Homeದಲಿತ್ ಫೈಲ್ಸ್ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

- Advertisement -
- Advertisement -

ಮಾತು ಮರೆಯುವುದರಲ್ಲಿ ಎರಡು ವಿಧ. ಒಂದು, ಕೊಟ್ಟ ಮಾತು ಮರೆಯುವುದು. ಇನ್ನೊಂದು ಮಾತಾಡಲೇಬೇಕಾದಾಗ ಮಾತಾಡದೇ ಇರುವುದು. ಎರಡು ಸನ್ನಿವೇಶದಲ್ಲಿಯೂ ಸಹ ಮಾತುಗಳನ್ನು ಮರೆಯಲಾಗುತ್ತದೆ. ಮರೆಯುವುದು ಸಹಜವಲ್ಲವೆ? ಹೌದು ಸಹಜ. ಒಮ್ಮೆಯಾದರೆ ಸಹಜ. ಮತ್ತೊಮ್ಮೆಯಾದರೂ ಸಹಜವೆನ್ನೋಣ. ಆದರೆ ಶತಮಾನಗಳ ಕಾಲದ ಮರೆವಿಗೆ ಏನೆನ್ನೋಣ? ಜಾಣ ಮರೆವು ಎಂದುಬಿಡಬಹುದು. ಆದರೆ ಭಾರತದಲ್ಲಿ ಜಾಣ ಮರೆವನ್ನೂ ಮೀರಿಸಿದ ಕ್ರೂರ ಮರೆವಿದೆ. ಈ ಕ್ರೂರ ಮರೆವಿಗೆ ಕಾರಣ ಒಂದು ಭಾರತವಿಲ್ಲದ್ದಾಗಿದೆ. ಇಲ್ಲಿ ನೂರಾರು ಭಾರತಗಳಿವೆ. ಅನ್ಯ ದೇಶಗಳಿಗೆ ಹೋಲಿಸಿಕೊಂಡಾಗ ಇಲ್ಲಿ ಹಲವು ಜಾತಿಗಳಿಂದ ಒಡೆದುಹೋಗಿರುವ ಹಲವು ಭಾರತಗಳಿವೆ. 1950ರಲ್ಲಿ ಸಂವಿಧಾನ ಈ ಭಾರತವನ್ನು ಒಂದು ಮಾಡುವ ಪ್ರಯತ್ನಕ್ಕೆ ಮುಂದಾಯಿತಾದರೂ ಆಳುವ ವರ್ಗ ಇಂದಿಗೂ ಅದು ಸಫಲವಾಗದಂತೆ ನೋಡಿಕೊಂಡು ಮತ್ತಷ್ಟು ಛಿದ್ರಗೊಂಡು ಮತ್ತಷ್ಟು ಭಾರತಗಳಾಗುವಂತೆ ಮಾಡಿದೆ.

ಇಂತಹ ಭಾರತದ ಪ್ರಾಚೀನ ಕಾಲದಲ್ಲಿ ಅಸ್ಪೃಶ್ಯ ಭಾರತವೂ ಇತ್ತು. ಆಧುನಿಕ ಭಾರತದಲ್ಲಿ ಪರಿಶಿಷ್ಟ ಜಾತಿಗಳಾಗಿ ಗುರುತಿಸಿಕೊಂಡು ಇಂದು ದಲಿತ ಭಾರತವಾಗಿದೆ. ಆದರೆ ಅಸ್ಪೃಶ್ಯ ಭಾರತ ಅವರ ಪಾಲಿಗೆ ಇಂದಿಗೂ ಜೀವಂತವಿದೆ. ಸಂವಿಧಾನ ಸಭೆಯಲ್ಲಿ ಅಸ್ಪೃಶ್ಯತೆಯನ್ನು ನಿಷೇಧಿಸಿ, ಇನ್ನು ಮುಂದೆ ಮನುಷ್ಯರಾದ ಅಸ್ಪೃಶ್ಯರನ್ನು ದೆವ್ವಗಳಂತೆ ಕಾಡುವುದಿಲ್ಲವೆಂದು ಮಾತು ಕೊಟ್ಟ ದಲಿತೇತರರು ತಾವು ಕೊಟ್ಟ ಮಾತನ್ನು ಉಳಿಸಿಕೊಂಡರೆ? ’ಹಿಂದೂ ನಾವೆಲ್ಲ ಒಂದು’ ಎಂದ ಸ್ವಯಂ ಸೇವಕರು ದಲಿತರನ್ನು ಸಮಾನವಾಗಿ ಕಂಡರೆ? ವಸುದೈವ ಕುಟುಂಬಕಂ ಎಂದ ಸಾಧು ಸಂತರು ದಲಿತರೊಂದಿಗೆ ಕಳ್ಳುಬಳ್ಳಿ ಸಂಬಂಧ ಬೆಳೆಸಿದರೆ? ದ್ವೈತ, ಅದ್ವೈತ್ಯ, ವಿಶಿಷ್ಟಾದ್ವೈತಗಳು ದಲಿತರಿಗೆ ದೇಗುಲ ಪ್ರವೇಶ ನೀಡಿದವೇ? ಆಧ್ಯಾತ್ಮದ ಭಾಗವಾಗಿಸಿಕೊಂಡವೆ? ಆಮ್ ಆದ್ಮಿ ಕೆ ಸಾಥ್ ಅಂದವರು ದಲಿತ ಕೇರಿಗಳನ್ನು ಮುಟ್ಟಿದರೆ? ’ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಎಂದವರು ದಲಿತರ ವಿಕಾಸಕ್ಕೆ ಕೈ ಹಾಕಿದರೇ? ಹೀಗೆ ಸಾಲುಸಾಲು ಪ್ರಶ್ನೆಗಳಿಗೆ ಉತ್ತರ ಇಲ್ಲವೆಂದೇ ತೋರುತ್ತಿದೆ.

’ರೀ ಈಗ ಮೊದಲಿನಂತಿಲ್ಲ. ಎಲ್ಲಾ ಬದಲಾಗುತ್ತಿದೆ’ ಎಂದವರ ಮುಂದೆ ಲೆಕ್ಕವಿಲ್ಲದಷ್ಟು ದಲಿತರ ಹೆಣಗಳ ಪಟ್ಟಿ ಇಟ್ಟಾಗ ಮಾತನ್ನೇ ಮರೆತುಬಿಡುತ್ತಾರೆ. ೨೦೨೦ರಲ್ಲಿ ದಲಿತರ ಮೇಲೆ 58,563 ದೌರ್ಜನ್ಯಗಳನ್ನು ಎಸಗಲಾಗಿದೆ. ಸ್ವತಂತ್ರ ಭಾರತ ಲೆಕ್ಕವಿಲ್ಲದಷ್ಟು ದಲಿತರ ಹತ್ಯಾಕಾಂಡಗಳಿಗೆ ನ್ಯಾಯವೇ ಸಿಗದೆ ನರಳುತ್ತಿವೆ. ಪ್ರತಿ ದಿನದ ಪತ್ರಿಕೆಗಳ ಮೂಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ವರದಿಯಾಗುತ್ತವೆ. ಇದರಲ್ಲಿ ಕೊಲೆ ಅತ್ಯಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಆದರೂ ದಲಿತೇತರರ ಉತ್ತರ ಸಿದ್ಧವಾಗಿರುತ್ತದೆ. ’ಈಗ ಮೊದಲಿನಂತಲ್ಲ ಬಿಡ್ರಿ’.

ವಾಚ್ ಕಟ್ಟಿದ್ದಕ್ಕೆ, ಮೀಸೆ ಬಿಟ್ಟದ್ದಕ್ಕೆ, ಕುದುರೆ ಹತ್ತಿದ್ದಕ್ಕೆ, ಅಂಬೇಡ್ಕರ್ ರಿಂಗ್‌ಟೋನ್ ಇಟ್ಟುಕೊಂಡಿದ್ದಕ್ಕೆ ದಲಿತರನ್ನ ಕೊಲೆ ಮಾಡಿಬಿಡುವಷ್ಟು ಕ್ರೂರಿಗಳು ಇಂದಿಗೂ ಈ ನೆಲದಲ್ಲಿರುವಾಗ ಭಾರತ ಸ್ವಾತಂತ್ರ್ಯಗೊಂಡಿದೆ ಎಂದು ಹೇಗೆ ಹೇಳುವುದು? ಆಗಿರುವ ಗಾಯಕ್ಕೆ ಮುಲಾಮು ಹಚ್ಚಬೇಕಾದ ಸಮಾಜ ಪದೇಪದೇ ಅದೇ ಗಾಯದ ಮೇಲೆ ಬರೆ ಹಾಕುತ್ತಾ ’ನೋಡು ಈಗ ಹಳೆಯ ಗಾಯ ಕಾಣುತ್ತಿಲ್ಲ’ ಎಂದರೆ ದಲಿತರು ನಂಬಿ ಕೂರಬೇಕೆ? ಕಾಲ ಬದಲಾಗಿದೆ ಹಾಗೂ ಸಮಾಜ ಬದಲಾಗಿದೆ ಎಂದು ಬೊಗಳೆ ಬಿಡುವ ಜಾತಿವಾದಿಗಳಿಗೆ ತಾವು ಮರೆತ ಮಾತುಗಳನ್ನು ನೆನಪಿಸಬೇಕಿದೆ. ಅಷ್ಟೇ ಅಲ್ಲ. ಭಾರತದ ಇತಿಹಾಸದಲ್ಲಿ ದಲಿತರ ಮೇಲೆ ಮೇಲ್ಜಾತಿಗಳು ನಡೆಸಿರುವ ದೌರ್ಜನ್ಯವನ್ನು ನೆನಪಿಸಬೇಕಿದೆ. ಇದರ ಜೊತೆಗೆ ದಲಿತರಲ್ಲಿಯೇ ತಮ್ಮ ಸಹಬಾಂಧವರ ಕೊಲೆಗಳನ್ನು ಮರೆತು ಮೈಮರೆತಿರುವವರಿಗೂ ದಲಿತ ಭಾರತದ ಮೇಲೆ ದಲಿತೇತರ ಭಾರತ ನಡೆಸಿರುವ ಭಯೋತ್ಪಾದನೆಯನ್ನು ನೆನಪಿಸಬೇಕಿದೆ. ಜಾತಿಯೆಂಬ ದೇಶದ್ರೋಹದ ವಿವಿಧ ಮುಖಗಳನ್ನು ಹಾಗೂ ಅದರ ಕ್ರೂರ ಮುಖವನ್ನು ತೋರಿಸಬೇಕಿದೆ.

ಬಹುದೊಡ್ಡ ವಿಸ್ಮೃತಿಯನ್ನು ಭಾರತಕ್ಕೆ ಪರಿಚಯಿಸಿ ಅಲ್ಲೆಲ್ಲ ತುಟಕ್ ಪಿಟಕ್ ಎನ್ನದೆ ಬಾಯಿ-ಮನಸ್ಸುಗಳಿಗೆ ಬೀಗ ಜಡಿದುಕೊಂಡು ಕುಳಿತಿದ್ದ, ಈಗಲೂ ಸುದೀರ್ಘ ಜೀವಂತ ಶವಗಳಾಗಿಯೇ ಉಳಿದಿರುವ ಮೂಳೆ ಮಾಂಸದ ತಡಿಕೆಗಳ ಮುಂದೆ ದಲಿತರ ಸುಟ್ಟ ಬೂದಿ, ಹೆಪ್ಪುಗಟ್ಟಿದ ನೆತ್ತರನ್ನು ತೋರಿಸಬೇಕಿದೆ.

ಅದಕ್ಕಾಗಿಯೇ ಈ ಅಂಕಣ. ಮಾತು ಮರೆತ ಭಾರತ. ಮಹಾಮರೆವಿನಲ್ಲಿ ಮುಳುಗಿ ತೇಲುತ್ತಿರುವ ದಲಿತರಿಗೂ ಹಾಗೂ ದಲಿತೇತರರಿಬ್ಬರಿಗೂ ಸಮರ್ಪಣೆ.

ಸಾಕ್ಯ ಸಮಗಾರ


ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...