Homeಕರ್ನಾಟಕಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! - ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.

- Advertisement -
- Advertisement -

| ಡಿ.ಎಸ್.ಬಿ |

ಪೊಲೀಸ್ ಇಲಾಖೆಯಲ್ಲಿದ್ದೂ ಪ್ರಾಮಾಣಿಕ ಮತ್ತು ಕರ್ತವ್ಯದಲ್ಲಿ ದಕ್ಷನಾಗಿರುವುದರ ಜೊತೆಗೆ ಮಾನವೀಯ ಮನಸ್ಸುಳ್ಳ ಸಮಾಜವಾದಿಯಾಗಿದ್ದರು ಮಧುಕರ ಶೆಟ್ಟಿ. ಅವರ ಅಸೌಖ್ಯದ ಸಾವಿನ ಬಳಿಕ ಜ್ಞಾನೋದಯ ಉಂಟಾಗಿದ್ದರಿಂದ ಅಣ್ಣಾ ಮಲೈ ರಾಜಿನಾಮೆಗೆ ಮುಂದಾಗಿರುವಂತಿದೆ ಎಂಬ ಪ್ರಚಾರ ವ್ಯಾಪಕವಾಗುವ ಲಕ್ಷಣಗಳ ಹಿನ್ನೆಲೆಯಲ್ಲಿ ಈ ಶೀರ್ಷಿಕೆ ನೀಡಲಾಗಿದೆ. ಇಬ್ಬರೂ ಒಂದೇ ಇಲಾಖೆಯವರಾದರೂ ಇಬ್ಬರದ್ದೂ ಪ್ರತ್ಯೇಕ ವ್ಯಕ್ತಿತ್ವ!
ವೃತ್ತಿ ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಹಂಬಲದಲ್ಲೇ ಕೆಲಸ ನಿರ್ವಹಿಸಿದ್ದು ಅಣ್ಣಾ ಮಲೈ ಎಂದರೇ ಅತಿಶಯೋಕ್ತಿಯಾಗಲಾರದು
ಸಾಮಾಜಿಕ ತುಡಿತ ಇದ್ದರೂ ಉಡುಪಿಯ ಸೇವೆಯ ಅವಧಿಯಲ್ಲಿ ಕೋಮುವಾದಿಗಳಿಂದ ಕಂಗೆಟ್ಟಿದ್ದೂ ಇದೇ ಅಣ್ಣಾ ಮಲೈ.
ಮಟ್ಕಾ ನಿರ್ಮೂಲನೆ ಮಾಡಲು ಮಟ್ಕಾ ದೊರೆಯ ಮನೆಗೆ ನುಗ್ಗಿ ದೊರೆಸಾನಿಯನ್ನೇ ಎಸ್ಪಿ ಕಚೇರಿಗೆ ತಂದಿರಿಸಿಕೊಂಡು ಮಟ್ಕಾ ದೊರೆಗೆ ಬಂಧನದ ಭೀತಿ ಹುಟ್ಟಿಸಿದ್ದ ಅಣ್ಣಾ ಮಲೈ. ಪರಿಸರ ರಕ್ಷಣೆಯ ಹೆಸರಿನ ಸೈಕಲ್ ಸವಾರಿಯ ಕಾರ್ಯಕ್ರಮಕ್ಕೆ ಉಡುಪಿಯ ಪರಿಸರ ವಿರೋಧಿ ಯುಪಿಸಿಎಲ್ ನ ಮಾಲಿಕತ್ವದ ಅದಾನಿ ಫೌಂಡೇಶನ್‍ನ ನೆರವು ಪಡೆದು ವಿಸ್ಮಯ ಹುಟ್ಟಿಸಿದ್ದರು.
ಉಡುಪಿಯ ಎಸ್ಪಿಯಾಗಿ ಪ್ರಭಾರಕ್ಕೆ ಬಂದಾಗಲೇ ದಲಿತ ಸಂಘಟನೆಯವರನ್ನು ಏಕ ವಚನದಲ್ಲಿ ಗದರಿಸಿ, ಸಂಘಟನೆಯನ್ನು ಹೀಯಾಳಿಸಿ ಕೊನೆಗೆ ತನ್ನ ಕನ್ನಡ ಭಾಷೆಯ ತಿಳಿವಳಿಕೆಯ ಕೊರತೆಯ ನೆರವಿನಲ್ಲಿ ಅದನ್ನು ಮರೆಯಾಗಿಸುವಲ್ಲಿ ಯಶಸ್ವಿಯಾಗಿದ್ದರು.
80 ರ ದಶಕದ ಆರಂಭದಲ್ಲಿ ನಡುಮನಿ ನಾರಾಯಣ ಎಂಬ ಎಸ್ಪಿಯ ಬಳಿಕ ಅಕ್ರಮ ದಂಧೆಯವರಲ್ಲಿ ಭೀತಿ ಹುಟ್ಟುವಂತೆ ಮಾಡಿದ್ದೂ ಇದೇ ಅಣ್ಣಾ ಮಲೈ.
ಎಸ್ಪಿಯಾಗುವ ಮೊದಲು ಕಾರ್ಕಳದ ಎಸ್ಪಿಯಾಗಿ ಬಂದಾಗ ಮಾಡಿದ ಸದ್ದೇ ಅವರನ್ನು ಉಡುಪಿ ಎಸ್ಪಿ ಗಾದಿಯಲ್ಲಿ ಕುಳ್ಳಿರಿಸುವಂತೆ ಮಾಡಿತ್ತು!
ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.
ಮಹತ್ವಾಕಾಂಕ್ಷೆಯಿಂದ ಇಲಾಖೆಗೆ ಬಂದಿದ್ದ ಅಣ್ಣಾ ಮಲೈ ಪ್ರಚಾರ ಬಯಸುವ ಅಧಿಕಾರಿಯಾಗಿ ಇಲ್ಲಿಂದ ವರ್ಗಾವಣೆಯಾಗಿದ್ದನ್ನು ಯಾರೂ ನಿರಾಕರಿಸಲಾರರು.
ಪೊಲೀಸ್ ಇಲಾಖೆಯಲ್ಲಿ ಇದೂ ಅಗತ್ಯ ಇದೆಯೇನೋ ಅನ್ನಿಸುವುದೂ ಸುಳ್ಳಲ್ಲ. ಜನರಲ್ಲಿ ಇಲಾಖೆಯ ಬಗ್ಗೆ ಬರೇ ಭಯ ತುಂಬಿಕೊಂಡಿದ್ದರೇ ಬದಲಾವಣೆ ಆಗದೇನೋ?!
ಕಾರ್ಕಳ ಎಎಸ್ಪಿಯಾಗಿದ್ದಾಗ ಎಸ್ಪಿ ಅವರ ರಿವ್ಯೂ ಮೀಟಿಂಗಿನಲ್ಲಿ ಮಟ್ಕಾ ಹಾವಳಿ ನಿಗ್ರಹಿಸಿದ್ದೇನೆಂದು ಬಡಾಯಿ ಕೊಚ್ಚಿದ್ದ ಅಂದಿನ ಉಡುಪಿ ಡಿವೈಎಸ್ಪಿ ಪ್ರಭುದೇವ ಮಾನೆಯ ಸುಳ್ಳನ್ನು ಬಯಲಾಗಿಸಲು ತಾನು ಆ ಹುದ್ದೆಯ ಪ್ರಭಾರಕ್ಕೆ ಬಂದಾಗ ಮುಂದಾಗಿದ್ದು ಪ್ರಚಾರ ಪ್ರಿಯತೆಯೋ? ಇಲಾಖೆಯನ್ನು ಸರಿಪಡಿಸುತ್ತೇನೆಂಬ ಆಕಾಂಕ್ಷೆಯೋ? ವೃತ್ತಿಯ ವೈ ಮನಸ್ಸೋ ಅರ್ಥವಾಗಿಲ್ಲಾ. ಆದರೂ ಎಸ್ಪಿಯಾಗಿದ್ದಾಗ ಮಟ್ಕಾ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಂಡಿದ್ದನ್ನು ಅಲ್ಲಗಳೆಯಲಾಗದು.
ಗಂಗೊಳ್ಳಿಯಲ್ಲಿ ಹುಟ್ಟಿಕೊಂಡ ಮತೀಯವಾದದ ನಿಗ್ರಹಕ್ಕೆ ನಿಯೋಜಿತರಾದಾಗ ತನ್ನ ಸಿಂಗಂ ಗಿರಿ ಧರ್ಮಾಂಧರ ಗುಂಪಿನ ಎದುರು ನಡೆಯಲಾರದು ಎಂಬ ವಾಸ್ತವ ಅರಿತ ಅಣ್ಣಾ ಮಲೈ ಮತಾಂಧರ ಒತ್ತಾಯಕ್ಕೆ ಮಣಿದು ಆರೋಪಿಗಳ ಬಂಧ ಮುಕ್ತತೆ ಮಾಡುವಂತಾಗಿತ್ತು.
ಅದಕ್ಕಾಗಿಯೇ ಹೇಳಿದ್ದು ಅಣ್ಣಾ ಮಲೈನೇ ಬೇರೆ : ಮಧುಕರ ಶೆಟ್ಟರೇ ಬೇರೆ ಅಂತ.
ಸಿಂಗಂ ಹೆಸರು ಅಂಟಿಕೊಂಡಿದ್ದು ಉಡುಪಿಯಿಂದ!
ಅಣ್ಣಾ ಮಲೈ ಎಂಬ ತಮಿಳಿಗ ಕಾರ್ಕಳ ದ ಎಎಸ್ಪಿಯಾಗಿ ಬಂದಾಗ .ಮಾಡಿದ ಖದರು ಅವರೇ ಉಡುಪಿ ಎಸ್ಪಿಯಾಗಬೇಕು ಅಂತ ಮಾಡಿತ್ತು. ಮುಖ್ಯವಾಗಿ ಆಗ ಜನಪರ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಮಧ್ಯಾವಧಿಯ ಸಂಸದಗಿರಿಯಲ್ಲಿದ್ದರು. ಸಮಾಜವಾದಿ ಸಿದ್ಧರಾಮಯ್ಯರ ಮುಖ್ಯಮಂತ್ರಿತ್ವದಲ್ಲಿ ಕೆಲಸÀಗಾರ ವಿನಯಕುಮಾರ ಸೊರಕೆಯ ಉಸ್ತುವಾರಿ ಗಿರಿಯಲ್ಲಿದ್ದ ಉಡುಪಿಗೆ ಒಬ್ಬ ಖಡಕ್ ಖಾಕಿಯನ್ನು ತರಬೇಕೆಂಬ ನಿರ್ಧಾರ ಮಾಡಲಾಯಿತು. ಅದರಿಂದಲೇ ಜಿಲ್ಲೆಯಲ್ಲೇ ಪ್ರೊಬೇಷನ್ ಗಿರಿಯ ಎಎಸ್ಪಿ ಹುದ್ದೆ ನಿರ್ವಹಿಸಿದ್ದ ಅಣ್ಣಾ ಮಲೈ ಅದೇ ಜಿಲ್ಲೆಯ ಎಸ್ಪಿಯಾಗುವಂತಾಗಿತ್ತು.
ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದಾಗ ಮೊದಲಿಗೆ ಇಲಾಖೆಯ ಒಳಗೇ ಸ್ವಚ್ಛತೆಗೆ ಮುಂದಾಗಿದ್ದರು. ಅದು ಆರಂಭದಲ್ಲೇ ಆಯಕಟ್ಟಿನಲ್ಲಿದ್ದವರಿಗೆ ಅಪಾಯ ತಂದಿರಿಸಿತ್ತು. ಎರಡನೆಯದಾಗಿ ಕ್ರೈಮ್ ಮಟ್ಟಹಾಕಲು ಫೀಲ್ಡಿಗಿಳಿವಾಗಲೂ ಅದು ಎಲ್ಲೂ ಸುದ್ದಿಯಾಗದಂತೆ ಮಾಡಿದರು. ಹಾಗಾಗಿ ಎಸ್ಪಿ ಚಡ್ಡಿ ಹಾಕಿಕೊಂಡು ಸೈಕಲಲ್ಲಿ ಬಂದರಂತೆ. ಜುಗಾರಿಯಲ್ಲಿಗೆ ಸಾಮಾನ್ಯರಂತೆ ಬಂದರಂತೆ. ಫ್ರೋಟೋಕಾಲ್ ನ ಹಂಗು ಹರಿದು ಏಕಾಂಗಿಯಾಗಿ ಓಡಾಡಿದ್ದ ಅಣ್ಣಾ ಮಲೈ ಅಪರಾಧ ಕೃತ್ಯದವರ ಎದೆಯಲ್ಲಿ ಒಂದಷ್ಟು ಭೀತಿಯನ್ನು ಆರಂಭದಲ್ಲಿ ಹುಟ್ಟು ಹಾಕಿದ್ದಂತೂ ನಿಜ. ಆಗಲೇ ಸಿಂಗಂ ಸಿನೆಮಾ ದ ಪ್ರಭಾವಕ್ಕೆ ಒಳಗಾಗುವ ಭಾವುಕ ಜೀವಿಗಳು ಅಣ್ಣಾ ಮಲೈರಲ್ಲೂ ಸಿಂಗಂ ಅನ್ನು ಕಂಡು ಉಡುಪಿಯ ಸಿಂಗಂ ಅನ್ನಲಾರಂಭಿಸಿದ್ದು.
ಮತಾಂಧತೆ ಅಳಿಸುವ ನಿಟ್ಟಿನಲ್ಲಿ ನಿಯೋಜಿತರಾದ ಇವರು ಮತ್ತೆ ಸುಧಾರಣೆಗಾಗಿ ಎಲ್ಲರನ್ನೂ ಒಲೈಸುವಂತಾಗಿದ್ದು ಕೂಡಾ ಇಲ್ಲದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...