Homeಕರ್ನಾಟಕಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು - ಅರುಣ್ ಜೋಳದ ಕೂಡ್ಲಿಗಿ

ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ನಿಷ್ಠಾವಂತ ದಕ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಚರ್ಚೆಯಾಗುತ್ತಿದೆ. ಈ ಸಂಗತಿಯನ್ನು ಹೇಗೆ ನೋಡಬೇಕು? ಈ ಘಟನೆ ವಯಕ್ತಿಕ ನಿರ್ಧಾರವೆ ಆಗಿದ್ದರೂ, ಇದು ಹುಟ್ಟಿಸುವ ಪ್ರಶ್ನೆಗಳಾವುವು? ಈಗಿರುವ ನಿಷ್ಠಾವಂತ ಪೋಲೀಸ್ ಅಧಿಕಾರಿಗಳಲ್ಲಿ ಮೂಡಿಸಿದ ಭಾವನೆ ಯಾವುದು? ಪೊಲೀಸ್ ಇಲಾಖೆ ಸೇರಿ ದಕ್ಷ ಅಧಿಕಾರಿಯಾಗಬೇಕೆಂಬ ಕನಸು ಕಟ್ಟಿದ ಯುವಜನರ ಅಭಿಪ್ರಾಯವೇನು? ಇಂತಹ ಅಲ್ಪಸಂಖ್ಯಾತ ದಕ್ಷ ಅಧಿಕಾರಿಗಳ ಕಾರಣಕ್ಕೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟ ಜನರ ಪರ್ಯಾಯವೇನು? ಅಥವಾ ಇಂತಹ ದಕ್ಷ ಅಧಿಕಾರಿಯನ್ನು ಉಳಿಸಿಕೊಳ್ಳಬೇಕಾದ ಸಮಾಜದ ಪ್ರಾಮಾಣಿಕತೆಯು ಬ್ರಷ್ಟಗೊಂಡಿದೆಯೇ? ಎನ್ನುವಂತಹ ಪ್ರಶ್ನೆಗಳಿವೆ. ಹಾಗೆಯೇ ಪೋಲಿಸ್ ಇಲಾಖೆಯನ್ನು ಒತ್ತಡರಹಿತಗೊಳಿಸಬೇಕೆನ್ನುವ ಸಿದ್ಧ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸ್ವತಃ ಅಣ್ಣಾಮಲೈ ಬರೆದ ಪತ್ರದಲ್ಲಿ ಮಧುಕರ್ ಶೆಟ್ಟಿ ಸಾವನ್ನು ಪ್ರಸ್ತಾಪಿಸಿದ್ದಾರೆ. ಮಧುಕರ್ ಶೆಟ್ಟಿ ಬ್ರಷ್ಟಾಚಾರವನ್ನು ತೊಡೆದು ಹಾಕುವ ಖಡಕ್ ಅಧಿಕಾರಿಯಾಗಿದ್ದರು. ಅವರ ಸಾವು ಚರ್ಚಾಸ್ಪದವಾಗಿತ್ತು. ಏನಿಲ್ಲವೆಂದರೂ ಬ್ರಷ್ಟಾಚಾರ ವಿರೋಧಿ ಪ್ರಾಮಾಣಿಕ ಅವಿರತ ದುಡಿಮೆಗೂ ಅವರ ಸಾವಿಗೂ ನಂಟಿತ್ತು. ಇದು ಅಣ್ಣಾಮಲೈ ಅವರನ್ನು ಕಾಡಿರಬಹುದು. ಈ ಪತ್ರ ವ್ಯಕ್ತಿಯೊಬ್ಬರ ಬಿಡುವಿಲ್ಲದ ಸಾಮಾಜಿಕ ತೊಡಗುವಿಕೆ, ಕುಟುಂಬದ ಜತೆಗಿನ ಒಡನಾಟ, ತನ್ನದೇ ವಯಕ್ತಿಕ ಖುಷಿ ಸಂಭ್ರಮಗಳ ಕುರಿತ ಜಿಜ್ಞಾಸೆಗಳನ್ನು ಹುಟ್ಟಿಸಿದೆ. ಸಾಮಾಜಿಕ ತೊಡಗುವಿಕೆಯಲ್ಲಿ ಕುಟುಂಬದ ಆಪ್ತತೆ ಮತ್ತು ವಯಕ್ತಿಕ ಖುಷಿಗಳನ್ನು ಕಳೆದುಕೊಳ್ಳುವ `ಸಾರ್ವಜನಿಕತೆ ಮತ್ತು ವಯಕ್ತಿಕತೆಯ’ ಚರ್ಚೆಯನ್ನು ಮುನ್ನಲೆಗೆ ತಂದಿದೆ.

ಅಣ್ಣಾಮಲೈ ಅವರಂತೆ ರಾಜಿನಾಮೆ ಕೊಡದೆಯೂ, ತಮ್ಮ ಕೆಲಸದಲ್ಲಿದ್ದುಕೊಂಡೇ ಯಾವುದೇ ಒತ್ತಡಗಳನ್ನು ಮೈಮೇಲೆ ಹಾಕಿಕೊಳ್ಳದೆ ಕುಟುಂಬದ ಜೊತೆ ಆರಾಮಾಗಿವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಅವರಲ್ಲಿ ಬಹುಪಾಲು ವೃತ್ತಿ ಬದ್ಧತೆಗೆ ಬದಲಾಗಿ ಕುಟುಂಬದ ಬದ್ಧತೆ ಹೆಚ್ಚಿರುವವರು. ಇಡೀ ವ್ಯವಸ್ಥೆಯೇ ಬ್ರಷ್ಟಗೊಂಡಾಗ, ನೀನೊಬ್ಬ ಪ್ರಮಾಣಿಕನಾದರೆ ಸಮಾಜ ಬದಲಾಗುವುದೇ? ಎನ್ನುವ ಸಿನಿಕತನ ಬಹುಜನರನ್ನು ಪ್ರಭಾವಿಸಿದೆ. ಹೀಗಾಗಿ ಅನೇಕ ಅಧಿಕಾರಿ ವರ್ಗದವರು `ನನ್ನೊಬ್ಬನಿಂದ’ ಏನಾಗುವುದಿದೆ ಎಂದು ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರೆ. ಸಮಸ್ಯೆ ಇರುವುದು ಈ `ನನ್ನೊಬ್ಬನಿಂದ’ ಎನ್ನುವವರ ಸಂಖ್ಯೆಯೂ ದೊಡ್ಡದಾಗುತ್ತಿರುವುದು. ಈ ನನ್ನಂಥವರೊಬ್ಬರಿಂದಲೂ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅಣ್ಣಾಮಲೈ ತೋರಿಸಿದ್ದರು. ಹಾಗಾಗಿ ಅವರ ರಾಜಿನಾಮೆ ಅಘಾತ ತಂದಿದೆ.

ಪೊಲೀಸ್ ಇಲಾಖೆಯ ಆಚೆಗೂ ಸಮಾಜದ ಒಳಿತಿಗಾಗಿ ದುಡಿಯುವ ಬದ್ಧತೆ ಇರುವ ಯಾವುದೇ ಕ್ಷೇತ್ರದ ಕೆಲಸಗಾರರೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಸದಾ ತಿರುಗಾಡುತ್ತ ಬರೆವ ಚಿಂತಕ ಪ್ರೊ.ರಹಮತ್ ತರೀಕೆರೆ ಅವರ ಮಗಳು ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ಅಪ್ಪನ ಕುರಿತು ಸಿಡುಕಿನ ಪದ್ಯ ಬರೆದಿದ್ದಳು. ಈ ನಡುವೆ ಎರಡು ಲಕ್ಷದಷ್ಟು ಸಂಬಳ ಪಡೆದು ಕನಿಷ್ಠ ಪಾಠವನ್ನೂ ಮಾಡದೆ ಅರಾಮಾಗಿ ಕುಟುಂಬದ ಜತೆಗಿರುವ ಅದ್ಯಾಪಕರಿದ್ದಾರೆ.

ಉಸಿರುಕಟ್ಟಿಸಿ ದುಡಿಸಿಕೊಳ್ಳುವ ಕಾರ್ಪೋರೇಟ್ ವಲಯದ ನೌಕರ ವರ್ಗವೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಬಹುತೇಕ ಒಪ್ಪಂದದ ದುಡಿಮೆಯಾದ ಕಾರಣ ಅಣ್ಣಾಮಲೈ ಅವರಂತೆ ಬಿಡುಗಡೆಯೂ ಕಷ್ಟವಿದೆ. ಅಂತೆಯೇ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಬದ್ಧತೆಯ ಅವಿರತ ದುಡಿಮೆಗೂ ಕುಟುಂಬದ ಜತೆಗಿನ ಒಡನಾಟಕ್ಕೂ ನೇರ ಸಂಬಂಧವಿದೆ. ಬಹುತೇಕ ತಮ್ಮ ದುಡಿಮೆಯಲ್ಲಿ ಬದ್ಧತೆ ಕಡಿಮೆ ಮಾಡಿಕೊಂಡವರು ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬಲ್ಲರು. ಅಪವಾದವೆಂಬಂತೆ ಈ ಎರಡನ್ನೂ ಸರಿದೂಗಿಸುವವರ ಸಂಖ್ಯೆ ವಿರಳ. ಹೀಗಾಗಿ ಅಪ್ರಾಮಾಣಿಕತೆ, ಬ್ರಷ್ಟತೆ, ಸೋಮಾರಿತನ, ತನ್ನ ಕರ್ತವ್ಯದ ನಿಷ್ಠೆ ಇಲ್ಲದಿರುವಂತಹ ಗುಣಗಳಿಗೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವಿಕೆಗೂ ಸಂಬಂಧವಿದೆ. ಈ ನೆಲೆಯಲ್ಲಿ ಅಣ್ಣಾಮಲೈ ಅವರ ರಾಜಿನಾಮೆ ಸಾರ್ವಜನಿಕತೆ ಮತ್ತು ವಯಕ್ತಿಕತೆಯ ಚರ್ಚೆಗೆ ಹೊಸ ದಾರಿಗಳನ್ನು ತೆರೆದಿದೆ.

ಎಷ್ಟೋ ಜನ ಆಡಳಿತದಲ್ಲಿ ದಕ್ಷರಾಗಿದ್ದು, ಸಮಾಜದ ಬಗೆಗಿವ ದೃಷ್ಟಿಕೋನದಲ್ಲಿ ದೋಷವಿರುತ್ತದೆ. ಕಿರಣ್ ಬೇಡಿಯಂತಹ ದಕ್ಷ ಅಧಿಕಾರಿ ಕ್ರಿಮಿನಲ್ ಟ್ರೈಬ್ ಬಗೆಗೆ ಅರಣ್ಯವಾಸಿ ಬುಡಕಟ್ಟುಗಳೆಲ್ಲಾ ಕಳ್ಳರು ಎನ್ನುವ ಅರ್ಥದ ಟ್ವೀಟ್ ಮಾಡಿದ್ದರು. ಅಂತಹ ದಕ್ಷ ಅಧಿಕಾರಿಣಿಗೆ ಬುಡಕಟ್ಟುಗಳ ಬಗೆಗೆ ಮಾನವೀಯ ತಿಳಿವಿರಲಿಲ್ಲ. ಹೀಗೆ ಆಡಳಿತಗಾರರಾಗಿ ಪ್ರಾಮಾಣಿಕರಾಗಿದ್ದವರೂ, ಜಾತಿವಾದಿಯಾಗಿಯೂ, ಕೋಮುವಾದಿಯಾಗಿಯೂ, ಕಾರ್ಪೋರೇಟ್ ಪರವಾಗಿಯೂ ವಿಚಾರ ಭ್ರಷ್ಟರಾಗಿರಲಿಕ್ಕೆ ಸಾಧ್ಯವಿದೆ. ಆದರೆ ಅಣ್ಣಾಮಲೈ ಅವರ ಕೆಲವು ಮಾತು ಭಾಷಣಗಳನ್ನು ಕೇಳಿದರೆ ದಕ್ಷ ಅಧಿಕಾರಿ ಹೇಗೋ, ಸಮಾಜದ ಬಗೆಗೆ ಡೆಮಾಕ್ರಟಿಕ್ ಆದ ಜನಪರ ತಿಳಿವಿನಲ್ಲಿ ಸ್ಪಷ್ಟತೆ ಇದ್ದಂತಿದೆ. ಈ ತಿಳಿವೂ ಕೂಡ ಅವರನ್ನು ರಾಜಿನಾಮೆಗೆ ಪ್ರೇರೇಪಿಸಿರಬಹುದು. ಇದುವೆ ಅವರ ಮುಂದಿನ ದಾರಿಯನ್ನೂ ಸ್ಪಷ್ಟಗೊಳಿಸಬೇಕಿದೆ.

ಈ ಹೊತ್ತಿನ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸತ್ಯದ ಪಾಲುದಾರಿಕೆಗಿಂತ ಸುಳ್ಳಿನ ಪಾಲುದಾರಿಕೆ ಹೆಚ್ಚಿದೆ. ಅಂತೆಯೇ ಭ್ರಷ್ಟತೆಯ ಪಾಲುದಾರರೂ ಹೆಚ್ಚುತ್ತಿದ್ದಾರೆ. ಈ ಮಧ್ಯೆ ಲೋಕಕ್ಕೂ ತನಗೂ ಸಂಬಂಧವಿಲ್ಲ ಎಂದು ಮೌನಧರಿಸುವ ಆಡಳಿತ ವರ್ಗ ಮತ್ತು ಮಧ್ಯಮವರ್ಗದ ಸಜ್ಜನರ ಸಂಖ್ಯೆ ದೊಡ್ಡದಿದೆ. ಇಂತಹ ಸಜ್ಜನರ ಮೌನ ಇವೆಲ್ಲವಕ್ಕಿಂತ ಅಪಾಯಕಾರಿಯಾಗಿದೆ. ಹೀಗಾಗಿ ಅಣ್ಣಾಮಲೈ ಅವರ ರಾಜಿನಾಮೆ ಬಹುಜನರನ್ನು ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಕವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...