Homeಕರ್ನಾಟಕಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

- Advertisement -
- Advertisement -

ಭಾರತದಾದ್ಯಂತ ಕೊರೊನಾ ವೈರಸ್‌ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದ ಬೆರಳೆಣಿಕೆಯ ಒಂದೆರಡು ರಾಜ್ಯಗಳನ್ನು ಬಿಟ್ಟರೆ ಎಲ್ಲಾ ರಾಜ್ಯಗಳು ಕೊರೊನಾ ಸೋಂಕನ್ನು ನಿಯಂತ್ರಿಸಲಾಗದೆ ಪರದಾಡುತ್ತಿವೆ.ಇವುಗಳಲ್ಲಿ ಕರ್ನಾಟಕವೂ ಒಂದು. ಆದರೆ, ಕರ್ನಾಕಟದ ಕೊಡಗು ಜಿಲ್ಲೆ ಮಾತ್ರ ಸೋಂಕಿನ ಬಾದೆಯಿಂದ ಮುಕ್ತವಾಗಿ ಸಂತೋ‍ಷದ ನಗೆ ಬೀರುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಕೊಡಗಿನಲ್ಲಿ ಕಳೆದ ಐದು ವಾರಗಳಿಂದ ಒಂದೇ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ. ಕೊಡಗನ್ನು ಕೊರೊನಾ ಸೋಂಕಿನಿಂದ ದೂರವಿಡಲು ಶ್ರಮಿಸುತ್ತಿರುವವರು ಅಲ್ಲಿನ ಜಿಲ್ಲಾಧಿಕಾರಿಯಾದ ಕೇರಳ ಮೂಲದ ‘ಅನೀಸ್ ಕಣ್ಮಣಿ ಜಾಯ್‌’.

ಕೇರಳದ ಬಡ ರೈತನ ಮಗಳಾಗಿದ್ದ ಅನೀಸ್ ಅವರು ತಮ್ಮ ಶಾಲಾ ದಿನಗಳಲ್ಲಿ ಪುಸ್ತಕಗಳನ್ನೂ ಖರೀದಿಸಲಾಗದಷ್ಟು ಬಡತನದಲ್ಲಿ ಬೆಳೆದವರು. ಆದರೆ, ಅವರು ಈಗ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ. ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಕೊಡಗು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಇವರ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಿಗರು ಪ್ರಶಂಸೆಯ ಮಳೆಗರೆಯುತ್ತಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೊಡಗಿನಲ್ಲಿ ಅವರು ಮಾಡುತ್ತಿರುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ದೇಶದಲ್ಲಿ ಕೊರೊನಾ ಮುಕ್ತವಾಗಿರುವ ಕೆಲವೇ ಜಿಲ್ಲೆಗಳಲ್ಲಿ ಕೊಡಗು ಕೂಡ ಒಂದು. ಕರ್ನಾಟಕವೂ ಸೇರಿದಂತೆ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಕೊಡಗು ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್;  ಕೊರೊನಾ ವಿರುದ್ಧ ಗೆದ್ದ ಕೊಡಗು..!!
ಅನೀಸ್ ಕಣ್ಮಣಿ ಜಾಯ್

Covid19india.org ನಲ್ಲಿ ನವೀಕರಿಸಿದ ಸಂಖ್ಯೆಗಳ ಪ್ರಕಾರ, ಇಲ್ಲಿಯವರೆಗೆ ಕೊಡಗಿನಲ್ಲಿ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೂವರಲ್ಲಿ ಎರಡು ಪ್ರಕರಣಗಳು ಸಕ್ರಿಯವಾಗಿವೆ ಮತ್ತು ಒಬ್ಬರು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಸಡಿಲಗೊಳಿಸಿ, ಅನೇಕ ಪ್ರವಾಸಿ ತಾಣಗಳನ್ನು ತೆರೆಯಲಾಗುತ್ತಿದೆ. ಆದರೆ, ಕೊಡಗಿನಲ್ಲಿ ಪ್ರವಾಸಿ ತಾಣಗಳನ್ನು ಇನ್ನೂ ಕೆಲವು ದಿನಗಳ ವರೆಗೆ ತೆರೆಯುವುದಿಲ್ಲ ಎಂದು ಅನ್ನೀಸ್‌ ಘೋಷಿಸಿದ್ದಾರೆ.

ನೊಂದಾಯಿಸಿಕೊಂಡಿರುವ ಹೋಂಸ್ಟೇಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಬರುವ ಪ್ರವಾಸಗಳ ಪ್ರಯಾಣದ ಇತಿಹಾಸ, ಅವರ ವಿವರಗಳುಳ್ಳ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಪಟ್ಟಿದ್ದರೆ ಎಂದು ತಿಳಿದುಕೊಳ್ಳುವಂತೆ ಆದೇಶಿಸಲಾಗಿದೆ.

ಕೂರ್ಗ್‌ ಎಂದೇ ಖ್ಯಾತಿ ಪಡೆದಿರುವ ಪ್ರವಾಸಿ ತಾಣವಾದ ಕೊಡಗಿನಲ್ಲಿ ಇದೂವರೆಗೂ 3 ಕೊರೊನಾ ಪ್ರಕರಣಗಳು ಮಾತ್ರ ದಾಖಲಾಗಿದ್ದು, ಸೋಂಕನ್ನು ನಿಯಂತ್ರಸುವಲ್ಲಿ ಅಲ್ಲಿಯ ಜಿಲ್ಲಾಧಿಕಾರಿಯಾಗಿರುವ ಅನೀಸ್ ಪ್ರಯತ್ನ ಯಶಸ್ವಿಯಾಗಿದೆ. ಬಡತನದ ವಿರುದ್ಧ ಹೋರಾಡಿ ಸಾಧನೆ ಮಾಡಿರುವ ಅನ್ನೀಸ್ ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿಯೂ ಸಾಧನೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ಕೇಳಿಬರುತ್ತಿವೆ.

Ennis Kanmani Joy of Kerala fought poverty and cracked UPSC Civil Services Exam. She secured 65th rank in her second…

Posted by Sochle on Saturday, June 6, 2020

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅನ್ನೀಸ್‌ ಅವರು ಬಡತನದ ವಿರುದ್ಧ ಹೇಗೆ ಹೋರಾಡಿದರು ಮತ್ತು ಹೇಗೆ ಕನಸನ್ನು ಸಾಧಿಸಿದರು ಎಂಬ ಕಥೆಯನ್ನು ಹಂಚಿಕೊಂಡಿದ್ದಾರೆ.


ಓದಿ: ‘ಭರವಸೆಯ ಕಿರಣ’; ಕೊರೊನಾ ಸೋಂಕಿತ 97 ವರ್ಷದ ಹಿರಿಯ ವ್ಯಕ್ತಿ ಗುಣಮುಖ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...