Homeಮುಖಪುಟಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು ಮೈತ್ರಿ...

ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು ಮೈತ್ರಿ ಪಕ್ಷ!

ದೇಶದಾದ್ಯಂತ ವ್ಯಕ್ತವಾಗಿರುವ ಬೆಂಬಲವನ್ನ ಗಮನದಲ್ಲಿಟ್ಟುಕೊಂಡು, ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರವು ಸ್ವಾಮಿನಾಥನ್ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರಬೇಕು.

- Advertisement -
- Advertisement -

ಕೃಷಿ ಮಸೂದೆಗಳನ್ನು ವಿರೋಧಿಸಿ ಅಕಾಲಿ ದಳ ಈಗಾಗಲೇ ಆಡಳಿತಾರೂಢ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದಿದೆ. ಈಗ ಮತ್ತೊಂದು ಮೈತ್ರಿ ಪಕ್ಷ ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟ (ಎನ್‌ಡಿಎ) ತೊರೆಯುವುದಾಗಿ ಲೋಕತಾಂತ್ರಿಕ್ ಪಕ್ಷ ಬೆದರಿಕೆ ಹಾಕಿದೆ.

ದೆಹಲಿ ಚಲೋಗೆ ಕಾರಣವಾಗಿರುವ ವಿವಾದಿತ ಕೃಷಿ ಮಸೂದೆಗಳ ಕುರಿತು ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಮುಖ್ಯಸ್ಥ, ರಾಜಸ್ಥಾನ ಸಂಸದ ಹನುಮಾನ್ ಬೆನಿವಾಲ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಜೊತೆಗೆ, ಪ್ರತಿಭಟನೆಗಳ ಬಗ್ಗೆ ರೈತರೊಂದಿಗೆ ಡಿಸೆಂಬರ್ 3 (ಗುರುವಾರ) ರಂದು ಮಾತುಕತೆ ನಡೆಸುವ ಬದಲು ತಕ್ಷಣವೇ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರಕ್ಕೆ ಹನುಮಾನ್ ಬೆನಿವಾಲ್ ಆಗ್ರಹಿಸಿದ್ದಾರೆ. ಗುರುವಾರ ಮಂತ್ರಿ ಮಂಡಲದ ಜೊತೆಗೆ ಅಮಿತ್ ಶಾ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

“ಅಮಿತ್ ಶಾ ಜೀ, ನಡೆಯುತ್ತಿರುವ ರೈತರ ಆಂದೋಲನಕ್ಕೆ ದೇಶದಾದ್ಯಂತ ವ್ಯಕ್ತವಾಗಿರುವ ಬೆಂಬಲವನ್ನ ಗಮನದಲ್ಲಿಟ್ಟುಕೊಂಡು, ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರವು ಸ್ವಾಮಿನಾಥನ್ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರಬೇಕು ಮತ್ತು ದೆಹಲಿಯಲ್ಲಿ ರೈತರೊಂದಿಗೆ ತಕ್ಷಣ ಸಂವಾದವನ್ನು ನಡೆಸಬೇಕು” ಎಂದು ಬೆನಿವಾಲ್ ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ, “ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿ (ಆರ್‌ಎಲ್‌ಪಿ)ಯು ಎನ್​ಡಿಎಯ ಘಟಕವಿರಬಹುದು. ಆದರೆ ಇದಕ್ಕೆ ಶಕ್ತಿ ಬಂದಿರುವುದು ರೈತರು ಮತ್ತು ಸೈನಿಕರಿಂದ. ಈ ವಿಚಾರದಲ್ಲಿ ತ್ವರಿತ ಕ್ರಮ ಕೈಗೊಳ್ಳದಿದ್ದರೆ ಇದ್ದಲ್ಲಿ, ನಾವು ರೈತರ ಹಿತದೃಷ್ಟಿಯಿಂದಾಗಿ ಎನ್​ಡಿಯ ಜೊತೆಗಿನ ಸಹಭಾಗಿತ್ವದ ಕುರಿತು ಮರುಚಿಂತನೆ ಮಾಡಬೇಕಾಗುತ್ತದೆ” ಎಂದು ಗುಡುಗಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ಸೆಪ್ಟೆಂಬರ್‌ನಲ್ಲಿ ಕೃಷಿ ಮಸೂದೆಗಳನ್ನು ಅಂಗೀಕರಿಸಿದ ಕಾರಣ ಬಿಜೆಪಿ ತನ್ನ ಹಳೆಯ ಮಿತ್ರ ಪಕ್ಷಗಳಲ್ಲಿ ಒಂದಾದ ಶಿರೋಮಣಿ ಅಕಾಲಿ ದಳವನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಈಗ ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿಯ ಹನುಮಾನ್ ಬೆನಿವಾಲ್ ಎನ್‌ಡಿಎ ತೊರೆಯುವ ಬೆದರಿಕೆ ಹಾಕಿದ್ದಾರೆ.

ರಾಜಸ್ಥಾನದ 10-15 ಲೋಕಸಭಾ ಸ್ಥಾನಗಳಲ್ಲಿ ಪ್ರಭಾವ ಹೊಂದಿರುವ, ರಾಜಕೀಯವಾಗಿ ಪ್ರಬಲವಾಗಿರುವ ಜಾಟ್ ಸಮುದಾಯದಿಂದ ಆರ್‌ಎಲ್‌ಪಿಗೆ ಭಾರಿ ಬೆಂಬಲವಿದೆ.  ಕಳೆದ ರಾಜಸ್ಥಾನ ಚುನಾವಣೆಯಲ್ಲಿ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು.

ಬಿಜೆಪಿ ಆಡಳಿತದ ಹರಿಯಾಣ ಸೇರಿದಂತೆ ನೆರೆಯ ರಾಜ್ಯ ಸರ್ಕಾರಗಳು ರೈತರ ವಿರುದ್ಧ ಯಾವುದೇ ದಬ್ಬಾಳಿಕೆಯ ನೀತಿಯನ್ನು ಅಳವಡಿಸಿಕೊಳ್ಳಬಾರದು ಎಂದು ಬೆನಿವಾಲ್ ಹೇಳಿದ್ದರು. ಈ ಹಿಂದೆ, ರಾಜಸ್ಥಾನದ ಲಕ್ಷಾಂತರ ರೈತರೊಂದಿಗೆ ದೆಹಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಅವರು ಸುಳಿವು ನೀಡಿದ್ದರು.

’ಪೊಲೀಸರು ಮತ್ತು ಸರ್ಕಾರಗಳು ರೈತರ ವಿರುದ್ಧ ದಬ್ಬಾಳಿಕೆಯ ನೀತಿಯನ್ನು ಅಳವಡಿಸಿಕೊಂಡರೆ, ಆರ್‌ಎಲ್‌ಪಿ ರಾಜಸ್ಥಾನ ಸೇರಿದಂತೆ ದೇಶಾದ್ಯಂತ ರೈತರ ಪರವಾಗಿ ರ್‍ಯಾಲಿಗಳನ್ನು ನಡೆಸಲಿದೆ” ಎಂದು ಗುರುವಾರ ಹೇಳಿದ್ದರು.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...