Homeಕರ್ನಾಟಕಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು - ಅರುಣ್ ಜೋಳದ ಕೂಡ್ಲಿಗಿ

ಒಂದು ರಾಜೀನಾಮೆ ಹುಟ್ಟಿಸಿರುವ ಪ್ರಶ್ನೆಗಳು – ಅರುಣ್ ಜೋಳದ ಕೂಡ್ಲಿಗಿ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ನಿಷ್ಠಾವಂತ ದಕ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳನ್ನು ಒಳಗೊಂಡಂತೆ ಚರ್ಚೆಯಾಗುತ್ತಿದೆ. ಈ ಸಂಗತಿಯನ್ನು ಹೇಗೆ ನೋಡಬೇಕು? ಈ ಘಟನೆ ವಯಕ್ತಿಕ ನಿರ್ಧಾರವೆ ಆಗಿದ್ದರೂ, ಇದು ಹುಟ್ಟಿಸುವ ಪ್ರಶ್ನೆಗಳಾವುವು? ಈಗಿರುವ ನಿಷ್ಠಾವಂತ ಪೋಲೀಸ್ ಅಧಿಕಾರಿಗಳಲ್ಲಿ ಮೂಡಿಸಿದ ಭಾವನೆ ಯಾವುದು? ಪೊಲೀಸ್ ಇಲಾಖೆ ಸೇರಿ ದಕ್ಷ ಅಧಿಕಾರಿಯಾಗಬೇಕೆಂಬ ಕನಸು ಕಟ್ಟಿದ ಯುವಜನರ ಅಭಿಪ್ರಾಯವೇನು? ಇಂತಹ ಅಲ್ಪಸಂಖ್ಯಾತ ದಕ್ಷ ಅಧಿಕಾರಿಗಳ ಕಾರಣಕ್ಕೇ ಪೊಲೀಸ್ ಇಲಾಖೆಯ ಮೇಲೆ ಭರವಸೆ ಇಟ್ಟ ಜನರ ಪರ್ಯಾಯವೇನು? ಅಥವಾ ಇಂತಹ ದಕ್ಷ ಅಧಿಕಾರಿಯನ್ನು ಉಳಿಸಿಕೊಳ್ಳಬೇಕಾದ ಸಮಾಜದ ಪ್ರಾಮಾಣಿಕತೆಯು ಬ್ರಷ್ಟಗೊಂಡಿದೆಯೇ? ಎನ್ನುವಂತಹ ಪ್ರಶ್ನೆಗಳಿವೆ. ಹಾಗೆಯೇ ಪೋಲಿಸ್ ಇಲಾಖೆಯನ್ನು ಒತ್ತಡರಹಿತಗೊಳಿಸಬೇಕೆನ್ನುವ ಸಿದ್ಧ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸ್ವತಃ ಅಣ್ಣಾಮಲೈ ಬರೆದ ಪತ್ರದಲ್ಲಿ ಮಧುಕರ್ ಶೆಟ್ಟಿ ಸಾವನ್ನು ಪ್ರಸ್ತಾಪಿಸಿದ್ದಾರೆ. ಮಧುಕರ್ ಶೆಟ್ಟಿ ಬ್ರಷ್ಟಾಚಾರವನ್ನು ತೊಡೆದು ಹಾಕುವ ಖಡಕ್ ಅಧಿಕಾರಿಯಾಗಿದ್ದರು. ಅವರ ಸಾವು ಚರ್ಚಾಸ್ಪದವಾಗಿತ್ತು. ಏನಿಲ್ಲವೆಂದರೂ ಬ್ರಷ್ಟಾಚಾರ ವಿರೋಧಿ ಪ್ರಾಮಾಣಿಕ ಅವಿರತ ದುಡಿಮೆಗೂ ಅವರ ಸಾವಿಗೂ ನಂಟಿತ್ತು. ಇದು ಅಣ್ಣಾಮಲೈ ಅವರನ್ನು ಕಾಡಿರಬಹುದು. ಈ ಪತ್ರ ವ್ಯಕ್ತಿಯೊಬ್ಬರ ಬಿಡುವಿಲ್ಲದ ಸಾಮಾಜಿಕ ತೊಡಗುವಿಕೆ, ಕುಟುಂಬದ ಜತೆಗಿನ ಒಡನಾಟ, ತನ್ನದೇ ವಯಕ್ತಿಕ ಖುಷಿ ಸಂಭ್ರಮಗಳ ಕುರಿತ ಜಿಜ್ಞಾಸೆಗಳನ್ನು ಹುಟ್ಟಿಸಿದೆ. ಸಾಮಾಜಿಕ ತೊಡಗುವಿಕೆಯಲ್ಲಿ ಕುಟುಂಬದ ಆಪ್ತತೆ ಮತ್ತು ವಯಕ್ತಿಕ ಖುಷಿಗಳನ್ನು ಕಳೆದುಕೊಳ್ಳುವ `ಸಾರ್ವಜನಿಕತೆ ಮತ್ತು ವಯಕ್ತಿಕತೆಯ’ ಚರ್ಚೆಯನ್ನು ಮುನ್ನಲೆಗೆ ತಂದಿದೆ.

ಅಣ್ಣಾಮಲೈ ಅವರಂತೆ ರಾಜಿನಾಮೆ ಕೊಡದೆಯೂ, ತಮ್ಮ ಕೆಲಸದಲ್ಲಿದ್ದುಕೊಂಡೇ ಯಾವುದೇ ಒತ್ತಡಗಳನ್ನು ಮೈಮೇಲೆ ಹಾಕಿಕೊಳ್ಳದೆ ಕುಟುಂಬದ ಜೊತೆ ಆರಾಮಾಗಿವವರ ಸಂಖ್ಯೆ ಕಡಿಮೆಯೇನೂ ಇಲ್ಲ. ಅವರಲ್ಲಿ ಬಹುಪಾಲು ವೃತ್ತಿ ಬದ್ಧತೆಗೆ ಬದಲಾಗಿ ಕುಟುಂಬದ ಬದ್ಧತೆ ಹೆಚ್ಚಿರುವವರು. ಇಡೀ ವ್ಯವಸ್ಥೆಯೇ ಬ್ರಷ್ಟಗೊಂಡಾಗ, ನೀನೊಬ್ಬ ಪ್ರಮಾಣಿಕನಾದರೆ ಸಮಾಜ ಬದಲಾಗುವುದೇ? ಎನ್ನುವ ಸಿನಿಕತನ ಬಹುಜನರನ್ನು ಪ್ರಭಾವಿಸಿದೆ. ಹೀಗಾಗಿ ಅನೇಕ ಅಧಿಕಾರಿ ವರ್ಗದವರು `ನನ್ನೊಬ್ಬನಿಂದ’ ಏನಾಗುವುದಿದೆ ಎಂದು ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರೆ. ಸಮಸ್ಯೆ ಇರುವುದು ಈ `ನನ್ನೊಬ್ಬನಿಂದ’ ಎನ್ನುವವರ ಸಂಖ್ಯೆಯೂ ದೊಡ್ಡದಾಗುತ್ತಿರುವುದು. ಈ ನನ್ನಂಥವರೊಬ್ಬರಿಂದಲೂ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅಣ್ಣಾಮಲೈ ತೋರಿಸಿದ್ದರು. ಹಾಗಾಗಿ ಅವರ ರಾಜಿನಾಮೆ ಅಘಾತ ತಂದಿದೆ.

ಪೊಲೀಸ್ ಇಲಾಖೆಯ ಆಚೆಗೂ ಸಮಾಜದ ಒಳಿತಿಗಾಗಿ ದುಡಿಯುವ ಬದ್ಧತೆ ಇರುವ ಯಾವುದೇ ಕ್ಷೇತ್ರದ ಕೆಲಸಗಾರರೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಸದಾ ತಿರುಗಾಡುತ್ತ ಬರೆವ ಚಿಂತಕ ಪ್ರೊ.ರಹಮತ್ ತರೀಕೆರೆ ಅವರ ಮಗಳು ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವುದಿಲ್ಲವೆಂದು ಅಪ್ಪನ ಕುರಿತು ಸಿಡುಕಿನ ಪದ್ಯ ಬರೆದಿದ್ದಳು. ಈ ನಡುವೆ ಎರಡು ಲಕ್ಷದಷ್ಟು ಸಂಬಳ ಪಡೆದು ಕನಿಷ್ಠ ಪಾಠವನ್ನೂ ಮಾಡದೆ ಅರಾಮಾಗಿ ಕುಟುಂಬದ ಜತೆಗಿರುವ ಅದ್ಯಾಪಕರಿದ್ದಾರೆ.

ಉಸಿರುಕಟ್ಟಿಸಿ ದುಡಿಸಿಕೊಳ್ಳುವ ಕಾರ್ಪೋರೇಟ್ ವಲಯದ ನೌಕರ ವರ್ಗವೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯಲಾರರು. ಬಹುತೇಕ ಒಪ್ಪಂದದ ದುಡಿಮೆಯಾದ ಕಾರಣ ಅಣ್ಣಾಮಲೈ ಅವರಂತೆ ಬಿಡುಗಡೆಯೂ ಕಷ್ಟವಿದೆ. ಅಂತೆಯೇ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಬದ್ಧತೆಯ ಅವಿರತ ದುಡಿಮೆಗೂ ಕುಟುಂಬದ ಜತೆಗಿನ ಒಡನಾಟಕ್ಕೂ ನೇರ ಸಂಬಂಧವಿದೆ. ಬಹುತೇಕ ತಮ್ಮ ದುಡಿಮೆಯಲ್ಲಿ ಬದ್ಧತೆ ಕಡಿಮೆ ಮಾಡಿಕೊಂಡವರು ಕುಟುಂಬದ ಜತೆ ಹೆಚ್ಚು ಸಮಯ ಕಳೆಯಬಲ್ಲರು. ಅಪವಾದವೆಂಬಂತೆ ಈ ಎರಡನ್ನೂ ಸರಿದೂಗಿಸುವವರ ಸಂಖ್ಯೆ ವಿರಳ. ಹೀಗಾಗಿ ಅಪ್ರಾಮಾಣಿಕತೆ, ಬ್ರಷ್ಟತೆ, ಸೋಮಾರಿತನ, ತನ್ನ ಕರ್ತವ್ಯದ ನಿಷ್ಠೆ ಇಲ್ಲದಿರುವಂತಹ ಗುಣಗಳಿಗೂ ಕುಟುಂಬದ ಜತೆ ಹೆಚ್ಚು ಸಮಯ ಕಳೆಯುವಿಕೆಗೂ ಸಂಬಂಧವಿದೆ. ಈ ನೆಲೆಯಲ್ಲಿ ಅಣ್ಣಾಮಲೈ ಅವರ ರಾಜಿನಾಮೆ ಸಾರ್ವಜನಿಕತೆ ಮತ್ತು ವಯಕ್ತಿಕತೆಯ ಚರ್ಚೆಗೆ ಹೊಸ ದಾರಿಗಳನ್ನು ತೆರೆದಿದೆ.

ಎಷ್ಟೋ ಜನ ಆಡಳಿತದಲ್ಲಿ ದಕ್ಷರಾಗಿದ್ದು, ಸಮಾಜದ ಬಗೆಗಿವ ದೃಷ್ಟಿಕೋನದಲ್ಲಿ ದೋಷವಿರುತ್ತದೆ. ಕಿರಣ್ ಬೇಡಿಯಂತಹ ದಕ್ಷ ಅಧಿಕಾರಿ ಕ್ರಿಮಿನಲ್ ಟ್ರೈಬ್ ಬಗೆಗೆ ಅರಣ್ಯವಾಸಿ ಬುಡಕಟ್ಟುಗಳೆಲ್ಲಾ ಕಳ್ಳರು ಎನ್ನುವ ಅರ್ಥದ ಟ್ವೀಟ್ ಮಾಡಿದ್ದರು. ಅಂತಹ ದಕ್ಷ ಅಧಿಕಾರಿಣಿಗೆ ಬುಡಕಟ್ಟುಗಳ ಬಗೆಗೆ ಮಾನವೀಯ ತಿಳಿವಿರಲಿಲ್ಲ. ಹೀಗೆ ಆಡಳಿತಗಾರರಾಗಿ ಪ್ರಾಮಾಣಿಕರಾಗಿದ್ದವರೂ, ಜಾತಿವಾದಿಯಾಗಿಯೂ, ಕೋಮುವಾದಿಯಾಗಿಯೂ, ಕಾರ್ಪೋರೇಟ್ ಪರವಾಗಿಯೂ ವಿಚಾರ ಭ್ರಷ್ಟರಾಗಿರಲಿಕ್ಕೆ ಸಾಧ್ಯವಿದೆ. ಆದರೆ ಅಣ್ಣಾಮಲೈ ಅವರ ಕೆಲವು ಮಾತು ಭಾಷಣಗಳನ್ನು ಕೇಳಿದರೆ ದಕ್ಷ ಅಧಿಕಾರಿ ಹೇಗೋ, ಸಮಾಜದ ಬಗೆಗೆ ಡೆಮಾಕ್ರಟಿಕ್ ಆದ ಜನಪರ ತಿಳಿವಿನಲ್ಲಿ ಸ್ಪಷ್ಟತೆ ಇದ್ದಂತಿದೆ. ಈ ತಿಳಿವೂ ಕೂಡ ಅವರನ್ನು ರಾಜಿನಾಮೆಗೆ ಪ್ರೇರೇಪಿಸಿರಬಹುದು. ಇದುವೆ ಅವರ ಮುಂದಿನ ದಾರಿಯನ್ನೂ ಸ್ಪಷ್ಟಗೊಳಿಸಬೇಕಿದೆ.

ಈ ಹೊತ್ತಿನ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಸತ್ಯದ ಪಾಲುದಾರಿಕೆಗಿಂತ ಸುಳ್ಳಿನ ಪಾಲುದಾರಿಕೆ ಹೆಚ್ಚಿದೆ. ಅಂತೆಯೇ ಭ್ರಷ್ಟತೆಯ ಪಾಲುದಾರರೂ ಹೆಚ್ಚುತ್ತಿದ್ದಾರೆ. ಈ ಮಧ್ಯೆ ಲೋಕಕ್ಕೂ ತನಗೂ ಸಂಬಂಧವಿಲ್ಲ ಎಂದು ಮೌನಧರಿಸುವ ಆಡಳಿತ ವರ್ಗ ಮತ್ತು ಮಧ್ಯಮವರ್ಗದ ಸಜ್ಜನರ ಸಂಖ್ಯೆ ದೊಡ್ಡದಿದೆ. ಇಂತಹ ಸಜ್ಜನರ ಮೌನ ಇವೆಲ್ಲವಕ್ಕಿಂತ ಅಪಾಯಕಾರಿಯಾಗಿದೆ. ಹೀಗಾಗಿ ಅಣ್ಣಾಮಲೈ ಅವರ ರಾಜಿನಾಮೆ ಬಹುಜನರನ್ನು ಆತ್ಮಾವಲೋಕನ ಮಾಡಿಕೊಳ್ಳಲು ಪ್ರೇರಕವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...