Homeದಲಿತ್ ಫೈಲ್ಸ್ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

- Advertisement -
- Advertisement -

ಮಾತು ಮರೆಯುವುದರಲ್ಲಿ ಎರಡು ವಿಧ. ಒಂದು, ಕೊಟ್ಟ ಮಾತು ಮರೆಯುವುದು. ಇನ್ನೊಂದು ಮಾತಾಡಲೇಬೇಕಾದಾಗ ಮಾತಾಡದೇ ಇರುವುದು. ಎರಡು ಸನ್ನಿವೇಶದಲ್ಲಿಯೂ ಸಹ ಮಾತುಗಳನ್ನು ಮರೆಯಲಾಗುತ್ತದೆ. ಮರೆಯುವುದು ಸಹಜವಲ್ಲವೆ? ಹೌದು ಸಹಜ. ಒಮ್ಮೆಯಾದರೆ ಸಹಜ. ಮತ್ತೊಮ್ಮೆಯಾದರೂ ಸಹಜವೆನ್ನೋಣ. ಆದರೆ ಶತಮಾನಗಳ ಕಾಲದ ಮರೆವಿಗೆ ಏನೆನ್ನೋಣ? ಜಾಣ ಮರೆವು ಎಂದುಬಿಡಬಹುದು. ಆದರೆ ಭಾರತದಲ್ಲಿ ಜಾಣ ಮರೆವನ್ನೂ ಮೀರಿಸಿದ ಕ್ರೂರ ಮರೆವಿದೆ. ಈ ಕ್ರೂರ ಮರೆವಿಗೆ ಕಾರಣ ಒಂದು ಭಾರತವಿಲ್ಲದ್ದಾಗಿದೆ. ಇಲ್ಲಿ ನೂರಾರು ಭಾರತಗಳಿವೆ. ಅನ್ಯ ದೇಶಗಳಿಗೆ ಹೋಲಿಸಿಕೊಂಡಾಗ ಇಲ್ಲಿ ಹಲವು ಜಾತಿಗಳಿಂದ ಒಡೆದುಹೋಗಿರುವ ಹಲವು ಭಾರತಗಳಿವೆ. 1950ರಲ್ಲಿ ಸಂವಿಧಾನ ಈ ಭಾರತವನ್ನು ಒಂದು ಮಾಡುವ ಪ್ರಯತ್ನಕ್ಕೆ ಮುಂದಾಯಿತಾದರೂ ಆಳುವ ವರ್ಗ ಇಂದಿಗೂ ಅದು ಸಫಲವಾಗದಂತೆ ನೋಡಿಕೊಂಡು ಮತ್ತಷ್ಟು ಛಿದ್ರಗೊಂಡು ಮತ್ತಷ್ಟು ಭಾರತಗಳಾಗುವಂತೆ ಮಾಡಿದೆ.

ಇಂತಹ ಭಾರತದ ಪ್ರಾಚೀನ ಕಾಲದಲ್ಲಿ ಅಸ್ಪೃಶ್ಯ ಭಾರತವೂ ಇತ್ತು. ಆಧುನಿಕ ಭಾರತದಲ್ಲಿ ಪರಿಶಿಷ್ಟ ಜಾತಿಗಳಾಗಿ ಗುರುತಿಸಿಕೊಂಡು ಇಂದು ದಲಿತ ಭಾರತವಾಗಿದೆ. ಆದರೆ ಅಸ್ಪೃಶ್ಯ ಭಾರತ ಅವರ ಪಾಲಿಗೆ ಇಂದಿಗೂ ಜೀವಂತವಿದೆ. ಸಂವಿಧಾನ ಸಭೆಯಲ್ಲಿ ಅಸ್ಪೃಶ್ಯತೆಯನ್ನು ನಿಷೇಧಿಸಿ, ಇನ್ನು ಮುಂದೆ ಮನುಷ್ಯರಾದ ಅಸ್ಪೃಶ್ಯರನ್ನು ದೆವ್ವಗಳಂತೆ ಕಾಡುವುದಿಲ್ಲವೆಂದು ಮಾತು ಕೊಟ್ಟ ದಲಿತೇತರರು ತಾವು ಕೊಟ್ಟ ಮಾತನ್ನು ಉಳಿಸಿಕೊಂಡರೆ? ’ಹಿಂದೂ ನಾವೆಲ್ಲ ಒಂದು’ ಎಂದ ಸ್ವಯಂ ಸೇವಕರು ದಲಿತರನ್ನು ಸಮಾನವಾಗಿ ಕಂಡರೆ? ವಸುದೈವ ಕುಟುಂಬಕಂ ಎಂದ ಸಾಧು ಸಂತರು ದಲಿತರೊಂದಿಗೆ ಕಳ್ಳುಬಳ್ಳಿ ಸಂಬಂಧ ಬೆಳೆಸಿದರೆ? ದ್ವೈತ, ಅದ್ವೈತ್ಯ, ವಿಶಿಷ್ಟಾದ್ವೈತಗಳು ದಲಿತರಿಗೆ ದೇಗುಲ ಪ್ರವೇಶ ನೀಡಿದವೇ? ಆಧ್ಯಾತ್ಮದ ಭಾಗವಾಗಿಸಿಕೊಂಡವೆ? ಆಮ್ ಆದ್ಮಿ ಕೆ ಸಾಥ್ ಅಂದವರು ದಲಿತ ಕೇರಿಗಳನ್ನು ಮುಟ್ಟಿದರೆ? ’ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಎಂದವರು ದಲಿತರ ವಿಕಾಸಕ್ಕೆ ಕೈ ಹಾಕಿದರೇ? ಹೀಗೆ ಸಾಲುಸಾಲು ಪ್ರಶ್ನೆಗಳಿಗೆ ಉತ್ತರ ಇಲ್ಲವೆಂದೇ ತೋರುತ್ತಿದೆ.

’ರೀ ಈಗ ಮೊದಲಿನಂತಿಲ್ಲ. ಎಲ್ಲಾ ಬದಲಾಗುತ್ತಿದೆ’ ಎಂದವರ ಮುಂದೆ ಲೆಕ್ಕವಿಲ್ಲದಷ್ಟು ದಲಿತರ ಹೆಣಗಳ ಪಟ್ಟಿ ಇಟ್ಟಾಗ ಮಾತನ್ನೇ ಮರೆತುಬಿಡುತ್ತಾರೆ. ೨೦೨೦ರಲ್ಲಿ ದಲಿತರ ಮೇಲೆ 58,563 ದೌರ್ಜನ್ಯಗಳನ್ನು ಎಸಗಲಾಗಿದೆ. ಸ್ವತಂತ್ರ ಭಾರತ ಲೆಕ್ಕವಿಲ್ಲದಷ್ಟು ದಲಿತರ ಹತ್ಯಾಕಾಂಡಗಳಿಗೆ ನ್ಯಾಯವೇ ಸಿಗದೆ ನರಳುತ್ತಿವೆ. ಪ್ರತಿ ದಿನದ ಪತ್ರಿಕೆಗಳ ಮೂಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ವರದಿಯಾಗುತ್ತವೆ. ಇದರಲ್ಲಿ ಕೊಲೆ ಅತ್ಯಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಆದರೂ ದಲಿತೇತರರ ಉತ್ತರ ಸಿದ್ಧವಾಗಿರುತ್ತದೆ. ’ಈಗ ಮೊದಲಿನಂತಲ್ಲ ಬಿಡ್ರಿ’.

ವಾಚ್ ಕಟ್ಟಿದ್ದಕ್ಕೆ, ಮೀಸೆ ಬಿಟ್ಟದ್ದಕ್ಕೆ, ಕುದುರೆ ಹತ್ತಿದ್ದಕ್ಕೆ, ಅಂಬೇಡ್ಕರ್ ರಿಂಗ್‌ಟೋನ್ ಇಟ್ಟುಕೊಂಡಿದ್ದಕ್ಕೆ ದಲಿತರನ್ನ ಕೊಲೆ ಮಾಡಿಬಿಡುವಷ್ಟು ಕ್ರೂರಿಗಳು ಇಂದಿಗೂ ಈ ನೆಲದಲ್ಲಿರುವಾಗ ಭಾರತ ಸ್ವಾತಂತ್ರ್ಯಗೊಂಡಿದೆ ಎಂದು ಹೇಗೆ ಹೇಳುವುದು? ಆಗಿರುವ ಗಾಯಕ್ಕೆ ಮುಲಾಮು ಹಚ್ಚಬೇಕಾದ ಸಮಾಜ ಪದೇಪದೇ ಅದೇ ಗಾಯದ ಮೇಲೆ ಬರೆ ಹಾಕುತ್ತಾ ’ನೋಡು ಈಗ ಹಳೆಯ ಗಾಯ ಕಾಣುತ್ತಿಲ್ಲ’ ಎಂದರೆ ದಲಿತರು ನಂಬಿ ಕೂರಬೇಕೆ? ಕಾಲ ಬದಲಾಗಿದೆ ಹಾಗೂ ಸಮಾಜ ಬದಲಾಗಿದೆ ಎಂದು ಬೊಗಳೆ ಬಿಡುವ ಜಾತಿವಾದಿಗಳಿಗೆ ತಾವು ಮರೆತ ಮಾತುಗಳನ್ನು ನೆನಪಿಸಬೇಕಿದೆ. ಅಷ್ಟೇ ಅಲ್ಲ. ಭಾರತದ ಇತಿಹಾಸದಲ್ಲಿ ದಲಿತರ ಮೇಲೆ ಮೇಲ್ಜಾತಿಗಳು ನಡೆಸಿರುವ ದೌರ್ಜನ್ಯವನ್ನು ನೆನಪಿಸಬೇಕಿದೆ. ಇದರ ಜೊತೆಗೆ ದಲಿತರಲ್ಲಿಯೇ ತಮ್ಮ ಸಹಬಾಂಧವರ ಕೊಲೆಗಳನ್ನು ಮರೆತು ಮೈಮರೆತಿರುವವರಿಗೂ ದಲಿತ ಭಾರತದ ಮೇಲೆ ದಲಿತೇತರ ಭಾರತ ನಡೆಸಿರುವ ಭಯೋತ್ಪಾದನೆಯನ್ನು ನೆನಪಿಸಬೇಕಿದೆ. ಜಾತಿಯೆಂಬ ದೇಶದ್ರೋಹದ ವಿವಿಧ ಮುಖಗಳನ್ನು ಹಾಗೂ ಅದರ ಕ್ರೂರ ಮುಖವನ್ನು ತೋರಿಸಬೇಕಿದೆ.

ಬಹುದೊಡ್ಡ ವಿಸ್ಮೃತಿಯನ್ನು ಭಾರತಕ್ಕೆ ಪರಿಚಯಿಸಿ ಅಲ್ಲೆಲ್ಲ ತುಟಕ್ ಪಿಟಕ್ ಎನ್ನದೆ ಬಾಯಿ-ಮನಸ್ಸುಗಳಿಗೆ ಬೀಗ ಜಡಿದುಕೊಂಡು ಕುಳಿತಿದ್ದ, ಈಗಲೂ ಸುದೀರ್ಘ ಜೀವಂತ ಶವಗಳಾಗಿಯೇ ಉಳಿದಿರುವ ಮೂಳೆ ಮಾಂಸದ ತಡಿಕೆಗಳ ಮುಂದೆ ದಲಿತರ ಸುಟ್ಟ ಬೂದಿ, ಹೆಪ್ಪುಗಟ್ಟಿದ ನೆತ್ತರನ್ನು ತೋರಿಸಬೇಕಿದೆ.

ಅದಕ್ಕಾಗಿಯೇ ಈ ಅಂಕಣ. ಮಾತು ಮರೆತ ಭಾರತ. ಮಹಾಮರೆವಿನಲ್ಲಿ ಮುಳುಗಿ ತೇಲುತ್ತಿರುವ ದಲಿತರಿಗೂ ಹಾಗೂ ದಲಿತೇತರರಿಬ್ಬರಿಗೂ ಸಮರ್ಪಣೆ.

ಸಾಕ್ಯ ಸಮಗಾರ


ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...