Homeಕರ್ನಾಟಕಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು - ಅರುಣ್ ಜೋಳದ ಕೂಡ್ಲಿಗಿ

ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ನಿಷ್ಠಾವಂತ ದಕ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಚರ್ಚೆಯಾಗುತ್ತಿದೆ. ಈ ಸಂಗತಿಯನ್ನು ಹೇಗೆ ನೋಡಬೇಕು? ಈ ಘಟನೆ ವಯಕ್ತಿಕ ನಿರ್ಧಾರವೆ ಆಗಿದ್ದರೂ, ಇದು ಹುಟ್ಟಿಸುವ ಪ್ರಶ್ನೆಗಳಾವುವು? ಈಗಿರುವ ನಿಷ್ಠಾವಂತ ಪೋಲೀಸ್ ಅಧಿಕಾರಿಗಳಲ್ಲಿ ಮೂಡಿಸಿದ ಭಾವನೆ ಯಾವುದು? ಪೊಲೀಸ್ ಇಲಾಖೆ ಸೇರಿ ದಕ್ಷ ಅಧಿಕಾರಿಯಾಗಬೇಕೆಂಬ ಕನಸು ಕಟ್ಟಿದ ಯುವಜನರ ಅಭಿಪ್ರಾಯವೇನು? ಇಂತಹ ಅಲ್ಪಸಂಖ್ಯಾತ ದಕ್ಷ ಅಧಿಕಾರಿಗಳ ಕಾರಣಕ್ಕೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟ ಜನರ ಪರ್ಯಾಯವೇನು? ಅಥವಾ ಇಂತಹ ದಕ್ಷ ಅಧಿಕಾರಿಯನ್ನು ಉಳಿಸಿಕೊಳ್ಳಬೇಕಾದ ಸಮಾಜದ ಪ್ರಾಮಾಣಿಕತೆಯು ಬ್ರಷ್ಟಗೊಂಡಿದೆಯೇ? ಎನ್ನುವಂತಹ ಪ್ರಶ್ನೆಗಳಿವೆ. ಹಾಗೆಯೇ ಪೋಲಿಸ್ ಇಲಾಖೆಯನ್ನು ಒತ್ತಡರಹಿತಗೊಳಿಸಬೇಕೆನ್ನುವ ಸಿದ್ಧ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸ್ವತಃ ಅಣ್ಣಾಮಲೈ ಬರೆದ ಪತ್ರದಲ್ಲಿ ಮಧುಕರ್ ಶೆಟ್ಟಿ ಸಾವನ್ನು ಪ್ರಸ್ತಾಪಿಸಿದ್ದಾರೆ. ಮಧುಕರ್ ಶೆಟ್ಟಿ ಬ್ರಷ್ಟಾಚಾರವನ್ನು ತೊಡೆದು ಹಾಕುವ ಖಡಕ್ ಅಧಿಕಾರಿಯಾಗಿದ್ದರು. ಅವರ ಸಾವು ಚರ್ಚಾಸ್ಪದವಾಗಿತ್ತು. ಏನಿಲ್ಲವೆಂದರೂ ಬ್ರಷ್ಟಾಚಾರ ವಿರೋಧಿ ಪ್ರಾಮಾಣಿಕ ಅವಿರತ ದುಡಿಮೆಗೂ ಅವರ ಸಾವಿಗೂ ನಂಟಿತ್ತು. ಇದು ಅಣ್ಣಾಮಲೈ ಅವರನ್ನು ಕಾಡಿರಬಹುದು. ಈ ಪತ್ರ ವ್ಯಕ್ತಿಯೊಬ್ಬರ ಬಿಡುವಿಲ್ಲದ ಸಾಮಾಜಿಕ ತೊಡಗುವಿಕೆ, ಕುಟುಂಬದ ಜತೆಗಿನ ಒಡನಾಟ, ತನ್ನದೇ ವಯಕ್ತಿಕ ಖುಷಿ ಸಂಭ್ರಮಗಳ ಕುರಿತ ಜಿಜ್ಞಾಸೆಗಳನ್ನು ಹುಟ್ಟಿಸಿದೆ. ಸಾಮಾಜಿಕ ತೊಡಗುವಿಕೆಯಲ್ಲಿ ಕುಟುಂಬದ ಆಪ್ತತೆ ಮತ್ತು ವಯಕ್ತಿಕ ಖುಷಿಗಳನ್ನು ಕಳೆದುಕೊಳ್ಳುವ `ಸಾರ್ವಜನಿಕತೆ ಮತ್ತು ವಯಕ್ತಿಕತೆಯ’ ಚರ್ಚೆಯನ್ನು ಮುನ್ನಲೆಗೆ ತಂದಿದೆ.

ಅಣ್ಣಾಮಲೈ ಅವರಂತೆ ರಾಜಿನಾಮೆ ಕೊಡದೆಯೂ, ತಮ್ಮ ಕೆಲಸದಲ್ಲಿದ್ದುಕೊಂಡೇ ಯಾವುದೇ ಒತ್ತಡಗಳನ್ನು ಮೈಮೇಲೆ ಹಾಕಿಕೊಳ್ಳದೆ ಕುಟುಂಬದ ಜೊತೆ ಆರಾಮಾಗಿವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಅವರಲ್ಲಿ ಬಹುಪಾಲು ವೃತ್ತಿ ಬದ್ಧತೆಗೆ ಬದಲಾಗಿ ಕುಟುಂಬದ ಬದ್ಧತೆ ಹೆಚ್ಚಿರುವವರು. ಇಡೀ ವ್ಯವಸ್ಥೆಯೇ ಬ್ರಷ್ಟಗೊಂಡಾಗ, ನೀನೊಬ್ಬ ಪ್ರಮಾಣಿಕನಾದರೆ ಸಮಾಜ ಬದಲಾಗುವುದೇ? ಎನ್ನುವ ಸಿನಿಕತನ ಬಹುಜನರನ್ನು ಪ್ರಭಾವಿಸಿದೆ. ಹೀಗಾಗಿ ಅನೇಕ ಅಧಿಕಾರಿ ವರ್ಗದವರು `ನನ್ನೊಬ್ಬನಿಂದ’ ಏನಾಗುವುದಿದೆ ಎಂದು ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರೆ. ಸಮಸ್ಯೆ ಇರುವುದು ಈ `ನನ್ನೊಬ್ಬನಿಂದ’ ಎನ್ನುವವರ ಸಂಖ್ಯೆಯೂ ದೊಡ್ಡದಾಗುತ್ತಿರುವುದು. ಈ ನನ್ನಂಥವರೊಬ್ಬರಿಂದಲೂ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅಣ್ಣಾಮಲೈ ತೋರಿಸಿದ್ದರು. ಹಾಗಾಗಿ ಅವರ ರಾಜಿನಾಮೆ ಅಘಾತ ತಂದಿದೆ.

ಪೊಲೀಸ್ ಇಲಾಖೆಯ ಆಚೆಗೂ ಸಮಾಜದ ಒಳಿತಿಗಾಗಿ ದುಡಿಯುವ ಬದ್ಧತೆ ಇರುವ ಯಾವುದೇ ಕ್ಷೇತ್ರದ ಕೆಲಸಗಾರರೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಸದಾ ತಿರುಗಾಡುತ್ತ ಬರೆವ ಚಿಂತಕ ಪ್ರೊ.ರಹಮತ್ ತರೀಕೆರೆ ಅವರ ಮಗಳು ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ಅಪ್ಪನ ಕುರಿತು ಸಿಡುಕಿನ ಪದ್ಯ ಬರೆದಿದ್ದಳು. ಈ ನಡುವೆ ಎರಡು ಲಕ್ಷದಷ್ಟು ಸಂಬಳ ಪಡೆದು ಕನಿಷ್ಠ ಪಾಠವನ್ನೂ ಮಾಡದೆ ಅರಾಮಾಗಿ ಕುಟುಂಬದ ಜತೆಗಿರುವ ಅದ್ಯಾಪಕರಿದ್ದಾರೆ.

ಉಸಿರುಕಟ್ಟಿಸಿ ದುಡಿಸಿಕೊಳ್ಳುವ ಕಾರ್ಪೋರೇಟ್ ವಲಯದ ನೌಕರ ವರ್ಗವೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಬಹುತೇಕ ಒಪ್ಪಂದದ ದುಡಿಮೆಯಾದ ಕಾರಣ ಅಣ್ಣಾಮಲೈ ಅವರಂತೆ ಬಿಡುಗಡೆಯೂ ಕಷ್ಟವಿದೆ. ಅಂತೆಯೇ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಬದ್ಧತೆಯ ಅವಿರತ ದುಡಿಮೆಗೂ ಕುಟುಂಬದ ಜತೆಗಿನ ಒಡನಾಟಕ್ಕೂ ನೇರ ಸಂಬಂಧವಿದೆ. ಬಹುತೇಕ ತಮ್ಮ ದುಡಿಮೆಯಲ್ಲಿ ಬದ್ಧತೆ ಕಡಿಮೆ ಮಾಡಿಕೊಂಡವರು ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬಲ್ಲರು. ಅಪವಾದವೆಂಬಂತೆ ಈ ಎರಡನ್ನೂ ಸರಿದೂಗಿಸುವವರ ಸಂಖ್ಯೆ ವಿರಳ. ಹೀಗಾಗಿ ಅಪ್ರಾಮಾಣಿಕತೆ, ಬ್ರಷ್ಟತೆ, ಸೋಮಾರಿತನ, ತನ್ನ ಕರ್ತವ್ಯದ ನಿಷ್ಠೆ ಇಲ್ಲದಿರುವಂತಹ ಗುಣಗಳಿಗೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವಿಕೆಗೂ ಸಂಬಂಧವಿದೆ. ಈ ನೆಲೆಯಲ್ಲಿ ಅಣ್ಣಾಮಲೈ ಅವರ ರಾಜಿನಾಮೆ ಸಾರ್ವಜನಿಕತೆ ಮತ್ತು ವಯಕ್ತಿಕತೆಯ ಚರ್ಚೆಗೆ ಹೊಸ ದಾರಿಗಳನ್ನು ತೆರೆದಿದೆ.

ಎಷ್ಟೋ ಜನ ಆಡಳಿತದಲ್ಲಿ ದಕ್ಷರಾಗಿದ್ದು, ಸಮಾಜದ ಬಗೆಗಿವ ದೃಷ್ಟಿಕೋನದಲ್ಲಿ ದೋಷವಿರುತ್ತದೆ. ಕಿರಣ್ ಬೇಡಿಯಂತಹ ದಕ್ಷ ಅಧಿಕಾರಿ ಕ್ರಿಮಿನಲ್ ಟ್ರೈಬ್ ಬಗೆಗೆ ಅರಣ್ಯವಾಸಿ ಬುಡಕಟ್ಟುಗಳೆಲ್ಲಾ ಕಳ್ಳರು ಎನ್ನುವ ಅರ್ಥದ ಟ್ವೀಟ್ ಮಾಡಿದ್ದರು. ಅಂತಹ ದಕ್ಷ ಅಧಿಕಾರಿಣಿಗೆ ಬುಡಕಟ್ಟುಗಳ ಬಗೆಗೆ ಮಾನವೀಯ ತಿಳಿವಿರಲಿಲ್ಲ. ಹೀಗೆ ಆಡಳಿತಗಾರರಾಗಿ ಪ್ರಾಮಾಣಿಕರಾಗಿದ್ದವರೂ, ಜಾತಿವಾದಿಯಾಗಿಯೂ, ಕೋಮುವಾದಿಯಾಗಿಯೂ, ಕಾರ್ಪೋರೇಟ್ ಪರವಾಗಿಯೂ ವಿಚಾರ ಭ್ರಷ್ಟರಾಗಿರಲಿಕ್ಕೆ ಸಾಧ್ಯವಿದೆ. ಆದರೆ ಅಣ್ಣಾಮಲೈ ಅವರ ಕೆಲವು ಮಾತು ಭಾಷಣಗಳನ್ನು ಕೇಳಿದರೆ ದಕ್ಷ ಅಧಿಕಾರಿ ಹೇಗೋ, ಸಮಾಜದ ಬಗೆಗೆ ಡೆಮಾಕ್ರಟಿಕ್ ಆದ ಜನಪರ ತಿಳಿವಿನಲ್ಲಿ ಸ್ಪಷ್ಟತೆ ಇದ್ದಂತಿದೆ. ಈ ತಿಳಿವೂ ಕೂಡ ಅವರನ್ನು ರಾಜಿನಾಮೆಗೆ ಪ್ರೇರೇಪಿಸಿರಬಹುದು. ಇದುವೆ ಅವರ ಮುಂದಿನ ದಾರಿಯನ್ನೂ ಸ್ಪಷ್ಟಗೊಳಿಸಬೇಕಿದೆ.

ಈ ಹೊತ್ತಿನ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸತ್ಯದ ಪಾಲುದಾರಿಕೆಗಿಂತ ಸುಳ್ಳಿನ ಪಾಲುದಾರಿಕೆ ಹೆಚ್ಚಿದೆ. ಅಂತೆಯೇ ಭ್ರಷ್ಟತೆಯ ಪಾಲುದಾರರೂ ಹೆಚ್ಚುತ್ತಿದ್ದಾರೆ. ಈ ಮಧ್ಯೆ ಲೋಕಕ್ಕೂ ತನಗೂ ಸಂಬಂಧವಿಲ್ಲ ಎಂದು ಮೌನಧರಿಸುವ ಆಡಳಿತ ವರ್ಗ ಮತ್ತು ಮಧ್ಯಮವರ್ಗದ ಸಜ್ಜನರ ಸಂಖ್ಯೆ ದೊಡ್ಡದಿದೆ. ಇಂತಹ ಸಜ್ಜನರ ಮೌನ ಇವೆಲ್ಲವಕ್ಕಿಂತ ಅಪಾಯಕಾರಿಯಾಗಿದೆ. ಹೀಗಾಗಿ ಅಣ್ಣಾಮಲೈ ಅವರ ರಾಜಿನಾಮೆ ಬಹುಜನರನ್ನು ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಕವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...