Homeಮುಖಪುಟಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು ಮೈತ್ರಿ...

ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು ಮೈತ್ರಿ ಪಕ್ಷ!

ದೇಶದಾದ್ಯಂತ ವ್ಯಕ್ತವಾಗಿರುವ ಬೆಂಬಲವನ್ನ ಗಮನದಲ್ಲಿಟ್ಟುಕೊಂಡು, ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರವು ಸ್ವಾಮಿನಾಥನ್ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರಬೇಕು.

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ಅಕಾಲಿ ದಳ ಈಗಾಗಲೇ ಆಡಳಿತಾರೂಢ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದಿದೆ. ಈಗ ಮತ್ತೊಂದು ಮೈತ್ರಿ ಪಕ್ಷ ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ತೊರೆಯುವುದಾಗಿ ಲೋಕತಾಂತ್ರಿಕ್ ಪಕ್ಷ ಬೆದರಿಕೆ ಹಾಕಿದೆ.

ದೆಹಲಿ ಚಲೋಗೆ ಕಾರಣವಾಗಿರುವ ವಿವಾದಿತ ಕೃಷಿ ಮಸೂದೆಗಳ ಕುರಿತು ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ, ರಾಜಸ್ಥಾನ ಸಂಸದ ಹನುಮಾನ್ ಬೆನಿವಾಲ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಜೊತೆಗೆ, ಪ್ರತಿಭಟನೆಗಳ ಬಗ್ಗೆ ರೈತರೊಂದಿಗೆ ಡಿಸೆಂಬರ್ 3 (ಗುರುವಾರ) ರಂದು ಮಾತುಕತೆ ನಡೆಸುವ ಬದಲು ತಕ್ಷಣವೇ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರಕ್ಕೆ ಹನುಮಾನ್ ಬೆನಿವಾಲ್ ಆಗ್ರಹಿಸಿದ್ದಾರೆ. ಗುರುವಾರ ಮಂತ್ರಿ ಮಂಡಲದ ಜೊತೆಗೆ ಅಮಿತ್ ಶಾ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

“ಅಮಿತ್ ಶಾ ಜೀ, ನಡೆಯುತ್ತಿರುವ ರೈತರ ಆಂದೋಲನಕ್ಕೆ ದೇಶದಾದ್ಯಂತ ವ್ಯಕ್ತವಾಗಿರುವ ಬೆಂಬಲವನ್ನ ಗಮನದಲ್ಲಿಟ್ಟುಕೊಂಡು, ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರವು ಸ್ವಾಮಿನಾಥನ್ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರಬೇಕು ಮತ್ತು ದೆಹಲಿಯಲ್ಲಿ ರೈತರೊಂದಿಗೆ ತಕ್ಷಣ ಸಂವಾದವನ್ನು ನಡೆಸಬೇಕು” ಎಂದು ಬೆನಿವಾಲ್ ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ, “ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿ (ಆರ್‌ಎಲ್‌ಪಿ)ಯು ಎನ್​ಡಿಎಯ ಘಟಕವಿರಬಹುದು. ಆದರೆ ಇದಕ್ಕೆ ಶಕ್ತಿ ಬಂದಿರುವುದು ರೈತರು ಮತ್ತು ಸೈನಿಕರಿಂದ. ಈ ವಿಚಾರದಲ್ಲಿ ತ್ವರಿತ ಕ್ರಮ ಕೈಗೊಳ್ಳದಿದ್ದರೆ ಇದ್ದಲ್ಲಿ, ನಾವು ರೈತರ ಹಿತದೃಷ್ಟಿಯಿಂದಾಗಿ ಎನ್​ಡಿಯ ಜೊತೆಗಿನ ಸಹಭಾಗಿತ್ವದ ಕುರಿತು ಮರುಚಿಂತನೆ ಮಾಡಬೇಕಾಗುತ್ತದೆ” ಎಂದು ಗುಡುಗಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ಸೆಪ್ಟೆಂಬರ್‌ನಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸಿದ ಕಾರಣ ಬಿಜೆಪಿ ತನ್ನ ಹಳೆಯ ಮಿತ್ರ ಪಕ್ಷಗಳಲ್ಲಿ ಒಂದಾದ ಶಿರೋಮಣಿ ಅಕಾಲಿ ದಳವನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಈಗ ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿಯ ಹನುಮಾನ್ ಬೆನಿವಾಲ್ ಎನ್‌ಡಿಎ ತೊರೆಯುವ ಬೆದರಿಕೆ ಹಾಕಿದ್ದಾರೆ.

ರಾಜಸ್ಥಾನದ 10-15 ಲೋಕಸಭಾ ಸ್ಥಾನಗಳಲ್ಲಿ ಪ್ರಭಾವ ಹೊಂದಿರುವ, ರಾಜಕೀಯವಾಗಿ ಪ್ರಬಲವಾಗಿರುವ ಜಾಟ್ ಸಮುದಾಯದಿಂದ ಆರ್‌ಎಲ್‌ಪಿಗೆ ಭಾರಿ ಬೆಂಬಲವಿದೆ.  ಕಳೆದ ರಾಜಸ್ಥಾನ ಚುನಾವಣೆಯಲ್ಲಿ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು.

ಬಿಜೆಪಿ ಆಡಳಿತದ ಹರಿಯಾಣ ಸೇರಿದಂತೆ ನೆರೆಯ ರಾಜ್ಯ ಸರ್ಕಾರಗಳು ರೈತರ ವಿರುದ್ಧ ಯಾವುದೇ ದಬ್ಬಾಳಿಕೆಯ ನೀತಿಯನ್ನು ಅಳವಡಿಸಿಕೊಳ್ಳಬಾರದು ಎಂದು ಬೆನಿವಾಲ್ ಹೇಳಿದ್ದರು. ಈ ಹಿಂದೆ, ರಾಜಸ್ಥಾನದ ಲಕ್ಷಾಂತರ ರೈತರೊಂದಿಗೆ ದೆಹಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಅವರು ಸುಳಿವು ನೀಡಿದ್ದರು.

’ಪೊಲೀಸರು ಮತ್ತು ಸರ್ಕಾರಗಳು ರೈತರ ವಿರುದ್ಧ ದಬ್ಬಾಳಿಕೆಯ ನೀತಿಯನ್ನು ಅಳವಡಿಸಿಕೊಂಡರೆ, ಆರ್‌ಎಲ್‌ಪಿ ರಾಜಸ್ಥಾನ ಸೇರಿದಂತೆ ದೇಶಾದ್ಯಂತ ರೈತರ ಪರವಾಗಿ ರ್‍ಯಾಲಿಗಳನ್ನು ನಡೆಸಲಿದೆ” ಎಂದು ಗುರುವಾರ ಹೇಳಿದ್ದರು.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...