Homeದಲಿತ್ ಫೈಲ್ಸ್ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

- Advertisement -
- Advertisement -

ಮಾತು ಮರೆಯುವುದರಲ್ಲಿ ಎರಡು ವಿಧ. ಒಂದು, ಕೊಟ್ಟ ಮಾತು ಮರೆಯುವುದು. ಇನ್ನೊಂದು ಮಾತಾಡಲೇಬೇಕಾದಾಗ ಮಾತಾಡದೇ ಇರುವುದು. ಎರಡು ಸನ್ನಿವೇಶದಲ್ಲಿಯೂ ಸಹ ಮಾತುಗಳನ್ನು ಮರೆಯಲಾಗುತ್ತದೆ. ಮರೆಯುವುದು ಸಹಜವಲ್ಲವೆ? ಹೌದು ಸಹಜ. ಒಮ್ಮೆಯಾದರೆ ಸಹಜ. ಮತ್ತೊಮ್ಮೆಯಾದರೂ ಸಹಜವೆನ್ನೋಣ. ಆದರೆ ಶತಮಾನಗಳ ಕಾಲದ ಮರೆವಿಗೆ ಏನೆನ್ನೋಣ? ಜಾಣ ಮರೆವು ಎಂದುಬಿಡಬಹುದು. ಆದರೆ ಭಾರತದಲ್ಲಿ ಜಾಣ ಮರೆವನ್ನೂ ಮೀರಿಸಿದ ಕ್ರೂರ ಮರೆವಿದೆ. ಈ ಕ್ರೂರ ಮರೆವಿಗೆ ಕಾರಣ ಒಂದು ಭಾರತವಿಲ್ಲದ್ದಾಗಿದೆ. ಇಲ್ಲಿ ನೂರಾರು ಭಾರತಗಳಿವೆ. ಅನ್ಯ ದೇಶಗಳಿಗೆ ಹೋಲಿಸಿಕೊಂಡಾಗ ಇಲ್ಲಿ ಹಲವು ಜಾತಿಗಳಿಂದ ಒಡೆದುಹೋಗಿರುವ ಹಲವು ಭಾರತಗಳಿವೆ. 1950ರಲ್ಲಿ ಸಂವಿಧಾನ ಈ ಭಾರತವನ್ನು ಒಂದು ಮಾಡುವ ಪ್ರಯತ್ನಕ್ಕೆ ಮುಂದಾಯಿತಾದರೂ ಆಳುವ ವರ್ಗ ಇಂದಿಗೂ ಅದು ಸಫಲವಾಗದಂತೆ ನೋಡಿಕೊಂಡು ಮತ್ತಷ್ಟು ಛಿದ್ರಗೊಂಡು ಮತ್ತಷ್ಟು ಭಾರತಗಳಾಗುವಂತೆ ಮಾಡಿದೆ.

ಇಂತಹ ಭಾರತದ ಪ್ರಾಚೀನ ಕಾಲದಲ್ಲಿ ಅಸ್ಪೃಶ್ಯ ಭಾರತವೂ ಇತ್ತು. ಆಧುನಿಕ ಭಾರತದಲ್ಲಿ ಪರಿಶಿಷ್ಟ ಜಾತಿಗಳಾಗಿ ಗುರುತಿಸಿಕೊಂಡು ಇಂದು ದಲಿತ ಭಾರತವಾಗಿದೆ. ಆದರೆ ಅಸ್ಪೃಶ್ಯ ಭಾರತ ಅವರ ಪಾಲಿಗೆ ಇಂದಿಗೂ ಜೀವಂತವಿದೆ. ಸಂವಿಧಾನ ಸಭೆಯಲ್ಲಿ ಅಸ್ಪೃಶ್ಯತೆಯನ್ನು ನಿಷೇಧಿಸಿ, ಇನ್ನು ಮುಂದೆ ಮನುಷ್ಯರಾದ ಅಸ್ಪೃಶ್ಯರನ್ನು ದೆವ್ವಗಳಂತೆ ಕಾಡುವುದಿಲ್ಲವೆಂದು ಮಾತು ಕೊಟ್ಟ ದಲಿತೇತರರು ತಾವು ಕೊಟ್ಟ ಮಾತನ್ನು ಉಳಿಸಿಕೊಂಡರೆ? ’ಹಿಂದೂ ನಾವೆಲ್ಲ ಒಂದು’ ಎಂದ ಸ್ವಯಂ ಸೇವಕರು ದಲಿತರನ್ನು ಸಮಾನವಾಗಿ ಕಂಡರೆ? ವಸುದೈವ ಕುಟುಂಬಕಂ ಎಂದ ಸಾಧು ಸಂತರು ದಲಿತರೊಂದಿಗೆ ಕಳ್ಳುಬಳ್ಳಿ ಸಂಬಂಧ ಬೆಳೆಸಿದರೆ? ದ್ವೈತ, ಅದ್ವೈತ್ಯ, ವಿಶಿಷ್ಟಾದ್ವೈತಗಳು ದಲಿತರಿಗೆ ದೇಗುಲ ಪ್ರವೇಶ ನೀಡಿದವೇ? ಆಧ್ಯಾತ್ಮದ ಭಾಗವಾಗಿಸಿಕೊಂಡವೆ? ಆಮ್ ಆದ್ಮಿ ಕೆ ಸಾಥ್ ಅಂದವರು ದಲಿತ ಕೇರಿಗಳನ್ನು ಮುಟ್ಟಿದರೆ? ’ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಎಂದವರು ದಲಿತರ ವಿಕಾಸಕ್ಕೆ ಕೈ ಹಾಕಿದರೇ? ಹೀಗೆ ಸಾಲುಸಾಲು ಪ್ರಶ್ನೆಗಳಿಗೆ ಉತ್ತರ ಇಲ್ಲವೆಂದೇ ತೋರುತ್ತಿದೆ.

’ರೀ ಈಗ ಮೊದಲಿನಂತಿಲ್ಲ. ಎಲ್ಲಾ ಬದಲಾಗುತ್ತಿದೆ’ ಎಂದವರ ಮುಂದೆ ಲೆಕ್ಕವಿಲ್ಲದಷ್ಟು ದಲಿತರ ಹೆಣಗಳ ಪಟ್ಟಿ ಇಟ್ಟಾಗ ಮಾತನ್ನೇ ಮರೆತುಬಿಡುತ್ತಾರೆ. ೨೦೨೦ರಲ್ಲಿ ದಲಿತರ ಮೇಲೆ 58,563 ದೌರ್ಜನ್ಯಗಳನ್ನು ಎಸಗಲಾಗಿದೆ. ಸ್ವತಂತ್ರ ಭಾರತ ಲೆಕ್ಕವಿಲ್ಲದಷ್ಟು ದಲಿತರ ಹತ್ಯಾಕಾಂಡಗಳಿಗೆ ನ್ಯಾಯವೇ ಸಿಗದೆ ನರಳುತ್ತಿವೆ. ಪ್ರತಿ ದಿನದ ಪತ್ರಿಕೆಗಳ ಮೂಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ವರದಿಯಾಗುತ್ತವೆ. ಇದರಲ್ಲಿ ಕೊಲೆ ಅತ್ಯಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಆದರೂ ದಲಿತೇತರರ ಉತ್ತರ ಸಿದ್ಧವಾಗಿರುತ್ತದೆ. ’ಈಗ ಮೊದಲಿನಂತಲ್ಲ ಬಿಡ್ರಿ’.

ವಾಚ್ ಕಟ್ಟಿದ್ದಕ್ಕೆ, ಮೀಸೆ ಬಿಟ್ಟದ್ದಕ್ಕೆ, ಕುದುರೆ ಹತ್ತಿದ್ದಕ್ಕೆ, ಅಂಬೇಡ್ಕರ್ ರಿಂಗ್‌ಟೋನ್ ಇಟ್ಟುಕೊಂಡಿದ್ದಕ್ಕೆ ದಲಿತರನ್ನ ಕೊಲೆ ಮಾಡಿಬಿಡುವಷ್ಟು ಕ್ರೂರಿಗಳು ಇಂದಿಗೂ ಈ ನೆಲದಲ್ಲಿರುವಾಗ ಭಾರತ ಸ್ವಾತಂತ್ರ್ಯಗೊಂಡಿದೆ ಎಂದು ಹೇಗೆ ಹೇಳುವುದು? ಆಗಿರುವ ಗಾಯಕ್ಕೆ ಮುಲಾಮು ಹಚ್ಚಬೇಕಾದ ಸಮಾಜ ಪದೇಪದೇ ಅದೇ ಗಾಯದ ಮೇಲೆ ಬರೆ ಹಾಕುತ್ತಾ ’ನೋಡು ಈಗ ಹಳೆಯ ಗಾಯ ಕಾಣುತ್ತಿಲ್ಲ’ ಎಂದರೆ ದಲಿತರು ನಂಬಿ ಕೂರಬೇಕೆ? ಕಾಲ ಬದಲಾಗಿದೆ ಹಾಗೂ ಸಮಾಜ ಬದಲಾಗಿದೆ ಎಂದು ಬೊಗಳೆ ಬಿಡುವ ಜಾತಿವಾದಿಗಳಿಗೆ ತಾವು ಮರೆತ ಮಾತುಗಳನ್ನು ನೆನಪಿಸಬೇಕಿದೆ. ಅಷ್ಟೇ ಅಲ್ಲ. ಭಾರತದ ಇತಿಹಾಸದಲ್ಲಿ ದಲಿತರ ಮೇಲೆ ಮೇಲ್ಜಾತಿಗಳು ನಡೆಸಿರುವ ದೌರ್ಜನ್ಯವನ್ನು ನೆನಪಿಸಬೇಕಿದೆ. ಇದರ ಜೊತೆಗೆ ದಲಿತರಲ್ಲಿಯೇ ತಮ್ಮ ಸಹಬಾಂಧವರ ಕೊಲೆಗಳನ್ನು ಮರೆತು ಮೈಮರೆತಿರುವವರಿಗೂ ದಲಿತ ಭಾರತದ ಮೇಲೆ ದಲಿತೇತರ ಭಾರತ ನಡೆಸಿರುವ ಭಯೋತ್ಪಾದನೆಯನ್ನು ನೆನಪಿಸಬೇಕಿದೆ. ಜಾತಿಯೆಂಬ ದೇಶದ್ರೋಹದ ವಿವಿಧ ಮುಖಗಳನ್ನು ಹಾಗೂ ಅದರ ಕ್ರೂರ ಮುಖವನ್ನು ತೋರಿಸಬೇಕಿದೆ.

ಬಹುದೊಡ್ಡ ವಿಸ್ಮೃತಿಯನ್ನು ಭಾರತಕ್ಕೆ ಪರಿಚಯಿಸಿ ಅಲ್ಲೆಲ್ಲ ತುಟಕ್ ಪಿಟಕ್ ಎನ್ನದೆ ಬಾಯಿ-ಮನಸ್ಸುಗಳಿಗೆ ಬೀಗ ಜಡಿದುಕೊಂಡು ಕುಳಿತಿದ್ದ, ಈಗಲೂ ಸುದೀರ್ಘ ಜೀವಂತ ಶವಗಳಾಗಿಯೇ ಉಳಿದಿರುವ ಮೂಳೆ ಮಾಂಸದ ತಡಿಕೆಗಳ ಮುಂದೆ ದಲಿತರ ಸುಟ್ಟ ಬೂದಿ, ಹೆಪ್ಪುಗಟ್ಟಿದ ನೆತ್ತರನ್ನು ತೋರಿಸಬೇಕಿದೆ.

ಅದಕ್ಕಾಗಿಯೇ ಈ ಅಂಕಣ. ಮಾತು ಮರೆತ ಭಾರತ. ಮಹಾಮರೆವಿನಲ್ಲಿ ಮುಳುಗಿ ತೇಲುತ್ತಿರುವ ದಲಿತರಿಗೂ ಹಾಗೂ ದಲಿತೇತರರಿಬ್ಬರಿಗೂ ಸಮರ್ಪಣೆ.

ಸಾಕ್ಯ ಸಮಗಾರ


ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...