Homeಮುಖಪುಟಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

- Advertisement -
- Advertisement -

ದೆಹಲಿ ಮೂಲಕ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊರ್ವಳು ಉತ್ತರ ಪ್ರದೇಶದ ಆಗ್ರಾದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕಾಲೇಜಿನಿಂದ ಕೆಲವೇ ಕಿ.ಮೀ ಗಳ ದೂರದಲ್ಲಿ ಶವ ಪತ್ತೆಯಾಗಿದ್ದು, ಆಕೆಯ ಕಾಲೇಜಿನ ವೈದ್ಯರೊಬ್ಬರು ಕಿರುಕುಳ ಕೊಟ್ಟಿರುವುದೇ ಸಾವಿಗೆ ಕಾರಣವೆಂದು ಆಕೆಯ ಕುಟುಂಬ ಆರೋಪಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಶವ ಪತ್ತೆಯಾಗುವ ಮೊದಲು ಕೆಲವೇ ಗಂಟೆಗಳ ಹಿಂದೆ ಆಕೆಯ ಕುಟುಂಬ ಕಾಣೆಯಾಗಿದ್ದಾಳೆ ಎಂದು ದೂರು ನೀಡಿತ್ತು. ವೈದ್ಯರ ಕಿರುಕುಳದಿಂದಲೇ ಆಕೆಯ ಸಾವು ಸಂಭವಿಸಿದೆ ಎಂಬ ಕುಟುಂಬದ ಆರೋಪದ ಹಿನ್ನೆಲೆಯಲ್ಲಿ ವೈದ್ಯನೊಬ್ಬನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ನಾತಕೋತ್ತರ ವೈದ್ಯ ಪದವಿ ಪಡೆಯಲು ದೆಹಲಿಯಿಂದ ಆಗ್ರಾಕ್ಕೆ ವಿದ್ಯಾರ್ಥಿನಿಯನ್ನು ಕಳಿಸಲಾಗಿತ್ತು. ಮಂಗಳವಾರ ಸಂಜೆಯಿಂದಲೇ ಕಾಣೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ತಿಳಿಸಿದೆ.

ಬುಧವಾರ ಬೆಳಿಗ್ಗೆ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಆಕೆಯ ತಲೆ ಮತ್ತು ಕುತ್ತಿಗೆಗೆ ಪೆಟ್ಟುಗಳಾಗಿವೆ. ಆಕೆ ಸಾವಿಗೆ ಮುನ್ನ ಪ್ರತಿರೋಧಿಸಿರುವ ಲಕ್ಷಣಗಳಿವೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದೇವೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ಸುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದು ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೆಲವು ವಾರಗಳಲ್ಲಿ ಕೊಲೆ, ಅತ್ಯಾಚಾರ ಘಟನೆಗಳು ವಿಪರೀತವಾಗಿವೆ. ಅದರಲ್ಲಿಯೂ ಮಹಿಳೆಯರು, ಹೆಣ್ಣು ಮಕ್ಕಳ ಮೇಲಿನ ಹಿಂಸೆಗಳು ಮಿತಿ ಮೀರಿವೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಪ್ರತಿಪಕ್ಷಗಳು ಟೀಕಿಸಿವೆ.

ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ, ಬಿಎಸ್‌ಪಿಯ ಮಾಯಾವತಿ ಟೀಕಿಸಿದ್ದಾರೆ.

ಬುಲಂದ್‌ಶಹರ್, ಹಾಪುರ್, ಲಕ್ಷ್ಮಿಪುರ್ ಖೇರಿ ಮತ್ತು ಗೋರಕ್ ಪುರ್ ಈ ಎಲ್ಲಾ ಕಡೆ ಕೊಲೆ ಅತ್ಯಾಚಾರಗಳು ನಡೆದಿವೆ. ಇದು ಸರ್ಕಾರದ ನಿರ್ಲಕ್ಷ್ಯತನ ಮತ್ತು ವಿಫಲತೆಯನ್ನು ತೋರಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.

ನಿನ್ನೆ ತಾನೇ ವಯಸ್ಕ ಹುಡುಗಿಯೊಬ್ಬಳು ಯುಪಿಯ ಬದೋಯಿಯಿಂದ ಕಾಣೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಳು. ಶವದ ದೇಹ ಸುಟ್ಟಗಾಯಗಳಿಂದ ಕೂಡಿತ್ತು. ಕಳೆದ ವಾರದ ಲಕ್ಷ್ಮಿಪುರ ಖೇರಿಯ 13 ವರ್ಷದ ಬಾಲಕಿಯೊಬ್ಬಳನ್ನು ಅಮಾನವೀಯವಾಗಿ ಅತ್ಯಾಚಾರವೆಸಗಿ ಕೊಲ್ಲಲಾಗಿತ್ತು. ಆಕೆಯ ನಾಲಿಗೆ ಕತ್ತರಿಸಿ, ಕಣ್ಣು ಕೀಳಲಾಗಿತ್ತು ಎಂದು ಆಕೆಯ ತಂದೆ ತಿಳಿಸಿದ್ದರು. ಈ ತಿಂಗಳ ಆರಂಭದಲ್ಲಿ ಯುಪಿಯ ಹಾಪುರ್‌ನಲ್ಲಿ 6 ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಲಾಗಿತ್ತು. ಕಳೆದ ವಾರ ಆರೋಪಿಯನ್ನು ಬಂಧಿಸಲಾಗಿದೆ. ಆಗಸ್ಟ್ 10 ರಂದು ಬುಲಂದ್‌ಶಹರ್‌ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊರ್ವಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು. ಇಬ್ಬರು ಕಿಡಿಗೇಡಿಗಳು ಆಕೆಗೆ ಕಿರುಕುಳ ನೀಡಿದ್ದರು ಎಂದು ಆಕೆಯ ಕುಟುಂಬ ಆರೋಪಿಸಿತ್ತು.

ಒಟ್ಟಿನಲ್ಲಿ ಪ್ರತಿನಿತ್ಯ ಮಹಿಳಾ ಕಿರುಕುಳ, ಕೊಲೆ ಅತ್ಯಾಚಾರಗಳು ಉತ್ತರ ಪ್ರದೇಶದಲ್ಲಿ ವರದಿಯಾಗುತ್ತಿದ್ದರೂ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿಲ್ಲ ಮತ್ತು ಮಹಿಳೆಯರಿಗೆ ಸುರಕ್ಷತೆ ಒದಗಿಸಲು ಮುಂದಾಗಿಲ್ಲ ಎಂಬುದು ಬಹಳಷ್ಟು ಜನರ ಅಭಿಪ್ರಾಯವಾಗಿದೆ.


ಇದನ್ನೂ ಓದಿ; ಉತ್ತರ ಪ್ರದೇಶದ 13 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ನಾಲಿಗೆ ಕತ್ತರಿಸಿ, ಕಣ್ಣು ಕಿತ್ತ ಪಾಪಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...