Homeದಲಿತ್ ಫೈಲ್ಸ್ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

- Advertisement -
- Advertisement -

ಮಾತು ಮರೆಯುವುದರಲ್ಲಿ ಎರಡು ವಿಧ. ಒಂದು, ಕೊಟ್ಟ ಮಾತು ಮರೆಯುವುದು. ಇನ್ನೊಂದು ಮಾತಾಡಲೇಬೇಕಾದಾಗ ಮಾತಾಡದೇ ಇರುವುದು. ಎರಡು ಸನ್ನಿವೇಶದಲ್ಲಿಯೂ ಸಹ ಮಾತುಗಳನ್ನು ಮರೆಯಲಾಗುತ್ತದೆ. ಮರೆಯುವುದು ಸಹಜವಲ್ಲವೆ? ಹೌದು ಸಹಜ. ಒಮ್ಮೆಯಾದರೆ ಸಹಜ. ಮತ್ತೊಮ್ಮೆಯಾದರೂ ಸಹಜವೆನ್ನೋಣ. ಆದರೆ ಶತಮಾನಗಳ ಕಾಲದ ಮರೆವಿಗೆ ಏನೆನ್ನೋಣ? ಜಾಣ ಮರೆವು ಎಂದುಬಿಡಬಹುದು. ಆದರೆ ಭಾರತದಲ್ಲಿ ಜಾಣ ಮರೆವನ್ನೂ ಮೀರಿಸಿದ ಕ್ರೂರ ಮರೆವಿದೆ. ಈ ಕ್ರೂರ ಮರೆವಿಗೆ ಕಾರಣ ಒಂದು ಭಾರತವಿಲ್ಲದ್ದಾಗಿದೆ. ಇಲ್ಲಿ ನೂರಾರು ಭಾರತಗಳಿವೆ. ಅನ್ಯ ದೇಶಗಳಿಗೆ ಹೋಲಿಸಿಕೊಂಡಾಗ ಇಲ್ಲಿ ಹಲವು ಜಾತಿಗಳಿಂದ ಒಡೆದುಹೋಗಿರುವ ಹಲವು ಭಾರತಗಳಿವೆ. 1950ರಲ್ಲಿ ಸಂವಿಧಾನ ಈ ಭಾರತವನ್ನು ಒಂದು ಮಾಡುವ ಪ್ರಯತ್ನಕ್ಕೆ ಮುಂದಾಯಿತಾದರೂ ಆಳುವ ವರ್ಗ ಇಂದಿಗೂ ಅದು ಸಫಲವಾಗದಂತೆ ನೋಡಿಕೊಂಡು ಮತ್ತಷ್ಟು ಛಿದ್ರಗೊಂಡು ಮತ್ತಷ್ಟು ಭಾರತಗಳಾಗುವಂತೆ ಮಾಡಿದೆ.

ಇಂತಹ ಭಾರತದ ಪ್ರಾಚೀನ ಕಾಲದಲ್ಲಿ ಅಸ್ಪೃಶ್ಯ ಭಾರತವೂ ಇತ್ತು. ಆಧುನಿಕ ಭಾರತದಲ್ಲಿ ಪರಿಶಿಷ್ಟ ಜಾತಿಗಳಾಗಿ ಗುರುತಿಸಿಕೊಂಡು ಇಂದು ದಲಿತ ಭಾರತವಾಗಿದೆ. ಆದರೆ ಅಸ್ಪೃಶ್ಯ ಭಾರತ ಅವರ ಪಾಲಿಗೆ ಇಂದಿಗೂ ಜೀವಂತವಿದೆ. ಸಂವಿಧಾನ ಸಭೆಯಲ್ಲಿ ಅಸ್ಪೃಶ್ಯತೆಯನ್ನು ನಿಷೇಧಿಸಿ, ಇನ್ನು ಮುಂದೆ ಮನುಷ್ಯರಾದ ಅಸ್ಪೃಶ್ಯರನ್ನು ದೆವ್ವಗಳಂತೆ ಕಾಡುವುದಿಲ್ಲವೆಂದು ಮಾತು ಕೊಟ್ಟ ದಲಿತೇತರರು ತಾವು ಕೊಟ್ಟ ಮಾತನ್ನು ಉಳಿಸಿಕೊಂಡರೆ? ’ಹಿಂದೂ ನಾವೆಲ್ಲ ಒಂದು’ ಎಂದ ಸ್ವಯಂ ಸೇವಕರು ದಲಿತರನ್ನು ಸಮಾನವಾಗಿ ಕಂಡರೆ? ವಸುದೈವ ಕುಟುಂಬಕಂ ಎಂದ ಸಾಧು ಸಂತರು ದಲಿತರೊಂದಿಗೆ ಕಳ್ಳುಬಳ್ಳಿ ಸಂಬಂಧ ಬೆಳೆಸಿದರೆ? ದ್ವೈತ, ಅದ್ವೈತ್ಯ, ವಿಶಿಷ್ಟಾದ್ವೈತಗಳು ದಲಿತರಿಗೆ ದೇಗುಲ ಪ್ರವೇಶ ನೀಡಿದವೇ? ಆಧ್ಯಾತ್ಮದ ಭಾಗವಾಗಿಸಿಕೊಂಡವೆ? ಆಮ್ ಆದ್ಮಿ ಕೆ ಸಾಥ್ ಅಂದವರು ದಲಿತ ಕೇರಿಗಳನ್ನು ಮುಟ್ಟಿದರೆ? ’ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಎಂದವರು ದಲಿತರ ವಿಕಾಸಕ್ಕೆ ಕೈ ಹಾಕಿದರೇ? ಹೀಗೆ ಸಾಲುಸಾಲು ಪ್ರಶ್ನೆಗಳಿಗೆ ಉತ್ತರ ಇಲ್ಲವೆಂದೇ ತೋರುತ್ತಿದೆ.

’ರೀ ಈಗ ಮೊದಲಿನಂತಿಲ್ಲ. ಎಲ್ಲಾ ಬದಲಾಗುತ್ತಿದೆ’ ಎಂದವರ ಮುಂದೆ ಲೆಕ್ಕವಿಲ್ಲದಷ್ಟು ದಲಿತರ ಹೆಣಗಳ ಪಟ್ಟಿ ಇಟ್ಟಾಗ ಮಾತನ್ನೇ ಮರೆತುಬಿಡುತ್ತಾರೆ. ೨೦೨೦ರಲ್ಲಿ ದಲಿತರ ಮೇಲೆ 58,563 ದೌರ್ಜನ್ಯಗಳನ್ನು ಎಸಗಲಾಗಿದೆ. ಸ್ವತಂತ್ರ ಭಾರತ ಲೆಕ್ಕವಿಲ್ಲದಷ್ಟು ದಲಿತರ ಹತ್ಯಾಕಾಂಡಗಳಿಗೆ ನ್ಯಾಯವೇ ಸಿಗದೆ ನರಳುತ್ತಿವೆ. ಪ್ರತಿ ದಿನದ ಪತ್ರಿಕೆಗಳ ಮೂಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ವರದಿಯಾಗುತ್ತವೆ. ಇದರಲ್ಲಿ ಕೊಲೆ ಅತ್ಯಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಆದರೂ ದಲಿತೇತರರ ಉತ್ತರ ಸಿದ್ಧವಾಗಿರುತ್ತದೆ. ’ಈಗ ಮೊದಲಿನಂತಲ್ಲ ಬಿಡ್ರಿ’.

ವಾಚ್ ಕಟ್ಟಿದ್ದಕ್ಕೆ, ಮೀಸೆ ಬಿಟ್ಟದ್ದಕ್ಕೆ, ಕುದುರೆ ಹತ್ತಿದ್ದಕ್ಕೆ, ಅಂಬೇಡ್ಕರ್ ರಿಂಗ್‌ಟೋನ್ ಇಟ್ಟುಕೊಂಡಿದ್ದಕ್ಕೆ ದಲಿತರನ್ನ ಕೊಲೆ ಮಾಡಿಬಿಡುವಷ್ಟು ಕ್ರೂರಿಗಳು ಇಂದಿಗೂ ಈ ನೆಲದಲ್ಲಿರುವಾಗ ಭಾರತ ಸ್ವಾತಂತ್ರ್ಯಗೊಂಡಿದೆ ಎಂದು ಹೇಗೆ ಹೇಳುವುದು? ಆಗಿರುವ ಗಾಯಕ್ಕೆ ಮುಲಾಮು ಹಚ್ಚಬೇಕಾದ ಸಮಾಜ ಪದೇಪದೇ ಅದೇ ಗಾಯದ ಮೇಲೆ ಬರೆ ಹಾಕುತ್ತಾ ’ನೋಡು ಈಗ ಹಳೆಯ ಗಾಯ ಕಾಣುತ್ತಿಲ್ಲ’ ಎಂದರೆ ದಲಿತರು ನಂಬಿ ಕೂರಬೇಕೆ? ಕಾಲ ಬದಲಾಗಿದೆ ಹಾಗೂ ಸಮಾಜ ಬದಲಾಗಿದೆ ಎಂದು ಬೊಗಳೆ ಬಿಡುವ ಜಾತಿವಾದಿಗಳಿಗೆ ತಾವು ಮರೆತ ಮಾತುಗಳನ್ನು ನೆನಪಿಸಬೇಕಿದೆ. ಅಷ್ಟೇ ಅಲ್ಲ. ಭಾರತದ ಇತಿಹಾಸದಲ್ಲಿ ದಲಿತರ ಮೇಲೆ ಮೇಲ್ಜಾತಿಗಳು ನಡೆಸಿರುವ ದೌರ್ಜನ್ಯವನ್ನು ನೆನಪಿಸಬೇಕಿದೆ. ಇದರ ಜೊತೆಗೆ ದಲಿತರಲ್ಲಿಯೇ ತಮ್ಮ ಸಹಬಾಂಧವರ ಕೊಲೆಗಳನ್ನು ಮರೆತು ಮೈಮರೆತಿರುವವರಿಗೂ ದಲಿತ ಭಾರತದ ಮೇಲೆ ದಲಿತೇತರ ಭಾರತ ನಡೆಸಿರುವ ಭಯೋತ್ಪಾದನೆಯನ್ನು ನೆನಪಿಸಬೇಕಿದೆ. ಜಾತಿಯೆಂಬ ದೇಶದ್ರೋಹದ ವಿವಿಧ ಮುಖಗಳನ್ನು ಹಾಗೂ ಅದರ ಕ್ರೂರ ಮುಖವನ್ನು ತೋರಿಸಬೇಕಿದೆ.

ಬಹುದೊಡ್ಡ ವಿಸ್ಮೃತಿಯನ್ನು ಭಾರತಕ್ಕೆ ಪರಿಚಯಿಸಿ ಅಲ್ಲೆಲ್ಲ ತುಟಕ್ ಪಿಟಕ್ ಎನ್ನದೆ ಬಾಯಿ-ಮನಸ್ಸುಗಳಿಗೆ ಬೀಗ ಜಡಿದುಕೊಂಡು ಕುಳಿತಿದ್ದ, ಈಗಲೂ ಸುದೀರ್ಘ ಜೀವಂತ ಶವಗಳಾಗಿಯೇ ಉಳಿದಿರುವ ಮೂಳೆ ಮಾಂಸದ ತಡಿಕೆಗಳ ಮುಂದೆ ದಲಿತರ ಸುಟ್ಟ ಬೂದಿ, ಹೆಪ್ಪುಗಟ್ಟಿದ ನೆತ್ತರನ್ನು ತೋರಿಸಬೇಕಿದೆ.

ಅದಕ್ಕಾಗಿಯೇ ಈ ಅಂಕಣ. ಮಾತು ಮರೆತ ಭಾರತ. ಮಹಾಮರೆವಿನಲ್ಲಿ ಮುಳುಗಿ ತೇಲುತ್ತಿರುವ ದಲಿತರಿಗೂ ಹಾಗೂ ದಲಿತೇತರರಿಬ್ಬರಿಗೂ ಸಮರ್ಪಣೆ.

ಸಾಕ್ಯ ಸಮಗಾರ


ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...