ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂದು ಸಂಜೆ ಮತ್ತೊಂದು ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಸಾವನಪ್ಪಿರುವ ದುರ್ಘಟನೆ ಜರುಗಿದೆ.
ರಾಮನಗರ ತಾಲ್ಲೂಕಿನ ಜೈಪುರ ಬಳಿ ಅಪಘಾತ ಸಂಭವಿಸಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಫ್ಲೈವುಡ್ ಶೀಟ್ಗಳನ್ನು ತುಂಬಿಕೊಂಡು ಚಲಿಸುತ್ತಿದ್ದ ಬೊಲೊರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ನ ಗ್ಲಾಸ್ ಹೊಡೆದು ಫ್ಲೈವುಡ್ ಶೀಟ್ಗಳು ಬಸ್ನೊಳಕ್ಕೆ ನುಗ್ಗಿವೆ. ನಿಯಂತ್ರಣ ತಪ್ಪಿದ್ದ ಬಸ್ ಪಕ್ಕದ ರಸ್ತೆ ದಾಟಿ ಬಂದು ನಿಂತಿದೆ. ದುರ್ಘಟನೆಯಲ್ಲಿ ನಿರ್ವಾಹಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇಂದು ಸಂಜೆ 4 ಗಂಟೆ ಸಮಯಕ್ಕೆ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡ ಚಾಲಕ ಮತ್ತು ಇತರ ಪ್ರಯಾಣಿಕರನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂರು ದಿನಗಳ ಹಿಂದಷ್ಟೇ ಇದೇ ರಸ್ತೆಯಲ್ಲಿ ಬೈಕ್ ಸವಾರ ವಾಹನವೊಂದಕ್ಕೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಜನವರಿಯಿಂದ ಈವರೆಗಿನ ಅಪಘಾತಗಳಲ್ಲಿ 111 ಜನ ಸಾವು
ಬೆಂಗಳೂರು-ಮೈಸೂರು ನಗರಗಳನ್ನು ಬೆಸೆಯುವ ಈ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 244 ಅಪಘಾತಗಳು ಸಂಭವಿಸಿದ್ದು, 51 ಜನ ಸಾವನ್ನಪ್ಪಿದರೆ, 190 ಜನರಿಗೆ ಗಾಯಗಳಾಗಿವೆ. ಇನ್ನು ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಸಾವನ್ನಪ್ಪಿದ್ದಾರೆ. 54 ಮಂದಿಗೆ ತೀವ್ರ ಪೆಟ್ಟು ಬಿದ್ದಿದ್ದರೆ, 189 ಮಂದಿಗೆ ಕೈ ಕಾಲು ಮುರಿತವಾಗಿದ್ದು, 295 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮೂಲಕ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಾವಿನ ಹೆದ್ದಾರಿಯಾಗಿ ಮಾರ್ಪಾಡುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.
ಈ ಕುರಿತು ಇಂದು ಮೈಸೂರಿನಲ್ಲಿ ಸ್ಪಷ್ಟನೆ ನೀಡಿರುವ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹರವರು, “ಬೆಂಗಳೂರು ಮೈಸೂರು ಹೆದ್ದಾರಿಯನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದು ಹೆದ್ದಾರಿಯೇ ಹೊರತು ರೇಸ್ ಟ್ರಾಕ್ ಅಲ್ಲ. ಯಾರು ಅತಿ ಹೆಚ್ಚು ವೇಗವಾಗಿ ಸಂಚರಿಸುತ್ತಾರೆ ಅವರು ಅಪಘಾತಕ್ಕೆ ತುತ್ತಾಗುತ್ತಾರೆ. ಅದಕ್ಕೂ ರಸ್ತೆಗೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ : ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ
We need explanation from commissioner, KARNATAKA STATE ROAD SAFETY AUTHORITY
“WHAT ACTION YOU HAVE TAKEN ON THESE ACCIDENTS !?”
CHAIRMSN, SUPREME COURT COMMITTEE ON ROAD SAFETY
SECRETARY MoRTH
RO, MORTH BANGALORE
Please use railways it is one of the most safest mode of transport.