Homeಮುಖಪುಟಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಗೆ ಅವಮಾನಿಸಲು ಮುಂದಾದ ಅಣ್ಣಾಮಲೈ: ಪತ್ರಕರ್ತರಿಂದ ಖಂಡನೆ

- Advertisement -
- Advertisement -

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು, ಪ್ರಶ್ನೆ ಕೇಳಿದ ಮಹಿಳಾ ವರದಿಗಾರ್ತಿಯನ್ನು ಕರೆದು ಅವಮಾನಿಸಲು ಮುಂದಾಗಿ, ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

”ಅಣ್ಣಾಮಲೈ ಅವರು ರಾಜ್ಯ ಘಟಕದ ಅಧ್ಯಕ್ಷರಾಗಿಲ್ಲದಿದ್ದರೆ ಬಿಜೆಪಿಯಲ್ಲೇ ಇರುತ್ತೀರಾ?” ಎಂದು ಮಹಿಳಾ ವರದಿಗಾರ್ತಿ ಅಣ್ಣಾಮಲೈ ಅವರನ್ನು ಕೇಳಿದಾಗ, ಇಂತಹ ಪ್ರಶ್ನೆಯನ್ನು ಯಾರು ಕೇಳಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿಯಬೇಕು ಹಾಗಾಗಿ ಅವರು ತಮ್ಮ ಬಳಿ ಬಂದು ನಿಲ್ಲುವಂತೆ ಹೇಳಿದ್ದಾರೆ.

”ನನಗೆ ಇಂತಹ ಪ್ರಶ್ನೆಯನ್ನು ಕೇಳಿದವರು ಯಾರು? ಅವರು ನನ್ನ ಪಕ್ಕದಲ್ಲಿ ಬಂದು ನಿಲ್ಲಿ.. ಟಿವಿ ಮೂಲಕ ಜನ ನೋಡಲಿ. ಪ್ರಶ್ನೆ ಕೇಳಲು ಒಂದು ಮಾರ್ಗವಿದೆ. ಇಂತಹ ಪ್ರಶ್ನೆ ಕೇಳಿದ ವ್ಯಕ್ತಿ ಯಾರೆಂದು 8 ಕೋಟಿ ಜನರಿಗೆ ತಿಳಿಯಬೇಕು” ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವರು ಮಹಿಳಾ ವರದಿಗಾರ್ತಿಗೆ ಕ್ಯಾಮೆರಾಗಳ ಮುಂದೆ ನಿಲ್ಲುವಂತೆ ಕೇಳುತ್ತಲೇ ಇದ್ದರು ಆದರೆ ಸಹ ವರದಿಗಾರರು ಅವರನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.

”ನಾನು ಪೂರ್ಣ ಸಮಯದ ರಾಜಕಾರಣಿ ಅಲ್ಲ. ರೈತನಾಗಿರಲು ನಾನು ಬಯಸುತ್ತೇನೆ.. ಆನಂತರ ರಾಜಕಾರಣಿ ಮತ್ತು ನಂತರ ಬಿಜೆಪಿಯೊಂದಿಗೆ” ಎಂದು ಅವರು ಹೇಳಿದರು.

ಅಣ್ಣಾಮಲೈ ಅವರು ವರದಿಗಾರ್ತಿಗೆ ಆ ರೀತಿ ಹೇಳಿದ್ದಕ್ಕೆ ಸಹ ವರದಿಗಾರರು ಆಕ್ಷೇಪ ವ್ಯಕ್ತಪಡಿಸಿದರು. ಆ ಬಳಿಕ ಅಣ್ಣಾಮಲೈ ಅವರು ”ವರದಿಗಾರರಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆಗಳನ್ನು ಕೇಳುವಂತೆ ಸಲಹೆ ನೀಡುತ್ತಿದ್ದೇನೆ” ಎಂದು ಹೇಳಿದರು.

”ಒಳ್ಳೆಯ ಉದ್ದೇಶದಿಂದ ನಾನು ನಿಮಗೆ ಸಲಹೆ ನೀಡುತ್ತಿದ್ದೇನೆ ಸಹೋದರಿ” ಎಂದು ಬಿಜೆಪಿ ನಾಯಕ ಹೇಳಿದರು.

ಕೊಯಮತ್ತೂರು ಪ್ರೆಸ್ ಕ್ಲಬ್ ಅಣ್ಣಾಮಲೈ ಅವರ ಕ್ರಮವನ್ನು ಖಂಡಿಸಿದೆ. ಪತ್ರಿಕೋದ್ಯಮ ನೀತಿಯನ್ನು ಸಾರುವ ಮೊದಲು ಅಣ್ಣಾಮಲೈ ಅವರು ನಾಯಕರಾಗುವ ನೀತಿಯನ್ನು ಕಲಿತು ಗೌರವಯುತವಾಗಿ ನಡೆದುಕೊಳ್ಳಬೇಕು. ಪತ್ರಿಕೋದ್ಯಮವು ನಾಗರಿಕರು ಮತ್ತು ಸಾರ್ವಜನಿಕ ಜೀವನದಲ್ಲಿ ಇರುವವರ ನಡುವೆ ಸೇತುವೆಯಾಗಿ ನಿಂತಿದೆ ಎಂದು ಕೊಯಮತ್ತೂರು ಪ್ರೆಸ್ ಕ್ಲಬ್ ಅಧ್ಯಕ್ಷ ಎ.ಆರ್.ಬಾಬು ಹೇಳಿದರು.

ಇದನ್ನೂ ಓದಿ: ಅಣ್ಣಾಮಲೈ ವಿರುದ್ಧ ಆಕ್ರೋಶ: ಬಿಜೆಪಿ ಜೊತೆಗಿನ ಮೈತ್ರಿ ಮುರಿದ ಎಐಎಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...