದಕ್ಕೆ ಸಹ ವರದಿಗಾರರು ಆಕ್ಷೇಪ ವ್ಯಕ್ತಪಡಿಸಿದರು. ಆ ಬಳಿಕ ಅಣ್ಣಾಮಲೈ ಅವರು ”ವರದಿಗಾರರಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆಗಳನ್ನು ಕೇಳುವಂತೆ ಸಲಹೆ ನೀಡುತ್ತಿದ್ದೇನೆ” ಎಂದು ಹೇಳಿದರು.

”ಒಳ್ಳೆಯ ಉದ್ದೇಶದಿಂದ ನಾನು ನಿಮಗೆ ಸಲಹೆ ನೀಡುತ್ತಿದ್ದೇನೆ ಸಹೋದರಿ” ಎಂದು ಬಿಜೆಪಿ ನಾಯಕ ಹೇಳಿದರು.

ಕೊಯಮತ್ತೂರು ಪ್ರೆಸ್ ಕ್ಲಬ್ ಅಣ್ಣಾಮಲೈ ಅವರ ಕ್ರಮವನ್ನು ಖಂಡಿಸಿದೆ. ಪತ್ರಿಕೋದ್ಯಮ ನೀತಿಯನ್ನು ಸಾರುವ ಮೊದಲು ಅಣ್ಣಾಮಲೈ ಅವರು ನಾಯಕರಾಗುವ ನೀತಿಯನ್ನು ಕಲಿತು ಗೌರವಯುತವಾಗಿ ನಡೆದುಕೊಳ್ಳಬೇಕು. ಪತ್ರಿಕೋದ್ಯಮವು ನಾಗರಿಕರು ಮತ್ತು ಸಾರ್ವಜನಿಕ ಜೀವನದಲ್ಲಿ ಇರುವವರ ನಡುವೆ ಸೇತುವೆಯಾಗಿ ನಿಂತಿದೆ ಎಂದು ಕೊಯಮತ್ತೂರು ಪ್ರೆಸ್ ಕ್ಲಬ್ ಅಧ್ಯಕ್ಷ ಎ.ಆರ್.ಬಾಬು ಹೇಳಿದರು.

ಇದನ್ನೂ ಓದಿ: ಅಣ್ಣಾಮಲೈ ವಿರುದ್ಧ ಆಕ್ರೋಶ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...