Homeಕರ್ನಾಟಕಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! - ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.

- Advertisement -
- Advertisement -

| ಡಿ.ಎಸ್.ಬಿ |

ಪೊಲೀಸ್ ಇಲಾಖೆಯಲ್ಲಿದ್ದೂ ಪ್ರಾಮಾಣಿಕ ಮತ್ತು ಕರ್ತವ್ಯದಲ್ಲಿ ದಕ್ಷನಾಗಿರುವುದರ ಜೊತೆಗೆ ಮಾನವೀಯ ಮನಸ್ಸುಳ್ಳ ಸಮಾಜವಾದಿಯಾಗಿದ್ದರು ಮಧುಕರ ಶೆಟ್ಟಿ. ಅವರ ಅಸೌಖ್ಯದ ಸಾವಿನ ಬಳಿಕ ಜ್ಞಾನೋದಯ ಉಂಟಾಗಿದ್ದರಿಂದ ಅಣ್ಣಾ ಮಲೈ ರಾಜಿನಾಮೆಗೆ ಮುಂದಾಗಿರುವಂತಿದೆ ಎಂಬ ಪ್ರಚಾರ ವ್ಯಾಪಕವಾಗುವ ಲಕ್ಷಣಗಳ ಹಿನ್ನೆಲೆಯಲ್ಲಿ ಈ ಶೀರ್ಷಿಕೆ ನೀಡಲಾಗಿದೆ. ಇಬ್ಬರೂ ಒಂದೇ ಇಲಾಖೆಯವರಾದರೂ ಇಬ್ಬರದ್ದೂ ಪ್ರತ್ಯೇಕ ವ್ಯಕ್ತಿತ್ವ!
ವೃತ್ತಿ ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಹಂಬಲದಲ್ಲೇ ಕೆಲಸ ನಿರ್ವಹಿಸಿದ್ದು ಅಣ್ಣಾ ಮಲೈ ಎಂದರೇ ಅತಿಶಯೋಕ್ತಿಯಾಗಲಾರದು
ಸಾಮಾಜಿಕ ತುಡಿತ ಇದ್ದರೂ ಉಡುಪಿಯ ಸೇವೆಯ ಅವಧಿಯಲ್ಲಿ ಕೋಮುವಾದಿಗಳಿಂದ ಕಂಗೆಟ್ಟಿದ್ದೂ ಇದೇ ಅಣ್ಣಾ ಮಲೈ.
ಮಟ್ಕಾ ನಿರ್ಮೂಲನೆ ಮಾಡಲು ಮಟ್ಕಾ ದೊರೆಯ ಮನೆಗೆ ನುಗ್ಗಿ ದೊರೆಸಾನಿಯನ್ನೇ ಎಸ್ಪಿ ಕಚೇರಿಗೆ ತಂದಿರಿಸಿಕೊಂಡು ಮಟ್ಕಾ ದೊರೆಗೆ ಬಂಧನದ ಭೀತಿ ಹುಟ್ಟಿಸಿದ್ದ ಅಣ್ಣಾ ಮಲೈ. ಪರಿಸರ ರಕ್ಷಣೆಯ ಹೆಸರಿನ ಸೈಕಲ್ ಸವಾರಿಯ ಕಾರ್ಯಕ್ರಮಕ್ಕೆ ಉಡುಪಿಯ ಪರಿಸರ ವಿರೋಧಿ ಯುಪಿಸಿಎಲ್ ನ ಮಾಲಿಕತ್ವದ ಅದಾನಿ ಫೌಂಡೇಶನ್‍ನ ನೆರವು ಪಡೆದು ವಿಸ್ಮಯ ಹುಟ್ಟಿಸಿದ್ದರು.
ಉಡುಪಿಯ ಎಸ್ಪಿಯಾಗಿ ಪ್ರಭಾರಕ್ಕೆ ಬಂದಾಗಲೇ ದಲಿತ ಸಂಘಟನೆಯವರನ್ನು ಏಕ ವಚನದಲ್ಲಿ ಗದರಿಸಿ, ಸಂಘಟನೆಯನ್ನು ಹೀಯಾಳಿಸಿ ಕೊನೆಗೆ ತನ್ನ ಕನ್ನಡ ಭಾಷೆಯ ತಿಳಿವಳಿಕೆಯ ಕೊರತೆಯ ನೆರವಿನಲ್ಲಿ ಅದನ್ನು ಮರೆಯಾಗಿಸುವಲ್ಲಿ ಯಶಸ್ವಿಯಾಗಿದ್ದರು.
80 ರ ದಶಕದ ಆರಂಭದಲ್ಲಿ ನಡುಮನಿ ನಾರಾಯಣ ಎಂಬ ಎಸ್ಪಿಯ ಬಳಿಕ ಅಕ್ರಮ ದಂಧೆಯವರಲ್ಲಿ ಭೀತಿ ಹುಟ್ಟುವಂತೆ ಮಾಡಿದ್ದೂ ಇದೇ ಅಣ್ಣಾ ಮಲೈ.
ಎಸ್ಪಿಯಾಗುವ ಮೊದಲು ಕಾರ್ಕಳದ ಎಸ್ಪಿಯಾಗಿ ಬಂದಾಗ ಮಾಡಿದ ಸದ್ದೇ ಅವರನ್ನು ಉಡುಪಿ ಎಸ್ಪಿ ಗಾದಿಯಲ್ಲಿ ಕುಳ್ಳಿರಿಸುವಂತೆ ಮಾಡಿತ್ತು!
ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.
ಮಹತ್ವಾಕಾಂಕ್ಷೆಯಿಂದ ಇಲಾಖೆಗೆ ಬಂದಿದ್ದ ಅಣ್ಣಾ ಮಲೈ ಪ್ರಚಾರ ಬಯಸುವ ಅಧಿಕಾರಿಯಾಗಿ ಇಲ್ಲಿಂದ ವರ್ಗಾವಣೆಯಾಗಿದ್ದನ್ನು ಯಾರೂ ನಿರಾಕರಿಸಲಾರರು.
ಪೊಲೀಸ್ ಇಲಾಖೆಯಲ್ಲಿ ಇದೂ ಅಗತ್ಯ ಇದೆಯೇನೋ ಅನ್ನಿಸುವುದೂ ಸುಳ್ಳಲ್ಲ. ಜನರಲ್ಲಿ ಇಲಾಖೆಯ ಬಗ್ಗೆ ಬರೇ ಭಯ ತುಂಬಿಕೊಂಡಿದ್ದರೇ ಬದಲಾವಣೆ ಆಗದೇನೋ?!
ಕಾರ್ಕಳ ಎಎಸ್ಪಿಯಾಗಿದ್ದಾಗ ಎಸ್ಪಿ ಅವರ ರಿವ್ಯೂ ಮೀಟಿಂಗಿನಲ್ಲಿ ಮಟ್ಕಾ ಹಾವಳಿ ನಿಗ್ರಹಿಸಿದ್ದೇನೆಂದು ಬಡಾಯಿ ಕೊಚ್ಚಿದ್ದ ಅಂದಿನ ಉಡುಪಿ ಡಿವೈಎಸ್ಪಿ ಪ್ರಭುದೇವ ಮಾನೆಯ ಸುಳ್ಳನ್ನು ಬಯಲಾಗಿಸಲು ತಾನು ಆ ಹುದ್ದೆಯ ಪ್ರಭಾರಕ್ಕೆ ಬಂದಾಗ ಮುಂದಾಗಿದ್ದು ಪ್ರಚಾರ ಪ್ರಿಯತೆಯೋ? ಇಲಾಖೆಯನ್ನು ಸರಿಪಡಿಸುತ್ತೇನೆಂಬ ಆಕಾಂಕ್ಷೆಯೋ? ವೃತ್ತಿಯ ವೈ ಮನಸ್ಸೋ ಅರ್ಥವಾಗಿಲ್ಲಾ. ಆದರೂ ಎಸ್ಪಿಯಾಗಿದ್ದಾಗ ಮಟ್ಕಾ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಂಡಿದ್ದನ್ನು ಅಲ್ಲಗಳೆಯಲಾಗದು.
ಗಂಗೊಳ್ಳಿಯಲ್ಲಿ ಹುಟ್ಟಿಕೊಂಡ ಮತೀಯವಾದದ ನಿಗ್ರಹಕ್ಕೆ ನಿಯೋಜಿತರಾದಾಗ ತನ್ನ ಸಿಂಗಂ ಗಿರಿ ಧರ್ಮಾಂಧರ ಗುಂಪಿನ ಎದುರು ನಡೆಯಲಾರದು ಎಂಬ ವಾಸ್ತವ ಅರಿತ ಅಣ್ಣಾ ಮಲೈ ಮತಾಂಧರ ಒತ್ತಾಯಕ್ಕೆ ಮಣಿದು ಆರೋಪಿಗಳ ಬಂಧ ಮುಕ್ತತೆ ಮಾಡುವಂತಾಗಿತ್ತು.
ಅದಕ್ಕಾಗಿಯೇ ಹೇಳಿದ್ದು ಅಣ್ಣಾ ಮಲೈನೇ ಬೇರೆ : ಮಧುಕರ ಶೆಟ್ಟರೇ ಬೇರೆ ಅಂತ.
ಸಿಂಗಂ ಹೆಸರು ಅಂಟಿಕೊಂಡಿದ್ದು ಉಡುಪಿಯಿಂದ!
ಅಣ್ಣಾ ಮಲೈ ಎಂಬ ತಮಿಳಿಗ ಕಾರ್ಕಳ ದ ಎಎಸ್ಪಿಯಾಗಿ ಬಂದಾಗ .ಮಾಡಿದ ಖದರು ಅವರೇ ಉಡುಪಿ ಎಸ್ಪಿಯಾಗಬೇಕು ಅಂತ ಮಾಡಿತ್ತು. ಮುಖ್ಯವಾಗಿ ಆಗ ಜನಪರ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಮಧ್ಯಾವಧಿಯ ಸಂಸದಗಿರಿಯಲ್ಲಿದ್ದರು. ಸಮಾಜವಾದಿ ಸಿದ್ಧರಾಮಯ್ಯರ ಮುಖ್ಯಮಂತ್ರಿತ್ವದಲ್ಲಿ ಕೆಲಸÀಗಾರ ವಿನಯಕುಮಾರ ಸೊರಕೆಯ ಉಸ್ತುವಾರಿ ಗಿರಿಯಲ್ಲಿದ್ದ ಉಡುಪಿಗೆ ಒಬ್ಬ ಖಡಕ್ ಖಾಕಿಯನ್ನು ತರಬೇಕೆಂಬ ನಿರ್ಧಾರ ಮಾಡಲಾಯಿತು. ಅದರಿಂದಲೇ ಜಿಲ್ಲೆಯಲ್ಲೇ ಪ್ರೊಬೇಷನ್ ಗಿರಿಯ ಎಎಸ್ಪಿ ಹುದ್ದೆ ನಿರ್ವಹಿಸಿದ್ದ ಅಣ್ಣಾ ಮಲೈ ಅದೇ ಜಿಲ್ಲೆಯ ಎಸ್ಪಿಯಾಗುವಂತಾಗಿತ್ತು.
ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದಾಗ ಮೊದಲಿಗೆ ಇಲಾಖೆಯ ಒಳಗೇ ಸ್ವಚ್ಛತೆಗೆ ಮುಂದಾಗಿದ್ದರು. ಅದು ಆರಂಭದಲ್ಲೇ ಆಯಕಟ್ಟಿನಲ್ಲಿದ್ದವರಿಗೆ ಅಪಾಯ ತಂದಿರಿಸಿತ್ತು. ಎರಡನೆಯದಾಗಿ ಕ್ರೈಮ್ ಮಟ್ಟಹಾಕಲು ಫೀಲ್ಡಿಗಿಳಿವಾಗಲೂ ಅದು ಎಲ್ಲೂ ಸುದ್ದಿಯಾಗದಂತೆ ಮಾಡಿದರು. ಹಾಗಾಗಿ ಎಸ್ಪಿ ಚಡ್ಡಿ ಹಾಕಿಕೊಂಡು ಸೈಕಲಲ್ಲಿ ಬಂದರಂತೆ. ಜುಗಾರಿಯಲ್ಲಿಗೆ ಸಾಮಾನ್ಯರಂತೆ ಬಂದರಂತೆ. ಫ್ರೋಟೋಕಾಲ್ ನ ಹಂಗು ಹರಿದು ಏಕಾಂಗಿಯಾಗಿ ಓಡಾಡಿದ್ದ ಅಣ್ಣಾ ಮಲೈ ಅಪರಾಧ ಕೃತ್ಯದವರ ಎದೆಯಲ್ಲಿ ಒಂದಷ್ಟು ಭೀತಿಯನ್ನು ಆರಂಭದಲ್ಲಿ ಹುಟ್ಟು ಹಾಕಿದ್ದಂತೂ ನಿಜ. ಆಗಲೇ ಸಿಂಗಂ ಸಿನೆಮಾ ದ ಪ್ರಭಾವಕ್ಕೆ ಒಳಗಾಗುವ ಭಾವುಕ ಜೀವಿಗಳು ಅಣ್ಣಾ ಮಲೈರಲ್ಲೂ ಸಿಂಗಂ ಅನ್ನು ಕಂಡು ಉಡುಪಿಯ ಸಿಂಗಂ ಅನ್ನಲಾರಂಭಿಸಿದ್ದು.
ಮತಾಂಧತೆ ಅಳಿಸುವ ನಿಟ್ಟಿನಲ್ಲಿ ನಿಯೋಜಿತರಾದ ಇವರು ಮತ್ತೆ ಸುಧಾರಣೆಗಾಗಿ ಎಲ್ಲರನ್ನೂ ಒಲೈಸುವಂತಾಗಿದ್ದು ಕೂಡಾ ಇಲ್ಲದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...