Homeಅಂಕಣಗಳುಆನಿ ಬಂದವು ಆನಿ ಎರಡೆರಡು ಆನಿ - ಒಂದು ಅಂಬಾನಿ, ಇನ್ನೊಂದು ಅಡಾನಿ

ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ

- Advertisement -
- Advertisement -

ಈಗಿನ ಯಡಿಯೂರಪ್ಪನವರ ಸರಕಾರ ಒಂದು ಬಾರಾ ಭಾನಗಡಿ ತಿದ್ದುಪಡಿ ಮಾಡಲಿಕ್ಕೆ ಹೊಂಟದ. ಮಿತಿಗಳನ್ನ ತೆಗೆದು ಹಾಕಿ ಯಾರು ಬೇಕಾದರೂ ಕೃಷಿ ಜಮೀನು ಖರೀದಿ ಮಾಡಬಹುದು ಅಂತ ಬದಲಾಯಿಸಲಿಕ್ಕೆ ಹೊಂಟದ. ಅದಕ್ಕ ಒಂದು ಅಧ್ಯಯನ ಸಮಿತಿ ಅಂತ ಮಾಡಬೇಕು, ಅದಕ್ಕ ಪೂರಕವಾದ ತಯಾರಿ ಮಾಡಿಕೊಳ್ಳಬೇಕು ಅಂತ ಮೊನ್ನೆನ ಆಯವ್ಯಯದಾಅಗ ಬರದದ.

ಉತ್ತರ ಕರ್ನಾಟಕದ ಆಯಿಗಳು ಅಂದರೆ ಅಜ್ಜಿಯಂದಿರು ತಮ್ಮ ಮೊಮ್ಮಕ್ಕಳನ್ನ ಒಂದು ಹಾಡು ಹೇಳಿ ಬೆಳೆಸತಾರ. ‘ಆನಿ ಬಂತು ಒಂದು ಆನಿ. ಯಾವ ಊರು ಆನಿ’ ಅಂತ. ಅವರು ಆಡಾಡತ ಹಾಡಿದ ಜನಪದ ಹಾಡು ಒಂದು ದಿನ ಖರೆ ಆಗತದ ಅಂತ ಅವರಿಗೆ ಗೊತ್ತ ಇರಲಿಲ್ಲ.

ಆದರ ಒಂದಲ್ಲ ಎರಡು ಆನಿ ಬಂದು ಬಿಟ್ಟಾವು. ಒಂದು ಅಂಬಾನಿ, ಇನ್ನೊಂದು ಅಡಾನಿ.

ಅವು ಎರಡೂ ಬರೇ ಒಂದೇ ಕ್ಷೇತ್ರದಾಗ ಬೀಡು ಬಿಟ್ಟಿಲ್ಲ. ಎಲ್ಲಾದರಾಗೂ ಬಂದಾರ. ಅಂಬಾನಿಯವರು ಚಹಾ ಕಂಪನಿಯಿಂದ ಹಿಡದು ಯುದ್ಧ ವಿಮಾನ ತಂತ್ರಜ್ಞಾನದತನಕಾ ರೊಕ್ಕ ಹೂಡ್ಯಾರ. ಅವರು ಹಳೇ ಕಾಲದಿಂದಲೂ ಇದ್ದವರು. ಕಾಂಗ್ರೆಸ್‍ನಿಂದಲೂ ಉಪಕೃತರಾದವರು, ಹಂಗ ಈಗಿನವರ ಹಂಗಿನಾಗೂ ಇರೋರು. ಈ ರಾಜಕೀಯದಾಗ ಯಾರು ಯಾರ ಹಂಗಿನ್ಯಾಗ ಇದ್ದಾರ ಅನ್ನೋದು ಹೆಂಗ ಗೊತ್ತಾಗಬೇಕು? ಇರಲಿ.

ಹೇಳೋದಿಷ್ಟ, ಅಡಾನಿಯವರು ಮಾತ್ರ ಈಗ ಬಂದವರು. ಇನ್ಸಟಂಟ ಕಾಫಿ ಇದ್ದಂಗ.

ಈ ಚಹಾ ಹಾಗೂ ಕಾಫಿ ಇಬ್ಬರೂ ಕೂಡಿ ಏನೇನೋ ಮಾಡತಿದ್ದರು. ಅದಕ್ಕ ಸರಕಾರದ ಕೃಪೆ- ಆಶೀರ್ವಾದ ನೂ ಇತ್ತು. ಆದರ ಈಗ ಈ ಚಹಾ- ಕಾಫಿ ಕಾಕಟೇಲು ಭಾಳ ಅಪಾಯಕಾರಿ ಆಗೇದ. ಅವರಿಬ್ಬರ ಕಣ್ಣು ಬಡ ಬೋರೇಗೌಡನ ಜಮೀನು ಮ್ಯಾಲೆ ಬಿದ್ದದ.

ಅದು ಹೆಂಗಪಾ ಅಂದರ ಕಾರ್ಪರೇಟು ಕಂಪನಿಗಳು ಕೃಷಿ ಜಮೀನು ಖರೀದಿ ಮಾಡಿ ಅಥವಾ ಲೀಸು ತೊಗೊಂಡು ಕೃಷಿ ಮಾಡಬಹುದು ಅನ್ನೋ ವಿಚಾರಕ್ಕ ಅವರು ಬಂದಾರ. ಅದು ಯಾಕಪ್ಪಾ ಅಂದರ ಇಡೀ ಜಗತ್ತಿನ್ಯಾಗ ಅತಿಹೆಚ್ಚು ಬೇಡಿಕೆ ಇರೋ ವಸ್ತುಗಳು ಕೆಲವೇ ಕೆಲವು- ಆಹಾರ, ನೀರು, ಆರೋಗ್ಯ – ಶಿಕ್ಷಣ ಹಾಗೂ ಹೆಂಡ. ನೀರು, ಆರೋಗ್ಯ -ಶಿಕ್ಷಣ ಹಾಗೂ ಹೆಂಡ ಅಂತೂ ಕಂಪನಿಗಳ ಕೈಯಾಗ ಅದಾವು. ಆಹಾರ ಒಂದು ಉಳಕೊಂಡಿತ್ತು. ಈಗ ಅದನ್ನೂ ಈ ಕಂಪನಿಗಳ ಉಡ್ಯಾಗ ಹಾಕಿ ಪುಣ್ಯಾ ಕಟಿಗೊಳ್ಳೋಣು ಅಂತ ಸರಕಾರ ನಿರ್ಧಾರ ಮಾಡೇದ.

ಭಾರತ ದೇಶದ ಸುಮಾರು ರಾಜ್ಯದೊಳಗ ಯಾರು ಬೇಕಾದರೂ ಕೃಷಿ ಜಮೀನು ಖರೀದಿ ಮಾಡಬಹುದು ಅಂತ ಕಾನೂನು ಅದ. ಆದರ ಕರ್ನಾಟಕದಾಗ ಇದು ಇರಲಿಲ್ಲ. ಯಾಕಂದ್ರ ಬಡವರು ಬೆಳಗಾಗೆದ್ದು ನೆನೆಯೋ ನಾಯಕರಾದ ದೇವರಾಜ ಅರಸರು ರೈತರಿಗೆ ಇರೋದು ಜಮೀನೊಂದೇ. ಅದೂ ಅವರ ಕೈತಪ್ಪಿ ಹೋಗಬಾರದು ಅಂತ ಹೇಳಿ ಕರ್ನಾಟಕ ಜಮೀನು ಸುಧಾರಣಾ ಕಾಯಿದೆ ಹಾಗೂ ಕಂದಾಯ ಕಾಯಿದೆ ಅಂತ ಮಾಡಿದರು. ಅದರ ಪ್ರಕಾರ ರೈತರ ಮಕ್ಕಳು ಮಾತ್ರ ಕೃಷಿ ಜಮೀನು ಖರೀದಿಸಬಹುದು. ಅದಕ್ಕ ಅವರು ತಮ್ಮ ಕುಟುಂಬದವರಲ್ಲಿ ಕೃಷಿ ಜಮೀನು ಮೊದಲಿನಿಂದಲೂ ಇದೆ ಅಂತ ಪುರಾವೆ ತೋರಿಸಬೇಕು. ಅಷ್ಟೇ ಅಲ್ಲದೇ ವಾರ್ಷಿಕ ಕೇವಲ ಎರಡೂವರೆ ಲಕ್ಷ ರೂಪಾಯಿಗಿಂತ ಹೆಚ್ಚು ವರಮಾನ ಇರೋರು ಖರೀದಿ ಮಾಡಲಿಕ್ಕೆ ಬರೋದಿಲ್ಲ, ಅಂತ ಅದರಲ್ಲಿ ಬರೆದರು. ಸಮಾಜವಾದಿ ನಾಯಕ ಕಾಗೋಡು ತಿಮ್ಮಪ್ಪನವರು ಕಂದಾಯ ಸಚಿವರಾಗಿದ್ದಾಗ ಅದನ್ನು 25 ಲಕ್ಷ ಅಂತ ತಿದ್ದುಪಡಿ ಮಾಡಿದರು.

ಈಗಿನ ಯಡಿಯೂರಪ್ಪನವರ ಸರಕಾರ ಒಂದು ಬಾರಾ ಭಾನಗಡಿ ತಿದ್ದುಪಡಿ ಮಾಡಲಿಕ್ಕೆ ಹೊಂಟದ. ಈ ಮಿತಿಗಳನ್ನ ತೆಗೆದುಹಾಕಿ ಯಾರು ಬೇಕಾದರೂ ಕೃಷಿ ಜಮೀನು ಖರೀದಿ ಮಾಡಬಹುದು ಅಂತ ಬದಲಾಯಿಸಲಿಕ್ಕೆ ಹೊಂಟದ. ಅದಕ್ಕ ಒಂದು ಅಧ್ಯಯನ ಸಮಿತಿ ಅಂತ ಮಾಡಬೇಕು, ಅದಕ್ಕ ಪೂರಕವಾದ ತಯಾರಿ ಮಾಡಿಕೊಳ್ಳಬೇಕು ಅಂತ ಮೊನ್ನೆನ ಆಯವ್ಯಯದಾಗ ಬರದದ.

ಇದರಿಂದ ಏನಾಗತದ ಅಂದರ ಕಾರ್ಪೊರೇಟು ಕಂಪನಿಗಳು ಇಡೀ ಹಳ್ಳಿಗಳನ್ನೇ ಲೀಸಿಗೆ ತೊಗೋಬಹುದು. ಈ ಲೀಸು ಹತ್ತು ವರ್ಷದಿಂದ ಹಿಡಕೊಂಡು 99 ವರ್ಷದ ತನಕಾನೂ ಆಗಬಹುದು. ಅಲ್ಲಿ ತನಕಾ ಆ ಜಮೀನು ರೈತರ ಒಡೆತನದಾಗ ಇರೋದಿಲ್ಲ. ಒಬ್ಬ ರೈತ ಒಮ್ಮೆ ನೂರು ವರ್ಷ ಲೀಸು ಕೊಟ್ಟಾ ಅಂದರ ನಾಕು ತಲೆಮಾರಿನ ತನಕಾ ಅವರು ಅದನ್ನ ಮಾರಲಿಕ್ಕೆ ಬರಂಗಿಲ್ಲ. ಆ ಜಮೀನಿನ್ಯಾಗ ಏನು ಬೆಳೀಬೇಕು, ಏನು ಬೇಳೀಬಾರದು ಅಂತ ಅವರು ಹೇಳಲಿಕ್ಕೆ ಬರಂಗಿಲ್ಲಾ.

ರೈತರಿಗೆ ತಿಂಗಳಿಗೆ ಇಷ್ಟು ಅಂತ `ರಿಟೇನರಷಿಪ್’ (ಅಂದರ ಜಮೀನು ಕೊಟ್ಟದ್ದಕ್ಕ ಆ ರೈತ ಜೀವ ಉಳಿಸಿಕೊಳ್ಳಲಿ ಅಂತ ಅವರು ಕೊಡೋ ತಿರುಪೆ) ಕೊಡತಾರ. ನಮ್ಮ ರಾಜ್ಯದಾಗ 80 ಶೇಕಡಾ ರೈತರು ಐದು ಎಕರೆಗೂ ಕಮ್ಮಿ ಜಮೀನು ಹೊಂದಿದವರು ಇದ್ದಾರ. ಅವರಿಗೆ ಇರೋ ಆಸ್ತಿ ಅಂದರ ಅದೊಂದ. ಅವರು ಅದನ್ನೂ ಕಳಕೊಂಡರ ಅಕ್ಷರಶ ಜೀವಚ್ಛವ ಆಗಿ ಓಡಾಡಲಿಕ್ಕೆ ಹತ್ತತಾರ.

ಇನ್ನ ಇಡೀ ಊರು- ಅಥವಾ ಹೋಬಳಿ ಅಥವಾ ತಾಲೂಕು ಒಂದು ಕಂಪನಿ ಕೈಯ್ಯಾಗ ಹೋಗೋದಕ್ಕ ಅವರು ಅಲ್ಲಿನ ಆಹಾರ ಉತ್ಪಾದನೆಯನ್ನ ಸಂಪೂರ್ಣವಾಗಿ ತಮ್ಮ ಕೈಯ್ಯಾಗ ತೊಗೋಬಹುದು. ಜ್ವಾಳ- ಬ್ಯಾಳಿ- ಕಾಳು ಬಿಟ್ಟು ಯಾವುದೋ ಕಂಪನಿಗೆ ಬೇಕಾದ ಕಚ್ಚಾ ವಸ್ತು ಬೆಳೀಬಹುದು. ಒಂದು ಭೂಪ್ರದೇಶಕ್ಕ ತಾಳಲಾರದ ಇನ್ನೊಂದು ಪ್ರದೇಶದ ಬೆಳಿ ಬೆಳದು ಮಣ್ಣು- ನೀರು ಹಾಳು ಮಾಡಬಹುದು. ಅತಿ ಗೊಬ್ಬರ- ಅತಿ ನೀರಾವರಿ ಮಾಡಿ ಆ ಮಣ್ಣು ಬರಬಾದು ಮಾಡಬಹುದು. ಇದನ್ನು ಯಾರೂ ಮಾತನಾಡಲಿಕ್ಕೆ ಆಗಂಗಿಲ್ಲ. ಇನ್ನು ಲೀಸು ತೊಗೊಂಡ ಕಂಪನಿ, ತಂಬಾಕು- ಕಾಫಿ- ಕಬ್ಬು- ರಬ್ಬರು -ಸ್ಟೀವಿಯಾ- ನೀಲಗಿರಿ – ಮಣ್ಣು ಮಸಿ ಅಂತ ಏನರ ಬೆಳದು ಕೋಟ್ಯಂತರ ರೂಪಾಯಿ ಲಾಭ ಮಾಡಿದರೂ ಸಹ ರೈತರಿಗೆ ಮೊದಲಿಗೆ ಒಪ್ಪಿಕೊಂಡಷ್ಟ ಕೊಡತದ. ಇದನ್ನ ಏರಿಸೂ ಅಂತ ಕೇಳೋ ಹಂಗ ಇರಂಗಿಲ್ಲ. ಈಗ ರೈತಸಂಘದವರಿಗೆ ಕಬ್ಬಿನ ಕಾರ್ಖಾನಿ ಮಾಲಿಕರಿಂದ ಬಾಕಿ ಬಿಡಿಸಿಕೊಳ್ಳಲಿಕ್ಕೆ ಅಗವಲ್ಲದು. ಇನ್ನು ನಾಳೆ ಆನಿ ಕಂಪನಿ ಸೊಂಡಿಯೊಳಗಿಂದ ಕಬ್ಬಿನ ತುಂಡು ಹೆರೀಲಿಕ್ಕೆ ಆಗತದ?

ಸಾವಿರಾರು ಎಕರೆ ಏಕ ಬೆಳೆ ಪದ್ಧತಿ- ಪರಿಸರ ನಾಶ- ಹಾನಿಕಾರಕ ರಿಟೇನರ್ ಪಾವತಿ- ಆಹಾರದ ಏಕಸ್ವಾಮ್ಯ ಇಂಥಾವು ಎಲ್ಲಾ ಆಗಬಹುದು. ಆದರ ಇದರ ಅಪಾಯಗಳ ಬಗ್ಗೆ ಇನ್ನೂ ಯಾರೂ ದನಿ ಎತ್ತವಲ್ಲರು. ಬೆಲೆ ಕಮ್ಮಿ ಅಂತ ಹೇಳಿ ಟೊಮ್ಯಾಟೋ ತೊಗೊಂಡು ಬಂದು ರಸ್ತೆಯೊಳಗ ಹಾಕೋ ರೈತಸಂಘದವರು ಈ ಮಹಾ ಮಾರಿಯ ಜೊತೆ ಹೆಂಗ ಯುದ್ಧ ಮಾಡಬಹುದು ಅಂತ ವಿಚಾರನ ಮಾಡಿಲ್ಲ.

ನಮ್ಮ ದುರಾದೃಷ್ಟಕ್ಕ ಕರ್ನಾಟಕದ ಸುಮಾರು ಶೇಕಡಾ 70ರಷ್ಟು ಇರೋ ರೈತರ ಜೀವನದ ಕೊಡಲಿಯ ಕಾವು ಆಗಬಹುದಾದ ಈ ಕಾನೂನು ತಿದ್ದುಪಡಿಯ ಬಗ್ಗೆ ನಮ್ಮ ವಿಧಾನಮಂಡಲದಾಗ ಚರ್ಚೆ ಆಗಲೇ ಇಲ್ಲ. ಅದು ಯಾರಿಗೂ ಮಾತನಾಡುವಷ್ಟು ಗಂಭೀರ ಅಂತ ಅನ್ನಿಸಲೇ ಇಲ್ಲೋ ಏನೋ?

ಅಪ್ರತಿಮ ನಾಯಕ ಶಕ್ತಿಮಾನ್‍ನ ಎದುರಿಗೆ ಕೈಕಟ್ಟಿಕೊಂಡು `ಎಸ್ ಸರ್’ ಅಂತ ಹಾಜರಾತಿ ನೀಡುವ ಆಳುವ ಪಕ್ಷದವರಂತೂ ಬಿಡ್ರಿ, ಸರಕಾರದ ಮ್ಯಾಲೆ ಕಣ್ಣು ಇಡಲಿಕ್ಕೆ ಅಂತನ ಇರುವ ವಿರೋಧ ಪಕ್ಷದ ಹದ್ದುಗಳು ಸಹಿತ ಸುಮ್ಮನೇ ಕೂತಾವ. ಯಾಕಂದರ ಈ ದೇಶದಾಗ ಆಡಳಿತ ಪಕ್ಷ- ವಿರೋಧ ಪಕ್ಷ ಅಂತ ಇಲ್ಲ. ಇಲ್ಲಿ ಇರೋದು ಬರೇ ಇಂದಿನ ಆಡಳಿತ ಪಕ್ಷ- ನಿನ್ನೆಯ ಆಡಳಿತ ಪಕ್ಷ ಹಾಗೂ ನಾಳೆಯ ಆಡಳಿತ ಪಕ್ಷ ಅಂತ ಮಾತ್ರ. ಇವರು ಇವತ್ತು ಆನಿ- ಕುದರಿ ಕಂಪನಿಗಳನ್ನ ಚನ್ನಾಗಿ ನೋಡಿಕೊಂಡರೆ ನಾಳೆ ಅವರು ಅಧಿಕಾರಕ್ಕ ಬರಲು ಅವರು ಸಹಾಯ ಮಾಡತಾರ. ಇಲ್ಲಾಂದರ ಬರೇ ಒಂದ ಪಕ್ಷದ ಆಡಳಿತ ನೋಡಬೇಕಾಗತದ. ಅಥವಾ ಆಡಳಿತದಾಗಿರೋ ಪಕ್ಷ ಸೇರಿಕೋಬೇಕಾಗತದ. ರಾಜಮಹಾರಾಜರೇ ಪಕ್ಷ ಬಿಟ್ಟು ಹೋಗಲಿಕ್ಕೆ ಹತ್ತಾಗ ಅಧಿಕಾರದಿಂದ ದೂರ ಇರೋ ವೆಂಕಾ- ನೊಣಾ- ಸೀನಾನಂಥವರು ಯಾಕ ಸುಮ್ಮನೇ ಇರತಾರ?

ಕೃಷಿ ಭೂಮಿ ಮಾರಾಟಕ್ಕ ಮಿತಿ ಇರೋದರಿಂದನ ಇಲ್ಲಿ ಉದ್ಯಮ ಅಭಿವೃದ್ಧಿ ಹೊಂದಿಲ್ಲ ಅನ್ನೋ ಅರ್ಥಹೀನ ವಾದವನ್ನ ಕಂಪನಿಗಳು ಮಂಡಸಲಿಕ್ಕೆ ಹತ್ಯಾವು. ಅವರಿಗಿಂತ ಜೋರಾಗಿ ನಮ್ಮನ್ನಾಳುವ ರಾಜಕಾರಣಿಗಳೇ ಇದರ ಬಗ್ಗೆ ಮಾತಾಡಲಿಕ್ಕೆ ಹತ್ಯಾರ. ಭೂಮಿ ಇದ್ದರೆ ಬಂಡವಾಳ, ಬಂಡವಾಳ ಬಂದರೆ ಉದ್ದಿಮೆ, ಉದ್ದಿಮೆ ಇದ್ದರೆ ಉದ್ಯೋಗ, ಉದ್ಯೋಗ ಇದ್ದರೆ ಅಭಿವೃದ್ಧಿ ಅನ್ನೋ ಮಂತ್ರ ಜಪಿಸಲಿಕ್ಕೆ ಹತ್ಯಾರ. ಆದರ ಅಭಿವೃದ್ಧಿ ಅನ್ನೋದು ಮಾಯಾ ಮೋಹಿನಿ. ಅದರ ಬೆನ್ನು ಹತ್ತಿದರ ತಿರಗಿ ಬರಲಿಕ್ಕೆ ಆಗೋದಿಲ್ಲ. ಆ ದಾರಿಯೊಳಗ ಹೋಗಬೇಕಾದರ ನೆಮ್ಮದಿ ಅನ್ನೋದನ್ನ ಬಿಟ್ಟುಹೋಗಬೇಕಾಗತದ. ಪರಿಸರ ನಾಶ ಸಹಿಸಿಕೊಳ್ಳಬೇಕಾಗತದ. ಕಾಲ ಮಿಂಚಿ ಹೋಗೋದರಾಗ ಇದು ನಮ್ಮೆಲ್ಲರಿಗೂ ತಿಳೀಬೇಕಾಗತದ. ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಕೊಡುವ ಮಾಹಿತಿ, ಸುದ್ದಿ, ಚಿಂತನೆ ಗಳು ತುಂಬಾ ಮೌಲಿಕ ಹಾಗೂ ತುರ್ತು. ನನಗೆ ಇಷ್ಟ ವಾಯಿತು. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...