Homeಕರ್ನಾಟಕಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು - ಅರುಣ್ ಜೋಳದ ಕೂಡ್ಲಿಗಿ

ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ನಿಷ್ಠಾವಂತ ದಕ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಚರ್ಚೆಯಾಗುತ್ತಿದೆ. ಈ ಸಂಗತಿಯನ್ನು ಹೇಗೆ ನೋಡಬೇಕು? ಈ ಘಟನೆ ವಯಕ್ತಿಕ ನಿರ್ಧಾರವೆ ಆಗಿದ್ದರೂ, ಇದು ಹುಟ್ಟಿಸುವ ಪ್ರಶ್ನೆಗಳಾವುವು? ಈಗಿರುವ ನಿಷ್ಠಾವಂತ ಪೋಲೀಸ್ ಅಧಿಕಾರಿಗಳಲ್ಲಿ ಮೂಡಿಸಿದ ಭಾವನೆ ಯಾವುದು? ಪೊಲೀಸ್ ಇಲಾಖೆ ಸೇರಿ ದಕ್ಷ ಅಧಿಕಾರಿಯಾಗಬೇಕೆಂಬ ಕನಸು ಕಟ್ಟಿದ ಯುವಜನರ ಅಭಿಪ್ರಾಯವೇನು? ಇಂತಹ ಅಲ್ಪಸಂಖ್ಯಾತ ದಕ್ಷ ಅಧಿಕಾರಿಗಳ ಕಾರಣಕ್ಕೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟ ಜನರ ಪರ್ಯಾಯವೇನು? ಅಥವಾ ಇಂತಹ ದಕ್ಷ ಅಧಿಕಾರಿಯನ್ನು ಉಳಿಸಿಕೊಳ್ಳಬೇಕಾದ ಸಮಾಜದ ಪ್ರಾಮಾಣಿಕತೆಯು ಬ್ರಷ್ಟಗೊಂಡಿದೆಯೇ? ಎನ್ನುವಂತಹ ಪ್ರಶ್ನೆಗಳಿವೆ. ಹಾಗೆಯೇ ಪೋಲಿಸ್ ಇಲಾಖೆಯನ್ನು ಒತ್ತಡರಹಿತಗೊಳಿಸಬೇಕೆನ್ನುವ ಸಿದ್ಧ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸ್ವತಃ ಅಣ್ಣಾಮಲೈ ಬರೆದ ಪತ್ರದಲ್ಲಿ ಮಧುಕರ್ ಶೆಟ್ಟಿ ಸಾವನ್ನು ಪ್ರಸ್ತಾಪಿಸಿದ್ದಾರೆ. ಮಧುಕರ್ ಶೆಟ್ಟಿ ಬ್ರಷ್ಟಾಚಾರವನ್ನು ತೊಡೆದು ಹಾಕುವ ಖಡಕ್ ಅಧಿಕಾರಿಯಾಗಿದ್ದರು. ಅವರ ಸಾವು ಚರ್ಚಾಸ್ಪದವಾಗಿತ್ತು. ಏನಿಲ್ಲವೆಂದರೂ ಬ್ರಷ್ಟಾಚಾರ ವಿರೋಧಿ ಪ್ರಾಮಾಣಿಕ ಅವಿರತ ದುಡಿಮೆಗೂ ಅವರ ಸಾವಿಗೂ ನಂಟಿತ್ತು. ಇದು ಅಣ್ಣಾಮಲೈ ಅವರನ್ನು ಕಾಡಿರಬಹುದು. ಈ ಪತ್ರ ವ್ಯಕ್ತಿಯೊಬ್ಬರ ಬಿಡುವಿಲ್ಲದ ಸಾಮಾಜಿಕ ತೊಡಗುವಿಕೆ, ಕುಟುಂಬದ ಜತೆಗಿನ ಒಡನಾಟ, ತನ್ನದೇ ವಯಕ್ತಿಕ ಖುಷಿ ಸಂಭ್ರಮಗಳ ಕುರಿತ ಜಿಜ್ಞಾಸೆಗಳನ್ನು ಹುಟ್ಟಿಸಿದೆ. ಸಾಮಾಜಿಕ ತೊಡಗುವಿಕೆಯಲ್ಲಿ ಕುಟುಂಬದ ಆಪ್ತತೆ ಮತ್ತು ವಯಕ್ತಿಕ ಖುಷಿಗಳನ್ನು ಕಳೆದುಕೊಳ್ಳುವ `ಸಾರ್ವಜನಿಕತೆ ಮತ್ತು ವಯಕ್ತಿಕತೆಯ’ ಚರ್ಚೆಯನ್ನು ಮುನ್ನಲೆಗೆ ತಂದಿದೆ.

ಅಣ್ಣಾಮಲೈ ಅವರಂತೆ ರಾಜಿನಾಮೆ ಕೊಡದೆಯೂ, ತಮ್ಮ ಕೆಲಸದಲ್ಲಿದ್ದುಕೊಂಡೇ ಯಾವುದೇ ಒತ್ತಡಗಳನ್ನು ಮೈಮೇಲೆ ಹಾಕಿಕೊಳ್ಳದೆ ಕುಟುಂಬದ ಜೊತೆ ಆರಾಮಾಗಿವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಅವರಲ್ಲಿ ಬಹುಪಾಲು ವೃತ್ತಿ ಬದ್ಧತೆಗೆ ಬದಲಾಗಿ ಕುಟುಂಬದ ಬದ್ಧತೆ ಹೆಚ್ಚಿರುವವರು. ಇಡೀ ವ್ಯವಸ್ಥೆಯೇ ಬ್ರಷ್ಟಗೊಂಡಾಗ, ನೀನೊಬ್ಬ ಪ್ರಮಾಣಿಕನಾದರೆ ಸಮಾಜ ಬದಲಾಗುವುದೇ? ಎನ್ನುವ ಸಿನಿಕತನ ಬಹುಜನರನ್ನು ಪ್ರಭಾವಿಸಿದೆ. ಹೀಗಾಗಿ ಅನೇಕ ಅಧಿಕಾರಿ ವರ್ಗದವರು `ನನ್ನೊಬ್ಬನಿಂದ’ ಏನಾಗುವುದಿದೆ ಎಂದು ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರೆ. ಸಮಸ್ಯೆ ಇರುವುದು ಈ `ನನ್ನೊಬ್ಬನಿಂದ’ ಎನ್ನುವವರ ಸಂಖ್ಯೆಯೂ ದೊಡ್ಡದಾಗುತ್ತಿರುವುದು. ಈ ನನ್ನಂಥವರೊಬ್ಬರಿಂದಲೂ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅಣ್ಣಾಮಲೈ ತೋರಿಸಿದ್ದರು. ಹಾಗಾಗಿ ಅವರ ರಾಜಿನಾಮೆ ಅಘಾತ ತಂದಿದೆ.

ಪೊಲೀಸ್ ಇಲಾಖೆಯ ಆಚೆಗೂ ಸಮಾಜದ ಒಳಿತಿಗಾಗಿ ದುಡಿಯುವ ಬದ್ಧತೆ ಇರುವ ಯಾವುದೇ ಕ್ಷೇತ್ರದ ಕೆಲಸಗಾರರೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಸದಾ ತಿರುಗಾಡುತ್ತ ಬರೆವ ಚಿಂತಕ ಪ್ರೊ.ರಹಮತ್ ತರೀಕೆರೆ ಅವರ ಮಗಳು ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ಅಪ್ಪನ ಕುರಿತು ಸಿಡುಕಿನ ಪದ್ಯ ಬರೆದಿದ್ದಳು. ಈ ನಡುವೆ ಎರಡು ಲಕ್ಷದಷ್ಟು ಸಂಬಳ ಪಡೆದು ಕನಿಷ್ಠ ಪಾಠವನ್ನೂ ಮಾಡದೆ ಅರಾಮಾಗಿ ಕುಟುಂಬದ ಜತೆಗಿರುವ ಅದ್ಯಾಪಕರಿದ್ದಾರೆ.

ಉಸಿರುಕಟ್ಟಿಸಿ ದುಡಿಸಿಕೊಳ್ಳುವ ಕಾರ್ಪೋರೇಟ್ ವಲಯದ ನೌಕರ ವರ್ಗವೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಬಹುತೇಕ ಒಪ್ಪಂದದ ದುಡಿಮೆಯಾದ ಕಾರಣ ಅಣ್ಣಾಮಲೈ ಅವರಂತೆ ಬಿಡುಗಡೆಯೂ ಕಷ್ಟವಿದೆ. ಅಂತೆಯೇ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಬದ್ಧತೆಯ ಅವಿರತ ದುಡಿಮೆಗೂ ಕುಟುಂಬದ ಜತೆಗಿನ ಒಡನಾಟಕ್ಕೂ ನೇರ ಸಂಬಂಧವಿದೆ. ಬಹುತೇಕ ತಮ್ಮ ದುಡಿಮೆಯಲ್ಲಿ ಬದ್ಧತೆ ಕಡಿಮೆ ಮಾಡಿಕೊಂಡವರು ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬಲ್ಲರು. ಅಪವಾದವೆಂಬಂತೆ ಈ ಎರಡನ್ನೂ ಸರಿದೂಗಿಸುವವರ ಸಂಖ್ಯೆ ವಿರಳ. ಹೀಗಾಗಿ ಅಪ್ರಾಮಾಣಿಕತೆ, ಬ್ರಷ್ಟತೆ, ಸೋಮಾರಿತನ, ತನ್ನ ಕರ್ತವ್ಯದ ನಿಷ್ಠೆ ಇಲ್ಲದಿರುವಂತಹ ಗುಣಗಳಿಗೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವಿಕೆಗೂ ಸಂಬಂಧವಿದೆ. ಈ ನೆಲೆಯಲ್ಲಿ ಅಣ್ಣಾಮಲೈ ಅವರ ರಾಜಿನಾಮೆ ಸಾರ್ವಜನಿಕತೆ ಮತ್ತು ವಯಕ್ತಿಕತೆಯ ಚರ್ಚೆಗೆ ಹೊಸ ದಾರಿಗಳನ್ನು ತೆರೆದಿದೆ.

ಎಷ್ಟೋ ಜನ ಆಡಳಿತದಲ್ಲಿ ದಕ್ಷರಾಗಿದ್ದು, ಸಮಾಜದ ಬಗೆಗಿವ ದೃಷ್ಟಿಕೋನದಲ್ಲಿ ದೋಷವಿರುತ್ತದೆ. ಕಿರಣ್ ಬೇಡಿಯಂತಹ ದಕ್ಷ ಅಧಿಕಾರಿ ಕ್ರಿಮಿನಲ್ ಟ್ರೈಬ್ ಬಗೆಗೆ ಅರಣ್ಯವಾಸಿ ಬುಡಕಟ್ಟುಗಳೆಲ್ಲಾ ಕಳ್ಳರು ಎನ್ನುವ ಅರ್ಥದ ಟ್ವೀಟ್ ಮಾಡಿದ್ದರು. ಅಂತಹ ದಕ್ಷ ಅಧಿಕಾರಿಣಿಗೆ ಬುಡಕಟ್ಟುಗಳ ಬಗೆಗೆ ಮಾನವೀಯ ತಿಳಿವಿರಲಿಲ್ಲ. ಹೀಗೆ ಆಡಳಿತಗಾರರಾಗಿ ಪ್ರಾಮಾಣಿಕರಾಗಿದ್ದವರೂ, ಜಾತಿವಾದಿಯಾಗಿಯೂ, ಕೋಮುವಾದಿಯಾಗಿಯೂ, ಕಾರ್ಪೋರೇಟ್ ಪರವಾಗಿಯೂ ವಿಚಾರ ಭ್ರಷ್ಟರಾಗಿರಲಿಕ್ಕೆ ಸಾಧ್ಯವಿದೆ. ಆದರೆ ಅಣ್ಣಾಮಲೈ ಅವರ ಕೆಲವು ಮಾತು ಭಾಷಣಗಳನ್ನು ಕೇಳಿದರೆ ದಕ್ಷ ಅಧಿಕಾರಿ ಹೇಗೋ, ಸಮಾಜದ ಬಗೆಗೆ ಡೆಮಾಕ್ರಟಿಕ್ ಆದ ಜನಪರ ತಿಳಿವಿನಲ್ಲಿ ಸ್ಪಷ್ಟತೆ ಇದ್ದಂತಿದೆ. ಈ ತಿಳಿವೂ ಕೂಡ ಅವರನ್ನು ರಾಜಿನಾಮೆಗೆ ಪ್ರೇರೇಪಿಸಿರಬಹುದು. ಇದುವೆ ಅವರ ಮುಂದಿನ ದಾರಿಯನ್ನೂ ಸ್ಪಷ್ಟಗೊಳಿಸಬೇಕಿದೆ.

ಈ ಹೊತ್ತಿನ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸತ್ಯದ ಪಾಲುದಾರಿಕೆಗಿಂತ ಸುಳ್ಳಿನ ಪಾಲುದಾರಿಕೆ ಹೆಚ್ಚಿದೆ. ಅಂತೆಯೇ ಭ್ರಷ್ಟತೆಯ ಪಾಲುದಾರರೂ ಹೆಚ್ಚುತ್ತಿದ್ದಾರೆ. ಈ ಮಧ್ಯೆ ಲೋಕಕ್ಕೂ ತನಗೂ ಸಂಬಂಧವಿಲ್ಲ ಎಂದು ಮೌನಧರಿಸುವ ಆಡಳಿತ ವರ್ಗ ಮತ್ತು ಮಧ್ಯಮವರ್ಗದ ಸಜ್ಜನರ ಸಂಖ್ಯೆ ದೊಡ್ಡದಿದೆ. ಇಂತಹ ಸಜ್ಜನರ ಮೌನ ಇವೆಲ್ಲವಕ್ಕಿಂತ ಅಪಾಯಕಾರಿಯಾಗಿದೆ. ಹೀಗಾಗಿ ಅಣ್ಣಾಮಲೈ ಅವರ ರಾಜಿನಾಮೆ ಬಹುಜನರನ್ನು ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಕವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...