Homeಕರ್ನಾಟಕಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು - ಅರುಣ್ ಜೋಳದ ಕೂಡ್ಲಿಗಿ

ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ನಿಷ್ಠಾವಂತ ದಕ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಚರ್ಚೆಯಾಗುತ್ತಿದೆ. ಈ ಸಂಗತಿಯನ್ನು ಹೇಗೆ ನೋಡಬೇಕು? ಈ ಘಟನೆ ವಯಕ್ತಿಕ ನಿರ್ಧಾರವೆ ಆಗಿದ್ದರೂ, ಇದು ಹುಟ್ಟಿಸುವ ಪ್ರಶ್ನೆಗಳಾವುವು? ಈಗಿರುವ ನಿಷ್ಠಾವಂತ ಪೋಲೀಸ್ ಅಧಿಕಾರಿಗಳಲ್ಲಿ ಮೂಡಿಸಿದ ಭಾವನೆ ಯಾವುದು? ಪೊಲೀಸ್ ಇಲಾಖೆ ಸೇರಿ ದಕ್ಷ ಅಧಿಕಾರಿಯಾಗಬೇಕೆಂಬ ಕನಸು ಕಟ್ಟಿದ ಯುವಜನರ ಅಭಿಪ್ರಾಯವೇನು? ಇಂತಹ ಅಲ್ಪಸಂಖ್ಯಾತ ದಕ್ಷ ಅಧಿಕಾರಿಗಳ ಕಾರಣಕ್ಕೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟ ಜನರ ಪರ್ಯಾಯವೇನು? ಅಥವಾ ಇಂತಹ ದಕ್ಷ ಅಧಿಕಾರಿಯನ್ನು ಉಳಿಸಿಕೊಳ್ಳಬೇಕಾದ ಸಮಾಜದ ಪ್ರಾಮಾಣಿಕತೆಯು ಬ್ರಷ್ಟಗೊಂಡಿದೆಯೇ? ಎನ್ನುವಂತಹ ಪ್ರಶ್ನೆಗಳಿವೆ. ಹಾಗೆಯೇ ಪೋಲಿಸ್ ಇಲಾಖೆಯನ್ನು ಒತ್ತಡರಹಿತಗೊಳಿಸಬೇಕೆನ್ನುವ ಸಿದ್ಧ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸ್ವತಃ ಅಣ್ಣಾಮಲೈ ಬರೆದ ಪತ್ರದಲ್ಲಿ ಮಧುಕರ್ ಶೆಟ್ಟಿ ಸಾವನ್ನು ಪ್ರಸ್ತಾಪಿಸಿದ್ದಾರೆ. ಮಧುಕರ್ ಶೆಟ್ಟಿ ಬ್ರಷ್ಟಾಚಾರವನ್ನು ತೊಡೆದು ಹಾಕುವ ಖಡಕ್ ಅಧಿಕಾರಿಯಾಗಿದ್ದರು. ಅವರ ಸಾವು ಚರ್ಚಾಸ್ಪದವಾಗಿತ್ತು. ಏನಿಲ್ಲವೆಂದರೂ ಬ್ರಷ್ಟಾಚಾರ ವಿರೋಧಿ ಪ್ರಾಮಾಣಿಕ ಅವಿರತ ದುಡಿಮೆಗೂ ಅವರ ಸಾವಿಗೂ ನಂಟಿತ್ತು. ಇದು ಅಣ್ಣಾಮಲೈ ಅವರನ್ನು ಕಾಡಿರಬಹುದು. ಈ ಪತ್ರ ವ್ಯಕ್ತಿಯೊಬ್ಬರ ಬಿಡುವಿಲ್ಲದ ಸಾಮಾಜಿಕ ತೊಡಗುವಿಕೆ, ಕುಟುಂಬದ ಜತೆಗಿನ ಒಡನಾಟ, ತನ್ನದೇ ವಯಕ್ತಿಕ ಖುಷಿ ಸಂಭ್ರಮಗಳ ಕುರಿತ ಜಿಜ್ಞಾಸೆಗಳನ್ನು ಹುಟ್ಟಿಸಿದೆ. ಸಾಮಾಜಿಕ ತೊಡಗುವಿಕೆಯಲ್ಲಿ ಕುಟುಂಬದ ಆಪ್ತತೆ ಮತ್ತು ವಯಕ್ತಿಕ ಖುಷಿಗಳನ್ನು ಕಳೆದುಕೊಳ್ಳುವ `ಸಾರ್ವಜನಿಕತೆ ಮತ್ತು ವಯಕ್ತಿಕತೆಯ’ ಚರ್ಚೆಯನ್ನು ಮುನ್ನಲೆಗೆ ತಂದಿದೆ.

ಅಣ್ಣಾಮಲೈ ಅವರಂತೆ ರಾಜಿನಾಮೆ ಕೊಡದೆಯೂ, ತಮ್ಮ ಕೆಲಸದಲ್ಲಿದ್ದುಕೊಂಡೇ ಯಾವುದೇ ಒತ್ತಡಗಳನ್ನು ಮೈಮೇಲೆ ಹಾಕಿಕೊಳ್ಳದೆ ಕುಟುಂಬದ ಜೊತೆ ಆರಾಮಾಗಿವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಅವರಲ್ಲಿ ಬಹುಪಾಲು ವೃತ್ತಿ ಬದ್ಧತೆಗೆ ಬದಲಾಗಿ ಕುಟುಂಬದ ಬದ್ಧತೆ ಹೆಚ್ಚಿರುವವರು. ಇಡೀ ವ್ಯವಸ್ಥೆಯೇ ಬ್ರಷ್ಟಗೊಂಡಾಗ, ನೀನೊಬ್ಬ ಪ್ರಮಾಣಿಕನಾದರೆ ಸಮಾಜ ಬದಲಾಗುವುದೇ? ಎನ್ನುವ ಸಿನಿಕತನ ಬಹುಜನರನ್ನು ಪ್ರಭಾವಿಸಿದೆ. ಹೀಗಾಗಿ ಅನೇಕ ಅಧಿಕಾರಿ ವರ್ಗದವರು `ನನ್ನೊಬ್ಬನಿಂದ’ ಏನಾಗುವುದಿದೆ ಎಂದು ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರೆ. ಸಮಸ್ಯೆ ಇರುವುದು ಈ `ನನ್ನೊಬ್ಬನಿಂದ’ ಎನ್ನುವವರ ಸಂಖ್ಯೆಯೂ ದೊಡ್ಡದಾಗುತ್ತಿರುವುದು. ಈ ನನ್ನಂಥವರೊಬ್ಬರಿಂದಲೂ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅಣ್ಣಾಮಲೈ ತೋರಿಸಿದ್ದರು. ಹಾಗಾಗಿ ಅವರ ರಾಜಿನಾಮೆ ಅಘಾತ ತಂದಿದೆ.

ಪೊಲೀಸ್ ಇಲಾಖೆಯ ಆಚೆಗೂ ಸಮಾಜದ ಒಳಿತಿಗಾಗಿ ದುಡಿಯುವ ಬದ್ಧತೆ ಇರುವ ಯಾವುದೇ ಕ್ಷೇತ್ರದ ಕೆಲಸಗಾರರೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಸದಾ ತಿರುಗಾಡುತ್ತ ಬರೆವ ಚಿಂತಕ ಪ್ರೊ.ರಹಮತ್ ತರೀಕೆರೆ ಅವರ ಮಗಳು ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ಅಪ್ಪನ ಕುರಿತು ಸಿಡುಕಿನ ಪದ್ಯ ಬರೆದಿದ್ದಳು. ಈ ನಡುವೆ ಎರಡು ಲಕ್ಷದಷ್ಟು ಸಂಬಳ ಪಡೆದು ಕನಿಷ್ಠ ಪಾಠವನ್ನೂ ಮಾಡದೆ ಅರಾಮಾಗಿ ಕುಟುಂಬದ ಜತೆಗಿರುವ ಅದ್ಯಾಪಕರಿದ್ದಾರೆ.

ಉಸಿರುಕಟ್ಟಿಸಿ ದುಡಿಸಿಕೊಳ್ಳುವ ಕಾರ್ಪೋರೇಟ್ ವಲಯದ ನೌಕರ ವರ್ಗವೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಬಹುತೇಕ ಒಪ್ಪಂದದ ದುಡಿಮೆಯಾದ ಕಾರಣ ಅಣ್ಣಾಮಲೈ ಅವರಂತೆ ಬಿಡುಗಡೆಯೂ ಕಷ್ಟವಿದೆ. ಅಂತೆಯೇ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಬದ್ಧತೆಯ ಅವಿರತ ದುಡಿಮೆಗೂ ಕುಟುಂಬದ ಜತೆಗಿನ ಒಡನಾಟಕ್ಕೂ ನೇರ ಸಂಬಂಧವಿದೆ. ಬಹುತೇಕ ತಮ್ಮ ದುಡಿಮೆಯಲ್ಲಿ ಬದ್ಧತೆ ಕಡಿಮೆ ಮಾಡಿಕೊಂಡವರು ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬಲ್ಲರು. ಅಪವಾದವೆಂಬಂತೆ ಈ ಎರಡನ್ನೂ ಸರಿದೂಗಿಸುವವರ ಸಂಖ್ಯೆ ವಿರಳ. ಹೀಗಾಗಿ ಅಪ್ರಾಮಾಣಿಕತೆ, ಬ್ರಷ್ಟತೆ, ಸೋಮಾರಿತನ, ತನ್ನ ಕರ್ತವ್ಯದ ನಿಷ್ಠೆ ಇಲ್ಲದಿರುವಂತಹ ಗುಣಗಳಿಗೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವಿಕೆಗೂ ಸಂಬಂಧವಿದೆ. ಈ ನೆಲೆಯಲ್ಲಿ ಅಣ್ಣಾಮಲೈ ಅವರ ರಾಜಿನಾಮೆ ಸಾರ್ವಜನಿಕತೆ ಮತ್ತು ವಯಕ್ತಿಕತೆಯ ಚರ್ಚೆಗೆ ಹೊಸ ದಾರಿಗಳನ್ನು ತೆರೆದಿದೆ.

ಎಷ್ಟೋ ಜನ ಆಡಳಿತದಲ್ಲಿ ದಕ್ಷರಾಗಿದ್ದು, ಸಮಾಜದ ಬಗೆಗಿವ ದೃಷ್ಟಿಕೋನದಲ್ಲಿ ದೋಷವಿರುತ್ತದೆ. ಕಿರಣ್ ಬೇಡಿಯಂತಹ ದಕ್ಷ ಅಧಿಕಾರಿ ಕ್ರಿಮಿನಲ್ ಟ್ರೈಬ್ ಬಗೆಗೆ ಅರಣ್ಯವಾಸಿ ಬುಡಕಟ್ಟುಗಳೆಲ್ಲಾ ಕಳ್ಳರು ಎನ್ನುವ ಅರ್ಥದ ಟ್ವೀಟ್ ಮಾಡಿದ್ದರು. ಅಂತಹ ದಕ್ಷ ಅಧಿಕಾರಿಣಿಗೆ ಬುಡಕಟ್ಟುಗಳ ಬಗೆಗೆ ಮಾನವೀಯ ತಿಳಿವಿರಲಿಲ್ಲ. ಹೀಗೆ ಆಡಳಿತಗಾರರಾಗಿ ಪ್ರಾಮಾಣಿಕರಾಗಿದ್ದವರೂ, ಜಾತಿವಾದಿಯಾಗಿಯೂ, ಕೋಮುವಾದಿಯಾಗಿಯೂ, ಕಾರ್ಪೋರೇಟ್ ಪರವಾಗಿಯೂ ವಿಚಾರ ಭ್ರಷ್ಟರಾಗಿರಲಿಕ್ಕೆ ಸಾಧ್ಯವಿದೆ. ಆದರೆ ಅಣ್ಣಾಮಲೈ ಅವರ ಕೆಲವು ಮಾತು ಭಾಷಣಗಳನ್ನು ಕೇಳಿದರೆ ದಕ್ಷ ಅಧಿಕಾರಿ ಹೇಗೋ, ಸಮಾಜದ ಬಗೆಗೆ ಡೆಮಾಕ್ರಟಿಕ್ ಆದ ಜನಪರ ತಿಳಿವಿನಲ್ಲಿ ಸ್ಪಷ್ಟತೆ ಇದ್ದಂತಿದೆ. ಈ ತಿಳಿವೂ ಕೂಡ ಅವರನ್ನು ರಾಜಿನಾಮೆಗೆ ಪ್ರೇರೇಪಿಸಿರಬಹುದು. ಇದುವೆ ಅವರ ಮುಂದಿನ ದಾರಿಯನ್ನೂ ಸ್ಪಷ್ಟಗೊಳಿಸಬೇಕಿದೆ.

ಈ ಹೊತ್ತಿನ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸತ್ಯದ ಪಾಲುದಾರಿಕೆಗಿಂತ ಸುಳ್ಳಿನ ಪಾಲುದಾರಿಕೆ ಹೆಚ್ಚಿದೆ. ಅಂತೆಯೇ ಭ್ರಷ್ಟತೆಯ ಪಾಲುದಾರರೂ ಹೆಚ್ಚುತ್ತಿದ್ದಾರೆ. ಈ ಮಧ್ಯೆ ಲೋಕಕ್ಕೂ ತನಗೂ ಸಂಬಂಧವಿಲ್ಲ ಎಂದು ಮೌನಧರಿಸುವ ಆಡಳಿತ ವರ್ಗ ಮತ್ತು ಮಧ್ಯಮವರ್ಗದ ಸಜ್ಜನರ ಸಂಖ್ಯೆ ದೊಡ್ಡದಿದೆ. ಇಂತಹ ಸಜ್ಜನರ ಮೌನ ಇವೆಲ್ಲವಕ್ಕಿಂತ ಅಪಾಯಕಾರಿಯಾಗಿದೆ. ಹೀಗಾಗಿ ಅಣ್ಣಾಮಲೈ ಅವರ ರಾಜಿನಾಮೆ ಬಹುಜನರನ್ನು ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಕವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...