Homeಮುಖಪುಟಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

- Advertisement -
- Advertisement -

ದೆಹಲಿ ಮೂಲಕ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊರ್ವಳು ಉತ್ತರ ಪ್ರದೇಶದ ಆಗ್ರಾದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕಾಲೇಜಿನಿಂದ ಕೆಲವೇ ಕಿ.ಮೀ ಗಳ ದೂರದಲ್ಲಿ ಶವ ಪತ್ತೆಯಾಗಿದ್ದು, ಆಕೆಯ ಕಾಲೇಜಿನ ವೈದ್ಯರೊಬ್ಬರು ಕಿರುಕುಳ ಕೊಟ್ಟಿರುವುದೇ ಸಾವಿಗೆ ಕಾರಣವೆಂದು ಆಕೆಯ ಕುಟುಂಬ ಆರೋಪಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಶವ ಪತ್ತೆಯಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಆಕೆಯ ಕುಟುಂಬ ಕಾಣೆಯಾಗಿದ್ದಾಳೆ ಎಂದು ದೂರು ನೀಡಿತ್ತು. ವೈದ್ಯರ ಕಿರುಕುಳದಿಂದಲೇ ಆಕೆಯ ಸಾವು ಸಂಭವಿಸಿದೆ ಎಂಬ ಕುಟುಂಬದ ಆರೋಪದ ಹಿನ್ನೆಲೆಯಲ್ಲಿ ವೈದ್ಯನೊಬ್ಬನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನಾತಕೋತ್ತರ ವೈದ್ಯ ಪದವಿ ಪಡೆಯಲು ದೆಹಲಿಯಿಂದ ಆಗ್ರಾಕ್ಕೆ ವಿದ್ಯಾರ್ಥಿನಿಯನ್ನು ಕಳಿಸಲಾಗಿತ್ತು. ಮಂಗಳವಾರ ಸಂಜೆಯಿಂದಲೇ ಕಾಣೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ತಿಳಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಆಕೆಯ ತಲೆ ಮತ್ತು ಕುತ್ತಿಗೆಗೆ ಪೆಟ್ಟುಗಳಾಗಿವೆ. ಆಕೆ ಸಾವಿಗೆ ಮುನ್ನ ಪ್ರತಿರೋಧಿಸಿರುವ ಲಕ್ಷಣಗಳಿವೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದೇವೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಸುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೆಲವು ವಾರಗಳಲ್ಲಿ ಕೊಲೆ, ಅತ್ಯಾಚಾರ ಘಟನೆಗಳು ವಿಪರೀತವಾಗಿವೆ. ಅದರಲ್ಲಿಯೂ ಮಹಿಳೆಯರು, ಹೆಣ್ಣು ಮಕ್ಕಳ ಮೇಲಿನ ಹಿಂಸೆಗಳು ಮಿತಿ ಮೀರಿವೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಪ್ರತಿಪಕ್ಷಗಳು ಟೀಕಿಸಿವೆ.

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

ಬುಲಂದ್‌ಶಹರ್, ಹಾಪುರ್, ಲಕ್ಷ್ಮಿಪುರ್ ಖೇರಿ ಮತ್ತು ಗೋರಕ್ ಪುರ್ ಈ ಎಲ್ಲಾ ಕಡೆ ಕೊಲೆ ಅತ್ಯಾಚಾರಗಳು ನಡೆದಿವೆ. ಇದು ಸರ್ಕಾರದ ನಿರ್ಲಕ್ಷ್ಯತನ ಮತ್ತು ವಿಫಲತೆಯನ್ನು ತೋರಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.

ನಿನ್ನೆ ತಾನೇ ವಯಸ್ಕ ಹುಡುಗಿಯೊಬ್ಬಳು ಯುಪಿಯ ಬದೋಯಿಯಿಂದ ಕಾಣೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಳು. ಶವದ ದೇಹ ಸುಟ್ಟಗಾಯಗಳಿಂದ ಕೂಡಿತ್ತು. ಕಳೆದ ವಾರದ ಲಕ್ಷ್ಮಿಪುರ ಖೇರಿಯ 13 ವರ್ಷದ ಬಾಲಕಿಯೊಬ್ಬಳನ್ನು ಅಮಾನವೀಯವಾಗಿ ಅತ್ಯಾಚಾರವೆಸಗಿ ಕೊಲ್ಲಲಾಗಿತ್ತು. ಆಕೆಯ ನಾಲಿಗೆ ಕತ್ತರಿಸಿ, ಕಣ್ಣು ಕೀಳಲಾಗಿತ್ತು ಎಂದು ಆಕೆಯ ತಂದೆ ತಿಳಿಸಿದ್ದರು. ಈ ತಿಂಗಳ ಆರಂಭದಲ್ಲಿ ಯುಪಿಯ ಹಾಪುರ್‌ನಲ್ಲಿ 6 ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಕಳೆದ ವಾರ ಆರೋಪಿಯನ್ನು ಬಂಧಿಸಲಾಗಿದೆ. ಆಗಸ್ಟ್ 10 ರಂದು ಬುಲಂದ್‌ಶಹರ್‌ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊರ್ವಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು. ಇಬ್ಬರು ಕಿಡಿಗೇಡಿಗಳು ಆಕೆಗೆ ಕಿರುಕುಳ ನೀಡಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿತ್ತು.

ಒಟ್ಟಿನಲ್ಲಿ ಪ್ರತಿನಿತ್ಯ ಮಹಿಳಾ ಕಿರುಕುಳ, ಕೊಲೆ ಅತ್ಯಾಚಾರಗಳು ಉತ್ತರ ಪ್ರದೇಶದಲ್ಲಿ ವರದಿಯಾಗುತ್ತಿದ್ದರೂ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ ಮತ್ತು ಮಹಿಳೆಯರಿಗೆ ಸುರಕ್ಷತೆ ಒದಗಿಸಲು ಮುಂದಾಗಿಲ್ಲ ಎಂಬುದು ಬಹಳಷ್ಟು ಜನರ ಅಭಿಪ್ರಾಯವಾಗಿದೆ.


ಇದನ್ನೂ ಓದಿ; ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...