Homeಕರ್ನಾಟಕಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

- Advertisement -
- Advertisement -

ಭಾರತದಾದ್ಯಂತ ಕೊರೊನಾ ವೈರಸ್‌ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದ ಬೆರಳೆಣಿಕೆಯ ಒಂದೆರಡು ರಾಜ್ಯಗಳನ್ನು ಬಿಟ್ಟರೆ ಎಲ್ಲಾ ರಾಜ್ಯಗಳು ಕೊರೊನಾ ಸೋಂಕನ್ನು ನಿಯಂತ್ರಿಸಲಾಗದೆ ಪರದಾಡುತ್ತಿವೆ.ಇವುಗಳಲ್ಲಿ ಕರ್ನಾಟಕವೂ ಒಂದು. ಆದರೆ, ಕರ್ನಾಕಟದ ಕೊಡಗು ಜಿಲ್ಲೆ ಮಾತ್ರ ಸೋಂಕಿನ ಬಾದೆಯಿಂದ ಮುಕ್ತವಾಗಿ ಸಂತೋ‍ಷದ ನಗೆ ಬೀರುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಕೊಡಗಿನಲ್ಲಿ ಕಳೆದ ಐದು ವಾರಗಳಿಂದ ಒಂದೇ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ. ಕೊಡಗನ್ನು ಕೊರೊನಾ ಸೋಂಕಿನಿಂದ ದೂರವಿಡಲು ಶ್ರಮಿಸುತ್ತಿರುವವರು ಅಲ್ಲಿನ ಜಿಲ್ಲಾಧಿಕಾರಿಯಾದ ಕೇರಳ ಮೂಲದ ‘ಅನೀಸ್ ಕಣ್ಮಣಿ ಜಾಯ್‌’.

ಕೇರಳದ ಬಡ ರೈತನ ಮಗಳಾಗಿದ್ದ ಅನೀಸ್ ಅವರು ತಮ್ಮ ಶಾಲಾ ದಿನಗಳಲ್ಲಿ ಪುಸ್ತಕಗಳನ್ನೂ ಖರೀದಿಸಲಾಗದಷ್ಟು ಬಡತನದಲ್ಲಿ ಬೆಳೆದವರು. ಆದರೆ, ಅವರು ಈಗ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ. ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಕೊಡಗು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಇವರ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಿಗರು ಪ್ರಶಂಸೆಯ ಮಳೆಗರೆಯುತ್ತಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೊಡಗಿನಲ್ಲಿ ಅವರು ಮಾಡುತ್ತಿರುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ದೇಶದಲ್ಲಿ ಕೊರೊನಾ ಮುಕ್ತವಾಗಿರುವ ಕೆಲವೇ ಜಿಲ್ಲೆಗಳಲ್ಲಿ ಕೊಡಗು ಕೂಡ ಒಂದು. ಕರ್ನಾಟಕವೂ ಸೇರಿದಂತೆ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಕೊಡಗು ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್;  ಕೊರೊನಾ ವಿರುದ್ಧ ಗೆದ್ದ ಕೊಡಗು..!!
ಅನೀಸ್ ಕಣ್ಮಣಿ ಜಾಯ್

Covid19india.org ನಲ್ಲಿ ನವೀಕರಿಸಿದ ಸಂಖ್ಯೆಗಳ ಪ್ರಕಾರ, ಇಲ್ಲಿಯವರೆಗೆ ಕೊಡಗಿನಲ್ಲಿ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೂವರಲ್ಲಿ ಎರಡು ಪ್ರಕರಣಗಳು ಸಕ್ರಿಯವಾಗಿವೆ ಮತ್ತು ಒಬ್ಬರು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಸಡಿಲಗೊಳಿಸಿ, ಅನೇಕ ಪ್ರವಾಸಿ ತಾಣಗಳನ್ನು ತೆರೆಯಲಾಗುತ್ತಿದೆ. ಆದರೆ, ಕೊಡಗಿನಲ್ಲಿ ಪ್ರವಾಸಿ ತಾಣಗಳನ್ನು ಇನ್ನೂ ಕೆಲವು ದಿನಗಳ ವರೆಗೆ ತೆರೆಯುವುದಿಲ್ಲ ಎಂದು ಅನ್ನೀಸ್‌ ಘೋಷಿಸಿದ್ದಾರೆ.

ನೊಂದಾಯಿಸಿಕೊಂಡಿರುವ ಹೋಂಸ್ಟೇಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಬರುವ ಪ್ರವಾಸಗಳ ಪ್ರಯಾಣದ ಇತಿಹಾಸ, ಅವರ ವಿವರಗಳುಳ್ಳ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಪಟ್ಟಿದ್ದರೆ ಎಂದು ತಿಳಿದುಕೊಳ್ಳುವಂತೆ ಆದೇಶಿಸಲಾಗಿದೆ.

ಕೂರ್ಗ್‌ ಎಂದೇ ಖ್ಯಾತಿ ಪಡೆದಿರುವ ಪ್ರವಾಸಿ ತಾಣವಾದ ಕೊಡಗಿನಲ್ಲಿ ಇದೂವರೆಗೂ 3 ಕೊರೊನಾ ಪ್ರಕರಣಗಳು ಮಾತ್ರ ದಾಖಲಾಗಿದ್ದು, ಸೋಂಕನ್ನು ನಿಯಂತ್ರಸುವಲ್ಲಿ ಅಲ್ಲಿಯ ಜಿಲ್ಲಾಧಿಕಾರಿಯಾಗಿರುವ ಅನೀಸ್ ಪ್ರಯತ್ನ ಯಶಸ್ವಿಯಾಗಿದೆ. ಬಡತನದ ವಿರುದ್ಧ ಹೋರಾಡಿ ಸಾಧನೆ ಮಾಡಿರುವ ಅನ್ನೀಸ್ ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿಯೂ ಸಾಧನೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ಕೇಳಿಬರುತ್ತಿವೆ.

Ennis Kanmani Joy of Kerala fought poverty and cracked UPSC Civil Services Exam. She secured 65th rank in her second…

Posted by Sochle on Saturday, June 6, 2020

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅನ್ನೀಸ್‌ ಅವರು ಬಡತನದ ವಿರುದ್ಧ ಹೇಗೆ ಹೋರಾಡಿದರು ಮತ್ತು ಹೇಗೆ ಕನಸನ್ನು ಸಾಧಿಸಿದರು ಎಂಬ ಕಥೆಯನ್ನು ಹಂಚಿಕೊಂಡಿದ್ದಾರೆ.


ಓದಿ: ‘ಭರವಸೆಯ ಕಿರಣ’; ಕೊರೊನಾ ಸೋಂಕಿತ 97 ವರ್ಷದ ಹಿರಿಯ ವ್ಯಕ್ತಿ ಗುಣಮುಖ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...