Homeಕರ್ನಾಟಕಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

- Advertisement -
- Advertisement -

ಬೆಂಗಳೂರು ಸೇರಿದಂತೆ ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ‘ಯೆಲ್ಲೋ’ (ಹಳದಿ) ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು, ಕೊಡಗು, ಮೈಸೂರು, ಉಡುಪಿ, ಗುಲ್ಬರ್ಗ, ಶಿವಮೊಗ್ಗ, ಚಿತ್ರದುರ್ಗ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಳದಿ (ಯೆಲ್ಲೋ) ಅಲರ್ಟ್ ಜಾರಿಯಾಗಿದೆ.

“ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಮತ್ತು ಸಣ್ಣ ಮಟ್ಟದ ಸಂಚಾರ ದಟ್ಟಣೆ ಆಗಬಹುದು, ಮರ ಮತ್ತು ಕೊಂಬೆಗಳು ಮುರಿದು ಬೀಳುವ ಸಾಧ್ಯತೆ ಇದೆ” ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಜೂನ್ 3ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮಾರ್ಚ್ 1ರಿಂದ ನಗರದಲ್ಲಿ 277 ಮಿಮೀ ಮಳೆ ದಾಖಲಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ ನಗರದಲ್ಲಿ 421 ಮಿಮೀ ಮಳೆಯಾಗಿತ್ತು.

ಹವಾಮಾನ ಇಲಾಖೆಯ ವಿಜ್ಞಾನಿಗಳ ಪ್ರಕಾರ, ಜೂನ್ 4 ರಂದು ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಪ್ರವೇಶಿಸಲಿದೆ.

“ನೈಋತ್ಯ ಮಾನ್ಸೂನ್ ಇಂದು ನೈಋತ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಗಳಲ್ಲಿ ಮುಂದುವರಿದಿದೆ. ಹೀಗಾಗಿ ಕರಾವಳಿ ಆಂಧ್ರಪ್ರದೇಶದಲ್ಲಿ, ತೆಲಂಗಾಣದ ಕೆಲವು ಭಾಗಗಳಲ್ಲಿ, ತಮಿಳುನಾಡು, ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗಿದೆ. ನಾಳೆಯೂ ಮಳೆ ಮುಂದುವರಿಯುತ್ತದೆ. ಮೇ 30ರಿಂದ ಜೂನ್ 3 ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ” ಎಂದು ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. “ಮಳೆಯಿಂದ ಬೆಂಗಳೂರಿನ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜನರೊಂದಿಗೆ ಸೌಹಾರ್ದಯುತವಾಗಿ ಬಿಬಿಎಂಪಿ ಸ್ಪಂದಿಸಬೇಕು. ಮಳೆಗಾಲದಲ್ಲಿ ಮಳೆ ನೀರು ಮುಕ್ತವಾಗಿ ಹರಿಯುವಂತೆ ವ್ಯವಸ್ಥೆ ಮಾಡಬೇಕು” ಎಂದು ನಿರ್ದೇಶಿಸಿದ್ದಾರೆ.

ಏನಿವು ಅಲರ್ಟ್‌ಗಳು?

ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಹಸಿರು, ಕಿತ್ತಳೆ, ಕೆಂಪು ಮತ್ತು ಹಳದಿ ಅಲರ್ಟ್‌ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ?

ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್‌ಗಳನ್ನು ಬಳಸುತ್ತದೆ.

1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)

ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರಿಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.

2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)

ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)

ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.

ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಮತ್ತು 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.

4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)

ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.

ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. 30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...