Homeಮುಖಪುಟಬಜೆಟ್‌ನಲ್ಲಿ ಘೋಷಿಸಿ ಪ್ರಚಾರ ಪಡೆದು ನಂತರ ಸದ್ದಿಲ್ಲದೆ ಕೈಬಿಟ್ಟ ಸಾಲು ಸಾಲು ಯೋಜನೆಗಳಿವು!

ಬಜೆಟ್‌ನಲ್ಲಿ ಘೋಷಿಸಿ ಪ್ರಚಾರ ಪಡೆದು ನಂತರ ಸದ್ದಿಲ್ಲದೆ ಕೈಬಿಟ್ಟ ಸಾಲು ಸಾಲು ಯೋಜನೆಗಳಿವು!

2020-21ರ ಸಾಲಿನಲ್ಲಿ ಬಜೆಟ್‌ನಲ್ಲಿ ಯೆಡಿಯೂರಪ್ಪನವರು ಘೋಷಿಸಿದ ಸುಮಾರು 1422.5 ಕೋಟಿ ರೂ ವೆಚ್ಚದ ಯೋಜನೆಗಳನ್ನು ಕೈಬಿಡಲಾಗಿದೆ...

- Advertisement -
- Advertisement -

ಎರಡು ವರ್ಷ ಹಿಂದೆ ಅಂದರೆ 2020-21ರ ಸಾಲಿನಲ್ಲಿ ಯೆಡಿಯೂರಪ್ಪನವರು ಬಜೆಟ್‌ನಲ್ಲಿ ಘೋಷಿಸಿದ ಹಲವಾರು ಯೋಜನೆಗಳ ಹಣೆಬರಹ ಇದು! ಬಡ ಮೀನುಗಾರ ಮಹಿಳೆಯರಿಂದ ಹಿಡಿದು ಒಣ ಭೂಮಿ ರೈತರ ಬಾಳು ಉತ್ತಮಪಡಿಸಲು ಧಾಂ ಧೂಂ ಅಂತ ಬಜೆಟ್ಟಿನಲ್ಲಿ ಕಾರ್ಯಕ್ರಮ ಘೋಷಿಸಿ, ವರ್ಷಾಂತ್ಯದಲ್ಲಿ ತಣ್ಣಗೆ ಯೋಜನೆಗಳನ್ನು ಕೈಬಿಡಲಾಗಿದೆ ಎಂಬ ಟಿಪ್ಪಣಿ ಹಾಕಲಾಗಿದೆ. ಈ ಕೈಬಿಡಲಾದ ಯೋಜನೆಗಳ ಪಟ್ಟಿ ಇಲ್ಲಿದೆ.

2020-21ರ ಸಾಲಿನ ಬಜೆಟ್ ಮೇಲೆ “ಕ್ರಮ ಕೈಗೊಂಡ ವರದಿ”ಯನ್ನು ಕಳೆದ ಸಾಲಿನ ಬಜೆಟ್ ವೇಳೆ ಮಂಡಿಸಲಾಗಿದೆ. ಈ ವರದಿಯಲ್ಲಿ ಈ ಧೂರ್ತತನ ಅನಾವರಣಗೊಂಡಿದೆ. ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ತವರು ಜಿಲ್ಲೆಯ ಯೋಜನೆಯೂ ಸೇರಿದೆ. ಕಳೆದ ಸಾಲಿನ ಘೋಷಣೆಗಳ ಹಣೆಬರಹ ಈ ಬಾರಿಯ “ಕ್ರಮಕೈಗೊಂಡ ವರದಿ”ಯಲ್ಲಿ ಉಲ್ಲೇಖವಾಗಲಿದೆ.! ಈಗ ಯಾವ ಯಾವ ಯೋಜನೆಗಳನ್ನು ಕೈ ಬಿಡಲಾಗಿದೆಯೋ ದೇವರಿಗೇ ಗೊತ್ತು. ಬಜೆಟ್ ಘೋಷಣೆ ಎಂಬುದು ಸಿನೆಮಾ ಪೋಸ್ಟರ್ ತರಹದ ಗಮನ ಸೆಳೆಯುವ ತಂತ್ರವಾಗಿದೆಯೇ ಹೊರತು, ಸರಕಾರ ಕಲ್ಯಾಣ ಕಾರ್ಯಕ್ರಮದ ದಿಸೆಯನ್ನು ತೋರುತ್ತಿಲ್ಲ. (ಈ ಪಟ್ಟಿಯಲ್ಲಿರುವ ಸಂಖ್ಯೆ ಬಜೆಟ್ಟಿನಲ್ಲಿ ನೀಡಲಾಗಿರುವ ಕಾರ್ಯಕ್ರಮಗಳ ಅನುಕ್ರಮಣಿಕೆ ಪಟ್ಟಿಯ ಸಂಖ್ಯೆ)

ಕೈಬಿಡಲಾದ ಘೋಷಿತ ಯೋಜನೆಗಳು: ಸರ್ಕಾರ ಯೋಜನೆ ಘೋಷಿಸುವಾಗ ಹೇಳಿದ್ದನ್ನು ಸಹ ಸೇರಿಸಲಾಗಿದೆ.

33. ರಾಸಾಯನಿಕ ಆಧಾರಿತ ಕೃಷಿಯ ಅನಾನುಕೂಲತೆ ಮತ್ತು ಅಪಾಯವು ವಿಜ್ಞಾನಿಗಳಿಗೆ ಗೋಚರವಾಗಿದೆ.
ಸಾವಯವ ಕೃಷಿ ಇದಕ್ಕೆ ಪರಿಹಾರವಾಗಿದೆ. ರಾಸಾಯನಿಕಗಳ ಮೂಲಕ ದೊರೆಯುವಂತಹ ಅದೇ ಪೌಷ್ಟಿಕತೆಯನ್ನು ಸಾವಯವ ಆಕರಗಳಿಂದ ಪಡೆದುಕೊಳ್ಳಬಹುದಾಗಿದೆ. ಈ ಉದ್ದೇಶಕ್ಕಾಗಿ ನೀರಿನಲ್ಲಿ ಕರಗುವಂತಹ ಗೊಬ್ಬರಗಳು, ಸೂಕ್ಷ್ಮ-ಪೌಷ್ಟಿಕಾಂಶಗಳು, ಹೈಡ್ರೋಜೆಲ್ ಇತ್ಯಾದಿಗಳನ್ನು ಬಳಸಲು ನೆರವು
ನೀಡಲಾಗುವುದು. ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವುದಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.

35. ನೀರು ಮತ್ತು ಗೊಬ್ಬರಗಳ ಬಳಕೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಸಾಮರ್ಥ್ಯಾಭಿವೃದ್ಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 40 ಪ್ರಾತ್ಯಕ್ಷಿಕೆ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿ, ಉತ್ತಮ ಕೃಷಿ ಪದ್ಧತಿಗಳು, ನೂತನ
ತಂತ್ರಜ್ಞಾನಗಳು ಮತ್ತು ಕೊಯ್ಲೋತ್ತರ ನಿರ್ವಹಣೆ ಇತ್ಯಾದಿಗಳ ಬಗ್ಗೆ ಕೃಷಿಕರಿಗೆ ಪ್ರಾತ್ಯಕ್ಷಿಕೆ ನೀಡಲಾಗುವುದು.

43. ಕರ್ನಾಟಕದಲ್ಲಿ ಶೇ.75ರಷ್ಟು ಸಣ್ಣ ಹಾಗೂ ಅತೀ ಸಣ್ಣ ರೈತರಿದ್ದಾರೆ. ರಾಜ್ಯದ ಕೃಷಿ ಪದ್ಧತಿಯು ಬಹುತೇಕ
ಮಳೆಯಾಧಾರಿತ ಆಗಿರುವುದರಿಂದ ತೋಟಗಾರಿಕಾ ಬೆಳೆಗಳ ಪ್ರದೇಶವನ್ನು ವಿಸ್ತರಿಸುವ ಸಾಧ್ಯತೆಗಳು
ಹೆಚ್ಚಿರುತ್ತವೆ. ತೋಟಗಾರಿಕೆ ಕೃಷಿ ಪದ್ಧತಿಗೆ ವರ್ಗಾವಣೆಗೊಳ್ಳಲು ಸಣ್ಣ ಮತ್ತು ಅತೀ ಸಣ್ಣ ರೈತರು ಇಚ್ಛಿಸಿದಲ್ಲಿ ಅವರಿಗೆ ಬೀಜ, ರಸಗೊಬ್ಬರ ಖರೀದಿ, ಕೃಷಿ ಕಾರ್ಮಿಕರ ವೆಚ್ಚ ಭರಿಸಲು ಅನುಕೂಲವಾಗುವಂತೆ
ಒಂದು ಸಮಗ್ರ ಯೋಜನೆಯನ್ನು ರೂಪಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ
ರೈತರು ಹೊಸದಾಗಿ ತೋಟಗಾರಿಕೆ ಕೃಷಿ ಪದ್ಧತಿಗೆ ವರ್ಗಾವಣೆಗೊಂಡಲ್ಲಿ ಪ್ರತಿ ಹೆಕ್ಟೇರಿಗೆ 5000 ರೂ.ಗಳಂತೆ ಗರಿಷ್ಠ 10,000 ರೂ.ಗಳ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಗುವುದು.

44. ಹಾಪ್‌ಕಾಮ್ಸ್ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಪಡೆದ ಸಹಕಾರಿ ಸಂಘವಾಗಿದ್ದು, ರಾಜ್ಯದ ತೋಟಗಾರಿಕಾ
ಬೆಳೆಗಾರರ ಬೆನ್ನೆಲುಬಾಗಿದೆ. ಹಾಪ್‌ಕಾಮ್ಸ್‌ಗಳಲ್ಲಿ ಉತ್ತಮ ಸೇವೆಗಳನ್ನು ಒದಗಿಸುವ ಹಾಗೂ ವಿಸ್ತರಿಸುವ
ಉದ್ದೇಶದಿಂದ ಹಾಪ್‌ಕಾಮ್ಸ್ ಸಂಸ್ಥೆಯನ್ನು ಬಲಪಡಿಸಲಾಗುವುದು.

55. ರಾಯಚೂರು, ಯಾದಗಿರಿ, ಕಲಬುರಗಿ ಭಾಗದ ಜನರಿಗೆ ಕುಡಿಯುವ ನೀರಿನ ಸರಬರಾಜಿಗೆ ಅನುಕೂಲವಾಗುವಂತೆ ತಿಂತಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಿಸಲು ಉದ್ದೇಶಿಸಿ, ವಿಸ್ತೃತ
ಯೋಜನಾ ವರದಿಯನ್ನು ತಯಾರಿಸಲು ಕ್ರಮ ವಹಿಸಲಾಗುವುದು.

59. ರಾಜ್ಯದಲ್ಲಿ ಹಂದಿಗಳ ಸಾಕಾಣಿಕೆ ಮತ್ತು ಉತ್ಪಾದನೆ ಗುಣಮಟ್ಟದಲ್ಲಿ ಸುಧಾರಣೆಯನ್ನು ತರಲು ವಿದೇಶಿ
ತಳಿಯ ಹಂದಿಗಳನ್ನು ಆಮದು ಮಾಡಿಕೊಳ್ಳಲು “ಸಮಗ್ರ ವರಾಹ ಅಭಿವೃದ್ಧಿ” ಯೋಜನೆಯನ್ನು
ರೂಪಿಸಲಾಗುವುದು. ಈ ಯೋಜನೆಯನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

61. ರಾಜ್ಯದ ಹೈನುರಾಸುಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಹೆಣ್ಣು ಕರುಗಳನ್ನು ಪಡೆಯಲು ಲಿಂಗ ನಿರ್ಧಾರಿತ
ವೀರ್ಯನಳಿಕೆಗಳಿಂದ ಕೃತಕ ಗರ್ಭಧಾರಣೆ ಕೈಗೊಂಡು ಹೆಣ್ಣು ಕರುಗಳ ಜನನವನ್ನು ಹೆಚ್ಚಿಸಲಾಗುವುದು. ಈ
ಉದ್ದೇಶಕ್ಕಾಗಿ ಎರಡು ಕೋಟಿ ರೂ. ಅನುದಾನ ನೀಡಲಾಗುವುದು.

62. ಮೀನುಗಾರರು ಆಧುನಿಕ ಮೀನುಗಾರಿಕೆ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವಂತೆ
ಪ್ರೋತ್ಸಾಹಿಸಲು “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ” ಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ.
ಈ ಯೋಜನೆಗೆ 2020-21ನೇ ಸಾಲಿನಲ್ಲಿ 1.5 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಈ ಯೋಜನೆಯನ್ನು ಕೈಬಿಡಲಾಗಿದೆ.

63. ಮೀನುಗಾರ ಮಹಿಳೆಯರು ಮೀನು ಮಾರಾಟ ಪ್ರಕ್ರಿಯೆಯಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ಮೀನುಗಾರ ಮಹಿಳೆಯರು ಮೀನು ಇಳಿದಾಣದಿಂದ ಮಾರುಕಟ್ಟೆಗೆ ತ್ವರಿತವಾಗಿ ಮೀನು ಸಾಗಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ 1000 ಮೀನುಗಾರ ಮಹಿಳೆಯರಿಗೆ “ಮಹಿಳಾ ಮೀನುಗಾರ
ಸಬಲೀಕರಣ” ಯೋಜನೆಯ ಮೂಲಕ ದ್ವಿಚಕ್ರ ವಾಹನಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ಯೋಜನೆಯನ್ನು ಐದು ಕೋಟಿ ರೂ..ಗಳ ವೆಚ್ಚದಲ್ಲಿಅನುಷ್ಠಾನಗೊಳಿಸಲಾಗುವುದು.
ಈ ಯೋಜನೆಯನ್ನು ಕೈಬಿಡಲಾಗಿದೆ.

64. ಕರಾವಳಿ ಜಲಕೃಷಿ ಎಂದೇ ಕರೆಯಲ್ಪಡುವ ಹಿನ್ನೀರು ಜಲಕೃಷಿಯು ದೇಶದ ಮತ್ತು ರಾಜ್ಯದ ಒಟ್ಟಾರೆ
ಮೀನುಗಾರಿಕೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ. ಈ ಹಿನ್ನೀರು ಮೀನುಗಾರಿಕೆಯನ್ನು
ಸದೃಢಗೊಳಿಸಲು ಮುಲ್ಕಿಯಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರವನ್ನು ಮುಲ್ಕಿಯಲ್ಲಿ ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.

67. ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರನ್ನು 130 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು..

68. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಹಾಗೂ ಮೂಲಭೂತ
ಸೌಕರ್ಯಕ್ಕಾಗಿ ನಾಲ್ಕು ಕೋಟಿ ರೂ. ಗಳನ್ನು ಒದಗಿಸಲಾಗುವುದು.

69. ಉತ್ತರ ಕನ್ನಡ ಜಿಲ್ಲೆಯ ತೆಂಗಿನಗುಂಡಿ ಬಂದರಿನ ಅಳಿವೆ ಹೂಳೆತ್ತುವ ಕಾಮಗಾರಿಗೆ (100 ಮೀ) ಐದು ಕೋಟಿ ರೂ. ಗಳನ್ನು ಒದಗಿಸಲಾಗುವುದು.

110. ಕರ್ನಾಟಕವನ್ನು “ಶ್ರವಣ ದೋಷ ಮುಕ್ತ” ಮಾಡಲು ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ
ಕಿವುಡುತನವನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆ ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಯೋಜನೆಗೆ
2020-21ನೇ ಸಾಲಿನಲ್ಲಿ 28 ಕೋಟಿ ರೂ.ಗಳನ್ನು ಒದಗಿಸಲಾಗುವುದು.

111. ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕಗಳನ್ನು ಸ್ಥಾಪಿಸಲಾಗಿದ್ದು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸದರಿ ತೀವ್ರ ನಿಗಾ ಘಟಕಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಉದ್ದೇಶಿಸಲಾಗಿದೆ. 2020-21ನೇ ಸಾಲಿನಲ್ಲಿ ಈ ಘಟಕಗಳನ್ನು ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ
ಅನುಷ್ಠಾನಗೊಳಿಸಲಾಗುವುದು.

115. ಹಾವೇರಿ ಜಿಲ್ಲೆಯಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆಯನ್ನು 20 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಈ ಉದ್ದೇಶಕ್ಕಾಗಿ 2020- 21ನೇ ಸಾಲಿನಲ್ಲಿ ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

152. ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ 20 ಕೋಟಿ ರೂ. ಮೊತ್ತದಲ್ಲಿ
ಶುದ್ಧೀಕರಿಸಿದ ನೀರನ್ನು ಗೃಹೇತರ ಉದ್ದೇಶಕ್ಕೆ ಮರುಬಳಕೆ ಮಾಡುವ ಯೋಜನೆಯನ್ನು ರೂಪಿಸಿ
ಅನುಷ್ಠಾನಗೊಳಿಸಲಾಗುವುದು.

205. ಬೆಂಗಳೂರು ನಗರಕ್ಕೆ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿಯು ನೀರಿನ ಪೈಪ್‌ಲೈನ್ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಈ ಕಾರಣದಿಂದಾಗಿ ಅಲ್ಲಿನ ರಸ್ತೆಗಳು ದುಃಸ್ಥಿತಿಯಲ್ಲಿರುತ್ತವೆ. ಅವುಗಳ ಪುನಶ್ಚೇತನಕ್ಕಾಗಿ ಮುಂದಿನ ಎರಡು ವರ್ಷಗಳಲ್ಲಿ 1000 ಕೋಟಿ ರೂ.ಗಳನ್ನು ನೀಡಲಾಗುವುದು. 2020-21ನೇ ಸಾಲಿನಲ್ಲಿ ಈ
ಉದ್ದೇಶಕ್ಕಾಗಿ 500 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಈ ಮೇಲಿನ ಎಲ್ಲಾ ಯೋಜನೆಗಳನ್ನು ಸದ್ದಿಲ್ಲದೆ ಕೈಬಿಡಲಾಗಿದೆ. ಘೋಷಿಸುವಾಗಿ ಅಬ್ಬರಿಸಿ ಪ್ರಚಾರ ಪಡೆದ ಸರ್ಕಾರ ಕೈಬಿಡುವಾಗ ಯಾರಿಗೂ ತಿಳಿಸಿಲ್ಲ. ಇದು ಈ ಸರ್ಕಾರದ ವರಸೆ. ಹಾಗಾಗಿ ಬಜೆಟ್ ಘೋಷಣೆ ಎಂಬುದು ಎಷ್ಟು ಜಾರಿಯಾಗುತ್ತದೆ ಎಂಬುದನ್ನು ಈ ಮೇಲಿನ ಅಂಕಿ ಅಂಶಗಳ ಮೂಲಕ ಸಾರ್ವಜನಿಕರೆ ನಿರ್ಧರಿಸಬೇಕಿದೆ.

  • ಕೆ.ಪಿ ಸುರೇಶ

ಇಂಗ್ಲಿಷ್ ಅಧ್ಯಾಪಕರಾಗಲು ಎಂ.ಎ ಓದಿದ್ದ ಕೆ.ಪಿ.ಸುರೇಶ ಅವರು ಕೃಷಿಯಲ್ಲಿ ತೊಡಗಲು ಸುಳ್ಯ ತಾಲೂಕಿನ ತಮ್ಮ ಊರಿಗೆ ಮರಳಿದ್ದರು. ತಮ್ಮ ಸ್ವಂತ ಅನುಭವ, ಅಧ್ಯಯನ ಹಾಗೂ ಒಳನೋಟಗಳ ಕಾರಣಕ್ಕೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯ ವಿಚಾರದಲ್ಲಿ ತಜ್ಞರಿಗೂ, ರೈತರಿಗೂ ಪಾಠ ಮಾಡಬಲ್ಲರು. ಅಪಾರ ಕೀಟಲೆಯ ಸ್ವಭಾವದ ಅವರು ಹಲವು ವಿಚಾರಗಳ ಕುರಿತು ಬರೆಯುತ್ತಿರುವ ಆಲ್‌ರೌಂಡರ್ ಕೂಡ.


ಇದನ್ನೂ ಓದಿ: ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ: ಸುಪ್ರೀಂ ಆದೇಶಕ್ಕೆ ಆತಂಕಪಡಬೇಕಿಲ್ಲ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...