Homeಕರ್ನಾಟಕಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! - ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಅಣ್ಣಾ ಮಲೈ ಮಧುಕರ ಶೆಟ್ಟಿಯಲ್ಲಾ! – ಪ್ರಜ್ಞಾವಂತ ಪ್ರಜೆಯೊಬ್ಬರ ಅಭಿಪ್ರಾಯ

ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.

- Advertisement -
- Advertisement -

| ಡಿ.ಎಸ್.ಬಿ |

ಪೊಲೀಸ್ ಇಲಾಖೆಯಲ್ಲಿದ್ದೂ ಪ್ರಾಮಾಣಿಕ ಮತ್ತು ಕರ್ತವ್ಯದಲ್ಲಿ ದಕ್ಷನಾಗಿರುವುದರ ಜೊತೆಗೆ ಮಾನವೀಯ ಮನಸ್ಸುಳ್ಳ ಸಮಾಜವಾದಿಯಾಗಿದ್ದರು ಮಧುಕರ ಶೆಟ್ಟಿ. ಅವರ ಅಸೌಖ್ಯದ ಸಾವಿನ ಬಳಿಕ ಜ್ಞಾನೋದಯ ಉಂಟಾಗಿದ್ದರಿಂದ ಅಣ್ಣಾ ಮಲೈ ರಾಜಿನಾಮೆಗೆ ಮುಂದಾಗಿರುವಂತಿದೆ ಎಂಬ ಪ್ರಚಾರ ವ್ಯಾಪಕವಾಗುವ ಲಕ್ಷಣಗಳ ಹಿನ್ನೆಲೆಯಲ್ಲಿ ಈ ಶೀರ್ಷಿಕೆ ನೀಡಲಾಗಿದೆ. ಇಬ್ಬರೂ ಒಂದೇ ಇಲಾಖೆಯವರಾದರೂ ಇಬ್ಬರದ್ದೂ ಪ್ರತ್ಯೇಕ ವ್ಯಕ್ತಿತ್ವ!
ವೃತ್ತಿ ಜೀವನದಲ್ಲಿ ಸಾಧನೆ ಮಾಡಬೇಕು ಎಂಬ ಹಂಬಲದಲ್ಲೇ ಕೆಲಸ ನಿರ್ವಹಿಸಿದ್ದು ಅಣ್ಣಾ ಮಲೈ ಎಂದರೇ ಅತಿಶಯೋಕ್ತಿಯಾಗಲಾರದು
ಸಾಮಾಜಿಕ ತುಡಿತ ಇದ್ದರೂ ಉಡುಪಿಯ ಸೇವೆಯ ಅವಧಿಯಲ್ಲಿ ಕೋಮುವಾದಿಗಳಿಂದ ಕಂಗೆಟ್ಟಿದ್ದೂ ಇದೇ ಅಣ್ಣಾ ಮಲೈ.
ಮಟ್ಕಾ ನಿರ್ಮೂಲನೆ ಮಾಡಲು ಮಟ್ಕಾ ದೊರೆಯ ಮನೆಗೆ ನುಗ್ಗಿ ದೊರೆಸಾನಿಯನ್ನೇ ಎಸ್ಪಿ ಕಚೇರಿಗೆ ತಂದಿರಿಸಿಕೊಂಡು ಮಟ್ಕಾ ದೊರೆಗೆ ಬಂಧನದ ಭೀತಿ ಹುಟ್ಟಿಸಿದ್ದ ಅಣ್ಣಾ ಮಲೈ. ಪರಿಸರ ರಕ್ಷಣೆಯ ಹೆಸರಿನ ಸೈಕಲ್ ಸವಾರಿಯ ಕಾರ್ಯಕ್ರಮಕ್ಕೆ ಉಡುಪಿಯ ಪರಿಸರ ವಿರೋಧಿ ಯುಪಿಸಿಎಲ್ ನ ಮಾಲಿಕತ್ವದ ಅದಾನಿ ಫೌಂಡೇಶನ್‍ನ ನೆರವು ಪಡೆದು ವಿಸ್ಮಯ ಹುಟ್ಟಿಸಿದ್ದರು.
ಉಡುಪಿಯ ಎಸ್ಪಿಯಾಗಿ ಪ್ರಭಾರಕ್ಕೆ ಬಂದಾಗಲೇ ದಲಿತ ಸಂಘಟನೆಯವರನ್ನು ಏಕ ವಚನದಲ್ಲಿ ಗದರಿಸಿ, ಸಂಘಟನೆಯನ್ನು ಹೀಯಾಳಿಸಿ ಕೊನೆಗೆ ತನ್ನ ಕನ್ನಡ ಭಾಷೆಯ ತಿಳಿವಳಿಕೆಯ ಕೊರತೆಯ ನೆರವಿನಲ್ಲಿ ಅದನ್ನು ಮರೆಯಾಗಿಸುವಲ್ಲಿ ಯಶಸ್ವಿಯಾಗಿದ್ದರು.
80 ರ ದಶಕದ ಆರಂಭದಲ್ಲಿ ನಡುಮನಿ ನಾರಾಯಣ ಎಂಬ ಎಸ್ಪಿಯ ಬಳಿಕ ಅಕ್ರಮ ದಂಧೆಯವರಲ್ಲಿ ಭೀತಿ ಹುಟ್ಟುವಂತೆ ಮಾಡಿದ್ದೂ ಇದೇ ಅಣ್ಣಾ ಮಲೈ.
ಎಸ್ಪಿಯಾಗುವ ಮೊದಲು ಕಾರ್ಕಳದ ಎಸ್ಪಿಯಾಗಿ ಬಂದಾಗ ಮಾಡಿದ ಸದ್ದೇ ಅವರನ್ನು ಉಡುಪಿ ಎಸ್ಪಿ ಗಾದಿಯಲ್ಲಿ ಕುಳ್ಳಿರಿಸುವಂತೆ ಮಾಡಿತ್ತು!
ಎಸ್ಪಿ ಆದ ಬಳಿಕ ಕೊನೆ ಕೊನೆಗೆ ಸೆಲೆಬ್ರೆಟಿಯಂತೆ ಕಂಡುಬಂದಿದ್ದೂ ಸುಳ್ಳಲ್ಲಾ.
ಮಹತ್ವಾಕಾಂಕ್ಷೆಯಿಂದ ಇಲಾಖೆಗೆ ಬಂದಿದ್ದ ಅಣ್ಣಾ ಮಲೈ ಪ್ರಚಾರ ಬಯಸುವ ಅಧಿಕಾರಿಯಾಗಿ ಇಲ್ಲಿಂದ ವರ್ಗಾವಣೆಯಾಗಿದ್ದನ್ನು ಯಾರೂ ನಿರಾಕರಿಸಲಾರರು.
ಪೊಲೀಸ್ ಇಲಾಖೆಯಲ್ಲಿ ಇದೂ ಅಗತ್ಯ ಇದೆಯೇನೋ ಅನ್ನಿಸುವುದೂ ಸುಳ್ಳಲ್ಲ. ಜನರಲ್ಲಿ ಇಲಾಖೆಯ ಬಗ್ಗೆ ಬರೇ ಭಯ ತುಂಬಿಕೊಂಡಿದ್ದರೇ ಬದಲಾವಣೆ ಆಗದೇನೋ?!
ಕಾರ್ಕಳ ಎಎಸ್ಪಿಯಾಗಿದ್ದಾಗ ಎಸ್ಪಿ ಅವರ ರಿವ್ಯೂ ಮೀಟಿಂಗಿನಲ್ಲಿ ಮಟ್ಕಾ ಹಾವಳಿ ನಿಗ್ರಹಿಸಿದ್ದೇನೆಂದು ಬಡಾಯಿ ಕೊಚ್ಚಿದ್ದ ಅಂದಿನ ಉಡುಪಿ ಡಿವೈಎಸ್ಪಿ ಪ್ರಭುದೇವ ಮಾನೆಯ ಸುಳ್ಳನ್ನು ಬಯಲಾಗಿಸಲು ತಾನು ಆ ಹುದ್ದೆಯ ಪ್ರಭಾರಕ್ಕೆ ಬಂದಾಗ ಮುಂದಾಗಿದ್ದು ಪ್ರಚಾರ ಪ್ರಿಯತೆಯೋ? ಇಲಾಖೆಯನ್ನು ಸರಿಪಡಿಸುತ್ತೇನೆಂಬ ಆಕಾಂಕ್ಷೆಯೋ? ವೃತ್ತಿಯ ವೈ ಮನಸ್ಸೋ ಅರ್ಥವಾಗಿಲ್ಲಾ. ಆದರೂ ಎಸ್ಪಿಯಾಗಿದ್ದಾಗ ಮಟ್ಕಾ ನಿಯಂತ್ರಣದಲ್ಲಿ ಇರುವಂತೆ ನೋಡಿಕೊಂಡಿದ್ದನ್ನು ಅಲ್ಲಗಳೆಯಲಾಗದು.
ಗಂಗೊಳ್ಳಿಯಲ್ಲಿ ಹುಟ್ಟಿಕೊಂಡ ಮತೀಯವಾದದ ನಿಗ್ರಹಕ್ಕೆ ನಿಯೋಜಿತರಾದಾಗ ತನ್ನ ಸಿಂಗಂ ಗಿರಿ ಧರ್ಮಾಂಧರ ಗುಂಪಿನ ಎದುರು ನಡೆಯಲಾರದು ಎಂಬ ವಾಸ್ತವ ಅರಿತ ಅಣ್ಣಾ ಮಲೈ ಮತಾಂಧರ ಒತ್ತಾಯಕ್ಕೆ ಮಣಿದು ಆರೋಪಿಗಳ ಬಂಧ ಮುಕ್ತತೆ ಮಾಡುವಂತಾಗಿತ್ತು.
ಅದಕ್ಕಾಗಿಯೇ ಹೇಳಿದ್ದು ಅಣ್ಣಾ ಮಲೈನೇ ಬೇರೆ : ಮಧುಕರ ಶೆಟ್ಟರೇ ಬೇರೆ ಅಂತ.
ಸಿಂಗಂ ಹೆಸರು ಅಂಟಿಕೊಂಡಿದ್ದು ಉಡುಪಿಯಿಂದ!
ಅಣ್ಣಾ ಮಲೈ ಎಂಬ ತಮಿಳಿಗ ಕಾರ್ಕಳ ದ ಎಎಸ್ಪಿಯಾಗಿ ಬಂದಾಗ .ಮಾಡಿದ ಖದರು ಅವರೇ ಉಡುಪಿ ಎಸ್ಪಿಯಾಗಬೇಕು ಅಂತ ಮಾಡಿತ್ತು. ಮುಖ್ಯವಾಗಿ ಆಗ ಜನಪರ ರಾಜಕಾರಣಿ ಜಯಪ್ರಕಾಶ್ ಹೆಗ್ಡೆ ಮಧ್ಯಾವಧಿಯ ಸಂಸದಗಿರಿಯಲ್ಲಿದ್ದರು. ಸಮಾಜವಾದಿ ಸಿದ್ಧರಾಮಯ್ಯರ ಮುಖ್ಯಮಂತ್ರಿತ್ವದಲ್ಲಿ ಕೆಲಸÀಗಾರ ವಿನಯಕುಮಾರ ಸೊರಕೆಯ ಉಸ್ತುವಾರಿ ಗಿರಿಯಲ್ಲಿದ್ದ ಉಡುಪಿಗೆ ಒಬ್ಬ ಖಡಕ್ ಖಾಕಿಯನ್ನು ತರಬೇಕೆಂಬ ನಿರ್ಧಾರ ಮಾಡಲಾಯಿತು. ಅದರಿಂದಲೇ ಜಿಲ್ಲೆಯಲ್ಲೇ ಪ್ರೊಬೇಷನ್ ಗಿರಿಯ ಎಎಸ್ಪಿ ಹುದ್ದೆ ನಿರ್ವಹಿಸಿದ್ದ ಅಣ್ಣಾ ಮಲೈ ಅದೇ ಜಿಲ್ಲೆಯ ಎಸ್ಪಿಯಾಗುವಂತಾಗಿತ್ತು.
ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದಾಗ ಮೊದಲಿಗೆ ಇಲಾಖೆಯ ಒಳಗೇ ಸ್ವಚ್ಛತೆಗೆ ಮುಂದಾಗಿದ್ದರು. ಅದು ಆರಂಭದಲ್ಲೇ ಆಯಕಟ್ಟಿನಲ್ಲಿದ್ದವರಿಗೆ ಅಪಾಯ ತಂದಿರಿಸಿತ್ತು. ಎರಡನೆಯದಾಗಿ ಕ್ರೈಮ್ ಮಟ್ಟಹಾಕಲು ಫೀಲ್ಡಿಗಿಳಿವಾಗಲೂ ಅದು ಎಲ್ಲೂ ಸುದ್ದಿಯಾಗದಂತೆ ಮಾಡಿದರು. ಹಾಗಾಗಿ ಎಸ್ಪಿ ಚಡ್ಡಿ ಹಾಕಿಕೊಂಡು ಸೈಕಲಲ್ಲಿ ಬಂದರಂತೆ. ಜುಗಾರಿಯಲ್ಲಿಗೆ ಸಾಮಾನ್ಯರಂತೆ ಬಂದರಂತೆ. ಫ್ರೋಟೋಕಾಲ್ ನ ಹಂಗು ಹರಿದು ಏಕಾಂಗಿಯಾಗಿ ಓಡಾಡಿದ್ದ ಅಣ್ಣಾ ಮಲೈ ಅಪರಾಧ ಕೃತ್ಯದವರ ಎದೆಯಲ್ಲಿ ಒಂದಷ್ಟು ಭೀತಿಯನ್ನು ಆರಂಭದಲ್ಲಿ ಹುಟ್ಟು ಹಾಕಿದ್ದಂತೂ ನಿಜ. ಆಗಲೇ ಸಿಂಗಂ ಸಿನೆಮಾ ದ ಪ್ರಭಾವಕ್ಕೆ ಒಳಗಾಗುವ ಭಾವುಕ ಜೀವಿಗಳು ಅಣ್ಣಾ ಮಲೈರಲ್ಲೂ ಸಿಂಗಂ ಅನ್ನು ಕಂಡು ಉಡುಪಿಯ ಸಿಂಗಂ ಅನ್ನಲಾರಂಭಿಸಿದ್ದು.
ಮತಾಂಧತೆ ಅಳಿಸುವ ನಿಟ್ಟಿನಲ್ಲಿ ನಿಯೋಜಿತರಾದ ಇವರು ಮತ್ತೆ ಸುಧಾರಣೆಗಾಗಿ ಎಲ್ಲರನ್ನೂ ಒಲೈಸುವಂತಾಗಿದ್ದು ಕೂಡಾ ಇಲ್ಲದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...