Homeಕರ್ನಾಟಕಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು - ಅರುಣ್ ಜೋಳದ ಕೂಡ್ಲಿಗಿ

ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ನಿಷ್ಠಾವಂತ ದಕ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಚರ್ಚೆಯಾಗುತ್ತಿದೆ. ಈ ಸಂಗತಿಯನ್ನು ಹೇಗೆ ನೋಡಬೇಕು? ಈ ಘಟನೆ ವಯಕ್ತಿಕ ನಿರ್ಧಾರವೆ ಆಗಿದ್ದರೂ, ಇದು ಹುಟ್ಟಿಸುವ ಪ್ರಶ್ನೆಗಳಾವುವು? ಈಗಿರುವ ನಿಷ್ಠಾವಂತ ಪೋಲೀಸ್ ಅಧಿಕಾರಿಗಳಲ್ಲಿ ಮೂಡಿಸಿದ ಭಾವನೆ ಯಾವುದು? ಪೊಲೀಸ್ ಇಲಾಖೆ ಸೇರಿ ದಕ್ಷ ಅಧಿಕಾರಿಯಾಗಬೇಕೆಂಬ ಕನಸು ಕಟ್ಟಿದ ಯುವಜನರ ಅಭಿಪ್ರಾಯವೇನು? ಇಂತಹ ಅಲ್ಪಸಂಖ್ಯಾತ ದಕ್ಷ ಅಧಿಕಾರಿಗಳ ಕಾರಣಕ್ಕೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟ ಜನರ ಪರ್ಯಾಯವೇನು? ಅಥವಾ ಇಂತಹ ದಕ್ಷ ಅಧಿಕಾರಿಯನ್ನು ಉಳಿಸಿಕೊಳ್ಳಬೇಕಾದ ಸಮಾಜದ ಪ್ರಾಮಾಣಿಕತೆಯು ಬ್ರಷ್ಟಗೊಂಡಿದೆಯೇ? ಎನ್ನುವಂತಹ ಪ್ರಶ್ನೆಗಳಿವೆ. ಹಾಗೆಯೇ ಪೋಲಿಸ್ ಇಲಾಖೆಯನ್ನು ಒತ್ತಡರಹಿತಗೊಳಿಸಬೇಕೆನ್ನುವ ಸಿದ್ಧ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸ್ವತಃ ಅಣ್ಣಾಮಲೈ ಬರೆದ ಪತ್ರದಲ್ಲಿ ಮಧುಕರ್ ಶೆಟ್ಟಿ ಸಾವನ್ನು ಪ್ರಸ್ತಾಪಿಸಿದ್ದಾರೆ. ಮಧುಕರ್ ಶೆಟ್ಟಿ ಬ್ರಷ್ಟಾಚಾರವನ್ನು ತೊಡೆದು ಹಾಕುವ ಖಡಕ್ ಅಧಿಕಾರಿಯಾಗಿದ್ದರು. ಅವರ ಸಾವು ಚರ್ಚಾಸ್ಪದವಾಗಿತ್ತು. ಏನಿಲ್ಲವೆಂದರೂ ಬ್ರಷ್ಟಾಚಾರ ವಿರೋಧಿ ಪ್ರಾಮಾಣಿಕ ಅವಿರತ ದುಡಿಮೆಗೂ ಅವರ ಸಾವಿಗೂ ನಂಟಿತ್ತು. ಇದು ಅಣ್ಣಾಮಲೈ ಅವರನ್ನು ಕಾಡಿರಬಹುದು. ಈ ಪತ್ರ ವ್ಯಕ್ತಿಯೊಬ್ಬರ ಬಿಡುವಿಲ್ಲದ ಸಾಮಾಜಿಕ ತೊಡಗುವಿಕೆ, ಕುಟುಂಬದ ಜತೆಗಿನ ಒಡನಾಟ, ತನ್ನದೇ ವಯಕ್ತಿಕ ಖುಷಿ ಸಂಭ್ರಮಗಳ ಕುರಿತ ಜಿಜ್ಞಾಸೆಗಳನ್ನು ಹುಟ್ಟಿಸಿದೆ. ಸಾಮಾಜಿಕ ತೊಡಗುವಿಕೆಯಲ್ಲಿ ಕುಟುಂಬದ ಆಪ್ತತೆ ಮತ್ತು ವಯಕ್ತಿಕ ಖುಷಿಗಳನ್ನು ಕಳೆದುಕೊಳ್ಳುವ `ಸಾರ್ವಜನಿಕತೆ ಮತ್ತು ವಯಕ್ತಿಕತೆಯ’ ಚರ್ಚೆಯನ್ನು ಮುನ್ನಲೆಗೆ ತಂದಿದೆ.

ಅಣ್ಣಾಮಲೈ ಅವರಂತೆ ರಾಜಿನಾಮೆ ಕೊಡದೆಯೂ, ತಮ್ಮ ಕೆಲಸದಲ್ಲಿದ್ದುಕೊಂಡೇ ಯಾವುದೇ ಒತ್ತಡಗಳನ್ನು ಮೈಮೇಲೆ ಹಾಕಿಕೊಳ್ಳದೆ ಕುಟುಂಬದ ಜೊತೆ ಆರಾಮಾಗಿವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಅವರಲ್ಲಿ ಬಹುಪಾಲು ವೃತ್ತಿ ಬದ್ಧತೆಗೆ ಬದಲಾಗಿ ಕುಟುಂಬದ ಬದ್ಧತೆ ಹೆಚ್ಚಿರುವವರು. ಇಡೀ ವ್ಯವಸ್ಥೆಯೇ ಬ್ರಷ್ಟಗೊಂಡಾಗ, ನೀನೊಬ್ಬ ಪ್ರಮಾಣಿಕನಾದರೆ ಸಮಾಜ ಬದಲಾಗುವುದೇ? ಎನ್ನುವ ಸಿನಿಕತನ ಬಹುಜನರನ್ನು ಪ್ರಭಾವಿಸಿದೆ. ಹೀಗಾಗಿ ಅನೇಕ ಅಧಿಕಾರಿ ವರ್ಗದವರು `ನನ್ನೊಬ್ಬನಿಂದ’ ಏನಾಗುವುದಿದೆ ಎಂದು ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರೆ. ಸಮಸ್ಯೆ ಇರುವುದು ಈ `ನನ್ನೊಬ್ಬನಿಂದ’ ಎನ್ನುವವರ ಸಂಖ್ಯೆಯೂ ದೊಡ್ಡದಾಗುತ್ತಿರುವುದು. ಈ ನನ್ನಂಥವರೊಬ್ಬರಿಂದಲೂ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅಣ್ಣಾಮಲೈ ತೋರಿಸಿದ್ದರು. ಹಾಗಾಗಿ ಅವರ ರಾಜಿನಾಮೆ ಅಘಾತ ತಂದಿದೆ.

ಪೊಲೀಸ್ ಇಲಾಖೆಯ ಆಚೆಗೂ ಸಮಾಜದ ಒಳಿತಿಗಾಗಿ ದುಡಿಯುವ ಬದ್ಧತೆ ಇರುವ ಯಾವುದೇ ಕ್ಷೇತ್ರದ ಕೆಲಸಗಾರರೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಸದಾ ತಿರುಗಾಡುತ್ತ ಬರೆವ ಚಿಂತಕ ಪ್ರೊ.ರಹಮತ್ ತರೀಕೆರೆ ಅವರ ಮಗಳು ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ಅಪ್ಪನ ಕುರಿತು ಸಿಡುಕಿನ ಪದ್ಯ ಬರೆದಿದ್ದಳು. ಈ ನಡುವೆ ಎರಡು ಲಕ್ಷದಷ್ಟು ಸಂಬಳ ಪಡೆದು ಕನಿಷ್ಠ ಪಾಠವನ್ನೂ ಮಾಡದೆ ಅರಾಮಾಗಿ ಕುಟುಂಬದ ಜತೆಗಿರುವ ಅದ್ಯಾಪಕರಿದ್ದಾರೆ.

ಉಸಿರುಕಟ್ಟಿಸಿ ದುಡಿಸಿಕೊಳ್ಳುವ ಕಾರ್ಪೋರೇಟ್ ವಲಯದ ನೌಕರ ವರ್ಗವೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಬಹುತೇಕ ಒಪ್ಪಂದದ ದುಡಿಮೆಯಾದ ಕಾರಣ ಅಣ್ಣಾಮಲೈ ಅವರಂತೆ ಬಿಡುಗಡೆಯೂ ಕಷ್ಟವಿದೆ. ಅಂತೆಯೇ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಬದ್ಧತೆಯ ಅವಿರತ ದುಡಿಮೆಗೂ ಕುಟುಂಬದ ಜತೆಗಿನ ಒಡನಾಟಕ್ಕೂ ನೇರ ಸಂಬಂಧವಿದೆ. ಬಹುತೇಕ ತಮ್ಮ ದುಡಿಮೆಯಲ್ಲಿ ಬದ್ಧತೆ ಕಡಿಮೆ ಮಾಡಿಕೊಂಡವರು ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬಲ್ಲರು. ಅಪವಾದವೆಂಬಂತೆ ಈ ಎರಡನ್ನೂ ಸರಿದೂಗಿಸುವವರ ಸಂಖ್ಯೆ ವಿರಳ. ಹೀಗಾಗಿ ಅಪ್ರಾಮಾಣಿಕತೆ, ಬ್ರಷ್ಟತೆ, ಸೋಮಾರಿತನ, ತನ್ನ ಕರ್ತವ್ಯದ ನಿಷ್ಠೆ ಇಲ್ಲದಿರುವಂತಹ ಗುಣಗಳಿಗೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವಿಕೆಗೂ ಸಂಬಂಧವಿದೆ. ಈ ನೆಲೆಯಲ್ಲಿ ಅಣ್ಣಾಮಲೈ ಅವರ ರಾಜಿನಾಮೆ ಸಾರ್ವಜನಿಕತೆ ಮತ್ತು ವಯಕ್ತಿಕತೆಯ ಚರ್ಚೆಗೆ ಹೊಸ ದಾರಿಗಳನ್ನು ತೆರೆದಿದೆ.

ಎಷ್ಟೋ ಜನ ಆಡಳಿತದಲ್ಲಿ ದಕ್ಷರಾಗಿದ್ದು, ಸಮಾಜದ ಬಗೆಗಿವ ದೃಷ್ಟಿಕೋನದಲ್ಲಿ ದೋಷವಿರುತ್ತದೆ. ಕಿರಣ್ ಬೇಡಿಯಂತಹ ದಕ್ಷ ಅಧಿಕಾರಿ ಕ್ರಿಮಿನಲ್ ಟ್ರೈಬ್ ಬಗೆಗೆ ಅರಣ್ಯವಾಸಿ ಬುಡಕಟ್ಟುಗಳೆಲ್ಲಾ ಕಳ್ಳರು ಎನ್ನುವ ಅರ್ಥದ ಟ್ವೀಟ್ ಮಾಡಿದ್ದರು. ಅಂತಹ ದಕ್ಷ ಅಧಿಕಾರಿಣಿಗೆ ಬುಡಕಟ್ಟುಗಳ ಬಗೆಗೆ ಮಾನವೀಯ ತಿಳಿವಿರಲಿಲ್ಲ. ಹೀಗೆ ಆಡಳಿತಗಾರರಾಗಿ ಪ್ರಾಮಾಣಿಕರಾಗಿದ್ದವರೂ, ಜಾತಿವಾದಿಯಾಗಿಯೂ, ಕೋಮುವಾದಿಯಾಗಿಯೂ, ಕಾರ್ಪೋರೇಟ್ ಪರವಾಗಿಯೂ ವಿಚಾರ ಭ್ರಷ್ಟರಾಗಿರಲಿಕ್ಕೆ ಸಾಧ್ಯವಿದೆ. ಆದರೆ ಅಣ್ಣಾಮಲೈ ಅವರ ಕೆಲವು ಮಾತು ಭಾಷಣಗಳನ್ನು ಕೇಳಿದರೆ ದಕ್ಷ ಅಧಿಕಾರಿ ಹೇಗೋ, ಸಮಾಜದ ಬಗೆಗೆ ಡೆಮಾಕ್ರಟಿಕ್ ಆದ ಜನಪರ ತಿಳಿವಿನಲ್ಲಿ ಸ್ಪಷ್ಟತೆ ಇದ್ದಂತಿದೆ. ಈ ತಿಳಿವೂ ಕೂಡ ಅವರನ್ನು ರಾಜಿನಾಮೆಗೆ ಪ್ರೇರೇಪಿಸಿರಬಹುದು. ಇದುವೆ ಅವರ ಮುಂದಿನ ದಾರಿಯನ್ನೂ ಸ್ಪಷ್ಟಗೊಳಿಸಬೇಕಿದೆ.

ಈ ಹೊತ್ತಿನ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸತ್ಯದ ಪಾಲುದಾರಿಕೆಗಿಂತ ಸುಳ್ಳಿನ ಪಾಲುದಾರಿಕೆ ಹೆಚ್ಚಿದೆ. ಅಂತೆಯೇ ಭ್ರಷ್ಟತೆಯ ಪಾಲುದಾರರೂ ಹೆಚ್ಚುತ್ತಿದ್ದಾರೆ. ಈ ಮಧ್ಯೆ ಲೋಕಕ್ಕೂ ತನಗೂ ಸಂಬಂಧವಿಲ್ಲ ಎಂದು ಮೌನಧರಿಸುವ ಆಡಳಿತ ವರ್ಗ ಮತ್ತು ಮಧ್ಯಮವರ್ಗದ ಸಜ್ಜನರ ಸಂಖ್ಯೆ ದೊಡ್ಡದಿದೆ. ಇಂತಹ ಸಜ್ಜನರ ಮೌನ ಇವೆಲ್ಲವಕ್ಕಿಂತ ಅಪಾಯಕಾರಿಯಾಗಿದೆ. ಹೀಗಾಗಿ ಅಣ್ಣಾಮಲೈ ಅವರ ರಾಜಿನಾಮೆ ಬಹುಜನರನ್ನು ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಕವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...