Homeದಲಿತ್ ಫೈಲ್ಸ್ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

- Advertisement -
- Advertisement -

ಮಾತು ಮರೆಯುವುದರಲ್ಲಿ ಎರಡು ವಿಧ. ಒಂದು, ಕೊಟ್ಟ ಮಾತು ಮರೆಯುವುದು. ಇನ್ನೊಂದು ಮಾತಾಡಲೇಬೇಕಾದಾಗ ಮಾತಾಡದೇ ಇರುವುದು. ಎರಡು ಸನ್ನಿವೇಶದಲ್ಲಿಯೂ ಸಹ ಮಾತುಗಳನ್ನು ಮರೆಯಲಾಗುತ್ತದೆ. ಮರೆಯುವುದು ಸಹಜವಲ್ಲವೆ? ಹೌದು ಸಹಜ. ಒಮ್ಮೆಯಾದರೆ ಸಹಜ. ಮತ್ತೊಮ್ಮೆಯಾದರೂ ಸಹಜವೆನ್ನೋಣ. ಆದರೆ ಶತಮಾನಗಳ ಕಾಲದ ಮರೆವಿಗೆ ಏನೆನ್ನೋಣ? ಜಾಣ ಮರೆವು ಎಂದುಬಿಡಬಹುದು. ಆದರೆ ಭಾರತದಲ್ಲಿ ಜಾಣ ಮರೆವನ್ನೂ ಮೀರಿಸಿದ ಕ್ರೂರ ಮರೆವಿದೆ. ಈ ಕ್ರೂರ ಮರೆವಿಗೆ ಕಾರಣ ಒಂದು ಭಾರತವಿಲ್ಲದ್ದಾಗಿದೆ. ಇಲ್ಲಿ ನೂರಾರು ಭಾರತಗಳಿವೆ. ಅನ್ಯ ದೇಶಗಳಿಗೆ ಹೋಲಿಸಿಕೊಂಡಾಗ ಇಲ್ಲಿ ಹಲವು ಜಾತಿಗಳಿಂದ ಒಡೆದುಹೋಗಿರುವ ಹಲವು ಭಾರತಗಳಿವೆ. 1950ರಲ್ಲಿ ಸಂವಿಧಾನ ಈ ಭಾರತವನ್ನು ಒಂದು ಮಾಡುವ ಪ್ರಯತ್ನಕ್ಕೆ ಮುಂದಾಯಿತಾದರೂ ಆಳುವ ವರ್ಗ ಇಂದಿಗೂ ಅದು ಸಫಲವಾಗದಂತೆ ನೋಡಿಕೊಂಡು ಮತ್ತಷ್ಟು ಛಿದ್ರಗೊಂಡು ಮತ್ತಷ್ಟು ಭಾರತಗಳಾಗುವಂತೆ ಮಾಡಿದೆ.

ಇಂತಹ ಭಾರತದ ಪ್ರಾಚೀನ ಕಾಲದಲ್ಲಿ ಅಸ್ಪೃಶ್ಯ ಭಾರತವೂ ಇತ್ತು. ಆಧುನಿಕ ಭಾರತದಲ್ಲಿ ಪರಿಶಿಷ್ಟ ಜಾತಿಗಳಾಗಿ ಗುರುತಿಸಿಕೊಂಡು ಇಂದು ದಲಿತ ಭಾರತವಾಗಿದೆ. ಆದರೆ ಅಸ್ಪೃಶ್ಯ ಭಾರತ ಅವರ ಪಾಲಿಗೆ ಇಂದಿಗೂ ಜೀವಂತವಿದೆ. ಸಂವಿಧಾನ ಸಭೆಯಲ್ಲಿ ಅಸ್ಪೃಶ್ಯತೆಯನ್ನು ನಿಷೇಧಿಸಿ, ಇನ್ನು ಮುಂದೆ ಮನುಷ್ಯರಾದ ಅಸ್ಪೃಶ್ಯರನ್ನು ದೆವ್ವಗಳಂತೆ ಕಾಡುವುದಿಲ್ಲವೆಂದು ಮಾತು ಕೊಟ್ಟ ದಲಿತೇತರರು ತಾವು ಕೊಟ್ಟ ಮಾತನ್ನು ಉಳಿಸಿಕೊಂಡರೆ? ’ಹಿಂದೂ ನಾವೆಲ್ಲ ಒಂದು’ ಎಂದ ಸ್ವಯಂ ಸೇವಕರು ದಲಿತರನ್ನು ಸಮಾನವಾಗಿ ಕಂಡರೆ? ವಸುದೈವ ಕುಟುಂಬಕಂ ಎಂದ ಸಾಧು ಸಂತರು ದಲಿತರೊಂದಿಗೆ ಕಳ್ಳುಬಳ್ಳಿ ಸಂಬಂಧ ಬೆಳೆಸಿದರೆ? ದ್ವೈತ, ಅದ್ವೈತ್ಯ, ವಿಶಿಷ್ಟಾದ್ವೈತಗಳು ದಲಿತರಿಗೆ ದೇಗುಲ ಪ್ರವೇಶ ನೀಡಿದವೇ? ಆಧ್ಯಾತ್ಮದ ಭಾಗವಾಗಿಸಿಕೊಂಡವೆ? ಆಮ್ ಆದ್ಮಿ ಕೆ ಸಾಥ್ ಅಂದವರು ದಲಿತ ಕೇರಿಗಳನ್ನು ಮುಟ್ಟಿದರೆ? ’ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಎಂದವರು ದಲಿತರ ವಿಕಾಸಕ್ಕೆ ಕೈ ಹಾಕಿದರೇ? ಹೀಗೆ ಸಾಲುಸಾಲು ಪ್ರಶ್ನೆಗಳಿಗೆ ಉತ್ತರ ಇಲ್ಲವೆಂದೇ ತೋರುತ್ತಿದೆ.

’ರೀ ಈಗ ಮೊದಲಿನಂತಿಲ್ಲ. ಎಲ್ಲಾ ಬದಲಾಗುತ್ತಿದೆ’ ಎಂದವರ ಮುಂದೆ ಲೆಕ್ಕವಿಲ್ಲದಷ್ಟು ದಲಿತರ ಹೆಣಗಳ ಪಟ್ಟಿ ಇಟ್ಟಾಗ ಮಾತನ್ನೇ ಮರೆತುಬಿಡುತ್ತಾರೆ. ೨೦೨೦ರಲ್ಲಿ ದಲಿತರ ಮೇಲೆ 58,563 ದೌರ್ಜನ್ಯಗಳನ್ನು ಎಸಗಲಾಗಿದೆ. ಸ್ವತಂತ್ರ ಭಾರತ ಲೆಕ್ಕವಿಲ್ಲದಷ್ಟು ದಲಿತರ ಹತ್ಯಾಕಾಂಡಗಳಿಗೆ ನ್ಯಾಯವೇ ಸಿಗದೆ ನರಳುತ್ತಿವೆ. ಪ್ರತಿ ದಿನದ ಪತ್ರಿಕೆಗಳ ಮೂಲೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ವರದಿಯಾಗುತ್ತವೆ. ಇದರಲ್ಲಿ ಕೊಲೆ ಅತ್ಯಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಆದರೂ ದಲಿತೇತರರ ಉತ್ತರ ಸಿದ್ಧವಾಗಿರುತ್ತದೆ. ’ಈಗ ಮೊದಲಿನಂತಲ್ಲ ಬಿಡ್ರಿ’.

ವಾಚ್ ಕಟ್ಟಿದ್ದಕ್ಕೆ, ಮೀಸೆ ಬಿಟ್ಟದ್ದಕ್ಕೆ, ಕುದುರೆ ಹತ್ತಿದ್ದಕ್ಕೆ, ಅಂಬೇಡ್ಕರ್ ರಿಂಗ್‌ಟೋನ್ ಇಟ್ಟುಕೊಂಡಿದ್ದಕ್ಕೆ ದಲಿತರನ್ನ ಕೊಲೆ ಮಾಡಿಬಿಡುವಷ್ಟು ಕ್ರೂರಿಗಳು ಇಂದಿಗೂ ಈ ನೆಲದಲ್ಲಿರುವಾಗ ಭಾರತ ಸ್ವಾತಂತ್ರ್ಯಗೊಂಡಿದೆ ಎಂದು ಹೇಗೆ ಹೇಳುವುದು? ಆಗಿರುವ ಗಾಯಕ್ಕೆ ಮುಲಾಮು ಹಚ್ಚಬೇಕಾದ ಸಮಾಜ ಪದೇಪದೇ ಅದೇ ಗಾಯದ ಮೇಲೆ ಬರೆ ಹಾಕುತ್ತಾ ’ನೋಡು ಈಗ ಹಳೆಯ ಗಾಯ ಕಾಣುತ್ತಿಲ್ಲ’ ಎಂದರೆ ದಲಿತರು ನಂಬಿ ಕೂರಬೇಕೆ? ಕಾಲ ಬದಲಾಗಿದೆ ಹಾಗೂ ಸಮಾಜ ಬದಲಾಗಿದೆ ಎಂದು ಬೊಗಳೆ ಬಿಡುವ ಜಾತಿವಾದಿಗಳಿಗೆ ತಾವು ಮರೆತ ಮಾತುಗಳನ್ನು ನೆನಪಿಸಬೇಕಿದೆ. ಅಷ್ಟೇ ಅಲ್ಲ. ಭಾರತದ ಇತಿಹಾಸದಲ್ಲಿ ದಲಿತರ ಮೇಲೆ ಮೇಲ್ಜಾತಿಗಳು ನಡೆಸಿರುವ ದೌರ್ಜನ್ಯವನ್ನು ನೆನಪಿಸಬೇಕಿದೆ. ಇದರ ಜೊತೆಗೆ ದಲಿತರಲ್ಲಿಯೇ ತಮ್ಮ ಸಹಬಾಂಧವರ ಕೊಲೆಗಳನ್ನು ಮರೆತು ಮೈಮರೆತಿರುವವರಿಗೂ ದಲಿತ ಭಾರತದ ಮೇಲೆ ದಲಿತೇತರ ಭಾರತ ನಡೆಸಿರುವ ಭಯೋತ್ಪಾದನೆಯನ್ನು ನೆನಪಿಸಬೇಕಿದೆ. ಜಾತಿಯೆಂಬ ದೇಶದ್ರೋಹದ ವಿವಿಧ ಮುಖಗಳನ್ನು ಹಾಗೂ ಅದರ ಕ್ರೂರ ಮುಖವನ್ನು ತೋರಿಸಬೇಕಿದೆ.

ಬಹುದೊಡ್ಡ ವಿಸ್ಮೃತಿಯನ್ನು ಭಾರತಕ್ಕೆ ಪರಿಚಯಿಸಿ ಅಲ್ಲೆಲ್ಲ ತುಟಕ್ ಪಿಟಕ್ ಎನ್ನದೆ ಬಾಯಿ-ಮನಸ್ಸುಗಳಿಗೆ ಬೀಗ ಜಡಿದುಕೊಂಡು ಕುಳಿತಿದ್ದ, ಈಗಲೂ ಸುದೀರ್ಘ ಜೀವಂತ ಶವಗಳಾಗಿಯೇ ಉಳಿದಿರುವ ಮೂಳೆ ಮಾಂಸದ ತಡಿಕೆಗಳ ಮುಂದೆ ದಲಿತರ ಸುಟ್ಟ ಬೂದಿ, ಹೆಪ್ಪುಗಟ್ಟಿದ ನೆತ್ತರನ್ನು ತೋರಿಸಬೇಕಿದೆ.

ಅದಕ್ಕಾಗಿಯೇ ಈ ಅಂಕಣ. ಮಾತು ಮರೆತ ಭಾರತ. ಮಹಾಮರೆವಿನಲ್ಲಿ ಮುಳುಗಿ ತೇಲುತ್ತಿರುವ ದಲಿತರಿಗೂ ಹಾಗೂ ದಲಿತೇತರರಿಬ್ಬರಿಗೂ ಸಮರ್ಪಣೆ.

ಸಾಕ್ಯ ಸಮಗಾರ


ಇದನ್ನೂ ಓದಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...