Homeಕರ್ನಾಟಕಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

- Advertisement -
- Advertisement -

ಭಾರತದಾದ್ಯಂತ ಕೊರೊನಾ ವೈರಸ್‌ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದ ಬೆರಳೆಣಿಕೆಯ ಒಂದೆರಡು ರಾಜ್ಯಗಳನ್ನು ಬಿಟ್ಟರೆ ಎಲ್ಲಾ ರಾಜ್ಯಗಳು ಕೊರೊನಾ ಸೋಂಕನ್ನು ನಿಯಂತ್ರಿಸಲಾಗದೆ ಪರದಾಡುತ್ತಿವೆ.ಇವುಗಳಲ್ಲಿ ಕರ್ನಾಟಕವೂ ಒಂದು. ಆದರೆ, ಕರ್ನಾಕಟದ ಕೊಡಗು ಜಿಲ್ಲೆ ಮಾತ್ರ ಸೋಂಕಿನ ಬಾದೆಯಿಂದ ಮುಕ್ತವಾಗಿ ಸಂತೋ‍ಷದ ನಗೆ ಬೀರುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಕೊಡಗಿನಲ್ಲಿ ಕಳೆದ ಐದು ವಾರಗಳಿಂದ ಒಂದೇ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ. ಕೊಡಗನ್ನು ಕೊರೊನಾ ಸೋಂಕಿನಿಂದ ದೂರವಿಡಲು ಶ್ರಮಿಸುತ್ತಿರುವವರು ಅಲ್ಲಿನ ಜಿಲ್ಲಾಧಿಕಾರಿಯಾದ ಕೇರಳ ಮೂಲದ ‘ಅನೀಸ್ ಕಣ್ಮಣಿ ಜಾಯ್‌’.

ಕೇರಳದ ಬಡ ರೈತನ ಮಗಳಾಗಿದ್ದ ಅನೀಸ್ ಅವರು ತಮ್ಮ ಶಾಲಾ ದಿನಗಳಲ್ಲಿ ಪುಸ್ತಕಗಳನ್ನೂ ಖರೀದಿಸಲಾಗದಷ್ಟು ಬಡತನದಲ್ಲಿ ಬೆಳೆದವರು. ಆದರೆ, ಅವರು ಈಗ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ. ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಕೊಡಗು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಇವರ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಿಗರು ಪ್ರಶಂಸೆಯ ಮಳೆಗರೆಯುತ್ತಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೊಡಗಿನಲ್ಲಿ ಅವರು ಮಾಡುತ್ತಿರುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ದೇಶದಲ್ಲಿ ಕೊರೊನಾ ಮುಕ್ತವಾಗಿರುವ ಕೆಲವೇ ಜಿಲ್ಲೆಗಳಲ್ಲಿ ಕೊಡಗು ಕೂಡ ಒಂದು. ಕರ್ನಾಟಕವೂ ಸೇರಿದಂತೆ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಕೊಡಗು ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್;  ಕೊರೊನಾ ವಿರುದ್ಧ ಗೆದ್ದ ಕೊಡಗು..!!
ಅನೀಸ್ ಕಣ್ಮಣಿ ಜಾಯ್

Covid19india.org ನಲ್ಲಿ ನವೀಕರಿಸಿದ ಸಂಖ್ಯೆಗಳ ಪ್ರಕಾರ, ಇಲ್ಲಿಯವರೆಗೆ ಕೊಡಗಿನಲ್ಲಿ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೂವರಲ್ಲಿ ಎರಡು ಪ್ರಕರಣಗಳು ಸಕ್ರಿಯವಾಗಿವೆ ಮತ್ತು ಒಬ್ಬರು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಸಡಿಲಗೊಳಿಸಿ, ಅನೇಕ ಪ್ರವಾಸಿ ತಾಣಗಳನ್ನು ತೆರೆಯಲಾಗುತ್ತಿದೆ. ಆದರೆ, ಕೊಡಗಿನಲ್ಲಿ ಪ್ರವಾಸಿ ತಾಣಗಳನ್ನು ಇನ್ನೂ ಕೆಲವು ದಿನಗಳ ವರೆಗೆ ತೆರೆಯುವುದಿಲ್ಲ ಎಂದು ಅನ್ನೀಸ್‌ ಘೋಷಿಸಿದ್ದಾರೆ.

ನೊಂದಾಯಿಸಿಕೊಂಡಿರುವ ಹೋಂಸ್ಟೇಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಬರುವ ಪ್ರವಾಸಗಳ ಪ್ರಯಾಣದ ಇತಿಹಾಸ, ಅವರ ವಿವರಗಳುಳ್ಳ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಪಟ್ಟಿದ್ದರೆ ಎಂದು ತಿಳಿದುಕೊಳ್ಳುವಂತೆ ಆದೇಶಿಸಲಾಗಿದೆ.

ಕೂರ್ಗ್‌ ಎಂದೇ ಖ್ಯಾತಿ ಪಡೆದಿರುವ ಪ್ರವಾಸಿ ತಾಣವಾದ ಕೊಡಗಿನಲ್ಲಿ ಇದೂವರೆಗೂ 3 ಕೊರೊನಾ ಪ್ರಕರಣಗಳು ಮಾತ್ರ ದಾಖಲಾಗಿದ್ದು, ಸೋಂಕನ್ನು ನಿಯಂತ್ರಸುವಲ್ಲಿ ಅಲ್ಲಿಯ ಜಿಲ್ಲಾಧಿಕಾರಿಯಾಗಿರುವ ಅನೀಸ್ ಪ್ರಯತ್ನ ಯಶಸ್ವಿಯಾಗಿದೆ. ಬಡತನದ ವಿರುದ್ಧ ಹೋರಾಡಿ ಸಾಧನೆ ಮಾಡಿರುವ ಅನ್ನೀಸ್ ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿಯೂ ಸಾಧನೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ಕೇಳಿಬರುತ್ತಿವೆ.

Ennis Kanmani Joy of Kerala fought poverty and cracked UPSC Civil Services Exam. She secured 65th rank in her second…

Posted by Sochle on Saturday, June 6, 2020

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅನ್ನೀಸ್‌ ಅವರು ಬಡತನದ ವಿರುದ್ಧ ಹೇಗೆ ಹೋರಾಡಿದರು ಮತ್ತು ಹೇಗೆ ಕನಸನ್ನು ಸಾಧಿಸಿದರು ಎಂಬ ಕಥೆಯನ್ನು ಹಂಚಿಕೊಂಡಿದ್ದಾರೆ.


ಓದಿ: ‘ಭರವಸೆಯ ಕಿರಣ’; ಕೊರೊನಾ ಸೋಂಕಿತ 97 ವರ್ಷದ ಹಿರಿಯ ವ್ಯಕ್ತಿ ಗುಣಮುಖ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...