Homeಕರ್ನಾಟಕಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

- Advertisement -
- Advertisement -

ಭಾರತದಾದ್ಯಂತ ಕೊರೊನಾ ವೈರಸ್‌ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದ ಬೆರಳೆಣಿಕೆಯ ಒಂದೆರಡು ರಾಜ್ಯಗಳನ್ನು ಬಿಟ್ಟರೆ ಎಲ್ಲಾ ರಾಜ್ಯಗಳು ಕೊರೊನಾ ಸೋಂಕನ್ನು ನಿಯಂತ್ರಿಸಲಾಗದೆ ಪರದಾಡುತ್ತಿವೆ.ಇವುಗಳಲ್ಲಿ ಕರ್ನಾಟಕವೂ ಒಂದು. ಆದರೆ, ಕರ್ನಾಕಟದ ಕೊಡಗು ಜಿಲ್ಲೆ ಮಾತ್ರ ಸೋಂಕಿನ ಬಾದೆಯಿಂದ ಮುಕ್ತವಾಗಿ ಸಂತೋ‍ಷದ ನಗೆ ಬೀರುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಕೊಡಗಿನಲ್ಲಿ ಕಳೆದ ಐದು ವಾರಗಳಿಂದ ಒಂದೇ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ. ಕೊಡಗನ್ನು ಕೊರೊನಾ ಸೋಂಕಿನಿಂದ ದೂರವಿಡಲು ಶ್ರಮಿಸುತ್ತಿರುವವರು ಅಲ್ಲಿನ ಜಿಲ್ಲಾಧಿಕಾರಿಯಾದ ಕೇರಳ ಮೂಲದ ‘ಅನೀಸ್ ಕಣ್ಮಣಿ ಜಾಯ್‌’.

ಕೇರಳದ ಬಡ ರೈತನ ಮಗಳಾಗಿದ್ದ ಅನೀಸ್ ಅವರು ತಮ್ಮ ಶಾಲಾ ದಿನಗಳಲ್ಲಿ ಪುಸ್ತಕಗಳನ್ನೂ ಖರೀದಿಸಲಾಗದಷ್ಟು ಬಡತನದಲ್ಲಿ ಬೆಳೆದವರು. ಆದರೆ, ಅವರು ಈಗ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ. ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಕೊಡಗು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಇವರ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಿಗರು ಪ್ರಶಂಸೆಯ ಮಳೆಗರೆಯುತ್ತಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೊಡಗಿನಲ್ಲಿ ಅವರು ಮಾಡುತ್ತಿರುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ದೇಶದಲ್ಲಿ ಕೊರೊನಾ ಮುಕ್ತವಾಗಿರುವ ಕೆಲವೇ ಜಿಲ್ಲೆಗಳಲ್ಲಿ ಕೊಡಗು ಕೂಡ ಒಂದು. ಕರ್ನಾಟಕವೂ ಸೇರಿದಂತೆ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಕೊಡಗು ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್;  ಕೊರೊನಾ ವಿರುದ್ಧ ಗೆದ್ದ ಕೊಡಗು..!!
ಅನೀಸ್ ಕಣ್ಮಣಿ ಜಾಯ್

Covid19india.org ನಲ್ಲಿ ನವೀಕರಿಸಿದ ಸಂಖ್ಯೆಗಳ ಪ್ರಕಾರ, ಇಲ್ಲಿಯವರೆಗೆ ಕೊಡಗಿನಲ್ಲಿ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೂವರಲ್ಲಿ ಎರಡು ಪ್ರಕರಣಗಳು ಸಕ್ರಿಯವಾಗಿವೆ ಮತ್ತು ಒಬ್ಬರು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಸಡಿಲಗೊಳಿಸಿ, ಅನೇಕ ಪ್ರವಾಸಿ ತಾಣಗಳನ್ನು ತೆರೆಯಲಾಗುತ್ತಿದೆ. ಆದರೆ, ಕೊಡಗಿನಲ್ಲಿ ಪ್ರವಾಸಿ ತಾಣಗಳನ್ನು ಇನ್ನೂ ಕೆಲವು ದಿನಗಳ ವರೆಗೆ ತೆರೆಯುವುದಿಲ್ಲ ಎಂದು ಅನ್ನೀಸ್‌ ಘೋಷಿಸಿದ್ದಾರೆ.

ನೊಂದಾಯಿಸಿಕೊಂಡಿರುವ ಹೋಂಸ್ಟೇಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಬರುವ ಪ್ರವಾಸಗಳ ಪ್ರಯಾಣದ ಇತಿಹಾಸ, ಅವರ ವಿವರಗಳುಳ್ಳ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಪಟ್ಟಿದ್ದರೆ ಎಂದು ತಿಳಿದುಕೊಳ್ಳುವಂತೆ ಆದೇಶಿಸಲಾಗಿದೆ.

ಕೂರ್ಗ್‌ ಎಂದೇ ಖ್ಯಾತಿ ಪಡೆದಿರುವ ಪ್ರವಾಸಿ ತಾಣವಾದ ಕೊಡಗಿನಲ್ಲಿ ಇದೂವರೆಗೂ 3 ಕೊರೊನಾ ಪ್ರಕರಣಗಳು ಮಾತ್ರ ದಾಖಲಾಗಿದ್ದು, ಸೋಂಕನ್ನು ನಿಯಂತ್ರಸುವಲ್ಲಿ ಅಲ್ಲಿಯ ಜಿಲ್ಲಾಧಿಕಾರಿಯಾಗಿರುವ ಅನೀಸ್ ಪ್ರಯತ್ನ ಯಶಸ್ವಿಯಾಗಿದೆ. ಬಡತನದ ವಿರುದ್ಧ ಹೋರಾಡಿ ಸಾಧನೆ ಮಾಡಿರುವ ಅನ್ನೀಸ್ ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿಯೂ ಸಾಧನೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ಕೇಳಿಬರುತ್ತಿವೆ.

Ennis Kanmani Joy of Kerala fought poverty and cracked UPSC Civil Services Exam. She secured 65th rank in her second…

Posted by Sochle on Saturday, June 6, 2020

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅನ್ನೀಸ್‌ ಅವರು ಬಡತನದ ವಿರುದ್ಧ ಹೇಗೆ ಹೋರಾಡಿದರು ಮತ್ತು ಹೇಗೆ ಕನಸನ್ನು ಸಾಧಿಸಿದರು ಎಂಬ ಕಥೆಯನ್ನು ಹಂಚಿಕೊಂಡಿದ್ದಾರೆ.


ಓದಿ: ‘ಭರವಸೆಯ ಕಿರಣ’; ಕೊರೊನಾ ಸೋಂಕಿತ 97 ವರ್ಷದ ಹಿರಿಯ ವ್ಯಕ್ತಿ ಗುಣಮುಖ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....