Homeಮುಖಪುಟಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

- Advertisement -
- Advertisement -

ದೆಹಲಿ ಮೂಲಕ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊರ್ವಳು ಉತ್ತರ ಪ್ರದೇಶದ ಆಗ್ರಾದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕಾಲೇಜಿನಿಂದ ಕೆಲವೇ ಕಿ.ಮೀ ಗಳ ದೂರದಲ್ಲಿ ಶವ ಪತ್ತೆಯಾಗಿದ್ದು, ಆಕೆಯ ಕಾಲೇಜಿನ ವೈದ್ಯರೊಬ್ಬರು ಕಿರುಕುಳ ಕೊಟ್ಟಿರುವುದೇ ಸಾವಿಗೆ ಕಾರಣವೆಂದು ಆಕೆಯ ಕುಟುಂಬ ಆರೋಪಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಶವ ಪತ್ತೆಯಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಆಕೆಯ ಕುಟುಂಬ ಕಾಣೆಯಾಗಿದ್ದಾಳೆ ಎಂದು ದೂರು ನೀಡಿತ್ತು. ವೈದ್ಯರ ಕಿರುಕುಳದಿಂದಲೇ ಆಕೆಯ ಸಾವು ಸಂಭವಿಸಿದೆ ಎಂಬ ಕುಟುಂಬದ ಆರೋಪದ ಹಿನ್ನೆಲೆಯಲ್ಲಿ ವೈದ್ಯನೊಬ್ಬನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನಾತಕೋತ್ತರ ವೈದ್ಯ ಪದವಿ ಪಡೆಯಲು ದೆಹಲಿಯಿಂದ ಆಗ್ರಾಕ್ಕೆ ವಿದ್ಯಾರ್ಥಿನಿಯನ್ನು ಕಳಿಸಲಾಗಿತ್ತು. ಮಂಗಳವಾರ ಸಂಜೆಯಿಂದಲೇ ಕಾಣೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ತಿಳಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಆಕೆಯ ತಲೆ ಮತ್ತು ಕುತ್ತಿಗೆಗೆ ಪೆಟ್ಟುಗಳಾಗಿವೆ. ಆಕೆ ಸಾವಿಗೆ ಮುನ್ನ ಪ್ರತಿರೋಧಿಸಿರುವ ಲಕ್ಷಣಗಳಿವೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದೇವೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಸುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೆಲವು ವಾರಗಳಲ್ಲಿ ಕೊಲೆ, ಅತ್ಯಾಚಾರ ಘಟನೆಗಳು ವಿಪರೀತವಾಗಿವೆ. ಅದರಲ್ಲಿಯೂ ಮಹಿಳೆಯರು, ಹೆಣ್ಣು ಮಕ್ಕಳ ಮೇಲಿನ ಹಿಂಸೆಗಳು ಮಿತಿ ಮೀರಿವೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಪ್ರತಿಪಕ್ಷಗಳು ಟೀಕಿಸಿವೆ.

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

ಬುಲಂದ್‌ಶಹರ್, ಹಾಪುರ್, ಲಕ್ಷ್ಮಿಪುರ್ ಖೇರಿ ಮತ್ತು ಗೋರಕ್ ಪುರ್ ಈ ಎಲ್ಲಾ ಕಡೆ ಕೊಲೆ ಅತ್ಯಾಚಾರಗಳು ನಡೆದಿವೆ. ಇದು ಸರ್ಕಾರದ ನಿರ್ಲಕ್ಷ್ಯತನ ಮತ್ತು ವಿಫಲತೆಯನ್ನು ತೋರಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.

ನಿನ್ನೆ ತಾನೇ ವಯಸ್ಕ ಹುಡುಗಿಯೊಬ್ಬಳು ಯುಪಿಯ ಬದೋಯಿಯಿಂದ ಕಾಣೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಳು. ಶವದ ದೇಹ ಸುಟ್ಟಗಾಯಗಳಿಂದ ಕೂಡಿತ್ತು. ಕಳೆದ ವಾರದ ಲಕ್ಷ್ಮಿಪುರ ಖೇರಿಯ 13 ವರ್ಷದ ಬಾಲಕಿಯೊಬ್ಬಳನ್ನು ಅಮಾನವೀಯವಾಗಿ ಅತ್ಯಾಚಾರವೆಸಗಿ ಕೊಲ್ಲಲಾಗಿತ್ತು. ಆಕೆಯ ನಾಲಿಗೆ ಕತ್ತರಿಸಿ, ಕಣ್ಣು ಕೀಳಲಾಗಿತ್ತು ಎಂದು ಆಕೆಯ ತಂದೆ ತಿಳಿಸಿದ್ದರು. ಈ ತಿಂಗಳ ಆರಂಭದಲ್ಲಿ ಯುಪಿಯ ಹಾಪುರ್‌ನಲ್ಲಿ 6 ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಕಳೆದ ವಾರ ಆರೋಪಿಯನ್ನು ಬಂಧಿಸಲಾಗಿದೆ. ಆಗಸ್ಟ್ 10 ರಂದು ಬುಲಂದ್‌ಶಹರ್‌ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊರ್ವಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು. ಇಬ್ಬರು ಕಿಡಿಗೇಡಿಗಳು ಆಕೆಗೆ ಕಿರುಕುಳ ನೀಡಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿತ್ತು.

ಒಟ್ಟಿನಲ್ಲಿ ಪ್ರತಿನಿತ್ಯ ಮಹಿಳಾ ಕಿರುಕುಳ, ಕೊಲೆ ಅತ್ಯಾಚಾರಗಳು ಉತ್ತರ ಪ್ರದೇಶದಲ್ಲಿ ವರದಿಯಾಗುತ್ತಿದ್ದರೂ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ ಮತ್ತು ಮಹಿಳೆಯರಿಗೆ ಸುರಕ್ಷತೆ ಒದಗಿಸಲು ಮುಂದಾಗಿಲ್ಲ ಎಂಬುದು ಬಹಳಷ್ಟು ಜನರ ಅಭಿಪ್ರಾಯವಾಗಿದೆ.


ಇದನ್ನೂ ಓದಿ; ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...