Homeಕರ್ನಾಟಕಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! - ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.

- Advertisement -
- Advertisement -

| ಡಿ.ಎಸ್.ಬಿ |

ಪೊಲೀಸ್ ಇಲಾಖೆಯಲ್ಲಿದ್ದೂ ಪ್ರಾಮಾಣಿಕ ಮತ್ತು ಕರ್ತವ್ಯದಲ್ಲಿ ದಕ್ಷನಾಗಿರುವುದರ ಜೊತೆಗೆ ಮಾನವೀಯ ಮನಸ್ಸುಳ್ಳ ಸಮಾಜವಾದಿಯಾಗಿದ್ದರು ಮಧುಕರ ಶೆಟ್ಟಿ. ಅವರ ಅಸೌಖ್ಯದ ಸಾವಿನ ಬಳಿಕ ಜ್ಞಾನೋದಯ ಉಂಟಾಗಿದ್ದರಿಂದ ಅಣ್ಣಾ ಮಲೈ ರಾಜಿನಾಮೆಗೆ ಮುಂದಾಗಿರುವಂತಿದೆ ಎಂಬ ಪ್ರಚಾರ ವ್ಯಾಪಕವಾಗುವ ಲಕ್ಷಣಗಳ ಹಿನ್ನೆಲೆಯಲ್ಲಿ ಈ ಶೀರ್ಷಿಕೆ ನೀಡಲಾಗಿದೆ. ಇಬ್ಬರೂ ಒಂದೇ ಇಲಾಖೆಯವರಾದರೂ ಇಬ್ಬರದ್ದೂ ಪ್ರತ್ಯೇಕ ವ್ಯಕ್ತಿತ್ವ!
ವೃತ್ತಿ ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಹಂಬಲದಲ್ಲೇ ಕೆಲಸ ನಿರ್ವಹಿಸಿದ್ದು ಅಣ್ಣಾ ಮಲೈ ಎಂದರೇ ಅತಿಶಯೋಕ್ತಿಯಾಗಲಾರದು
ಸಾಮಾಜಿಕ ತುಡಿತ ಇದ್ದರೂ ಉಡುಪಿಯ ಸೇವೆಯ ಅವಧಿಯಲ್ಲಿ ಕೋಮುವಾದಿಗಳಿಂದ ಕಂಗೆಟ್ಟಿದ್ದೂ ಇದೇ ಅಣ್ಣಾ ಮಲೈ.
ಮಟ್ಕಾ ನಿರ್ಮೂಲನೆ ಮಾಡಲು ಮಟ್ಕಾ ದೊರೆಯ ಮನೆಗೆ ನುಗ್ಗಿ ದೊರೆಸಾನಿಯನ್ನೇ ಎಸ್ಪಿ ಕಚೇರಿಗೆ ತಂದಿರಿಸಿಕೊಂಡು ಮಟ್ಕಾ ದೊರೆಗೆ ಬಂಧನದ ಭೀತಿ ಹುಟ್ಟಿಸಿದ್ದ ಅಣ್ಣಾ ಮಲೈ. ಪರಿಸರ ರಕ್ಷಣೆಯ ಹೆಸರಿನ ಸೈಕಲ್ ಸವಾರಿಯ ಕಾರ್ಯಕ್ರಮಕ್ಕೆ ಉಡುಪಿಯ ಪರಿಸರ ವಿರೋಧಿ ಯುಪಿಸಿಎಲ್ ನ ಮಾಲಿಕತ್ವದ ಅದಾನಿ ಫೌಂಡೇಶನ್‍ನ ನೆರವು ಪಡೆದು ವಿಸ್ಮಯ ಹುಟ್ಟಿಸಿದ್ದರು.
ಉಡುಪಿಯ ಎಸ್ಪಿಯಾಗಿ ಪ್ರಭಾರಕ್ಕೆ ಬಂದಾಗಲೇ ದಲಿತ ಸಂಘಟನೆಯವರನ್ನು ಏಕ ವಚನದಲ್ಲಿ ಗದರಿಸಿ, ಸಂಘಟನೆಯನ್ನು ಹೀಯಾಳಿಸಿ ಕೊನೆಗೆ ತನ್ನ ಕನ್ನಡ ಭಾಷೆಯ ತಿಳಿವಳಿಕೆಯ ಕೊರತೆಯ ನೆರವಿನಲ್ಲಿ ಅದನ್ನು ಮರೆಯಾಗಿಸುವಲ್ಲಿ ಯಶಸ್ವಿಯಾಗಿದ್ದರು.
80 ರ ದಶಕದ ಆರಂಭದಲ್ಲಿ ನಡುಮನಿ ನಾರಾಯಣ ಎಂಬ ಎಸ್ಪಿಯ ಬಳಿಕ ಅಕ್ರಮ ದಂಧೆಯವರಲ್ಲಿ ಭೀತಿ ಹುಟ್ಟುವಂತೆ ಮಾಡಿದ್ದೂ ಇದೇ ಅಣ್ಣಾ ಮಲೈ.
ಎಸ್ಪಿಯಾಗುವ ಮೊದಲು ಕಾರ್ಕಳದ ಎಸ್ಪಿಯಾಗಿ ಬಂದಾಗ ಮಾಡಿದ ಸದ್ದೇ ಅವರನ್ನು ಉಡುಪಿ ಎಸ್ಪಿ ಗಾದಿಯಲ್ಲಿ ಕುಳ್ಳಿರಿಸುವಂತೆ ಮಾಡಿತ್ತು!
ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.
ಮಹತ್ವಾಕಾಂಕ್ಷೆಯಿಂದ ಇಲಾಖೆಗೆ ಬಂದಿದ್ದ ಅಣ್ಣಾ ಮಲೈ ಪ್ರಚಾರ ಬಯಸುವ ಅಧಿಕಾರಿಯಾಗಿ ಇಲ್ಲಿಂದ ವರ್ಗಾವಣೆಯಾಗಿದ್ದನ್ನು ಯಾರೂ ನಿರಾಕರಿಸಲಾರರು.
ಪೊಲೀಸ್ ಇಲಾಖೆಯಲ್ಲಿ ಇದೂ ಅಗತ್ಯ ಇದೆಯೇನೋ ಅನ್ನಿಸುವುದೂ ಸುಳ್ಳಲ್ಲ. ಜನರಲ್ಲಿ ಇಲಾಖೆಯ ಬಗ್ಗೆ ಬರೇ ಭಯ ತುಂಬಿಕೊಂಡಿದ್ದರೇ ಬದಲಾವಣೆ ಆಗದೇನೋ?!
ಕಾರ್ಕಳ ಎಎಸ್ಪಿಯಾಗಿದ್ದಾಗ ಎಸ್ಪಿ ಅವರ ರಿವ್ಯೂ ಮೀಟಿಂಗಿನಲ್ಲಿ ಮಟ್ಕಾ ಹಾವಳಿ ನಿಗ್ರಹಿಸಿದ್ದೇನೆಂದು ಬಡಾಯಿ ಕೊಚ್ಚಿದ್ದ ಅಂದಿನ ಉಡುಪಿ ಡಿವೈಎಸ್ಪಿ ಪ್ರಭುದೇವ ಮಾನೆಯ ಸುಳ್ಳನ್ನು ಬಯಲಾಗಿಸಲು ತಾನು ಆ ಹುದ್ದೆಯ ಪ್ರಭಾರಕ್ಕೆ ಬಂದಾಗ ಮುಂದಾಗಿದ್ದು ಪ್ರಚಾರ ಪ್ರಿಯತೆಯೋ? ಇಲಾಖೆಯನ್ನು ಸರಿಪಡಿಸುತ್ತೇನೆಂಬ ಆಕಾಂಕ್ಷೆಯೋ? ವೃತ್ತಿಯ ವೈ ಮನಸ್ಸೋ ಅರ್ಥವಾಗಿಲ್ಲಾ. ಆದರೂ ಎಸ್ಪಿಯಾಗಿದ್ದಾಗ ಮಟ್ಕಾ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಂಡಿದ್ದನ್ನು ಅಲ್ಲಗಳೆಯಲಾಗದು.
ಗಂಗೊಳ್ಳಿಯಲ್ಲಿ ಹುಟ್ಟಿಕೊಂಡ ಮತೀಯವಾದದ ನಿಗ್ರಹಕ್ಕೆ ನಿಯೋಜಿತರಾದಾಗ ತನ್ನ ಸಿಂಗಂ ಗಿರಿ ಧರ್ಮಾಂಧರ ಗುಂಪಿನ ಎದುರು ನಡೆಯಲಾರದು ಎಂಬ ವಾಸ್ತವ ಅರಿತ ಅಣ್ಣಾ ಮಲೈ ಮತಾಂಧರ ಒತ್ತಾಯಕ್ಕೆ ಮಣಿದು ಆರೋಪಿಗಳ ಬಂಧ ಮುಕ್ತತೆ ಮಾಡುವಂತಾಗಿತ್ತು.
ಅದಕ್ಕಾಗಿಯೇ ಹೇಳಿದ್ದು ಅಣ್ಣಾ ಮಲೈನೇ ಬೇರೆ : ಮಧುಕರ ಶೆಟ್ಟರೇ ಬೇರೆ ಅಂತ.
ಸಿಂಗಂ ಹೆಸರು ಅಂಟಿಕೊಂಡಿದ್ದು ಉಡುಪಿಯಿಂದ!
ಅಣ್ಣಾ ಮಲೈ ಎಂಬ ತಮಿಳಿಗ ಕಾರ್ಕಳ ದ ಎಎಸ್ಪಿಯಾಗಿ ಬಂದಾಗ .ಮಾಡಿದ ಖದರು ಅವರೇ ಉಡುಪಿ ಎಸ್ಪಿಯಾಗಬೇಕು ಅಂತ ಮಾಡಿತ್ತು. ಮುಖ್ಯವಾಗಿ ಆಗ ಜನಪರ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಮಧ್ಯಾವಧಿಯ ಸಂಸದಗಿರಿಯಲ್ಲಿದ್ದರು. ಸಮಾಜವಾದಿ ಸಿದ್ಧರಾಮಯ್ಯರ ಮುಖ್ಯಮಂತ್ರಿತ್ವದಲ್ಲಿ ಕೆಲಸÀಗಾರ ವಿನಯಕುಮಾರ ಸೊರಕೆಯ ಉಸ್ತುವಾರಿ ಗಿರಿಯಲ್ಲಿದ್ದ ಉಡುಪಿಗೆ ಒಬ್ಬ ಖಡಕ್ ಖಾಕಿಯನ್ನು ತರಬೇಕೆಂಬ ನಿರ್ಧಾರ ಮಾಡಲಾಯಿತು. ಅದರಿಂದಲೇ ಜಿಲ್ಲೆಯಲ್ಲೇ ಪ್ರೊಬೇಷನ್ ಗಿರಿಯ ಎಎಸ್ಪಿ ಹುದ್ದೆ ನಿರ್ವಹಿಸಿದ್ದ ಅಣ್ಣಾ ಮಲೈ ಅದೇ ಜಿಲ್ಲೆಯ ಎಸ್ಪಿಯಾಗುವಂತಾಗಿತ್ತು.
ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದಾಗ ಮೊದಲಿಗೆ ಇಲಾಖೆಯ ಒಳಗೇ ಸ್ವಚ್ಛತೆಗೆ ಮುಂದಾಗಿದ್ದರು. ಅದು ಆರಂಭದಲ್ಲೇ ಆಯಕಟ್ಟಿನಲ್ಲಿದ್ದವರಿಗೆ ಅಪಾಯ ತಂದಿರಿಸಿತ್ತು. ಎರಡನೆಯದಾಗಿ ಕ್ರೈಮ್ ಮಟ್ಟಹಾಕಲು ಫೀಲ್ಡಿಗಿಳಿವಾಗಲೂ ಅದು ಎಲ್ಲೂ ಸುದ್ದಿಯಾಗದಂತೆ ಮಾಡಿದರು. ಹಾಗಾಗಿ ಎಸ್ಪಿ ಚಡ್ಡಿ ಹಾಕಿಕೊಂಡು ಸೈಕಲಲ್ಲಿ ಬಂದರಂತೆ. ಜುಗಾರಿಯಲ್ಲಿಗೆ ಸಾಮಾನ್ಯರಂತೆ ಬಂದರಂತೆ. ಫ್ರೋಟೋಕಾಲ್ ನ ಹಂಗು ಹರಿದು ಏಕಾಂಗಿಯಾಗಿ ಓಡಾಡಿದ್ದ ಅಣ್ಣಾ ಮಲೈ ಅಪರಾಧ ಕೃತ್ಯದವರ ಎದೆಯಲ್ಲಿ ಒಂದಷ್ಟು ಭೀತಿಯನ್ನು ಆರಂಭದಲ್ಲಿ ಹುಟ್ಟು ಹಾಕಿದ್ದಂತೂ ನಿಜ. ಆಗಲೇ ಸಿಂಗಂ ಸಿನೆಮಾ ದ ಪ್ರಭಾವಕ್ಕೆ ಒಳಗಾಗುವ ಭಾವುಕ ಜೀವಿಗಳು ಅಣ್ಣಾ ಮಲೈರಲ್ಲೂ ಸಿಂಗಂ ಅನ್ನು ಕಂಡು ಉಡುಪಿಯ ಸಿಂಗಂ ಅನ್ನಲಾರಂಭಿಸಿದ್ದು.
ಮತಾಂಧತೆ ಅಳಿಸುವ ನಿಟ್ಟಿನಲ್ಲಿ ನಿಯೋಜಿತರಾದ ಇವರು ಮತ್ತೆ ಸುಧಾರಣೆಗಾಗಿ ಎಲ್ಲರನ್ನೂ ಒಲೈಸುವಂತಾಗಿದ್ದು ಕೂಡಾ ಇಲ್ಲದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...