Homeಮುಖಪುಟಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

- Advertisement -
- Advertisement -

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ (ಜೂನ್2) ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ದೆಹಲಿಯಲ್ಲಿ ಭೇಟಿಯಾದ ಅಣ್ಣಾಮಲೈ, ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ವರದಿಗಳು ಹೇಳಿವೆ.

ಈ ಮೂಲಕ ಸುಮಾರು 6 ವರ್ಷಗಳ ಬಿಜೆಪಿ ಜೊತೆಗಿನ ಸಂಬಂಧವನ್ನು ಅಣ್ಣಾಮಲೈ ಕಡಿದು ಕೊಂಡಂತಾಗಿದೆ.

ಐಪಿಎಸ್ ಹುದ್ದೆ ತೊರೆದು ಬಿಜೆಪಿ ಸೇರಿದ್ದ ಅಣ್ಣಾಮಲೈ

ಅಣ್ಣಾಮಲೈ ಐಪಿಎಸ್ ಪಾಸ್ ಮಾಡಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದವರು. ಕಾರ್ಕಳದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳ ಎಸ್ಪಿ ಹಾಗೂ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸೇರಿದಂತೆ ಹಲವು ಹುದ್ದೆಗಳನ್ನು ಅವರು ನಿಭಾಯಿಸಿದ್ದರು. ಕೆಲವೊಂದಿಷ್ಟು ಜನರಿಂದ ‘ಸಿಂಗಂ’ ಎಂದು ಕರೆಸಿಕೊಳ್ಳುತ್ತಿದ್ದರು. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅಣ್ಣಾಮಲೈಗೆ ಒಂದು ರೀತಿಯ ಖ್ಯಾತಿ ಇತ್ತು.

ಸುಮಾರು 9 ವರ್ಷಗಳ ಕಾಲ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ, ಮೇ 2019ರಲ್ಲಿ ತಮ್ಮ ಐಪಿಎಸ್ ಹುದ್ದೆಗೆ ಹಠಾತ್ ರಾಜೀನಾಮೆ ನೀಡಿ, ಹೊಸ ಬದಲಾವಣೆ ತರುತ್ತೇನೆ ಎಂದು ರಾಜಕೀಯ ಪ್ರವೇಶ ಮಾಡಿದರು.

ಐಪಿಎಸ್ ತೊರೆದ ಸುಮಾರು ಒಂದು ವರ್ಷದ ನಂತರ, ಆಗಸ್ಟ್ 2020ರಲ್ಲಿ ಅಣ್ಣಾಮಲೈ ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ರಾಷ್ಟ್ರೀಯತಾವಾದಿ (ಹಿಂದುತ್ವವಾದಿ) ಸಿದ್ಧಾಂತದಿಂದ ಪ್ರೇರಿತರಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಆ ಸಂದರ್ಭದಲ್ಲಿ ತಿಳಿಸಿದ್ದರು.

ಪಕ್ಷ ಸೇರಿದ ಕೆಲವೇ ತಿಂಗಳುಗಳಲ್ಲಿ, ಅಂದರೆ 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಮಲೈ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಪೈಪೋಟಿ ನಡೆಸಿ ಸೋಲನುಭವಿಸಿದರು.

ನಂತರ, ಜುಲೈ 2021ರಲ್ಲಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸಿತು. ತಮಿಳುನಾಡು ಬಿಜೆಪಿ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿಗೆ (37 ವರ್ಷ) ಈ ಜವಾಬ್ದಾರಿ ಹೊತ್ತ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು.

ಟುಸ್ ಆಯ್ತಾ ಮಾಜಿ ಐಪಿಎಸ್ ಲೆಕ್ಕಾಚಾರಾ?

ಪೊಲೀಸ್ ಇಲಾಖೆಯಲ್ಲಿ ಇರುವಾಗ ಕೆಲವರಿಂದ ‘ಸಿಂಗಂ’ ಎಂದು ಕರೆಸಿಕೊಳ್ಳುತ್ತಿದ್ದ ಅಣ್ಣಾಮಲೈ, ಬಿಜೆಪಿ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ ನಿರೀಕ್ಷಿಸಿದಷ್ಟು ಯಶಸ್ಸು ಕಾಣುವಲ್ಲಿ ಸೋತರು. ಅವರು ಕೈ ಹಾಕಿದ ಯಾವುದೇ ಕಾರ್ಯಗಳು ಸಂಪೂರ್ಣ ಯಶ ಕಾಣಲಿಲ್ಲ. ಆದ್ದರಿಂದ ಮಾಜಿ ಐಪಿಎಸ್‌ ಅಧಿಕಾರಿಯ ರಾಜಕೀಯ ಲೆಕ್ಕಾಚಾರಗಳು ಟುಸ್ ಆಯ್ತಾ ಎಂಬ ಪ್ರಶ್ನೆ ಮೂಡುತ್ತದೆ.

ಅಣ್ಣಾಮಲೈ ಅವರು ವೈಯಕ್ತಿಕವಾಗಿ ಭಾರಿ ಜನಪ್ರಿಯತೆ ಗಳಿಸಿದರಾದರೂ, ಅದನ್ನು ಚುನಾವಣಾ ಗೆಲುವಾಗಿ ಪರಿವರ್ತಿಸಲು ವಿಫಲರಾದರು. ಅವರು ಸ್ವತಃ ಸ್ಪರ್ಧಿಸಿದ 2021ರ ವಿಧಾನಸಭಾ ಚುನಾವಣೆ (ಅರವಕುರಿಚಿ) ಮತ್ತು 2024ರ ಲೋಕಸಭಾ ಚುನಾವಣೆ (ಕೊಯಮತ್ತೂರು) ಎರಡರಲ್ಲೂ ಸೋಲನುಭವಿಸಿದರು.

ಅವರ ನೇತೃತ್ವದಲ್ಲಿ ಬಿಜೆಪಿ ಶೇಕಡ 11ರಷ್ಟು ಮತ ಗಳಿಸಿತೇ ವಿನಃ, ತಮಿಳುನಾಡಿನಲ್ಲಿ ದೊಡ್ಡ ಮಟ್ಟದ ಸೀಟುಗಳನ್ನು ಗೆದ್ದು ಪ್ರಮುಖ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯವಾಗಲಿಲ್ಲ.

ತಮಿಳುನಾಡಿನ ಪ್ರಮುಖ ದ್ರಾವಿಡ ಪಕ್ಷವಾದ ಎಐಎಡಿಎಂಕೆ ನಾಯಕರ ವಿರುದ್ಧ ಅಣ್ಣಾಮಲೈ ನಿರಂತರವಾಗಿ ಆಕ್ರಮಣಕಾರಿ ವಾಗ್ದಾಳಿ ನಡೆಸಿದರು. ಇದರಿಂದ ಬೇಸತ್ತ ಎಐಎಡಿಎಂಕೆ ಬಿಜೆಪಿಯೊಂದಿಗಿನ ತನ್ನ ಮೈತ್ರಿಯನ್ನು ಸಂಪೂರ್ಣವಾಗಿ ಕಡಿದುಕೊಂಡಿತು.

ತಮಿಳುನಾಡಿನಂತಹ ದ್ರಾವಿಡ ಕೋಟೆಯಲ್ಲಿ ಪ್ರಾದೇಶಿಕ ಪಕ್ಷದ ಬೆಂಬಲವಿಲ್ಲದೆ ಒಂಟಿಯಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬ ಹೈಕಮಾಂಡ್ ಲೆಕ್ಕಾಚಾರ ನಿಜವಾಯಿತು. ಮೈತ್ರಿ ಮುರಿದುಕೊಂಡ ಅಣ್ಣಾಮಲೈ ಅವರ ಈ ಹಠದ ನಿರ್ಧಾರ ಅಂತಿಮವಾಗಿ ಪಕ್ಷಕ್ಕೆ ಚುನಾವಣಾ ಹಿನ್ನಡೆ ತಂದಿಟ್ಟಿತು.

ಪೊಲೀಸ್ ಅಧಿಕಾರಿಯ ಶೈಲಿಯಲ್ಲೇ ಪಕ್ಷ ಮುನ್ನಡೆಸಲು ಹೋದ ಅಣ್ಣಾಮಲೈ, ತಮಿಳುನಾಡು ಬಿಜೆಪಿಯಲ್ಲಿದ್ದ ಹಳೆಯ ಮತ್ತು ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. 

ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಬೀದಿಗೆ ಬಂದವು ಮತ್ತು ಹಲವು ಹಿರಿಯ ನಾಯಕರು ಇವರ ಏಕಪಕ್ಷೀಯ ನಿರ್ಧಾರಗಳಿಂದ ಬೇಸತ್ತು ಪಕ್ಷ ತೊರೆದರು ಅಥವಾ ಸೈಲೆಂಟ್ ಆದರು.

ತಮಿಳುನಾಡಿನಲ್ಲಿ ದ್ರಾವಿಡ ರಾಜಕೀಯ ಸಿದ್ಧಾಂತಕ್ಕೆ ಪರ್ಯಾಯವಾಗಿ ಹಿಂದುತ್ವವನ್ನು ಮುನ್ನೆಲೆಗೆ ತರಲು ಅಣ್ಣಾಮಲೈ ಪ್ರಯತ್ನಿಸಿದರು. ಆದರೆ, ದಶಕಗಳಿಂದ ತಮಿಳು ಜನರ ರಕ್ತದಲ್ಲಿರುವ ದ್ರಾವಿಡ ಅಸ್ಮಿತೆಯನ್ನು ದಾಟಿ ತಮಿಳುನಾಡಿನಲ್ಲಿ ಹಿಂದುತ್ವ ರಾಜಕಾರಣವನ್ನು ಗೆಲ್ಲಿಸಲು ಅವರ ತಂತ್ರಗಳು ವಿಫಲವಾದವು.

ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಕೂಡ ದ್ರಾವಿಡ ಸಂಪ್ರದಾಯಕ್ಕೆ ನಾವು ವಿರೋಧಿಯಲ್ಲ ಎಂದು ಬಿಂಬಿಸಿಕೊಳ್ಳಲು ಮುಂದಾದದ್ದು ಅಣ್ಣಾಮಲೈ ಅವರ ಸಿದ್ಧಾಂತದ ಸೋಲಿಗೆ ಸಾಕ್ಷಿಯಾಯಿತು.

ಪತ್ರಿಕಾಗೋಷ್ಠಿಗಳಲ್ಲಿ ಕಠಿಣ ಪ್ರಶ್ನೆಗಳನ್ನು ಕೇಳಿದ ಪತ್ರಕರ್ತರ ವಿರುದ್ಧ ಅಣ್ಣಾಮಲೈ ಅವರು ಹಲವು ಬಾರಿ ಉದ್ವೇಗಕ್ಕೊಳಗಾಗಿ, ಏಕವಚನ ಬಳಸಿ ಅಥವಾ ವಾಗ್ದಾಳಿ ನಡೆಸಿ ವಿವಾದ ಮೈಮೇಲೆ ಎಳೆದುಕೊಂಡರು. ಇದು ಅವರ “ದಕ್ಷ ಅಧಿಕಾರಿ” ಎಂಬ ಇಮೇಜ್‌ಗೆ ರಾಜಕೀಯವಾಗಿ ಹಾನಿ ಉಂಟುಮಾಡಿತು. 

ಪಕ್ಷ ಸಂಘಟನೆಗೆ ಹೊಸ ಪ್ಲ್ಯಾನ್ ಮಾಡಿದ್ದ ಅಣ್ಣಾಮಲೈ, ರಾಜ್ಯದಾದ್ಯಂತ ‘ಎಣ್ ಮಣ್ಣ್ ಎಣ್ ಮಕ್ಕಳು’ (ನನ್ನ ಮಣ್ಣು, ನನ್ನ ಜನ) ಎಂಬ ಹೆಸರಿನಲ್ಲಿ ಪಾದಯಾತ್ರೆ ಹಮ್ಮಿಕೊಂಡರು. ಆದರೆ, ಅದು ಫಲ ಕೊಡಲಿಲ್ಲ.

ಈ ಯಾತ್ರೆಯುದ್ದಕ್ಕೂ ಭಾರಿ ಜನಬೆಂಬಲ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಪ್ರಚಾರ ಸಿಕ್ಕಿದ್ದರೂ, ಅದು ನೇರವಾಗಿ ಚುನಾವಣಾ ಸೀಟುಗಳಾಗಿ ಪರಿವರ್ತನೆಯಾಗಲಿಲ್ಲ. ಯಾತ್ರೆಯ ಬಳಿಕ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ವತಃ ಸ್ಪರ್ಧಿಸಿದ್ದ ಅಣ್ಣಾಮಲೈ ಸೋತರು.

ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಎದುರಿಸಲು ಪ್ರಬಲ ಪ್ರಾದೇಶಿಕ ಪಕ್ಷವಾದ ಎಐಎಡಿಎಂಕೆ ಜೊತೆ ಮತ್ತೆ ಮೈತ್ರಿ ಮಾಡಿಕೊಳ್ಳುವುದು ಬಿಜೆಪಿಗೆ ಅನಿವಾರ್ಯವಾಗಿತ್ತು.

ಅಣ್ಣಾಮಲೈ ಅವರು ದ್ರಾವಿಡ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರಿಂದ ಎಐಎಡಿಎಂಕೆ ನಾಯಕರು ಅಸಮಾಧಾನಗೊಂಡಿದ್ದರು. ತಾವೂ ಮೈತ್ರಿಕೂಟಕ್ಕೆ ಮರಳಿ ಬರಬೇಕಾದರೆ ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಕಠಿಣ ಷರತ್ತನ್ನು ಎಐಎಡಿಎಂಕೆ ಹೈಕಮಾಂಡ್ ಮುಂದೆ ಇಟ್ಟಿತ್ತು. ಹೀಗಾಗಿ ಪಕ್ಷದ ಹಿತದೃಷ್ಟಿಯಿಂದ ಅಣ್ಣಾಮಲೈ ತಾವಾಗಿಯೇ ಆ ರೇಸ್‌ನಿಂದ ಹಿಂದೆ ಸರಿದು ರಾಜೀನಾಮೆ ನೀಡಿದ್ದರು. ಅವರ ನಂತರ ನಯಿನಾರ್ ನಾಗೇಂದ್ರನ್ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡರು.

ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರಿಗೆ 6 ಪ್ರಮುಖ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ನೀಡಲಾಗಿತ್ತು. ಆದರೆ, ಪಕ್ಷವು ಎಐಎಡಿಎಂಕೆ ಜೊತೆ ತೋರುತ್ತಿರುವ ಮೃದು ಧೋರಣೆಯಿಂದ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಪ್ರಮುಖವಾಗಿ ತಮ್ಮ ತಂದೆಯ ಅನಾರೋಗ್ಯದ ಕಾರಣವನ್ನು ನೀಡಿ ಅವರು ಈ ಚುನಾವಣಾ ಜವಾಬ್ದಾರಿಯಿಂದಲೂ ಅಧಿಕೃತವಾಗಿ ಮುಕ್ತಿ ಪಡೆದರು. 

ದ್ರಾವಿಡ ನಾಡಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ತಮಿಳುನಾಡಿನ ದ್ರಾವಿಡ ರಾಜಕಾರಣದ ಹಿನ್ನೆಲೆಯಲ್ಲಿ ಕೆ. ಅಣ್ಣಾಮಲೈ ಅವರ ಹಿಂದುತ್ವ ಮತ್ತು ಆಕ್ರಮಣಕಾರಿ ರಾಜಕೀಯ ಶೈಲಿಯು ವಿಫಲವಾಯಿತು ಎಂದೇ ಹೇಳಬಹುದು.

ಪೆರಿಯಾರ್, ಅಣ್ಣಾದೊರೈ ಹಾಗೂ ಕರುಣಾನಿಧಿ ಅವರಂತಹ ನಾಯಕರು ಬಿತ್ತಿದ ದ್ರಾವಿಡ ಸಿದ್ಧಾಂತ (ಪ್ರಾದೇಶಿಕ ಅಸ್ಮಿತೆ, ಸಾಮಾಜಿಕ ನ್ಯಾಯ ಮತ್ತು ತಮಿಳು ಭಾಷಾಭಿಮಾನ) ಆಳವಾಗಿ ಬೇರೂರಿರುವ ಮಣ್ಣಿನಲ್ಲಿ ಬಿಜೆಪಿಯ ಸಾಂಪ್ರದಾಯಿಕ ‘ಹಿಂದುತ್ವ’ ರಾಜಕಾರಣವನ್ನು ತರಲು ಅಣ್ಣಾಮಲೈ ಪ್ರಯತ್ನಿಸಿದರು. ಆದರೆ, ಇದು ವಿಫಲವಾಯಿತು.

ಅಣ್ಣಾಮಲೈ ಅವರು ‘ಎಣ್ ಮಣ್ಣ್ ಎಣ್ ಮಕ್ಕಳು’ ಯಾತ್ರೆಯ ಮೂಲಕ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದರೂ, ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ನಿರೀಕ್ಷಿತ ಸೀಟುಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ತಮಿಳು ಮತದಾರರು ವೈಯಕ್ತಿಕ ದೈವಭಕ್ತಿಯನ್ನು ಹೊಂದಿದ್ದರೂ, ಅದನ್ನು ರಾಜಕೀಯ ಹಿಂದುತ್ವದೊಂದಿಗೆ ಜೋಡಿಸಲು ಒಪ್ಪಲಿಲ್ಲ.

ಪೆರಿಯಾರ್ ಮತ್ತು ಅಣ್ಣಾದೊರೈ ಅವರಂತಹ ದ್ರಾವಿಡ ಸಿದ್ಧಾಂತದ ಧ್ರುವತಾರೆಗಳನ್ನು ಅಣ್ಣಾಮಲೈ ನೇರವಾಗಿ ಟೀಕಿಸಿದ್ದು ತಮಿಳು ಜನರ ಪ್ರಾದೇಶಿಕ ಹಿತಾಸಕ್ತಿಗೆ ಧಕ್ಕೆ ತಂದಂತೆ ಭಾಸವಾಯಿತು. ಇದು ಬಿಜೆಪಿಯ ಹಳೆಯ ಮಿತ್ರಪಕ್ಷವಾದ ಎಐಎಡಿಎಂಕೆ ಮೈತ್ರಿಕೂಟದಿಂದ ಹೊರನಡೆಯಲು ಕಾರಣವಾಯಿತು. 

ದೆಹಲಿ ನಾಯಕತ್ವದ ಹಿಂದಿ ಮತ್ತು ಹಿಂದುತ್ವಾದಿ ನೀತಿಗಳನ್ನು ತಮಿಳುನಾಡಿನ ಜನ ‘ಸಾಂಸ್ಕೃತಿಕ ಹೇರಿಕೆ’ ಎಂದು ಪರಿಗಣಿಸಿದರು. ಇತ್ತೀಚೆಗೆ ಸಿಬಿಎಸ್‌ಇಯ ತ್ರಿಭಾಷಾ ಸೂತ್ರವನ್ನು ಅಣ್ಣಾಮಲೈ ಅವರೇ ಸಾರ್ವಜನಿಕವಾಗಿ ವಿರೋಧಿಸಬೇಕಾಗಿ ಬಂದಿದ್ದು, ಈ ಹಿಂದುತ್ವದ ಚೌಕಟ್ಟು ದ್ರಾವಿಡ ಮಣ್ಣಿನಲ್ಲಿ ಕಾರ್ಯ ಸಾಧುವಾಗುದಿಲ್ಲ ಸಾಕ್ಷಿಯಾಗಿದೆ. 

ರಾಜಕೀಯ ವಿಶ್ಲೇಷಕರ ಪ್ರಕಾರ, ದ್ರಾವಿಡ ನಾಡಿನಲ್ಲಿ ಕೇವಲ ‘ಹಿಂದುತ್ವ’ದ ಕಾರ್ಡ್‌ ವರ್ಕೌಟ್‌ ಆಗುವುದಿಲ್ಲ ಎಂಬುದು ಮನವರಿಕೆಯಾಗಿರುವುದರಿಂದ ಅಣ್ಣಾಮಲೈ ಬಿಜೆಪಿಯಿಂದ ಹೊರಬಂದು ತಮಿಳುನಾಡಿನ ಮಣ್ಣಿಗೆ ಸರಿಹೊಂದುವ ಹೊಸದೊಂದು ಹಿಂದುತ್ವವಾದಿ ಚಳವಳಿ ಅಥವಾ ಪ್ರಾದೇಶಿಕ ರಾಜಕೀಯ ಪಕ್ಷ ಕಟ್ಟಲು ಸಜ್ಜಾಗುತ್ತಿದ್ದಾರೆ. 

 

 








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...